Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:20 - ಕನ್ನಡ ಸಮಕಾಲಿಕ ಅನುವಾದ

20 ಆಗ ಕಾವಲುಗಾರನು, “ಇವನೂ ಅವರ ಬಳಿಗೆ ಹೋಗಿ ತಿರುಗಿ ಬರಲಿಲ್ಲ. ಇದಲ್ಲದೆ ರಥವನ್ನು ಓಡಿಸುವುದು ನಿಂಷಿಯ ಮಗನಾದ ಯೇಹುವು ಓಡಿಸುವ ಹಾಗಿದೆ, ಏಕೆಂದರೆ ಅವನು ಹುಚ್ಚನಂತೆ ಓಡಿಸುತ್ತಿದ್ದಾನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಕಾವಲುಗಾರನು ತಿರುಗಿ ಅರಸನಿಗೆ, “ಎರಡನೆಯವನೂ ಆ ಗುಂಪನ್ನು ತಲುಪಿದ್ದಾನೆ. ಆದರೆ ಹಿಂತಿರುಗಿ ಬರುವುದು ಕಾಣಿಸುತ್ತಿಲ್ಲ. ರಥದಲ್ಲಿ ಕುಳಿತಿರುವವನು ಕುದುರೆಗಳನ್ನು ಹುಚ್ಚು ಹಿಡಿದವನಂತೆ ಓಡಿಸುವುದನ್ನು ನೋಡಿದರೆ ಅವನು ನಿಂಷಿಯ ಮೊಮ್ಮಗನಾದ ಯೇಹುವೇ ಇರಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಕಾವಲುಗಾರನು ಪುನಃ ಅರಸನಿಗೆ, “ಎರಡನೆಯವನೂ ಆ ಗುಂಪನ್ನು ಮುಟ್ಟಿದನು; ಆದರೆ ಹಿಂದಿರುಗಿ ಬರುವುದು ಕಾಣಿಸುವುದೇ ಇಲ್ಲ. ರಥದಲ್ಲಿ ಕುಳಿತಿರುವವನು ಕುದುರೆಗಳನ್ನು ಹುಚ್ಚುಹಿಡಿದವನಂತೆ ಓಡಿಸುವುದನ್ನು ನೋಡಿದರೆ ಅವನು, ನಿಂಷಿಯ ಮೊಮ್ಮಗನಾದ ಯೇಹುವಾಗಿರಬೇಕು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಕಾವಲುಗಾರನು ತಿರಿಗಿ ಅರಸನಿಗೆ - ಎರಡನೆಯವನೂ ಆ ಗುಂಪನ್ನು ಮುಟ್ಟಿದನು; ಆದರೆ ಹಿಂದಿರುಗಿ ಬರುವದು ಕಾಣಿಸುವದೇ ಇಲ್ಲ. ರಥದಲ್ಲಿ ಕೂತಿರುವವನು ಕುದುರೆಗಳನ್ನು ಹುಚ್ಚು ಹಿಡಿದವನಂತೆ ಓಡಿಸುವದನ್ನು ನೋಡಿದರೆ ಅವನು ನಿಂಷಿಯ ಮೊಮ್ಮಗನಾದ ಯೇಹುವಾಗಿರಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಕಾವಲುಗಾರನು ಯೋರಾಮನಿಗೆ, “ಆ ಗುಂಪಿನ ಬಳಿಗೆ ಹೋದ ಎರಡನೆಯವನೂ ಈವರೆವಿಗೂ ಹಿಂದುರುಗಿ ಬರಲೇ ಇಲ್ಲ. ರಥವನ್ನು ಓಡಿಸುತ್ತಿರುವವನು ಹುಚ್ಚನಂತೆ ರಥವನ್ನು ಓಡಿಸುತ್ತಿರುವುದನ್ನು ನೋಡಿದರೆ ಅವನು ನಿಂಷಿಯ ಮೊಮ್ಮಗನಾದ ಯೇಹುವಿರಬೇಕು!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:20
10 ತಿಳಿವುಗಳ ಹೋಲಿಕೆ  

ಕಾವಲುಗಾರನು, “ಮೊದಲನೆಯವನ ಓಟವು ಚಾದೋಕನ ಮಗ ಅಹೀಮಾಚನ ಓಟದ ಹಾಗೆ ಇರುವುದೆಂದು ನನಗೆ ಕಾಣುತ್ತದೆ,” ಎಂದನು. ಅದಕ್ಕೆ ಅರಸನು, “ಅವನು ಒಳ್ಳೆಯವನು, ಒಳ್ಳೆಯ ಸಮಾಚಾರ ತರುತ್ತಾನೆ,” ಎಂದನು.


ನೀನು ಸಿಟ್ಟಿನಿಂದ ದೇಶದ ಮೇಲೆ ನಡೆದುಹೋಗಿ, ಕೋಪದಿಂದ ಜನಾಂಗಗಳನ್ನು ತುಳಿದು ಹಾಕಿದ್ದೀಯೆ.


ನಾನು ಬಾಬಿಲೋನಿಯರನ್ನು ಎಬ್ಬಿಸುತ್ತೇನೆ. ಅವರು ಉಗ್ರ ಮತ್ತು ಸಾಹಸಿ ಜನರು. ತಮ್ಮದಲ್ಲದ ನಿವಾಸಗಳನ್ನು ವಶಮಾಡಿಕೊಳ್ಳುವುದಕ್ಕೆ ವಿಶಾಲವಾದ ದೇಶದಲ್ಲಿ ಹಾದುಹೋಗುವರು.


ಆದರೆ ಪೂರ್ವದಿಂದಲೂ, ಉತ್ತರದಿಂದಲೂ ಬರುವ ಸುದ್ದಿಗಳು ಅವನನ್ನು ಹೆದರಿಸುವುವು. ಆದ್ದರಿಂದ ಅವನು ಮಹಾ ಉಗ್ರವಾಗಿ ಅನೇಕರನ್ನು ಸಂಹರಿಸುವುದಕ್ಕೂ, ನಿರ್ಮೂಲ ಮಾಡುವುದಕ್ಕೂ ಹೊರಡುವನು.


“ಬೆಂಕಿಯಲ್ಲಿ ಕೆಂಡವನ್ನು ಊದುತ್ತಾ, ತನ್ನ ಕೆಲಸಕ್ಕೆ ಆಯುಧಗಳನ್ನು ತರುವ ಕಮ್ಮಾರನನ್ನು ಸೃಷ್ಟಿಸಿದವನು ನಾನೇ. ನಾಶಮಾಡುವ ಕೆಡುಕನನ್ನು ಸೃಷ್ಟಿಸಿದವನೂ ನಾನೇ.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿರುವ ಸಮಾಧಿಯಲ್ಲಿ, ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


“ನೀನು ನನ್ನ ಸಂಗಡ ಬಂದು ಯೆಹೋವ ದೇವರಿಗೋಸ್ಕರ ನನಗುಂಟಾದ ಆಸಕ್ತಿಯನ್ನು ನೋಡು,” ಎಂದು ಹೇಳಿ ಅವನನ್ನು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.


ಹಜಾಯೇಲನ ಖಡ್ಗಕ್ಕೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು; ಯೇಹುವಿನ ಖಡ್ಗಕ್ಕೆ ತಪ್ಪಿಸಿಕೊಂಡವರನ್ನು ಎಲೀಷನು ಕೊಂದುಹಾಕುವನು.


ನೀನು ಅಲ್ಲಿಗೆ ಸೇರಿದಾಗ ನಿಂಷಿಯ ಮಗನಾಗಿರುವ ಯೆಹೋಷಾಫಾಟನ ಮಗ ಯೇಹುವನ್ನು ಅಲ್ಲಿ ಕಂಡು, ಒಳಗೆ ಪ್ರವೇಶಿಸಿ, ಅವನನ್ನು ಅವರ ಸಹೋದರರ ಮಧ್ಯದಿಂದ ಎಬ್ಬಿಸಿ, ಒಳಗಿನ ಕೋಣೆಗೆ ಕರೆದುಕೊಂಡು ಹೋಗಿ,


ಆಗ ಅರಸನು ಇನ್ನೊಬ್ಬ ರಾಹುತನನ್ನು ಕಳುಹಿಸಿದನು. ಇವನು ಹೋಗಿ ಯೇಹುವನ್ನು ಎದುರುಗೊಂಡು, “ಅರಸನು, ‘ಶುಭವಾರ್ತೆ ಉಂಟೋ?’ ಎಂದು ಕೇಳುತ್ತಾನೆ,” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನು? ನನ್ನ ಹಿಂದೆ ಬಾ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು