Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 8:4 - ಕನ್ನಡ ಸಮಕಾಲಿಕ ಅನುವಾದ

4 ಅರಸನು ದೇವರ ಮನುಷ್ಯನ ಸೇವಕನಾದ ಗೇಹಜಿಯ ಸಂಗಡ ಮಾತನಾಡಿ, “ಎಲೀಷನು ಮಾಡಿದ ಎಲ್ಲಾ ದೊಡ್ಡ ಕ್ರಿಯೆಗಳನ್ನು ನನಗೆ ವಿವರಿಸು,” ಎಂದು ಅವನಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆ ಸಮಯದಲ್ಲಿ ಅರಸನು ದೇವರ ಮನುಷ್ಯನ ಸೇವಕನಾದ ಗೇಹಜಿಯೊಂದಿಗೆ ಮಾತನಾಡುತ್ತಾ, “ಎಲೀಷನು ಮಾಡಿದ ಎಲ್ಲಾ ಮಹತ್ಕಾರ್ಯಗಳನ್ನು ನನಗೆ ವಿವರಿಸು” ಎಂದು ಆಜ್ಞಾಪಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆ ಸಮಯದಲ್ಲೇ ಅರಸನು, ದೈವಪುರುಷನ ಸೇವಕನಾದ ಗೇಹಜಿಗೆ, “ಎಲೀಷನು ಮಾಡಿದ ಎಲ್ಲಾ ಅದ್ಭುತಕಾರ್ಯಗಳನ್ನು ನನಗೆ ವಿವರಿಸು,” ಎಂದು ಆಜ್ಞಾಪಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆ ಸಮಯದಲ್ಲಿ ಅರಸನು ದೇವರ ಮನುಷ್ಯನ ಸೇವಕನಾದ ಗೇಹಜಿಗೆ - ಎಲೀಷನು ಮಾಡಿದ ಎಲ್ಲಾ ಮಹತ್ಕಾರ್ಯಗಳನ್ನು ನನಗೆ ವಿವರಿಸು ಎಂದು ಆಜ್ಞಾಪಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆ ಸಮಯದಲ್ಲಿ ರಾಜನು ದೇವಮನುಷ್ಯನ ಸೇವಕನಾದ ಗೇಹಜಿಯ ಸಂಗಡ ಮಾತನಾಡುತ್ತಿದ್ದನು. ರಾಜನು ಗೇಹಜಿಗೆ, “ಎಲೀಷನು ಮಾಡಿರುವ ಮಹತ್ಕಾರ್ಯಗಳೆಲ್ಲವುಗಳನ್ನು ನನಗೆ ದಯವಿಟ್ಟು ತಿಳಿಸು” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 8:4
24 ತಿಳಿವುಗಳ ಹೋಲಿಕೆ  

ಕೆಲವು ದಿನಗಳಾದ ತರುವಾಯ ಫೇಲಿಕ್ಸನು ಯೆಹೂದ್ಯಳಾದ ತನ್ನ ಪತ್ನಿ ದ್ರೂಸಿಲ್ಲಳೊಂದಿಗೆ ಬಂದನು. ಪೌಲನನ್ನು ಕರೆಕಳುಹಿಸಿ ಅವನು ಕ್ರಿಸ್ತ ಯೇಸುವಿನಲ್ಲಿ ನಂಬುವ ವಿಷಯವಾಗಿ ಮಾತನಾಡುವುದನ್ನು ಕೇಳಿದನು.


ಅವನು ಉತ್ತರವಾಗಿ, “ನಾನು ನಿಮಗೆ ಆಗಲೇ ಹೇಳಿದ್ದೇನಲ್ಲಾ. ಆದರೆ ನೀವು ಕೇಳಲಿಲ್ಲ, ನೀವು ತಿರುಗಿ ಏಕೆ ಕೇಳುತ್ತೀರಿ? ನೀವು ಸಹ ಅವರ ಶಿಷ್ಯರಾಗುವುದಕ್ಕೆ ಬಯಸುತ್ತೀರೋ?” ಎಂದನು.


ಹೆರೋದನು ಯೇಸುವನ್ನು ಕಂಡಾಗ, ಅತ್ಯಂತ ಸಂತೋಷಪಟ್ಟನು. ಏಕೆಂದರೆ ಅವನು ಯೇಸುವಿನ ವಿಷಯವಾಗಿ ಅನೇಕ ಸಂಗತಿಗಳನ್ನು ಕೇಳಿದ್ದರಿಂದ, ಅವರನ್ನು ಕಾಣಲು ಬಹಳ ಕಾಲದಿಂದ ಆಶೆಪಟ್ಟಿದ್ದನು. ಅವರಿಂದಾಗುವ ಸೂಚಕಕಾರ್ಯವನ್ನು ಕಾಣಲು ನಿರೀಕ್ಷಿಸುತ್ತಿದ್ದನು.


ಆದರೆ ಹೆರೋದನು, “ನಾನು ಯೋಹಾನನನ್ನು ಶಿರಚ್ಛೇದನ ಮಾಡಿದೆ, ನಾನು ಯಾರನ್ನು ಕುರಿತು, ಈ ವಿಷಯಗಳನ್ನು ಕೇಳುತ್ತಿರುವೆ, ಈತನು ಯಾರು?” ಎಂದು ಹೇಳಿ ಅವನು ಯೇಸುವನ್ನು ಕಾಣಲು ಪ್ರಯತ್ನಿಸಿದನು.


“ನೀವು ಹೋಗಿ ಆ ಮಗುವಿನ ವಿಷಯ ಜಾಗರೂಕತೆಯಿಂದ ವಿಚಾರಿಸಿ. ಆ ಮಗು ಸಿಕ್ಕಿದ ಮೇಲೆ ನನಗೆ ತಿಳಿಸಿರಿ, ಆಗ ನಾನೂ ಬಂದು ಅದನ್ನು ಆರಾಧಿಸುವೆನು,” ಎಂದು ಹೇಳಿ ಅವರನ್ನು ಬೇತ್ಲೆಹೇಮಿಗೆ ಕಳುಹಿಸಿದನು.


ಹಾಗೆಯೇ ಅವರು ಬಂದು ಪಟ್ಟಣದ ಬಾಗಿಲು ಕಾಯುವವನನ್ನು ಕರೆದು ಅವನಿಗೆ, “ನಾವು ಅರಾಮ್ಯರ ಪಾಳೆಯಕ್ಕೆ ಹೋಗಿ ಬಂದೆವು, ಅಲ್ಲಿ ಯಾರೂ ಕಾಣಿಸಲಿಲ್ಲ, ಮನುಷ್ಯರ ಶಬ್ದವೇ ಕೇಳಿಸಲಿಲ್ಲ. ಕತ್ತೆ ಕುದುರೆಗಳನ್ನು ಅಲ್ಲಲ್ಲಿ ಕಟ್ಟಿಹಾಕಲಾಗಿತ್ತು ಡೇರೆಗಳು ಇದ್ದ ಹಾಗೆಯೇ ಇವೆ,” ಎಂದರು.


ಆಗ ಊರು ಬಾಗಿಲ ದ್ವಾರದಲ್ಲಿ ನಾಲ್ಕು ಮಂದಿ ಕುಷ್ಠರೋಗಿಗಳು ಇದ್ದರು. ಅವರು ಒಬ್ಬರಿಗೊಬ್ಬರು, “ನಾವು ಸಾಯುವವರೆಗೂ ಇಲ್ಲಿ ಕುಳಿತುಕೊಂಡಿರುವುದೇನು?


ಆಗ ಎಲೀಷನು, “ನೀವು ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾಳೆ ಹೆಚ್ಚು ಕಡಿಮೆ ಇಷ್ಟು ಹೊತ್ತಿಗೆ ಸಮಾರ್ಯದ ಬಾಗಿಲಲ್ಲಿ ಮೂರು ಕಿಲೋಗ್ರಾಂ ನಯವಾದ ಗೋಧಿಹಿಟ್ಟು ಒಂದು ಬೆಳ್ಳಿ ನಾಣ್ಯಕ್ಕೆ ಮತ್ತು ಆರು ಕಿಲೋಗ್ರಾಂ ಜವೆಗೋಧಿ ಒಂದು ಬೆಳ್ಳಿ ನಾಣ್ಯಕ್ಕೆ ಮಾರಲಾಗುವುದು,” ಎಂದನು.


ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರ ಇದ್ದ ಒಬ್ಬ ದೂತನನ್ನು ಕಳುಹಿಸಿದನು. ಅವನು ಇನ್ನೂ ಸ್ವಲ್ಪ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, “ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವುದಕ್ಕೆ ದೂತನನ್ನು ಕಳುಹಿಸಿದ್ದಾನೆ. ದೂತನು ಇಲ್ಲಿಗೆ ಬಂದ ಕೂಡಲೇ ನೀವು ಬಾಗಿಲನ್ನು ಮುಚ್ಚಿ, ಅವನು ಒಳಗೆ ಬಾರದಂತೆ ಅದನ್ನು ಒತ್ತಿಹಿಡಿಯಿರಿ. ಅವನ ಹಿಂದೆಯೇ ಬರುತ್ತಿರುವ ಅವನೊಡೆಯನ ಕಾಲಿನ ಸಪ್ಪಳ ಕೇಳಿಸುತ್ತಿದೆಯಲ್ಲವೇ?” ಎಂದು ಹೇಳಿದನು.


ದೇವರ ಮನುಷ್ಯನು, “ಅದು ಎಲ್ಲಿ ಬಿತ್ತು?” ಎಂದನು. ಅವನು ಎಲೀಷನಿಗೆ ಸ್ಥಳವನ್ನು ತೋರಿಸಿದ ತರುವಾಯ, ಎಲೀಷನು ಒಂದು ಕಟ್ಟಿಗೆಯನ್ನು ಕಡಿದು ಅಲ್ಲಿ ಹಾಕಿದ್ದರಿಂದ ಆ ಕಬ್ಬಿಣವು ತೇಲಿತು.


ಆಗ ಅವನು ಇಳಿದು ಹೋಗಿ ದೇವರ ಮನುಷ್ಯನ ಮಾತಿನ ಪ್ರಕಾರ ಯೊರ್ದನಿನಲ್ಲಿ ಏಳು ಸಾರಿ ಮುಳುಗಿದನು. ಆಗ ಅವನ ಶರೀರವು ಚಿಕ್ಕ ಮಗುವಿನ ಶರೀರದ ಹಾಗೆ ಮಾರ್ಪಟ್ಟಿತು, ಅವನು ಶುದ್ಧನಾದನು.


ಆಗ ಎಲೀಷನು ತನ್ನ ಸೇವಕನಾದ ಗೇಹಜಿಗೆ, “ನೀನು ಶೂನೇಮ್ಯಳನ್ನು ಕರೆ,” ಎಂದನು. ಅವನು ಅವಳನ್ನು ಕರೆದದ್ದರಿಂದ ಅವಳು ಎಲೀಷನ ಮುಂದೆ ಬಂದು ನಿಂತಳು.


ಅವನು ಹಿಂದಿರುಗಿ ಅವರನ್ನು ನೋಡಿ, ಯೆಹೋವ ದೇವರ ಹೆಸರಿನಲ್ಲಿ ಅವರನ್ನು ಶಪಿಸಿದನು. ಆಗ ಅಡವಿಯಿಂದ ಎರಡು ಕರಡಿಗಳು ಹೊರಟು, ಅವರಲ್ಲಿ ನಾಲ್ವತ್ತೆರಡು ಹುಡುಗರನ್ನು ಸೀಳಿಬಿಟ್ಟವು.


ಎಲೀಯನಿಂದ ಬಿದ್ದ ಹೊದಿಕೆಯನ್ನು ತೆಗೆದುಕೊಂಡು ನೀರನ್ನು ಹೊಡೆದು, “ಎಲೀಯನ ದೇವರಾದ ಯೆಹೋವ ದೇವರು ಎಲ್ಲಿ?” ಎಂದನು. ಅವನು ಹಾಗೆ ನೀರನ್ನು ಹೊಡೆದ ತರುವಾಯ, ಅದು ಬಲಗಡೆಗೂ ಎಡಗಡೆಗೂ ವಿಭಾಗವಾದದ್ದರಿಂದ, ಎಲೀಷನು ದಾಟಿಹೋದನು.


ಏಳು ವರ್ಷ ಆದ ತರುವಾಯ, ಆ ಸ್ತ್ರೀಯು ಫಿಲಿಷ್ಟಿಯರ ದೇಶವನ್ನು ಬಿಟ್ಟು ತಿರುಗಿಬಂದು ತನ್ನ ಹೊಲಮನೆಗಳಿಗೋಸ್ಕರ ಅರಸನಿಗೆ ಮೊರೆಯಿಟ್ಟಳು.


ಕರ್ಮೆಲ್ ಬೆಟ್ಟದಲ್ಲಿರುವ ದೇವರ ಮನುಷ್ಯನ ಬಳಿಗೆ ಬಂದಳು. ಆಗ ದೇವರ ಮನುಷ್ಯನು ದೂರದಿಂದ ಅವಳು ಬರುವುದನ್ನು ಕಂಡನು. ಅವನು ತನ್ನ ಸೇವಕನಾದ ಗೇಹಜಿಗೆ, “ಇಗೋ, ಆ ಶೂನೇಮ್ಯಳು ಬರುತ್ತಿದ್ದಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು