Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:31 - ಕನ್ನಡ ಸಮಕಾಲಿಕ ಅನುವಾದ

31 ಆಗ ಅವನು, “ಶಾಫಾಟನ ಮಗ ಎಲೀಷನ ತಲೆಯನ್ನು ಹಾರಿಸದಿದ್ದರೆ, ದೇವರು ನನಗೆ ಇದರಂತೆಯೂ ಇನ್ನೂ ಹೆಚ್ಚಾಗಿಯೂ ಮಾಡಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಇದಲ್ಲದೆ ಅವನು, “ನಾನು ಈ ಹೊತ್ತು ಶಾಫಾಟನ ಮಗನಾದ ಎಲೀಷನ ತಲೆಯನ್ನು ಅವನ ದೇಹದಿಂದ ಬೇರ್ಪಡಿಸದೆ ಹೋದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಆಣೆಯಿಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಇದಲ್ಲದೆ ಅವನು, “ನಾನು ಈ ದಿನ ಶಾಫಾಟನ ಮಗ ಎಲೀಷನ ತಲೆಯನ್ನು ಹಾರಿಸದಿದ್ದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ!” ಎಂದು ಆಣೆಯಿಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಇದಲ್ಲದೆ ಅವನು - ನಾನು ಈಹೊತ್ತು ಶಾಫಾಟನ ಮಗನಾದ ಎಲೀಷನ ತಲೆಯನ್ನು ಹಾರಿಸದಿದ್ದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ ಎಂದು ಆಣೆಯಿಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಇದಲ್ಲದೆ ರಾಜನು, “ಈ ದಿನದ ಅಂತ್ಯದೊಳಗೆ ನಾನು ಶಾಫಾಟನ ಮಗನಾದ ಎಲೀಷನ ತಲೆಯನ್ನು ಅವನ ದೇಹದ ಮೇಲೆ ಉಳಿಯುವಂತೆ ಮಾಡಿದರೆ ದೇವರು ನನ್ನನ್ನು ದಂಡಿಸಲಿ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:31
18 ತಿಳಿವುಗಳ ಹೋಲಿಕೆ  

ಈಜೆಬೆಲಳು ಎಲೀಯನ ಬಳಿಗೆ ದೂತನನ್ನು ಕಳುಹಿಸಿ, “ನಾನು ನಾಳೆ ಇಷ್ಟು ಹೊತ್ತಿಗೆ ಅವರಲ್ಲಿರುವ ಒಬ್ಬೊಬ್ಬನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವನ್ನು ತೆಗೆಯದೆ ಹೋದರೆ, ದೇವರುಗಳು ನನಗೆ ಬೇಕಾದದ್ದನ್ನು ಮಾಡಲಿ,” ಎಂದು ಹೇಳಿದಳು.


ನೀವು ಎಲ್ಲಿ ಸಾಯುತ್ತೀರೋ ಅಲ್ಲಿಯೇ ನಾನು ಸಾಯುವೆನು. ಅಲ್ಲಿಯೇ ನನಗೆ ಸಮಾಧಿಯಾಗಲಿ. ಮರಣದಿಂದಲ್ಲದೆ ನಾನು ನಿಮ್ಮನ್ನು ಅಗಲಿದರೆ ಯೆಹೋವ ದೇವರು ನನಗೆ ಬೇಕಾದದ್ದನ್ನು ಮಾಡಲಿ,” ಎಂದಳು.


ಇಡೀ ರಾಷ್ಟ್ರವೇ ನಾಶವಾಗುವುದಕ್ಕಿಂತ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವುದು ನಿಮಗೆ ಹಿತವೆಂದು ನೀವು ಎಣಿಸುವುದೇ ಇಲ್ಲ,” ಎಂದನು.


ಆಗ ಆ ಪ್ರಧಾನರು ಅರಸನಿಗೆ, “ಈ ಮನುಷ್ಯನು ಸಾಯಬೇಕು; ಇವನು ಅವರ ಸಂಗಡ ಇಂಥಾ ಮಾತುಗಳನ್ನು ಆಡಿ, ಈ ಪಟ್ಟಣದಲ್ಲಿ ಉಳಿದ ಎಲ್ಲಾ ಸೈನಿಕರನ್ನೂ, ಎಲ್ಲಾ ಜನರನ್ನೂ ಎದೆಗುಂದುವಂತೆ ಮಾಡುತ್ತಿದ್ದಾನೆ. ಈ ಮನುಷ್ಯನು ಈ ಜನರ ಕ್ಷೇಮವನ್ನಲ್ಲ, ಅವರ ಹಾನಿಯನ್ನೇ ಹಾರೈಸುತ್ತಾನೆ,” ಎಂದು ಹೇಳಿದರು.


ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ನಾವು ಯೆಹೋವ ದೇವರನ್ನು ವಿಚಾರಿಸುವ ಹಾಗೆ ಇಮ್ಲನ ಮಗ ಮೀಕಾಯನೆಂಬ ಇನ್ನೊಬ್ಬನಿದ್ದಾನೆ. ಆದರೆ ನಾನು ಅವನನ್ನು ದ್ವೇಷ ಮಾಡುತ್ತೇನೆ. ಏಕೆಂದರೆ ಅವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ ಯಾವಾಗಲೂ ಕೆಟ್ಟದ್ದನ್ನು ಪ್ರವಾದಿಸುತ್ತಾನೆ,” ಎಂದನು. ಅದಕ್ಕೆ ಯೆಹೋಷಾಫಾಟನು, “ಅರಸನು ಹಾಗೆ ಅನ್ನದಿರಲಿ,” ಎಂದನು.


ಅಹಾಬನು ಎಲೀಯನನ್ನು ಕಂಡಾಗ ಅವನಿಗೆ, “ಇಸ್ರಾಯೇಲನ್ನು ಕಷ್ಟಕ್ಕೆ ಒಳಪಡಿಸುವವನು ನೀನಲ್ಲವೋ?” ಎಂದನು.


ತರುವಾಯ ಅರಸನಾದ ಸೊಲೊಮೋನನು, “ಅದೋನೀಯನು ಈ ಮಾತನ್ನು ತನ್ನ ಪ್ರಾಣಕ್ಕೆ ವಿರೋಧವಾಗಿ ಹೇಳದೆ ಇದ್ದರೆ, ನನಗೆ ದೇವರು ಹಾಗೆಯೂ, ಅದಕ್ಕಿಂತಲೂ ಅಧಿಕವಾಗಿಯೂ ಮಾಡಲಿ,” ಎಂದು ಯೆಹೋವ ದೇವರ ಹೆಸರಿನಲ್ಲಿ ಆಣೆ ಇಟ್ಟನು.


ಇದಲ್ಲದೆ ನೀವು ಅಮಾಸನಿಗೆ, ‘ನೀನು ನನ್ನ ರಕ್ತವೂ, ನನ್ನ ಮಾಂಸವೂ ಅಲ್ಲವೋ? ನೀನು ಯೋವಾಬನಿಗೆ ಬದಲಾಗಿ ಯಾವಾಗಲೂ ನನ್ನ ಮುಂದೆ ಸೈನ್ಯದ ಪ್ರಧಾನನಾಗಿರದೆ ಹೋದರೆ, ದೇವರು ನನಗೆ ಏನಾದರೂ ಮಾಡಲಿ,’ ಎಂದು ಹೇಳಿರಿ,” ಎಂದನು.


ಇನ್ನೂ ಹೊತ್ತಿರುವಾಗಲೇ ಜನರೆಲ್ಲರು ಬಂದು ಊಟಮಾಡು ಎಂದು ದಾವೀದನಿಗೆ ಹೇಳಿದರು. ಅದಕ್ಕೆ ದಾವೀದನು, “ಸೂರ್ಯನು ಅಸ್ತಮಿಸುವುದಕ್ಕಿಂತ ಮುಂಚೆ ನಾನು ರೊಟ್ಟಿಯನ್ನಾಗಲಿ, ಬೇರೆ ಯಾವ ಆಹಾರವನ್ನಾಗಲಿ ರುಚಿ ನೋಡಿದರೆ, ದೇವರು ನನಗೆ ಬೇಕಾದದ್ದನ್ನು ಮಾಡಲಿ, ಅಧಿಕವಾಗಿಯೂ ಮಾಡಲಿ,” ಎಂದು ಆಣೆ ಇಟ್ಟುಕೊಂಡನು.


ನಾನು ಸೌಲನ ಕುಟುಂಬದಿಂದ ರಾಜ್ಯವನ್ನು ತಪ್ಪಿಸಿ, ಯೆಹೋವ ದೇವರು ದಾವೀದನಿಗೆ ಆಣೆ ಇಟ್ಟ ಪ್ರಕಾರವೇ,


ಬೆಳಗಾಗುವಷ್ಟರಲ್ಲಿ ಅವನ ಜನರಲ್ಲಿ ನಾನು ಒಬ್ಬ ಗಂಡಸನನ್ನಾದರೂ ಉಳಿಸಿದರೆ, ದೇವರು ದಾವೀದನಾದ ನನಗೆ ಹೀಗೆಯೂ ಇದಕ್ಕಿಂತ ಅಧಿಕವಾಗಿಯೂ ಮಾಡಲಿ,” ಎಂದು ಹೇಳಿದ್ದನು.


ಅದಕ್ಕೆ ಸೌಲನು, “ಯೋನಾತಾನನೇ, ನೀನು ನಿಜವಾಗಿ ಸಾಯಬೇಕು; ಇಲ್ಲದಿದ್ದರೆ ದೇವರು ನನಗೆ ಹೆಚ್ಚಾದದ್ದನ್ನು ಮಾಡಲಿ,” ಎಂದನು.


ಏಲಿಯು ಅವನಿಗೆ, “ಅವರು ನಿನಗೆ ಹೇಳಿದ ಮಾತೇನು? ನನಗೆ ಅದನ್ನು ಮರೆಮಾಡಬೇಡ. ಅವರು ನಿನಗೆ ಹೇಳಿದ ಸಕಲ ವಾರ್ತೆಗಳಲ್ಲಿ ನೀನು ಯಾವುದನ್ನಾದರೂ ನನಗೆ ಮರೆಮಾಡಿದರೆ, ದೇವರು ನಿನ್ನನ್ನು ದಂಡಿಸಲಿ,” ಎಂದನು.


ಆಗ ಬೆನ್ಹದದನು ದೂತರನ್ನು ಕಳುಹಿಸಿ ಅಹಾಬನಿಗೆ, “ನನ್ನ ಸೈನಿಕರು ಸಮಾರ್ಯದ ಒಂದು ಹಿಡಿ ಧೂಳನ್ನು ಬಿಡುವುದಿಲ್ಲ. ಬಿಟ್ಟರೆ ದೇವರುಗಳು ನನಗೆ ಇದಕ್ಕಿಂತ ಹೆಚ್ಚಾಗಿ ನನಗೆ ಕೆಟ್ಟದ್ದನ್ನು ಮಾಡಲಿ,” ಎಂದು ಅವನಿಗೆ ಇನ್ನೊಂದು ಸುದ್ದಿಯನ್ನು ಹೇಳಿ ಕಳುಹಿಸಿದನು.


ದೇವರ ಮನುಷ್ಯನಾದ ಎಲೀಷನ ಸೇವಕನಾಗಿರುವ ಗೇಹಜಿಯು, “ನನ್ನ ಯಜಮಾನನು ಈ ಅರಾಮ್ಯನಾದ ನಾಮಾನನು ತೆಗೆದುಕೊಂಡು ಬಂದದ್ದನ್ನು ಅವನ ಕೈಯಿಂದ ತೆಗೆದುಕೊಳ್ಳದೆ ಸುಮ್ಮನೆ ಕಳುಹಿಸಿದ್ದಾನೆ. ಆದರೆ ಯೆಹೋವ ದೇವರ ಜೀವದಾಣೆ, ನಾನು ಅವನ ಹಿಂದೆ ಓಡಿಹೋಗಿ, ಅವನ ಕೈಯಿಂದ ಏನಾದರೂ ತೆಗೆದುಕೊಳ್ಳುವೆನು,” ಅಂದುಕೊಂಡನು.


ಅರಸನ ಕೋಪವು ಮೃತ್ಯುವಿನ ದೂತರಂತೆ ಇರುತ್ತದೆ, ಆದರೆ ಜ್ಞಾನಿಯು ಅದನ್ನು ಶಮನಪಡಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು