Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 8:15 - ಕನ್ನಡ ಸಮಕಾಲಿಕ ಅನುವಾದ

15 ಆದರೆ ಮಾರನೆಯ ದಿವಸದಲ್ಲಿ, ಅವನು ದಪ್ಪ ಬಟ್ಟೆಯನ್ನು ತೆಗೆದುಕೊಂಡು ನೀರಿನಲ್ಲಿ ಅದ್ದಿ, ಅರಸನ ಮುಖದ ಮೇಲೆ ಹಾಕಿದ್ದರಿಂದ ಅವನು ಮರಣಹೊಂದಿದನು. ಹಜಾಯೇಲನು ಅವನಿಗೆ ಬದಲಾಗಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮರುದಿನ ಬೆಳಿಗ್ಗೆ ಇವನು ಕಂಬಳಿಯನ್ನು ತೆಗೆದುಕೊಂಡು ನೀರಿನಲ್ಲಿ ತೋಯಿಸಿ, ಅರಸನ ಮುಖದ ಮೇಲೆ ಹಾಕಿದ್ದರಿಂದ ಅವನು ಸತ್ತನು. ಹಜಾಯೇಲನು ಅವನಿಗೆ ಬದಲಾಗಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಮರುದಿನ ಬೆಳಿಗ್ಗೆ ಇವನು ಒಂದು ಹೊದಿಕೆಯನ್ನು ನೀರಿನಲ್ಲಿ ತೋಯಿಸಿ ಅರಸನ ಮುಖದ ಮೇಲೆ ಹಾಕಿದನು; ಅವನು ಸತ್ತನು. ಹಜಾಯೇಲನು ಅವನ ಸ್ಥಾನದಲ್ಲಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಮರುದಿನ ಬೆಳಿಗ್ಗೆ ಇವನು ಕವುದಿಯನ್ನು ತೆಗೆದುಕೊಂಡು ನೀರಿನಲ್ಲಿ ತೋಯಿಸಿ ಅರಸನ ಮುಖದ ಮೇಲೆ ಹಾಕಿದದರಿಂದ ಅವನು ಸತ್ತನು. ಹಜಾಯೇಲನು ಅವನಿಗೆ ಬದಲಾಗಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ಮಾರನೆಯ ದಿನ ಹಜಾಯೇಲನು ಒಂದು ಹೊದಿಕೆಯನ್ನು ತೆಗೆದುಕೊಂಡು ನೀರಿನಲ್ಲಿ ನೆನೆಸಿದನು. ನಂತರ ಅವನು ಆ ಹೊದಿಕೆಯನ್ನು ಬೆನ್ಹದದನ ಮುಖದ ಮೇಲೆ ಹಾಕಿ, ಅವನನ್ನು ಉಸಿರುಕಟ್ಟಿಸಿ ಸಾಯಿಸಿದನು. ಹಜಾಯೇಲನು ನೂತನ ರಾಜನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 8:15
19 ತಿಳಿವುಗಳ ಹೋಲಿಕೆ  

ಆದರೆ ಹಜಾಯೇಲನು, “ನಿಮ್ಮ ಸೇವಕನು ಕೇವಲ ನಾಯಿ, ಇಂಥಾ ಮಹಾ ಕೆಲಸವನ್ನು ಮಾಡುವುದಕ್ಕೆ ಹೇಗೆ ಸಾಧ್ಯ?” ಎಂದನು. ಎಲೀಷನು, “ನೀನು ಅರಾಮಿನ ಮೇಲೆ ಅರಸನಾಗುವೆ ಎಂದು ಯೆಹೋವ ದೇವರು ನನಗೆ ತಿಳಿಸಿದ್ದಾರೆ,” ಎಂದನು.


ಅಪರಾಧವನ್ನು ಯೋಚಿಸಿ ಅಪರಾಧವನ್ನು ಕಲ್ಪಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡೆಸುವವರಿಗೆ ಕಷ್ಟ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ. ಏಕೆಂದರೆ ಅದು ಅವರ ಕೈಶಕ್ತಿಯಲ್ಲಿದೆ.


ಹಾಳು ಮಾಡುತ್ತಿರುವವನೇ, ನಿನಗೆ ಕಷ್ಟ! ನಿನ್ನನ್ನು ಯಾರೂ ಸೂರೆಮಾಡದಿದ್ದರೂ ನೀನು ಸೂರೆಮಾಡುತ್ತಿರುವೆ; ನಿನ್ನನ್ನು ಯಾರೂ ವಂಚಿಸದಿದ್ದರೂ ನೀನು ವಂಚನೆ ಮಾಡುತ್ತಿರುವೆ. ಇದಕ್ಕೆಲ್ಲ ಅಂತ್ಯವಿದೆ. ಈಗ ಹಾಳು ಮಾಡುತ್ತಿರುವ ನೀನು, ಆಗ ನೀನೇ ಹಾಳಾಗುವೆ. ಈಗ ವಂಚನೆ ಮಾಡುತ್ತಿರುವ ನೀನೇ ವಂಚಿತನಾಗುವೆ.


ಕುಯುಕ್ತಿಯನ್ನು ತಮ್ಮ ಹಾಸಿಗೆಯ ಮೇಲೆ ಕಲ್ಪಿಸುತ್ತಾರೆ; ಪಾಪದ ಮಾರ್ಗಕ್ಕೆ ತಮ್ಮನ್ನು ಅರ್ಪಿಸಿಕೊಳ್ಳುತ್ತಾರೆ; ಅವರು ಕೆಟ್ಟದ್ದಕ್ಕೆ ಅಸಹ್ಯಪಡುವುದಿಲ್ಲ.


ಇದಲ್ಲದೆ ಏಲನ ಮಗ ಹೋಶೇಯನು ರೆಮಲ್ಯನ ಮಗ ಪೆಕಹನ ವಿರುದ್ಧ ಒಳಸಂಚುಮಾಡಿ, ಇವನನ್ನು ಉಜ್ಜೀಯನ ಮಗ ಯೋತಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಸಂಹರಿಸಿ, ಅವನಿಗೆ ಬದಲಾಗಿ ಅರಸನಾದನು.


ಆದರೆ ಅವನ ಅಧಿಪತಿಯಾದಂಥ ರೆಮಲ್ಯನ ಮಗ ಪೆಕಹನು ಗಿಲ್ಯಾದಿನ ಐವತ್ತು ಮಂದಿಯನ್ನು ತನ್ನ ಸಂಗಡ ಕೂಡಿಸಿಕೊಂಡು ಪೆಕಹ್ಯನ ವಿರುದ್ಧ ಒಳಸಂಚುಮಾಡಿ, ಸಮಾರ್ಯದಲ್ಲಿರುವ ಅರಮನೆಯ ಗರ್ಭಗೃಹದಲ್ಲಿ ಪೆಕಹ್ಯನನ್ನು ಮತ್ತು ಅರ್ಗೋಬ್, ಅರ್ಯೇ ಎಂಬವರನ್ನು ಕೊಂದುಹಾಕಿದನು. ಅನಂತರ, ಪೆಕಹ್ಯನಿಗೆ ಬದಲಾಗಿ ಪೆಕಹನು ಅರಸನಾದನು.


ಆದರೆ ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬಗ್ಗಿಸಿ ತನ್ನ ಕೈಯಿಂದ ಯೋರಾಮನನ್ನು ಅವನ ತೋಳುಗಳ ನಡುವೆ ಹೊಡೆದನು. ಬಾಣ ಹೃದಯದಲ್ಲಿ ತೂರಿ ಹೊರಟಿತು. ಅವನು ರಥದಲ್ಲಿ ಕೆಳಗೆ ಮುದುರಿಕೊಂಡು ಬಿದ್ದನು.


ಆಗ ಯೆಹೋವ ದೇವರು ಅವನಿಗೆ, “ನೀನು ಬಂದ ಮಾರ್ಗದಲ್ಲಿ ದಮಸ್ಕದ ಮರುಭೂಮಿಗೆ ತಿರುಗಿಕೊಂಡು ಹೋಗಿ, ಅಲ್ಲಿ ತಲುಪಿದಾಗ, ಹಜಾಯೇಲನನ್ನು ಅರಾಮಿನ ಮೇಲೆ ಅರಸನಾಗಿರಲು ಅಭಿಷೇಕಿಸು.


ಪಟ್ಟಣವು ವಶವಾದದ್ದನ್ನು ಕಂಡಾಗ, ಜಿಮ್ರಿಯು ಅರಮನೆಯ ಅಂತಃಪುರದೊಳಗೆ ಪ್ರವೇಶಿಸಿ, ತನ್ನ ಅರಮನೆಯನ್ನು ಬೆಂಕಿಯಿಂದ ಸುಟ್ಟು ತಾನೂ ಸತ್ತನು.


ಜಿಮ್ರಿಯು ಒಳಗೆ ಹೋಗಿ ಯೆಹೂದದ ಅರಸನಾದ ಆಸನ ಇಪ್ಪತ್ತೇಳನೆಯ ವರ್ಷದಲ್ಲಿ, ಅವನನ್ನು ಕೆಡವಿ ಕೊಂದುಹಾಕಿ, ಅವನಿಗೆ ಬದಲಾಗಿ ಅರಸನಾದನು.


ಯೆಹೂದದ ಅರಸನಾದ ಆಸನ ಮೂರನೆಯ ವರುಷದಲ್ಲಿ ಬಾಷನು ನಾದಾಬನನ್ನು ಕೊಂದುಹಾಕಿ, ಅವನಿಗೆ ಬದಲಾಗಿ ಅರಸನಾದನು.


ಪೂರ್ವಿಕರು ಹೇಳಿದ ಸಾಮತಿಯ ಪ್ರಕಾರ, ‘ದುಷ್ಟರಿಂದ ದುಷ್ಟತ್ವವು ಹುಟ್ಟುವುದು’ ಆದರೂ ನಾನು ನಿನಗೆ ವಿರೋಧವಾಗಿ ನನ್ನ ಕೈ ಮುಟ್ಟುವುದಿಲ್ಲ.


ಅದಕ್ಕೆ ಎಲೀಷನು, “ನೀನು ಹೋಗಿ ಅವನಿಗೆ, ನಿಜವಾಗಿಯೂ ಸ್ವಸ್ಥನಾಗುವೆ, ಎಂದು ಹೇಳು. ಆದರೆ ಅವನು ಸಾಯುವನೆಂದು ಯೆಹೋವ ದೇವರು ನನಗೆ ತೋರಿಸಿದ್ದಾರೆ,” ಎಂದನು.


ಅಹಜ್ಯನು ಅಹಾಬನ ಮಗ ಯೋರಾಮನ ಸಂಗಡ ಗಿಲ್ಯಾದಿನ ರಾಮೋತಿಗೆ ಅರಾಮಿನ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಲು ಹೋದನು. ಆದರೆ ಅರಾಮ್ಯರು ಯೋರಾಮನನ್ನು ಹೊಡೆದು ಗಾಯಗೊಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು