Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 7:7 - ಕನ್ನಡ ಸಮಕಾಲಿಕ ಅನುವಾದ

7 ಅವರು ಸಂಜೆಯಲ್ಲಿ ಎದ್ದು ಪಾಳೆಯದಲ್ಲಿದ್ದ ಹಾಗೆ ತಮ್ಮ ಗುಡಾರಗಳನ್ನೂ, ತಮ್ಮ ಕುದುರೆಗಳನ್ನೂ, ತಮ್ಮ ಕತ್ತೆಗಳನ್ನೂ ಬಿಟ್ಟುಬಿಟ್ಟು ತಮ್ಮ ಪ್ರಾಣಕ್ಕೋಸ್ಕರ ಓಡಿಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ತಮ್ಮ ಗುಡಾರಗಳನ್ನೂ, ಕತ್ತೆ ಕುದುರೆಗಳನ್ನೂ ಪಾಳೆಯದಲ್ಲಿದ್ದುದ್ದೆಲ್ಲವನ್ನೂ ಬಿಟ್ಟು ತಮ್ಮ ಜೀವರಕ್ಷಣೆಗಾಗಿ ಅದೇ ಸಾಯಂಕಾಲದಲ್ಲಿ ಓಡಿಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ತಮ್ಮ ಗುಡಾರಗಳನ್ನೂ ಕತ್ತೆಕುದುರೆಗಳನ್ನೂ ಪಾಳೆಯದಲ್ಲಿದ್ದುದೆಲ್ಲವನ್ನೂ ಬಿಟ್ಟು, ತಮ್ಮ ಪ್ರಾಣರಕ್ಷಣೆಗಾಗಿ, ಅದೇ ಸಾಯಂಕಾಲದಲ್ಲಿ ಓಡಿಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ತಮ್ಮ ಗುಡಾರಗಳನ್ನೂ ಕತ್ತೆಕುದುರೆಗಳನ್ನೂ ಪಾಳೆಯದಲ್ಲಿದ್ದದ್ದೆಲ್ಲವನ್ನೂ ಬಿಟ್ಟು ತಮ್ಮ ಜೀವರಕ್ಷಣೆಗಾಗಿ ಅದೇ ಸಾಯಂಕಾಲದಲ್ಲಿ ಓಡಿಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸಂಜೆಗೆ ಮುಂಚೆಯೇ ಓಡಿಹೋಗಿದ್ದರು. ಅವರು ಎಲ್ಲವನ್ನೂ ಅಲ್ಲಿಯೇ ಬಿಟ್ಟುಹೋಗಿದ್ದರು. ಅವರು ತಮ್ಮ ಗುಡಾರಗಳನ್ನು, ಕುದುರೆಗಳನ್ನು, ಹೇಸರಕತ್ತೆಗಳನ್ನು ಅಲ್ಲಿಯೇ ಬಿಟ್ಟು ತಮ್ಮ ಜೀವರಕ್ಷಣೆಗಾಗಿ ಓಡಿಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 7:7
18 ತಿಳಿವುಗಳ ಹೋಲಿಕೆ  

ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟನು ಓಡಿಹೋಗುತ್ತಾನೆ. ಆದರೆ ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.


ದೇವರ ವಾಗ್ದಾನ ಮತ್ತು ಆಣೆ ಇವೆರಡೂ ಬದಲಾಗದ ಆಧಾರಗಳು. ಇವುಗಳ ವಿಷಯವಾಗಿ ದೇವರು ನಮಗೆ ಸುಳ್ಳಾಡುವವರಲ್ಲ. ಇದರಿಂದಾಗಿ, ದೇವರ ಆಶ್ರಯವನ್ನು ಹೊಂದುವುದಕ್ಕೆ ಓಡಿಬಂದಿರುವ ನಾವು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಳ್ಳಲು ಬಲವಾದ ಉತ್ತೇಜನ ಉಂಟಾಯಿತು.


ಆ ದಿನದಲ್ಲಿ ಮನುಷ್ಯರು ಪೂಜಿಸುವುದಕ್ಕೋಸ್ಕರ ಮಾಡಿಕೊಂಡ ಬೆಳ್ಳಿಯ ಬೊಂಬೆಗಳನ್ನೂ ಚಿನ್ನದ ವಿಗ್ರಹಗಳನ್ನೂ ಇಲಿ ಬಾವಲಿಗಳಿಗಾಗಿ ಬಿಸಾಡಿಬಿಡುವರು.


ಅರಸನ ಹೃದಯವು ಯೆಹೋವ ದೇವರ ಕೈಯಲ್ಲಿ ನೀರಿನ ಕಾಲುವೆಗಳಂತೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.


ಬೇಟೆಗಾರನ ಕೈಯಿಂದ ಜಿಂಕೆಯೂ, ಬಲೆ ಬೀಸುವವನ ಕೈಯಿಂದ ಪಕ್ಷಿಯೂ ತಪ್ಪಿಸಿಕೊಳ್ಳುವಂತೆ ನೀನು ತಪ್ಪಿಸಿಕೋ.


“ಸೈನ್ಯದೊಡನೆ ಅರಸರು ಓಡಿಹೋದರು. ಪಾಳೆಯದಲ್ಲಿರುವ ಮಹಿಳೆಯರು ಕೊಳ್ಳೆಯನ್ನು ಹಂಚಿಕೊಳ್ಳುವರು.


ಬಿಡುಗಡೆಗೆ ಕುದುರೆಯ ಬಲ ವ್ಯರ್ಥವಾಗಿದೆ; ಅದಕ್ಕೆ ಮಹಾಶಕ್ತಿ ಇದ್ದರೂ ಅದು ರಕ್ಷಿಸಲಾರದು.


ಸುತ್ತಲೂ ದಿಗಿಲುಗಳು ಅವನನ್ನು ಹೆದರಿಸಿ, ಅವನ ಕಾಲುಗಳನ್ನು ಓಡುವಂತೆ ಮಾಡುವುವು.


ಆಗ ಪಾಳೆಯದವರಾದರೋ ಕೂಗುತ್ತಾ ಓಡಿಹೋದರು.


ಹಾಗೆಯೇ ಈಜಿಪ್ಟಿನಿಂದ ಆರುನೂರು ಬೆಳ್ಳಿ ನಾಣ್ಯಗಳ ಕ್ರಯಕ್ಕೆ ಒಂದು ರಥವನ್ನೂ ನೂರ ಐವತ್ತು ಬೆಳ್ಳಿ ನಾಣ್ಯಗಳ ಕ್ರಯಕ್ಕೆ ಒಂದು ಕುದುರೆಯನ್ನೂ ತರಿಸುತ್ತಿದ್ದರು. ಈ ಪ್ರಕಾರ ಹಿತ್ತಿಯರ ಮತ್ತು ಅರಾಮಿನ ಅರಸುಗಳೆಲ್ಲರು ಇವರ ಮುಖಾಂತರವಾಗಿಯೇ ತರಿಸುತ್ತಿದ್ದರು.


ಆಗ ಪಾಳೆಯಲ್ಲಿಯ ಹೊಲದಲ್ಲಿ ಇದ್ದ ಸಕಲ ಜನರಲ್ಲಿಯೂ ಭಯದಿಂದ ನಡುಕ ಉಂಟಾಯಿತು. ಠಾಣ್ಯದವರೂ, ಕೊಳ್ಳೆಗಾರರೂ ಹೆದರಿಕೊಂಡರು. ಇದಲ್ಲದೆ, ದೇವರು ಭೂಕಂಪವನ್ನುಂಟುಮಾಡಿದರು. ಹೀಗೆ ಅಲ್ಲಿ ದೊಡ್ಡ ಕಳವಳವಾಯಿತು.


ಪ್ರತಿ ಸೈನಿಕನು ತನಗೆ ಎದುರು ಬಿದ್ದವರನ್ನು ಕೊಂದುಹಾಕಿದರು. ಆಗ ಅರಾಮ್ಯರು ಓಡಿಹೋದರು. ಇಸ್ರಾಯೇಲರು ಅವರನ್ನು ಹಿಂದಟ್ಟಿದರು. ಅರಾಮಿನ ಅರಸನಾದ ಬೆನ್ಹದದನು ಕುದುರೆ ಹತ್ತಿಕೊಂಡು ಕುದುರೆ ರಾಹುತರ ಸಂಗಡ ತಪ್ಪಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು