Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:24 - ಕನ್ನಡ ಸಮಕಾಲಿಕ ಅನುವಾದ

24 ಆದರೆ ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬಗ್ಗಿಸಿ ತನ್ನ ಕೈಯಿಂದ ಯೋರಾಮನನ್ನು ಅವನ ತೋಳುಗಳ ನಡುವೆ ಹೊಡೆದನು. ಬಾಣ ಹೃದಯದಲ್ಲಿ ತೂರಿ ಹೊರಟಿತು. ಅವನು ರಥದಲ್ಲಿ ಕೆಳಗೆ ಮುದುರಿಕೊಂಡು ಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬೊಗ್ಗಿಸಿ ಯೋರಾಮನ ಬೆನ್ನಿಗೆ ಬಾಣವನ್ನೆಸೆದನು. ಅದು ಅವನ ಹೃದಯದಿಂದ ಹೊರಗೆ ಬಂದಿತು. ಅವನು ಮುದುರಿ ರಥದಲ್ಲಿ ಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬಗ್ಗಿಸಿ ಯೋರಾಮನ ಬೆನ್ನಿಗೆ ಬಾಣವನ್ನೆಸೆದನು; ಅದು ಅವನ ಹೃದಯದಿಂದ ಹೊರಗೆ ಬಂದಿತು. ಅವನು ರಥದಲ್ಲೇ ಕುಸಿದುಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬೊಗ್ಗಿಸಿ ಯೋರಾಮನ ಬೆನ್ನಿಗೆ ಬಾಣವನ್ನೆಸೆದನು; ಅದು ಅವನ ಹೃದಯದಿಂದ ಹೊರಗೆ ಬಂದಿತು. ಅವನು ಮುದುರಿಕೊಂಡು ರಥದಲ್ಲಿ ಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆದರೆ ಯೇಹು ತನ್ನ ಬಿಲ್ಲನ್ನು ಸೆಳೆದು, ಶಕ್ತಿಯನ್ನೆಲ್ಲ ಒಗ್ಗೂಡಿಸಿ ಯೋರಾಮನ ಬೆನ್ನಿಗೆ ಬಾಣದಿಂದ ಹೊಡೆದನು. ಬಾಣವು ಯೋರಾಮನ ಹೃದಯವನ್ನು ಛೇದಿಸಿತು. ಯೋರಾಮನು ತನ್ನ ರಥದಲ್ಲಿಯೇ ಸತ್ತುಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:24
12 ತಿಳಿವುಗಳ ಹೋಲಿಕೆ  

ಆದರೆ ಅರಾಮ್ಯರ ಸೈನಿಕನೊಬ್ಬನು ಗುರಿ ಇಡದೆ ಬಿಲ್ಲಿಗೆ ಬಾಣವನ್ನೇರಿಸಿ ಹೊಡೆಯಲು, ಅದು ಇಸ್ರಾಯೇಲಿನ ಅರಸನಿಗೆ, ಅವನ ಕವಚದ ಸಂದಿನಲ್ಲಿ ಬಂದು ತಾಕಿತು. ಆದ್ದರಿಂದ ಅವನು ತನ್ನ ರಥ ನಡೆಸುವವನಿಗೆ, “ನೀನು ರಥವನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇಕಡೆಗೆ ತೆಗೆದುಕೊಂಡು ಹೋಗು, ನನಗೆ ದೊಡ್ಡ ಗಾಯವಾಗಿದೆ,” ಎಂದನು.


ಆದರೆ, “ಸಮಾಧಾನ, ಸುರಕ್ಷಿತ,” ಎಂದು ಜನರು ಹೇಳುತ್ತಿರುವಾಗಲೇ, ಅವರ ಮೇಲೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಬರುವಂತೆ ಫಕ್ಕನೆ ಬರುವುದು. ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ಯೆಹೋವ ದೇವರಿಗೆ ವಿರೋಧವಾಗಿ ಯಾವ ಜ್ಞಾನವೂ, ವಿವೇಕವೂ, ಯೋಜನೆಯೂ ಇಲ್ಲ.


“ದೇವರನ್ನು ಮರೆತು ಬಿಡುವವರೇ, ಇದನ್ನು ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ. ಇಲ್ಲವಾದರೆ ಎಚ್ಚರಿಕೆಯಾಗಿರಿ. ನನ್ನ ಕೈಯಿಂದ ಬಿಡಿಸುವವರು ಯಾರೂ ಇರುವುದಿಲ್ಲವೆಂಬುದನ್ನು ಗ್ರಹಿಸಿಕೊಳ್ಳಿರಿ.


ಆದರೆ ಅವರು ತುಂಬಾ ಭಯಪಟ್ಟು, “ಇಬ್ಬರೂ ಅರಸರು ಅವನ ಮುಂದೆ ನಿಲ್ಲಲು ಸಾಧ್ಯವಾಗದಿದ್ದಾಗ, ನಾವು ನಿಲ್ಲುವುದು ಹೇಗೆ?” ಎಂದರು.


ಆಗ ಒಬ್ಬನು ಅವನಿಗೆ, ‘ನಿನ್ನ ಕೈಗಳಲ್ಲಿರುವ ಈ ಗಾಯಗಳು ಏನು?’ ಎಂದು ಕೇಳಿದರೆ, ಅವನು, ‘ನನ್ನ ಸ್ನೇಹಿತರ ಮನೆಯಲ್ಲಿ ನನಗುಂಟಾದ ಗಾಯಗಳೇ,’ ಅನ್ನುವನು.


ಹಜಾಯೇಲನ ಖಡ್ಗಕ್ಕೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು; ಯೇಹುವಿನ ಖಡ್ಗಕ್ಕೆ ತಪ್ಪಿಸಿಕೊಂಡವರನ್ನು ಎಲೀಷನು ಕೊಂದುಹಾಕುವನು.


“ಅಹಾಬನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದನ್ನು ನೋಡಿದಿಯಲ್ಲವೇ? ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಅವನ ಜೀವಮಾನದಲ್ಲಿ ಆ ಕೇಡನ್ನು ಬರಮಾಡದೆ, ಅವನ ಮಗನ ಕಾಲದಲ್ಲಿ ಅವನ ಮನೆಯ ಮೇಲೆ ಬರಮಾಡುವೆನು,” ಎಂದನು.


ಆ ದಿವಸವೆಲ್ಲಾ ಯುದ್ಧವು ಬಹು ಘೋರವಾದದ್ದರಿಂದ ಇಸ್ರಾಯೇಲಿನ ಅರಸನು ಅರಾಮ್ಯರಿಗೆ ಎದುರಾಗಿ ರಥದಲ್ಲಿಯೇ ಆತುಕೊಂಡು ನಿಂತಿದ್ದನು. ಅವನ ಗಾಯದ ರಕ್ತವು ರಥದ ಅಡಿಭಾಗದಲ್ಲಿ ಸುರಿದು ನಿಂತಿತ್ತು, ಸಾಯಂಕಾಲದಲ್ಲಿ ಅವನು ಮರಣಹೊಂದಿದನು.


ಮರುದಿನ ಬೆಳಿಗ್ಗೆ ಯೇಹು ಹೊರಗೆ ಬಂದು, ಸಕಲ ಜನರ ಮುಂದೆ ನಿಂತು, “ನೀವು ನಿರಪರಾಧಿಗಳು. ನಾನು ನನ್ನ ಯಜಮಾನನ ಮೇಲೆ ಒಳಸಂಚುಮಾಡಿ, ಅವನನ್ನು ಕೊಂದುಹಾಕಿದೆನು. ಆದರೆ ಇವರೆಲ್ಲರನ್ನು ಸಂಹರಿಸಿದವರ‍್ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು