Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 10:2 - ಕನ್ನಡ ಸಮಕಾಲಿಕ ಅನುವಾದ

2 ನಾನು ನಿಮ್ಮ ಬಳಿಗೆ ಬಂದಾಗ, ಕಠಿಣವಾಗಿ ವರ್ತಿಸಲು ನನಗೆ ಅವಕಾಶಕೊಡಬೇಡಿರಿ. ಏಕೆಂದರೆ ನಾವು ಪ್ರಾಪಂಚಿಕ ರೀತಿಗನುಸಾರವಾಗಿ ನಡೆಯುತ್ತಿದ್ದೇವೆಂದು ಆಕ್ಷೇಪಿಸುವ ಕೆಲವರ ವಿರುದ್ಧ ಖಂಡಿತವಾಗಿಯು ಕಠಿಣನಾಗಿಯೇ ವರ್ತಿಸಬೇಕೆಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯಾರು ನಮ್ಮನ್ನು ಲೋಕ ರೀತಿಯಾಗಿ ಜೀವಿಸುವವರೆಂದು ಎಣಿಸುತ್ತಾರೋ ಅವರೊಂದಿಗೆ ದಿಟ್ಟತನದಿಂದಲೇ ಇರಬೇಕೆಂದು ಅಂದುಕೊಂಡಿದೇನೆ. ನಾವು ನಿಮ್ಮೊಂದಿಗಿರುವಾಗ ಅಂಥ ದಿಟ್ಟತನವನ್ನು ತೋರಿಸುವುದಕ್ಕೆ ಅವಕಾಶವುಂಟಾಗಬಾರದೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಾನು ನಿಮ್ಮ ಬಳಿಗೆ ಬಂದಾಗ, ಕಠಿಣನಾಗಿ ವರ್ತಿಸಲು ಅವಕಾಶ ಕೊಡಬೇಡಿ. ನಾವು ಪ್ರಾಪಂಚಿಕ ರೀತಿನೀತಿಗಳಿಗೆ ಅನುಗುಣವಾಗಿ ನಡೆಯುತ್ತಿದ್ದೇವೆಂದು ದೂಷಿಸುವವರ ವಿರುದ್ಧ ಖಂಡಿತವಾಗಿಯೂ ಕಠಿಣನಾಗಿಯೇ ವರ್ತಿಸಬೇಕೆಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯಾರು ನಮ್ಮನ್ನು ಲೋಕಾನುಸಾರಿಗಳೆಂದು ಎಣಿಸುತ್ತಾರೋ ಅವರಿಗೆ ದಿಟ್ಟವಾದ ಧೈರ್ಯವನ್ನು ತೋರಿಸಬೇಕೆಂದು ಯೋಚಿಸುತ್ತಾ ಇದ್ದೇನೆ. ನಾವು ನಿಮ್ಮಲ್ಲಿಗೆ ಬಂದಿರುವಾಗ ಅಂಥ ದಿಟ್ಟತನವನ್ನು ತೋರಿಸುವದಕ್ಕೆ ಅವಕಾಶ ಉಂಟಾಗಬಾರದೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾವು ಲೌಕಿಕರಂತೆ ಜೀವಿಸುತ್ತೇವೆಂದು ಕೆಲವರು ಯೋಚಿಸುತ್ತಾರೆ. ನಾನು ಬಂದಾಗ ಅವರ ವಿರೋಧವಾಗಿ ಬಹು ದಿಟ್ಟತನದಿಂದಿರಬೇಕೆಂದು ಯೋಚಿಸಿಕೊಂಡಿದ್ದೇನೆ. ಆದರೆ ನಿಮಗೂ ಅದೇ ದಿಟ್ಟತನವನ್ನು ಉಪಯೋಗಿಸುವ ಅಗತ್ಯತೆ ಇಲ್ಲದಿರಲಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಹ್ಯಾ ಜಗಾಚ್ಯಾ ಪರ್ಕಾರ್ ಅಮಿ ಚಲ್ತಾಂವ್ ಮನುನ್ ಮನ್ತಲ್ಯಾಕ್, ಕಸ್ಲೊ ಮನುನ್ ದಾಕ್ವುಚೆ ಮನುನ್ ಮಿಯಾ ಚಿಂತ್ಲಾ . ಖರೆ ತುಮ್ಚ್ಯಾ ಮದ್ದಿ ಮಿಯಾ ಯೆತಾನಾ ಮಿಯಾ ಖಟೊರ್ ರಿತಿನ್ ಬೊಲ್ತಲೊ ಅವಕಾಸ್ ತುಮ್ಚ್ಯಾ ವೈನಾ ಮಾಕಾ ಗಾವಿನಸ್ತಾನಾ ರ್‍ಹಾಂವ್ದಿತ್ ಮನುನ್ ಮಿಯಾ ಮಾಗ್ತಾ .

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 10:2
12 ತಿಳಿವುಗಳ ಹೋಲಿಕೆ  

ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗ, ಈ ಮಾತುಗಳನ್ನು ಬರೆದಿದ್ದೇನೆ. ನಾನು ಬಂದಾಗ ನಿಮ್ಮನ್ನು ಕೆಡವಿ ಹಾಕುವುದಕ್ಕಲ್ಲ ಆದರೆ ಕಟ್ಟುವುದಕ್ಕಾಗಿ ಕರ್ತ ಯೇಸು ನನಗೆ ಕೊಟ್ಟಿರುವ ಅಧಿಕಾರದಿಂದ ನಿಮಗೆ ಕಾಠಿಣ್ಯವನ್ನು ತೋರಿಸುವುದಕ್ಕೆ ಅವಕಾಶವಿರಬಾರದೆಂದು ಅಪೇಕ್ಷಿಸುತ್ತೇನೆ.


ನಾನು ಎರಡನೆಯ ಸಾರಿ ನಿಮ್ಮ ಬಳಿಗೆ ಬಂದಿದ್ದಾಗ, ಗತಕಾಲದಲ್ಲಿ ಪಾಪ ಮಾಡುತ್ತಿದ್ದವರನ್ನು ಎಚ್ಚರಿಸಿದೆನು. ನಾನು ತಿರುಗಿ ಬಂದರೆ, ನಿಮ್ಮನ್ನು ಶಿಕ್ಷಿಸದೆ ಬಿಡುವುದಿಲ್ಲವೆಂದು ಹೇಗೆ ಹೇಳಿದೆನೋ, ಹಾಗೆಯೇ ಈಗಲೂ ನಿಮಗೆ ದೂರದಲ್ಲಿದ್ದುಕೊಂಡು ಹೇಳುತ್ತಿದ್ದೇನೆ.


ಮಾಂಸಭಾವದವರಾಗಿ ಬಾಳುವವರ ಮನಸ್ಸು ಅದಕ್ಕೆ ಸಂಬಂಧಪಟ್ಟವುಗಳ ಮೇಲಿರುತ್ತದೆ. ಆದರೆ ಪವಿತ್ರಾತ್ಮ ದೇವರಿಗೆ ಅನುಸಾರವಾಗಿ ಬಾಳುವವರ ಮನಸ್ಸು ಪವಿತ್ರಾತ್ಮ ದೇವರಿಗೆ ಸಂಬಂಧಪಟ್ಟವುಗಳ ಮೇಲಿರುತ್ತದೆ.


ಆದ್ದರಿಂದ, ಈಗ ಕ್ರಿಸ್ತ ಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ.


ಹೀಗೆ ನಾವು ಮಾಂಸಭಾವದವರಾಗಿ ಬಾಳದೆ ಪವಿತ್ರಾತ್ಮರಿಗನುಸಾರವಾಗಿ ಬಾಳುವ ನಮ್ಮಲ್ಲಿ ನಿಯಮದ ಅಗತ್ಯವು ನೆರವೇರುವುದಕ್ಕೆ ಆಸ್ಪದವಾಯಿತು.


ನಾನು ಇದನ್ನು ಯೋಚಿಸಿದಾಗ, ಚಂಚಲಹೃದಯವನ್ನು ತಾಳಿದೆನೋ? ಅಥವಾ, ಒಮ್ಮೆ ಅದು “ಹೌದು, ಹೌದು” ಅದೇ ಕ್ಷಣದಲ್ಲಿ ಅದು “ಅಲ್ಲ, ಅಲ್ಲ” ಎಂದು ನಾನು ಲೋಕ ರೀತಿಯಾಗಿ ಯೋಜನೆಯನ್ನು ತಯಾರಿಸಿದ್ದೇನೋ?


ಹೀಗೆಲ್ಲಾ ಮಾಡಲು ಬಹಳ ಬಲಹೀನರಾದ ನಮಗೆ ಸಾಧ್ಯವಿಲ್ಲ ಎಂದು ಒಪ್ಪಿಕೊಳ್ಳಲು ನನಗೆ ನಾಚಿಕೆಯಾಗುತ್ತದೆ! ಯಾವುದನ್ನು ಇತರರು ಹೊಗಳಿಕೊಳ್ಳುವುದಕ್ಕೆ ಧೈರ್ಯ ಮಾಡುತ್ತಾರೋ, ಅದನ್ನು ನಾನು ಬುದ್ಧಿಹೀನನಂತೆ ಹೊಗಳುವ ಧೈರ್ಯ ಮಾಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು