Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:1 - ಕನ್ನಡ ಸಮಕಾಲಿಕ ಅನುವಾದ

1 ಪ್ರವಾದಿಯಾದ ಎಲೀಷನು ಪ್ರವಾದಿಗಳ ಮಂಡಳಿಯಲ್ಲಿ ಒಬ್ಬನನ್ನು ಕರೆದು ಅವನಿಗೆ, “ನಡುವನ್ನು ಕಟ್ಟಿಕೊಂಡು ಈ ಎಣ್ಣೆಯ ಪಾತ್ರೆಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಗಿಲ್ಯಾದಿನ ರಾಮೋತಿಗೆ ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪ್ರವಾದಿಯಾದ ಎಲೀಷನು ಪ್ರವಾದಿಮಂಡಳಿಯವರಲ್ಲಿ ಒಬ್ಬನನ್ನು ಕರೆದು ಅವನಿಗೆ, “ಈ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ರಾಮೋತ್ ಗಿಲ್ಯಾದಿಗೆ ಹೋಗಲು ಸಿದ್ಧನಾಗು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪ್ರವಾದಿ ಎಲೀಷನು ಪ್ರವಾದಿಮಂಡಲಿಯವರಲ್ಲಿ ಒಬ್ಬನನ್ನು ಕರೆದು, “ಈ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ರಾಮೋತ್ ಗಿಲ್ಯಾದಿಗೆ ಹೋಗಲು ಸಿದ್ಧನಾಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಪ್ರವಾದಿಯಾದ ಎಲೀಷನು ಪ್ರವಾದಿ ಮಂಡಲಿಯವರಲ್ಲಿ ಒಬ್ಬನನ್ನು ಕರೆದು ಅವನಿಗೆ - ನಡುಕಟ್ಟಿ ಈ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ರಾಮೋತ್ ಗಿಲ್ಯಾದಿಗೆ ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಪ್ರವಾದಿಯಾದ ಎಲೀಷನು ಪ್ರವಾದಿಗಳ ಗುಂಪಿನಿಂದ ಒಬ್ಬನನ್ನು ಕರೆದು ಅವನಿಗೆ, “ಎಣ್ಣೆಯಿರುವ ಈ ಸಣ್ಣ ಸೀಸೆಯನ್ನು ನಿನ್ನ ಕೈಗಳಲ್ಲಿ ತೆಗೆದುಕೊಂಡು ರಾಮೋತ್‌ಗಿಲ್ಯಾದಿಗೆ ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:1
25 ತಿಳಿವುಗಳ ಹೋಲಿಕೆ  

ಆಗ ಸಮುಯೇಲನು ಎಣ್ಣೆಕುಪ್ಪಿಯಿಂದ ಅವನ ತಲೆಯ ಮೇಲೆ ಸುರಿದು, ಅವನನ್ನು ಮುದ್ದಿಟ್ಟು ಅವನಿಗೆ, “ಯೆಹೋವ ದೇವರು ನಿನ್ನನ್ನು ತಮ್ಮ ಆಸ್ತಿಯಾಗಿರುವ ಜನರ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾರೆ.


ಎಲೀಷನು ಗೇಹಜಿಗೆ, “ನೀನು ನಿನ್ನ ಸಡಿಲವಾದ ಉಡುಪನ್ನು ನಡುವಿಗೆ ಕಟ್ಟಿಕೊಂಡು, ನನ್ನ ಕೋಲನ್ನು ನಿನ್ನ ಕೈಯಲ್ಲಿ ಹಿಡಿದುಕೊಂಡು ಹೋಗು. ನಿನಗೆ ಯಾವನಾದರೂ ಎದುರುಗೊಂಡರೆ, ಅವನನ್ನು ವಂದಿಸಬೇಡ; ಯಾವನಾದರೂ ನಿನ್ನನ್ನು ವಂದಿಸಿದರೆ, ಅವನಿಗೆ ಉತ್ತರ ಹೇಳಬೇಡ; ನನ್ನ ಕೋಲನ್ನು ಆ ಹುಡುಗನ ಮುಖದ ಮೇಲೆ ಹಾಕು,” ಎಂದನು.


ಆಗ ಯಾಜಕನಾದ ಚಾದೋಕನು ಗುಡಾರದೊಳಗಿಂದ ತೈಲದ ಕೊಂಬನ್ನು ತಂದು ಸೊಲೊಮೋನನನ್ನು ಅಭಿಷೇಕಿಸಿದನು. ಅವರು ತುತೂರಿಯನ್ನು ಊದಿದರು. ಆಗ ಜನರೆಲ್ಲರು, “ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ,” ಎಂದರು.


ಯೆಹೋವ ದೇವರು ಸಮುಯೇಲನಿಗೆ, “ಇಸ್ರಾಯೇಲಿನ ಅರಸನಾಗಿರದ ಹಾಗೆ ನಾನು ಅಲಕ್ಷ್ಯಮಾಡಿದ ಸೌಲನಿಗೋಸ್ಕರ ನೀನು ಎಷ್ಟರವರೆಗೆ ದುಃಖವುಳ್ಳವನಾಗಿರುವೆ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ. ಬೇತ್ಲೆಹೇಮಿನವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು. ಏಕೆಂದರೆ ಅವನ ಮಕ್ಕಳಲ್ಲಿ ನಾನು ಒಬ್ಬನನ್ನು ಅರಸನಾಗಿ ಆಯ್ದುಕೊಂಡೆನು,” ಎಂದರು.


ಆದ್ದರಿಂದ, ನೀವು ನಿಮ್ಮ ಮನಸ್ಸನ್ನು ಸಿದ್ಧಮಾಡಿಕೊಂಡು, ಸ್ವಸ್ಥಚಿತ್ತರಾಗಿದ್ದು ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಅಂತ್ಯದವರೆಗೆ ಇಡಿರಿ.


ಆಗ ಬೇತೇಲಿನಲ್ಲಿರುವ ಪ್ರವಾದಿಗಳ ಗುಂಪು ಎಲೀಷನ ಬಳಿಗೆ ಬಂದು ಅವನಿಗೆ, “ಇಂದು ಯೆಹೋವ ದೇವರು ನಿನ್ನ ಯಜಮಾನನನ್ನು ನಿನ್ನಿಂದ ತೆಗೆದುಕೊಳ್ಳುವರೆಂದು ತಿಳಿದಿದ್ದೀಯೋ?” ಎಂದರು. ಅದಕ್ಕವನು, “ಹೌದು, ನಾನು ಕೂಡಾ ಬಲ್ಲೆ, ಸುಮ್ಮನೆ ಇರಿ,” ಎಂದನು.


ಈಗ ಇಸ್ರಾಯೇಲರೇ, ನೀವು ಬದುಕಿ ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶವನ್ನು ಪ್ರವೇಶಿಸಿ, ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ನಿಮಗೆ ಬೋಧಿಸುವ ನಿಯಮಗಳನ್ನೂ, ನ್ಯಾಯಗಳನ್ನೂ ಕೇಳಿ, ಅವುಗಳನ್ನು ಕೈಗೊಳ್ಳಿರಿ.


“ಆದ್ದರಿಂದ ಈಗ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು, ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಅವರ ಸಂಗಡ ಮಾತನಾಡು. ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಗೆ ಭಯಪಡಬೇಡ.


ಆಗ ಯೆಹೋವ ದೇವರು, ‘ಅಹಾಬನು ಹೋಗಿ ಗಿಲ್ಯಾದಿನ ರಾಮೋತಿನಲ್ಲಿ ಬೀಳುವ ಹಾಗೆ, ಅವನನ್ನು ಮರುಳುಗೊಳಿಸುವವನು ಯಾರು?’ ಎಂದರು. “ಒಬ್ಬನು ಒಂದು ವಿಧವಾಗಿಯೂ ಮತ್ತೊಬ್ಬನು ಇನ್ನೊಂದು ವಿಧವಾಗಿಯೂ ಹೇಳುತ್ತಿದ್ದರು.


ಆಗ ಅವನು ಯೆಹೋಷಾಫಾಟನಿಗೆ, “ನೀನು ಗಿಲ್ಯಾದಿನ ರಾಮೋತಿನ ಮೇಲೆ ಯುದ್ಧಮಾಡಲು ನನ್ನ ಸಂಗಡ ಬರುತ್ತೀಯಾ?” ಎಂದನು. ಯೆಹೋಷಾಫಾಟನು ಇಸ್ರಾಯೇಲಿನ ಅರಸನಿಗೆ, “ನಾನೂ ನೀನೂ, ನನ್ನ ಜನರೂ ನಿನ್ನ ಜನರೂ, ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ ಅಲ್ಲವೇ?” ಎಂದನು.


ಆದರೆ ಪ್ರವಾದಿಗಳ ಮಂಡಲಿಯಲ್ಲಿ ಒಬ್ಬನು ಯೆಹೋವ ದೇವರ ಮಾತಿನಿಂದ ತನ್ನ ಜೊತೆಗಾರನಿಗೆ, “ನೀನು ನಿನ್ನ ಆಯುಧದಿಂದ ನನ್ನನ್ನು ಹೊಡೆ,” ಎಂದನು. ಆದರೆ ಆ ಜೊತೆಗಾರನನ್ನು ಹೊಡೆಯಲೊಲ್ಲದೆ ಇದ್ದನು.


ಯೆಹೋವ ದೇವರ ಕೈ ಎಲೀಯನ ಮೇಲೆ ಇದ್ದುದರಿಂದ ಅವನು ತನ್ನ ಸಡಿಲವಾದ ಬಟ್ಟೆಗಳನ್ನು ನಡುಕಟ್ಟಿಕೊಂಡು ಇಜ್ರೆಯೇಲ್ ಪಟ್ಟಣದವರೆಗೂ ಅಹಾಬನಿಗೆ ಮುಂದಾಗಿ ಓಡಿದನು.


ಬಾಳ್ ಪೆಯೋರನ ವಿಷಯದಲ್ಲಿ ಯೆಹೋವ ದೇವರು ಮಾಡಿದವುಗಳನ್ನು ನಿಮ್ಮ ಕಣ್ಣುಗಳು ನೋಡಿದವು. ಬಾಳ್ ಪೆಯೋರನನ್ನು ಹಿಂಬಾಲಿಸಿದ ಜನರನ್ನೆಲ್ಲಾ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿದರಲ್ಲವೇ?


ಪ್ರವಾದಿಗಳ ಗುಂಪಿನಲ್ಲಿದ್ದ ಒಬ್ಬ ಪ್ರವಾದಿಯ ಹೆಂಡತಿ ಎಲೀಷನಿಗೆ ಕೂಗಿ, “ನಿನ್ನ ದಾಸನಾದ ನನ್ನ ಗಂಡನು ಮರಣಹೊಂದಿದನು. ನಿನ್ನ ದಾಸನು ಯೆಹೋವ ದೇವರಿಗೆ ಭಯಪಡುವವನಾಗಿದ್ದನೆಂದು ನೀನು ಬಲ್ಲೆ. ಈಗ ಸಾಲಗಾರನು ನನ್ನ ಇಬ್ಬರು ಮಕ್ಕಳನ್ನು ತನಗೆ ದಾಸರಾಗಿ ತೆಗೆದುಕೊಳ್ಳಲು ಬಂದಿದ್ದಾನೆ,” ಎಂದಳು.


ಯೇಸು ಅಲ್ಲಿ ಊಟಕ್ಕೆ ಕುಳಿತಿದ್ದಾಗ ಒಬ್ಬ ಸ್ತ್ರೀಯು ಬಹು ಬೆಲೆಯುಳ್ಳ ಸುಗಂಧ ತೈಲದ ಭರಣಿಯೊಂದಿಗೆ ಯೇಸುವಿನ ಬಳಿಗೆ ಬಂದು, ಅದನ್ನು ಅವರ ತಲೆಯ ಮೇಲೆ ಸುರಿದಳು.


ಇದಲ್ಲದೆ ನಿಂಷಿಯ ಮಗನಾದ ಯೇಹುವನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕಿಸಿ, ಆಬೇಲ್ ಮೆಹೋಲ ಊರಿನವನಾದ ಶಾಫಾಟನ ಮಗನಾಗಿರುವ ಎಲೀಷನನ್ನು ನಿನಗೆ ಪ್ರತಿಯಾಗಿ ಪ್ರವಾದಿಯಾಗಿರಲು ಅಭಿಷೇಕಿಸು.


ಹಾಗೆಯೇ ಯೌವನಸ್ಥನಾದ ಪ್ರವಾದಿಯು ಗಿಲ್ಯಾದಿನ ರಾಮೋತಿಗೆ ಹೋದನು.


ಆಗ ಯೆರಿಕೋವಿನಲ್ಲಿರುವ ಪ್ರವಾದಿಗಳ ಗುಂಪು ಎಲೀಷನ ಬಳಿಗೆ ಬಂದು ಅವನಿಗೆ, “ಯೆಹೋವ ದೇವರು ಇಂದು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತೆಗೆದುಕೊಳ್ಳುವನೆಂದು ತಿಳಿದಿದ್ದೀಯೋ?” ಎಂದರು. ಅದಕ್ಕವನು, “ನಾನು ಕೂಡಾ ಬಲ್ಲೆ, ಸುಮ್ಮನೆ ಇರಿ,” ಎಂದನು.


ಪ್ರವಾದಿಗಳ ಗುಂಪಿನಲ್ಲಿ ಐವತ್ತು ಮಂದಿ ಹೋಗಿ ದೂರದಲ್ಲಿ ಎದುರಾಗಿ ನಿಂತರು. ಆದರೆ ಆ ಇಬ್ಬರು ಯೊರ್ದನ್ ನದಿ ಬಳಿಯಲ್ಲಿ ನಿಂತರು.


ಯೆರಿಕೋವಿನ ಬಳಿಯಲ್ಲಿ ಎದುರಾಗಿದ್ದ ಪ್ರವಾದಿಗಳ ಗುಂಪು ಅವನನ್ನು ಕಂಡಾಗ, “ಎಲೀಯನ ಆತ್ಮವು ಎಲೀಷನ ಮೇಲೆ ನಿಂತಿರುವುದು,” ಎಂದು ಹೇಳಿ, ಎದುರುಗೊಳ್ಳಲು ಬಂದು, ಅವನ ಮುಂದೆ ನೆಲದವರೆಗೂ ಅಡ್ಡಬಿದ್ದರು.


ಯೆರೂಸಲೇಮಿನ ನಿವಾಸಿಗಳು ಯೆಹೋರಾಮನಿಗೆ ಬದಲಾಗಿ ಅವನ ಚಿಕ್ಕ ಮಗನಾದ ಅಹಜ್ಯನನ್ನು ಅರಸನಾಗಿ ಮಾಡಿದರು. ಏಕೆಂದರೆ ಪಾಳೆಯಕ್ಕೆ ಬಂದ ಅರಬಿಯರ ಗುಂಪು ಹಿರಿಯ ಮಕ್ಕಳನ್ನೆಲ್ಲಾ ಕೊಂದುಹಾಕಿದರು. ಹೀಗೆಯೇ ಯೆಹೋರಾಮನ ಮಗನಾದ ಅಹಜ್ಯನು ಯೆಹೂದದ ಅರಸನಾಗಿ ಆಳಲು ಆರಂಭಿಸಿದನು.


ಅಹಜ್ಯನು ಇವರ ಯೋಚನೆಯ ಪ್ರಕಾರ ನಡೆದು, ಗಿಲ್ಯಾದಿನ ರಾಮೋತಿಗೆ ಅರಾಮಿನ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಲು ಇಸ್ರಾಯೇಲಿನ ಅರಸನಾಗಿರುವ ಅಹಾಬನ ಮಗ ಯೋರಾಮನ ಸಂಗಡ ಹೋದನು. ಆದರೆ ಅರಾಮ್ಯರು ಯೋರಾಮನನ್ನು ಹೊಡೆದು ಗಾಯಗೊಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು