Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:28 - ಕನ್ನಡ ಸಮಕಾಲಿಕ ಅನುವಾದ

28 ಅರಸನು ಅವಳಿಗೆ, “ನಿನ್ನ ದುಃಖವೇನು?” ಎಂದನು. ಅದಕ್ಕವಳು, “ಈ ಸ್ತ್ರೀಯು ನನಗೆ ಹೇಳಿದ್ದೇನೆಂದರೆ, ‘ಈ ಹೊತ್ತು ನಾವು ನಿನ್ನ ಮಗನನ್ನು ತಿನ್ನುವಂತೆ ಅವನನ್ನು ಕೊಡು, ನಾಳೆ ನನ್ನ ಮಗನನ್ನು ತಿನ್ನೋಣ,’ ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 “ನಿನಗಿರುವ ದುಃಖ ಯಾವುದು” ಎಂದು ಅರಸನು ಕೇಳಿದನು. ಆಗ ಆಕೆಯು, “ಈ ಸ್ತ್ರೀಯು ನನಗೆ, ನಿನ್ನ ಮಗನನ್ನು ತೆಗೆದುಕೊಂಡು ಬಾ, ನಾವು ಈ ಹೊತ್ತು ಅವನನ್ನು ತಿಂದುಬಿಡೋಣ, ನಾಳೆ ನನ್ನ ಮಗನನ್ನು ತಿನ್ನೋಣ” ಎಂದು ಹೇಳಿದ್ದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 “ನಿನಗಿರುವ ದುಃಖ ಯಾವುದು?” ಎಂದನು. ಆಗ ಆಕೆ, “ಈ ಸ್ತ್ರೀ ನನಗೆ, ‘ನಿನ್ನ ಮಗನನ್ನು ತೆಗೆದುಕೊಂಡು ಬಾ; ನಾವು ಈ ದಿನ ಅವನನ್ನು ತಿಂದುಬಿಡೋಣ; ನಾಳೆ ನನ್ನ ಮಗನನ್ನು ತಿನ್ನೋಣ,’ ಎಂದು ಹೇಳಿದ್ದರಿಂದ ನಾವಿಬ್ಬರೂ ನನ್ನ ಮಗನನ್ನು ಕೊಂದು ಬೇಯಿಸಿ ತಿಂದುಬಿಟ್ಟೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನಿನಗಿರುವ ದುಃಖ ಯಾವದು ಎಂದು ಕೇಳಿದನು. ಆಗ ಆಕೆಯು - ಈ ಸ್ತ್ರೀಯು ನನಗೆ - ನಿನ್ನ ಮಗನನ್ನು ತೆಗೆದುಕೊಂಡು ಬಾ; ನಾವು ಈ ಹೊತ್ತು ಅವನನ್ನು ತಿಂದುಬಿಡೋಣ; ನಾಳೆ ನನ್ನ ಮಗನನ್ನು ತಿನ್ನೋಣ ಎಂದು ಹೇಳಿದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನಂತರ ಇಸ್ರೇಲಿನ ರಾಜನು ಆ ಸ್ತ್ರೀಗೆ, “ನಿನ್ನ ತೊಂದರೆಯೇನು?” ಎಂದು ಕೇಳಿದನು. ಆ ಸ್ತ್ರೀಯು, “ಇವಳು ನನಗೆ, ‘ನಿನ್ನ ಮಗನನ್ನು ನನಗೆ ಕೊಡು. ನಾವು ಅವನನ್ನು ಕೊಂದು, ಈ ಹೊತ್ತು ತಿನ್ನೋಣ. ನಾಳೆ ನನ್ನ ಮಗನನ್ನು ತಿನ್ನೋಣ’ ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:28
15 ತಿಳಿವುಗಳ ಹೋಲಿಕೆ  

ಅರಸನು ಅವಳಿಗೆ, “ನಿನಗೆ ಏನಾಯಿತು?” ಎಂದನು. ಅದಕ್ಕವಳು, “ನಾನು ನಿಶ್ಚಯವಾಗಿ ವಿಧವೆಯಾದ ಸ್ತ್ರೀಯು. ನನ್ನ ಗಂಡನು ಸತ್ತುಹೋಗಿದ್ದಾನೆ.


ಕನಿಕರ ತುಂಬಿದ ಸ್ತ್ರೀಯರ ಕೈಗಳು ತಮ್ಮ ಸ್ವಂತ ಮಕ್ಕಳನ್ನೇ ಬೇಯಿಸಿದವು. ಇವರು ನನ್ನ ಜನರ ನಾಶದಲ್ಲಿ ಅವರಿಗೆ ಆಹಾರವಾದರು.


ದಾನರು ತಮ್ಮ ಮುಖ ತಿರುಗಿಸಿ ಮೀಕನಿಗೆ, “ನೀನು ಗುಂಪು ಕೂಡಿಕೊಂಡು ಬರಲು ನಿನಗೆ ಏನಾಯಿತು?” ಎಂದರು.


ಏಕೆಂದರೆ, ‘ಇಗೋ, ಬಂಜೆಯರೂ ಹೆರದವರೂ ಹಾಲು ಕುಡಿಸದವರೂ ಧನ್ಯರು,’ ಎಂದು ಜನರು ಹೇಳುವ ದಿವಸಗಳು ಬರುತ್ತವೆ.


ಆದ್ದರಿಂದ ನಿಮ್ಮ ಮಧ್ಯದಲ್ಲಿ ತಂದೆಗಳೇ ಮಕ್ಕಳನ್ನು ತಿನ್ನುವರು. ಮಕ್ಕಳು ಅವರ ತಂದೆಗಳನ್ನು ತಿನ್ನುವರು. ಹೀಗೆ ನಿಮ್ಮಲ್ಲಿ ನ್ಯಾಯತೀರ್ಪನ್ನು ನಡಿಸುವೆನು. ನಿಮ್ಮಲ್ಲಿ ಉಳಿದವರನ್ನೆಲ್ಲಾ ಗಾಳಿ ಬೀಸುವ ಎಲ್ಲಾ ದಿಕ್ಕಿಗೂ ಚದರಿಸುವೆನು.


“ತನ್ನ ಗರ್ಭದ ಮಗನ ಮೇಲೆ ಕರುಣಿಸದೆ ಒಬ್ಬ ಸ್ತ್ರೀ ತನ್ನ ಎದೆಹಾಲನ್ನು ಕುಡಿಯುವ ಕೂಸನ್ನು ಮರೆತಾಳೇ? ಹೌದು, ಅವಳು ಮರೆಯಬಹುದು, ಆದರೂ ನಾನು ನಿನ್ನನ್ನು ಮರೆಯುವುದಿಲ್ಲ.


ದಿವ್ಯ ದರ್ಶನದ ತಗ್ಗಿನ ವಿಷಯವಾದ ಪ್ರವಾದನೆ: ನಿನ್ನವರೆಲ್ಲರು ಮಾಳಿಗೆಗಳ ಮೇಲೆ ಏರುವ ಹಾಗೆ, ಈಗ ನಿನಗೆ ಏನಾಯಿತು?


ಸಮುದ್ರವೇ, ನಿನಗೆ ಏನಾಯಿತು? ಏಕೆ ಓಡಿ ಹೋಗುತ್ತೀ? ಯೊರ್ದನ್ ನದಿಯೇ, ಏಕೆ ಹಿಂದಿರುಗುತ್ತೀ?


ಆಗ ಅವಳ ಗಂಡ ಎಲ್ಕಾನನು ಅವಳಿಗೆ, “ಹನ್ನಳೇ, ಏಕೆ ಅಳುತ್ತೀ? ಏಕೆ ಊಟಮಾಡದೆ ಇದ್ದೀ? ನಿನ್ನ ಮನ ಏಕೆ ಕುಂದಿದೆ? ಹತ್ತು ಮಂದಿ ಪುತ್ರರಿಗಿಂತ ನಾನು ನಿನಗೆ ಹೆಚ್ಚಲ್ಲವೆ?” ಎಂದನು.


ನೀವು ನಿಮ್ಮ ಪುತ್ರಪುತ್ರಿಯರ ಮಾಂಸವನ್ನು ತಿನ್ನುವಿರಿ.


ದೇವರು ಆ ಹುಡುಗನ ಅಳುವ ಸ್ವರವನ್ನು ಕೇಳಿದರು. ಆಗ ದೇವದೂತನು ಆಕಾಶದೊಳಗಿಂದ ಹಾಗರಳನ್ನು ಕರೆದು, ಆಕೆಗೆ, “ಹಾಗರಳೇ, ವ್ಯಥೆಪಡುವುದೇಕೆ? ಅಂಜಬೇಡ ದೇವರು ಹುಡುಗನ ಸ್ವರವನ್ನು ಕೇಳಿದ್ದಾರೆ.


ಅದಕ್ಕವನು, “ಯೆಹೋವ ದೇವರು ನಿನಗೆ ಸಹಾಯ ಮಾಡದೆ ಹೋದರೆ, ನಾನು ಎಲ್ಲಿಂದ ನಿನಗೆ ಸಹಾಯ ಮಾಡಲಿ? ಕಣದಿಂದಲೋ, ದ್ರಾಕ್ಷಿ ಆಲೆಯಿಂದಲೋ?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು