Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:25 - ಕನ್ನಡ ಸಮಕಾಲಿಕ ಅನುವಾದ

25 ಆಗ ಯೇಹುವು ತನ್ನ ಅಧಿಪತಿಯಾದ ಬಿದ್ಕಾರನಿಗೆ, “ನೀನು ಅವನನ್ನು ತೆಗೆದುಕೊಂಡುಹೋಗಿ ಇಜ್ರೆಯೇಲಿನವನಾದ ನಾಬೋತನ ಪಾಲಾಗಿರುವ ಹೊಲದಲ್ಲಿ ಹಾಕಿಬಿಡು. ಏಕೆಂದರೆ ನಾನೂ, ನೀನೂ ಅವನ ತಂದೆಯಾದ ಅಹಾಬನ ಹಿಂದೆ ರಥವನ್ನು ಏರಿಕೊಂಡು ಹೋಗುತ್ತಿರುವಾಗ, ಯೆಹೋವ ದೇವರು ಈ ಪ್ರವಾದನೆಯನ್ನು ಅವನ ಬಗ್ಗೆ ತಿಳಿಸಿದರೆಂದು ಜ್ಞಾಪಕಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಗ ಯೇಹುವು ತನ್ನ ಜೊತೆಯಲ್ಲಿದ್ದ ಬಿದ್ಕರನೆಂಬ ಸೇನಾಪತಿಗೆ, “ಯೋರಾಮನ ಶವವನ್ನು ಎತ್ತಿ ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಬಿಸಾಡು. ಒಂದು ದಿನ ನಾವಿಬ್ಬರೂ ಕುದುರೆ ಹತ್ತಿ, ಇವನ ತಂದೆಯಾದ ಅಹಾಬನ ಹಿಂದಿನಿಂದ ಹೋಗುತ್ತಿರುವಾಗ, ಯೆಹೋವನು ಈ ಪ್ರವಾದನೆಯನ್ನು ಅವನ ವಿರುದ್ಧ ಹೇಳಿದ್ದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆಗ ಯೇಹುವು ತನ್ನ ಜೊತೆಯಲ್ಲಿದ್ದ ಬಿದ್ಕರನೆಂಬ ಸೇನಾಪತಿಗೆ, “ಯೋರಾಮನ ಶವವನ್ನು ಎತ್ತಿ ಜೆಸ್ರೀಲಿನವನಾದ ನಾಬೋತನ ಹೊಲದಲ್ಲಿ ಹಾಕು. ಒಂದು ದಿನ ನಾವಿಬ್ಬರೂ ಕುದುರೆ ಹತ್ತಿ ಇವನ ತಂದೆಯಾದ ಅಹಾಬನ ಹಿಂದಿನಿಂದ ಹೋಗುತ್ತಿರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆಗ ಯೇಹುವು ತನ್ನ ಜೊತೆಯಲ್ಲಿದ್ದ ಬಿದ್ಕರನೆಂಬ ಸೇನಾಪತಿಗೆ - ಯೋರಾಮನ ಶವವನ್ನು ಎತ್ತಿ ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಹಾಕು. ಒಂದು ದಿವಸ ನಾವಿಬ್ಬರೂ ಕುದುರೆಹತ್ತಿ ಇವನ ತಂದೆಯಾದ ಅಹಾಬನ ಹಿಂದಿನಿಂದ ಹೋಗುತ್ತಿರುವಾಗ ಯೆಹೋವನು ಅಹಾಬನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯೇಹು ತನ್ನ ರಥದ ಸಾರಥಿಯಾದ ಬಿದ್ಕರನಿಗೆ, “ಯೋರಾಮನ ದೇಹವನ್ನು ಎತ್ತಿ ಇಜ್ರೇಲಿಯನಾದ ನಾಬೋತನ ಹೊಲದಲ್ಲಿ ಎಸೆದುಬಿಡು. ನಾನು ಮತ್ತು ನೀನು ಯೋರಾಮನ ತಂದೆಯಾದ ಅಹಾಬನ ಸಂಗಡ ಹೋಗುತ್ತಿರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:25
12 ತಿಳಿವುಗಳ ಹೋಲಿಕೆ  

ನೀನು ಅವನಿಗೆ, ‘ನೀನು ಕೊಂದುಹಾಕಿ ಸ್ವಾಧೀನ ಮಾಡಿಕೊಂಡಿಯಲ್ಲಾ. ಆದ್ದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲಿಯೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕುವುವು,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.


ಆಮೋಚನ ಮಗ ಯೆಶಾಯನಿಗೆ ಬಾಬಿಲೋನಿನ ವಿಷಯವಾಗಿ ಬಂದ ಪ್ರವಾದನೆ:


ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ,” ಎಂದು ಹೇಳಿದರು.


ಒಂದು ಪ್ರವಾದನೆ: ಇಸ್ರಾಯೇಲಿಗೆ ಮಲಾಕಿಯನ ಮುಖಾಂತರ ಬಂದ ಯೆಹೋವ ದೇವರ ವಾಕ್ಯ:


ನಿನೆವೆಯ ವಿಷಯವಾದ ಪ್ರವಾದನೆ: ಎಲ್ಕೋಷಿನವನಾದ ನಹೂಮನ ದರ್ಶನದ ಪುಸ್ತಕವು.


ಹಜಾಯೇಲನ ಖಡ್ಗಕ್ಕೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು; ಯೇಹುವಿನ ಖಡ್ಗಕ್ಕೆ ತಪ್ಪಿಸಿಕೊಂಡವರನ್ನು ಎಲೀಷನು ಕೊಂದುಹಾಕುವನು.


ಕೆಲವು ಕಾಲದ ನಂತರ, ಇಜ್ರೆಯೇಲ್ ಪಟ್ಟಣದಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಬಳಿಯಲ್ಲಿ ಇಜ್ರೆಯೇಲಿನವನಾದ ನಾಬೋತನಿಗೆ ಒಂದು ದ್ರಾಕ್ಷಿ ತೋಟವಿತ್ತು.


ನಾಬೋತನ ರಕ್ತವನ್ನೂ, ಅವನ ಪುತ್ರರ ರಕ್ತವನ್ನೂ ನಿನ್ನೆ ನಾನು ನಿಶ್ಚಯವಾಗಿ ನೋಡಿದೆನಲ್ಲಾ, ಎಂದು ಯೆಹೋವ ದೇವರು ಹೇಳುತ್ತಾರೆ. ಇದಲ್ಲದೆ ಇದೇ ಹೊಲದಲ್ಲಿ ನಿನಗೆ ಮುಯ್ಯಿಗೆ ಮುಯ್ಯಿ ಕೊಡುವೆನೆಂದು ಯೆಹೋವ ದೇವರು ಹೇಳುತ್ತಾರೆ. ಆದ್ದರಿಂದ ಯೆಹೋವ ದೇವರ ವಾಕ್ಯದ ಪ್ರಕಾರ ಎತ್ತಿಕೊಂಡು ಆ ಹೊಲದಲ್ಲಿ ಅವನನ್ನು ಹಾಕಿಬಿಡು,” ಎಂದನು.


“ಅವರಿಗೆ ನೀನು ಹೀಗೆ ಹೇಳಬೇಕೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ: ಈ ಪ್ರವಾದನೆಯು ಯೆರೂಸಲೇಮಿನಲ್ಲಿರುವ ಪ್ರಭುವನ್ನೂ, ಅದರಲ್ಲಿರುವ ಸಮಸ್ತ ಇಸ್ರಾಯೇಲಿನ ಮನೆತನದವರನ್ನೂ ಕುರಿತದ್ದಾಗಿದೆ.


“ನಿನ್ನ ಸಂತತಿಯವರು ನಾಲ್ಕನೆಯ ತಲೆಮಾರಿನವರೆಗೂ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು,” ಎಂದು ಯೆಹೋವ ದೇವರು ಯೇಹುವಿಗೆ ಹೇಳಿದ ವಾಕ್ಯದಂತೆ ಇವೆಲ್ಲವೂ ನೆರವೇರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು