Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 8:19 - ಕನ್ನಡ ಸಮಕಾಲಿಕ ಅನುವಾದ

19 ಆದರೂ ಯೆಹೋವ ದೇವರು ಯೆಹೂದದ ರಾಜ್ಯವನ್ನು ನಾಶಮಾಡಲಿಲ್ಲ. “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂಬುದಾಗಿ ತಮ್ಮ ದಾಸನಾದ ದಾವೀದನಿಗೆ ಪ್ರಮಾಣ ಮಾಡಿದ ಕಾರಣ ಉಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದರೂ, ಯೆಹೋವನು ಯೆಹೂದ ರಾಜ್ಯವನ್ನು ನಾಶಮಾಡಲಿಲ್ಲ. ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ ಎಂಬುದಾಗಿ ತನ್ನ ಸೇವಕನಾದ ದಾವೀದನಿಗೆ ಮಾಡಿದ ವಾಗ್ದಾನವನ್ನು ಸ್ಮರಿಸಿ ಅದನ್ನು ಉಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆದರೂ ಸರ್ವೇಶ್ವರ ಜುದೇಯದ ರಾಜ್ಯವನ್ನು ನಾಶಮಾಡಲಿಲ್ಲ. “ನಿನ್ನನ್ನು ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂಬುದಾಗಿ ತಮ್ಮ ದಾಸ ದಾವೀದನಿಗೆ ಮಾಡಿದ ಪ್ರಮಾಣವನ್ನು ಸ್ಮರಿಸಿ ಅದನ್ನು ಉಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆದರೂ ಯೆಹೋವನು ಯೆಹೂದರಾಜ್ಯವನ್ನು ನಾಶಮಾಡಲಿಲ್ಲ. ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವದಿಲ್ಲ ಎಂಬದಾಗಿ ತನ್ನ ಸೇವಕನಾದ ದಾವೀದನಿಗೆ ಮಾಡಿದ ಪ್ರಮಾಣವನ್ನು ನೆನಸಿ ಅದನ್ನು ಉಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದರೆ ಯೆಹೋವನು ತನ್ನ ಸೇವಕನಾದ ದಾವೀದನಿಗೆ ವಾಗ್ದಾನ ಮಾಡಿದ್ದುದರಿಂದ ಯೆಹೂದವನ್ನು ನಾಶಗೊಳಿಸಲಿಲ್ಲ. ಯಾವಾಗಲೂ ದಾವೀದನ ಕುಟುಂಬದ ಒಬ್ಬನು ರಾಜನಾಗಿರುತ್ತಾನೆಂದು ಯೆಹೋವನು ವಾಗ್ದಾನ ಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 8:19
18 ತಿಳಿವುಗಳ ಹೋಲಿಕೆ  

ಅಲ್ಲಿ ನನ್ನ ಹೆಸರನ್ನಿಡಲು ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ನನ್ನ ಮುಂದೆ ನನ್ನ ಸೇವಕನಾದ ದಾವೀದನಿಗೆ ಎಂದಿಗೂ ಬೆಳಕು ಆರಿಹೋಗದ ಹಾಗೆ, ಅವನ ಮಗನಿಗೆ ಒಂದು ಗೋತ್ರವನ್ನು ಕೊಡುವೆನು.


ನನ್ನ ಕೋಪದ ಉರಿಯನ್ನು ನಾನು ತೀರಿಸುವುದಿಲ್ಲ. ನಾನು ಎಫ್ರಾಯೀಮನ್ನು ತಿರುಗಿ ನಾಶಮಾಡುವುದಿಲ್ಲ. ಏಕೆಂದರೆ ನಾನು ಮನುಷ್ಯನಲ್ಲ, ದೇವರೇ. ನಿನ್ನ ಮಧ್ಯದಲ್ಲಿ ಪರಿಶುದ್ಧನಾಗಿದ್ದೇನೆ. ನಾನು ಅವರ ಪಟ್ಟಣಗಳ ವಿರುದ್ಧ ಬರುವುದಿಲ್ಲ.


“ಈ ಪಟ್ಟಣವನ್ನು ನನಗೋಸ್ಕರವೂ ನನ್ನ ಸೇವಕನಾದ ದಾವೀದನಿಗೋಸ್ಕರವೂ ಕಾಪಾಡಿ ಅದನ್ನು ರಕ್ಷಿಸುವೆನು.”


ಆದರೆ ಸೌಲನ ಮೇಲಿದ್ದ ನನ್ನ ಪ್ರೀತಿಯನ್ನು ಹಿಂತೆಗೆದುಕೊಂಡ ಹಾಗೆ, ಎಂದಿಗೂ ಅವನಿಂದ ಹಿಂತೆಗೆಯುವುದಿಲ್ಲ. ನಾನು ಸೌಲನನ್ನು ನಿನ್ನ ಮುಂದೆಯೇ ಹೊರಡಿಸಿಬಿಟ್ಟೆನಲ್ಲಾ.


ಆದಕಾರಣ ಯೆಹೋವ ದೇವರು ತಾವೇ ಒಂದು ಗುರುತನ್ನು ನಿನಗೆ ಕೊಡುವರು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು. ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.


ಆದರೆ ಯೆಹೋವ ದೇವರು ದಾವೀದನಿಗೆ, “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂದು ಪ್ರಮಾಣ ಮಾಡಿದ ಕಾರಣ, ದೇವರು ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ.


ಈ ಪಟ್ಟಣವನ್ನು ನನಗೋಸ್ಕರವೂ ನನ್ನ ಸೇವಕನಾದ ದಾವೀದನಿಗೋಸ್ಕರವೂ ಕಾಪಾಡಿ ಅದನ್ನು ರಕ್ಷಿಸುವೆನು.’ ”


ಆದರೆ ಚೆರೂಯಳ ಮಗ ಅಬೀಷೈಯನು ಅವನಿಗೆ ಸಹಾಯವಾಗಿ ಬಂದು, ಫಿಲಿಷ್ಟಿಯನನ್ನು ಹೊಡೆದು ಕೊಂದುಹಾಕಿದನು. ಆಗ ದಾವೀದನ ಜನರು ಅವನಿಗೆ, “ಇಸ್ರಾಯೇಲಿನ ಬೆಳಕಾಗಿರುವ ನೀನು ಆರಿಹೋಗದಂತೆ ಇನ್ನು ಮೇಲೆ ನಮ್ಮ ಸಂಗಡ ಯುದ್ಧಕ್ಕೆ ಬರಬೇಡ,” ಎಂದು ಆಣೆ ಇಟ್ಟರು.


“ಇಲ್ಲಿ ದಾವೀದನಿಗೆ ಬಲದಾಯಕ ಅರಸನನ್ನು ಚಿಗುರುವಂತೆ ಮಾಡುವೆನು; ನನ್ನ ಅಭಿಷಿಕ್ತನಿಗೆ ದೀಪವನ್ನು ಸಿದ್ಧಮಾಡಿದ್ದೇನೆ.


ನಿನ್ನ ಮನೆಯೂ ನಿನ್ನ ರಾಜ್ಯವೂ ನನ್ನ ಮುಂದೆ ಸದಾಕಾಲಕ್ಕೂ ಸ್ಥಿರವಾಗಿರುವವು. ನಿನ್ನ ಸಿಂಹಾಸನವು ಯುಗಯುಗಾಂತರಕ್ಕೂ ಶಾಶ್ವತವಾಗಿರುವುದು,’ ” ಎಂದು ಹೇಳಿದರು.


ಆದರೆ ನಿನ್ನ ತಂದೆ ದಾವೀದನಿಗೋಸ್ಕರ ನಿನ್ನ ಕಾಲದಲ್ಲಿ ನಾನು ಇದನ್ನು ಮಾಡದೆ ನಿನ್ನ ಮಗನ ಕೈಯೊಳಗಿಂದ ಅದನ್ನು ಕಸಿದುಕೊಳ್ಳುವೆನು.


ಇದಲ್ಲದೆ ರಾಜ್ಯವನ್ನೆಲ್ಲಾ ನಾನು ಕಸಿದುಕೊಳ್ಳದೆ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ, ನಾನು ಆಯ್ದುಕೊಂಡ ಯೆರೂಸಲೇಮಿಗೋಸ್ಕರವೂ ನಿನ್ನ ಮಗನಿಗೆ ಒಂದು ಗೋತ್ರವನ್ನು ಕೊಡುವೆನು,” ಎಂದರು.


ಆದರೆ ಅರಸನಾದ ಯೆಹೋರಾಮನ ಮಗಳೂ ಅಹಜ್ಯನ ಸಹೋದರಿಯೂ ಆದ ಯೆಹೋಷೆಬಳು ಹತರಾಗುವುದಕ್ಕಿದ್ದ ಅರಸನ ಮಕ್ಕಳ ಮಧ್ಯದಿಂದ ಅಹಜ್ಯನ ಮಗನಾದ ಯೋವಾಷನನ್ನು ಕದ್ದುಕೊಂಡು ಹೋಗಿ ಅವನು ಹತನಾಗದ ಹಾಗೆ ಅವನನ್ನೂ ಅವನ ದಾದಿಯನ್ನೂ ಅತಲ್ಯಳಿಗೆ ಕಾಣದ ಹಾಗೆ ಮಲಗುವ ಕೋಣೆಯಲ್ಲಿ ಬಚ್ಚಿಟ್ಟಳು.


ನಿಮ್ಮ ಸೇವಕನಾದ ದಾವೀದನ ನಿಮಿತ್ತ, ನಿಮ್ಮ ಅಭಿಷಿಕ್ತನನ್ನು ತಿರಸ್ಕರಿಸಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು