Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 1:13 - ಕನ್ನಡ ಸಮಕಾಲಿಕ ಅನುವಾದ

13 ನಿಮಗೆ ಓದಲು ಅಥವಾ ಅರ್ಥಮಾಡಿಕೊಳ್ಳಲು ಅಸಾಧ್ಯವಾದ ಯಾವುದನ್ನೂ ನಾವು ಬರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀವು ನಮ್ಮ ಪತ್ರಿಕೆಗಳಲ್ಲಿ ಓದಿ ಅರ್ಥಮಾಡಿಕೊಂಡ ಸಂಗತಿಗಳನ್ನೇ ಹೊರತು ಬೇರೆ ಯಾವುದನ್ನು ನಾವು ನಿಮಗೆ ಬರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13-14 ನೀವು ಓದಿ ಗ್ರಹಿಸಿಕೊಳ್ಳಬಲ್ಲ ವಿಷಯಗಳನ್ನು ಮಾತ್ರವೇ ನಾವು ನಿಮಗೆ ಬರೆದಿದ್ದೇವೆ. ನಮ್ಮನ್ನು ನೀವಿನ್ನೂ ಭಾಗಶಃ ಅರಿತುಕೊಂಡಿದ್ದೀರಿ. ಮುಂದಕ್ಕಾದರೂ ನೀವು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳುವಿರೆಂಬ ಭರವಸೆ ನನಗಿದೆ. ಹಾಗೆಯೇ ‘ಪ್ರಭುವಿನ ದಿನದಂದು ನಾವು ನಿಮ್ಮನ್ನು ಕುರಿತು ಹೆಮ್ಮೆಪಡುವಂತೆ ನೀವೂ ನಮ್ಮನ್ನು ಕುರಿತು ಹೆಮ್ಮೆಪಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇದೇ ನಮಗಿರುವ ಉಲ್ಲಾಸ. ನೀವು ನಮ್ಮ ಪತ್ರಿಕೆಗಳಲ್ಲಿ ಓದಿ ಒಪ್ಪಿಕೊಂಡ ಸಂಗತಿಗಳನ್ನೇ ಅಲ್ಲದೆ ಬೇರೆ ಯಾವದನ್ನೂ ನಾವು ನಿಮಗೆ ಬರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13-14 ನೀವು ಓದಿ ಅರ್ಥಮಾಡಿಕೊಳ್ಳಬಲ್ಲ ಸಂಗತಿಗಳನ್ನು ಮಾತ್ರ ನಾನು ನಿಮಗೆ ಬರೆಯುತ್ತೇನೆ. ನಮ್ಮ ವಿಷಯವಾದ ಕೆಲವು ಸಂಗತಿಗಳನ್ನು ನೀವು ಈಗಾಗಲೇ ಸ್ಪಲ್ಪ ಅರ್ಥಮಾಡಿಕೊಂಡಂತೆ ಸಂಪೂರ್ಣವಾಗಿ ಅರ್ಥಮಾಡಿಕೊಳ್ಳುತ್ತೀರೆಂಬ ನಿರೀಕ್ಷೆ ನನಗಿದೆ. ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಮತ್ತೆ ಬಂದಾಗ ನಾವು ನಿಮ್ಮ ವಿಷಯದಲ್ಲಿ ಹೆಮ್ಮೆಪಡುವಂತೆ ನೀವೂ ನಮ್ಮ ವಿಷಯದಲ್ಲಿ ಹೆಮ್ಮೆಪಡಲಾಗುವಂತೆ ನೀವು ಅರ್ಥಮಾಡಿಕೊಳ್ಳುತ್ತೀರಿ ಎಂಬ ಭರವಸೆ ನನಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತುಮಿ ವಾಚುನ್ ಅರ್ತ್ ಕರುನ್ ಘೆವ್ಕ್ ಹೊತಾ ತವ್ಡೆಚ್ ಅಮಿ ತುಮ್ಕಾ ಲಿವ್ತಾಂವ್. ಆಕ್ರಿಚ್ಯಾ ಎಳಾ ಪತರ್ ತುಮಿ ಸಮ್ಜುನ್ ಘೆತ್ಯಾಶಿ ಮನ್ತಲೊ ಮಾಜೊ ಬರೊಸೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 1:13
6 ತಿಳಿವುಗಳ ಹೋಲಿಕೆ  

ನಾವು ನಾಚಿಕೆಯ ಗುಪ್ತ ಕಾರ್ಯಗಳನ್ನು ಬಿಟ್ಟುಬಿಟ್ಟು, ಕುತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯಗಳನ್ನು ವ್ಯಾಖ್ಯಾನ ಮಾಡದೆಯೂ ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತಾ, ಎಲ್ಲಾ ಮನುಷ್ಯರ ಮನಸ್ಸಾಕ್ಷಿಯು ಒಪ್ಪಬೇಕಾದ ರೀತಿಯಲ್ಲಿ ನಮ್ಮನ್ನು ನಾವೇ ದೇವರ ಮುಂದೆ ಸಮರ್ಪಿಸಿಕೊಳ್ಳುತ್ತೇವೆ.


ನಿನ್ನ ವಿಶ್ವಾಸದಲ್ಲಿ ಅನ್ಯೋನ್ಯತೆಯು ನಿನ್ನ ಎಲ್ಲಾ ಒಳ್ಳೆಯದರ ಆಳವಾದ ತಿಳುವಳಿಕೆಯನ್ನು ಕ್ರಿಸ್ತ ಯೇಸುವಿಗಾಗಿ ಪರಿಣಾಮಗೊಳಿಸಿ ಹಂಚುವಂತೆ ನಾನು ಪ್ರಾರ್ಥಿಸುತ್ತೇನೆ.


ನಾವಂತೂ ಉತ್ತೀರ್ಣರಾದವರೆಂದು ನಿಮಗೆ ಗೊತ್ತಾಗುವುದೆಂದು ನಾನು ನಿರೀಕ್ಷಿಸುತ್ತೇನೆ.


ಕರ್ತನ ಭಯಭಕ್ತಿಯನ್ನು ಅರಿತಿರುವ ಕಾರಣ, ಜನರ ಮನವೊಲಿಸಲು ನಾವು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲವರಾಗಿದ್ದಾರೆ. ಅದು ನಿಮ್ಮ ಮನಸ್ಸಾಕ್ಷಿಗೂ ತಿಳಿದಿದೆ ಎಂದು ನಾನು ನಂಬುತ್ತೇನೆ.


ಬೆಳಗಾದ ಮೇಲೆ ನೆಲವನ್ನು ಗುರುತಿಸಲು ಅವರಿಗೆ ಸಾಧ್ಯವಾಗಲಿಲ್ಲ. ಆದರೆ ಅವರು ದಡವನ್ನು ಕಂಡು ಸಾಧ್ಯವಾದರೆ ಅಲ್ಲಿ ನೌಕೆಯನ್ನು ನಿಲ್ಲಿಸಬೇಕೆಂದು ತೀರ್ಮಾನಿಸಿದರು.


ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ದಿನದಲ್ಲಿ ನೀವು ನಿರ್ದೋಷಿಗಳಾಗಿರುವಂತೆ ಅವರು ಕೊನೆಯತನಕವೂ ನಿಮ್ಮನ್ನು ಬಲಪಡಿಸಿ ಕಾಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು