Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 10:5 - ಕನ್ನಡ ಸಮಕಾಲಿಕ ಅನುವಾದ

5 ನಾವು ದೈವಜ್ಞಾನವನ್ನು ವಿರೋಧಿಸುವ ವಾಗ್ವಾದಗಳನ್ನೂ ಪ್ರತಿಯೊಂದು ನಟನೆಯನ್ನೂ ಧ್ವಂಸಮಾಡುತ್ತೇವೆ. ಪ್ರತಿಯೊಂದು ಯೋಚನೆಗಳನ್ನು ಕ್ರಿಸ್ತ ಯೇಸುವಿಗೆ ವಿಧೇಯವಾಗುವಂತೆ ಸೆರೆಹಿಡಿಯುವವರು ಆಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾವು ದೇವಜ್ಞಾನಕ್ಕೆ ವಿರೋಧವಾಗಿ ಏಳುವ ಅಹಂಭಾವಗಳನ್ನು ಧ್ವಂಸಮಾಡಿ, ಪ್ರತಿಯೊಂದು ಆಲೋಚನೆಗಳನ್ನೂ ಕ್ರಿಸ್ತನಿಗೆ ವಿಧೇಯರಾಗುವಂತೆ ಸೆರೆಹಿಡಿದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ದೈವಜ್ಞಾನಕ್ಕೆ ವಿರುದ್ಧ ತಲೆ ಎತ್ತುವ ದುರ್ಗಗಳನ್ನು ಧ್ವಂಸಮಾಡಬಲ್ಲೆವು. ಮಾನವನ ಪ್ರತಿಯೊಂದು ಆಲೋಚನೆಗಳನ್ನೂ ಬಂಧಿಸಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾವು ವಿತರ್ಕಗಳನ್ನೂ ದೇವಜ್ಞಾನವನ್ನು ವಿರೋಧಿಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದ ಎಲ್ಲಾ ಕೊತ್ತಲಗಳನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದೇವರ ಜ್ಞಾನಕ್ಕೆ ವಿರೋಧವಾಗಿ ಎದ್ದೇಳುವ ಪ್ರತಿಯೊಂದು ಗರ್ವದ ಸಂಗತಿಯನ್ನು ನಾಶಮಾಡುತ್ತೇವೆ; ಪ್ರತಿಯೊಂದು ಯೋಚನೆಯನ್ನು ಸ್ವಾಧೀನಪಡಿಸಿಕೊಂಡು ಅವುಗಳನ್ನು ಪರಿವರ್ತಿಸಿ ಕ್ರಿಸ್ತನಿಗೆ ವಿಧೇಯರಾಗುವಂತೆ ಮಾಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ದೆವಾಚ್ಯಾ ಶಾನ್ಪಾನಾಚ್ಯಾ ವಿರೊದ್ ಭಾಂದಲ್ಲ್ಯಾ ಗರುಕಿಚ್ಯಾ ಭಿತ್ತಿಯಾ ಅಮಿ ಕೊಸ್ಳುನ್ ಘಾಲ್ತಾವ್; ಮಾನ್ಸಾಚ್ಯಾ ಸಗ್ಳ್ಯಾ ಕಲ್ಪನ್ಯಾಕ್ನಿ ಘಟ್ ಧರುನ್ ಅಮಿ ಕ್ರಿಸ್ತಾಕ್ ಖಾಲ್ತಿ ಹೊಯ್ ಸರ್ಕೆ ಕರ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 10:5
48 ತಿಳಿವುಗಳ ಹೋಲಿಕೆ  

ಯಾಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಕ್ರಿಯಾತ್ಮಕವಾದದ್ದು, ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು, ಪ್ರಾಣ ಮತ್ತು ಆತ್ಮಗಳ ಕೀಲು ಮಜ್ಜೆಗಳನ್ನು ವಿಭಾಗಿಸುವಷ್ಟರ ಮಟ್ಟಿಗೆ ಛೇದಿಸುವಂಥದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸಿ ತೀರ್ಪು ನೀಡುವಂಥದ್ದು ಆಗಿದೆ.


ದುಷ್ಟನು ತನ್ನ ದುರ್ಮಾರ್ಗವನ್ನೂ, ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು, ಯೆಹೋವ ದೇವರ ಕಡೆಗೆ ಹಿಂದಿರುಗಲಿ. ಅವರು ಅವರ ಮೇಲೆ ಕರುಣೆ ಇಡುವರು. ನಮ್ಮ ದೇವರ ಬಳಿಗೂ ಹಿಂದಿರುಗಲಿ. ಏಕೆಂದರೆ ಅವರು ಹೇರಳವಾಗಿ ಕ್ಷಮಿಸುವರು.


ಆದರೆ ನನ್ನ ಅವಯವಗಳಲ್ಲಿ ಬೇರೊಂದು ನಿಯಮವನ್ನು ಕಾಣುತ್ತಿದ್ದೇನೆ. ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರೋಧವಾಗಿ ಹೋರಾಡುತ್ತಾ ನನ್ನ ಅವಯವಗಳಲ್ಲಿ ಸೇರಿಕೊಂಡಿರುವ ಪಾಪದ ನಿಯಮಕ್ಕೆ ಸೆರೆಯವನನ್ನಾಗಿ ಮಾಡುತ್ತಿದೆ.


ಏಕೆಂದರೆ ಹೃದಯದೊಳಗಿಂದ ದುರಾಲೋಚನೆಗಳು, ಕೊಲೆ, ವ್ಯಭಿಚಾರ, ಅನೈತಿಕತೆ, ಕಳ್ಳತನ, ಸುಳ್ಳುಸಾಕ್ಷಿ, ದೂರು ಇವು ಹೊರ ಬರುತ್ತವೆ.


ಏಕೆಂದರೆ ದೇವರನ್ನು ಅವರು ತಿಳಿದಿದ್ದರೂ ದೇವರೆಂದು ಮಹಿಮೆ ಪಡಿಸಲಿಲ್ಲ, ದೇವರ ಉಪಕಾರ ಸ್ಮರಿಸಲಿಲ್ಲ. ಆದರೆ ಅವರು ತಮ್ಮ ವಿಚಾರಗಳಲ್ಲಿ ವ್ಯರ್ಥರಾದರು. ವಿವೇಕವಿಲ್ಲದ ಅವರ ಹೃದಯವು ಕತ್ತಲಾಯಿತು.


ಏಕೆಂದರೆ ಇಹಲೋಕ ಜ್ಞಾನವು ದೇವರ ದೃಷ್ಟಿಯಲ್ಲಿ ಮೂರ್ಖತನವಾಗಿದೆ, ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ, “ದೇವರು ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿಯೇ ಹಿಡಿಯುವರು,” ಎಂದೂ


ಯೆರೂಸಲೇಮೇ, ನಿನಗೆ ರಕ್ಷಣೆಯಾಗುವ ಹಾಗೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರವರೆಗೆ ನಿನ್ನಲ್ಲಿ ತಂಗುವುವು.


ನಾನು ಕುಳಿತಿರುವುದನ್ನೂ, ಏಳುವುದನ್ನೂ ನೀವು ತಿಳಿದುಕೊಂಡಿದ್ದೀರಿ; ನನ್ನ ಆಲೋಚನೆಗಳನ್ನು ದೂರದಿಂದ ಗ್ರಹಿಸಿಕೊಂಡಿದ್ದೀರಿ.


ಏಕೆಂದರೆ, ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ಜ್ಞಾನಿಗಳ ಜ್ಞಾನವನ್ನು ನಾನು ನಾಶಮಾಡುವೆನು; ವಿವೇಕಿಗಳ ವಿವೇಕವನ್ನು ನಾನು ನಿರರ್ಥಕ ಮಾಡುವೆನು.”


ದುಷ್ಟರ ಆಲೋಚನೆಯು ಯೆಹೋವ ದೇವರಿಗೆ ಅಸಹ್ಯವಾಗಿದೆ, ಆದರೆ ಸೌಜನ್ಯಶೀಲ ಮಾತುಗಳು ಅವರ ದೃಷ್ಟಿಯಲ್ಲಿ ಶುದ್ಧವಾಗಿವೆ.


ದುಷ್ಟನು ತನ್ನ ಗರ್ವದಲ್ಲಿ ದೇವರನ್ನು ಹುಡುಕುವುದಿಲ್ಲ; ಅವನ ಎಲ್ಲ ಯೋಚನೆಗಳಲ್ಲಿಯೂ ದೇವರಿಗೆ ಸ್ಥಳವೇ ಇಲ್ಲ.


ಹೀಗೆ ಯೇಸು ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ನಿರಂತರವಾಗಿ ರಕ್ಷಣೆಗೆ ಕಾರಣರಾದರು.


ನೀವು ಕ್ರಿಸ್ತ ಯೇಸುವಿನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡಿದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.


ಯೆಹೋವ ದೇವರಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾದದ್ದನ್ನು ಎತ್ತರ ಪಡಿಸಿ, ಹಸುರಾಗಿರುವುದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ, ಎಂದು ಅರಣ್ಯದ ಸಕಲ ವೃಕ್ಷಗಳು ತಿಳಿಯುವುದು. “ ‘ಯೆಹೋವ ದೇವರಾದ ನಾನೇ ಮಾತನಾಡಿ, ಅದನ್ನು ನಡೆಸಿದ್ದೇನೆ.’ ”


ಆಗ ಆ ನಿಯಮ ಮೀರುವವನು ಪ್ರತ್ಯಕ್ಷನಾಗುವನು. ಅವನನ್ನು ಕರ್ತ ಯೇಸು ತಮ್ಮ ಬಾಯಿಯ ಶ್ವಾಸದಿಂದ ಕೆಡವಿ, ತಮ್ಮ ಪ್ರತ್ಯಕ್ಷತೆಯ ಮಹಿಮೆಯಿಂದ ನಾಶಮಾಡಿಬಿಡುವರು.


ಬುದ್ಧಿಹೀನನ ಆಲೋಚನೆಯು ಪಾಪಮಯ; ಪರಿಹಾಸ್ಯಗಾರನು ಮನುಷ್ಯರಿಗೆ ಅಸಹ್ಯ.


ದೇವರು ತಮ್ಮ ಭುಜಪರಾಕ್ರಮವನ್ನು ಮಾಡಿ; ಹೃದಯದ ಯೋಚನೆಯಲ್ಲಿ ಗರ್ವಿಷ್ಠರಾದವರನ್ನು ಚದರಿಸಿಬಿಟ್ಟಿದ್ದಾರೆ.


ದೇವರೆಣಿಸಿಕೊಳ್ಳುವ ಎಲ್ಲವನ್ನೂ ಆರಾಧಿಸಲಾಗುವ ಪ್ರತಿಯೊಂದನ್ನೂ ಅವನು ವಿರೋಧಿಸಿ ನಿಲ್ಲುವನು. ದೇವರಿಗೆ ಸಂಬಂಧಿಸಿದ ಇವೆಲ್ಲವುಗಳ ಮೇಲೆ ತನ್ನನ್ನು ಹೆಚ್ಚಿಸಿಕೊಳ್ಳುವನು. ತಾನೇ ದೇವರೆಂದು ಘೋಷಿಸಿ ದೇವರ ಆಲಯದಲ್ಲಿ ಕೂತುಕೊಳ್ಳುವನು.


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸರನ್ನು ಸ್ತುತಿಸಿ, ಹೆಚ್ಚಿಸಿ ಘನಪಡಿಸುತ್ತೇನೆ. ಅವರ ಕ್ರಿಯೆಗಳೆಲ್ಲಾ ಸತ್ಯವೇ. ಅವರ ಮಾರ್ಗಗಳು ನ್ಯಾಯವೇ. ಗರ್ವದಲ್ಲಿ ನಡೆಯುವವರನ್ನು ಅವರೇ ತಗ್ಗಿಸಬಲ್ಲರು.


ಅವರ ಕಾಲುಗಳು ಪಾಪಕ್ಕೆ ಓಡುತ್ತವೆ. ಅಪರಾಧವಿಲ್ಲದ ರಕ್ತವನ್ನು ಚೆಲ್ಲುವುದಕ್ಕೆ ತ್ವರೆ ಪಡುತ್ತವೆ. ಅವರ ಆಲೋಚನೆಗಳು ಅಧರ್ಮದ ಆಲೋಚನೆಗಳೇ. ನಷ್ಟವೂ ನಾಶವೂ ಅವರ ಮಾರ್ಗಗಳಲ್ಲಿವೆ.


ಜನರ ಅಟ್ಟಹಾಸವು ತಗ್ಗಿಹೋಗುವುದು. ಆ ದಿನದಲ್ಲಿ ಯೆಹೋವ ದೇವರೊಬ್ಬರೇ ಉನ್ನತವಾಗಿರುವರು.


“ಸಾಲ ಬಿಡುಗಡೆಯ ವರ್ಷವಾದ ಏಳನೆಯ ವರ್ಷವು ಸಮೀಪವಾಯಿತು,” ಎಂಬ ದುಷ್ಟ ಆಲೋಚನೆ ನಿಮ್ಮ ಹೃದಯದಲ್ಲಿ ಹುಟ್ಟಿ, ನಿಮ್ಮ ಬಡ ಸಹೋದರನ ಮೇಲೆ ಕಠಿಣವಾಗಿ, ನೀವು ಅವನಿಗೆ ಏನೂ ಕೊಡದೆ ಇರಬೇಡಿರಿ. ಅವನು ನಿಮಗೆ ವಿರೋಧವಾಗಿ ಯೆಹೋವ ದೇವರಿಗೆ ಮೊರೆ ಇಟ್ಟಾಗ, ನಿಮ್ಮಲ್ಲಿ ಅಪರಾಧ ಉಂಟಾಗದಂತೆ ನೋಡಿಕೊಳ್ಳಿರಿ.


ನಿಮ್ಮ ಸ್ವಭಾವವನ್ನು ರುಜುಪಡಿಸಿದ ಈ ಸೇವೆಯ ನಿಮಿತ್ತವಾಗಿಯೂ, ಕ್ರಿಸ್ತ ಯೇಸುವಿನ ಸುವಾರ್ತೆಯ ಅರಿಕೆಯನ್ನು ಅನುಸರಿಸುವ ನಿಮ್ಮ ವಿಧೇಯತೆಗಾಗಿಯೂ ಇತರರು ದೇವರನ್ನು ಸ್ತುತಿಸುವರು. ಹೀಗೆ, ನೀವು ಅವರಿಗೂ ಪ್ರತಿಯೊಬ್ಬರಿಗೂ ಎಷ್ಟು ಉದಾರಿಗಳಾಗಿದ್ದೀರಿ ಎಂಬುದನ್ನು ತಿಳಿದುಕೊಳ್ಳುವರು.


ಆದರೆ ನಿತ್ಯ ದೇವರು ಆಜ್ಞಾಪಿಸಿದಂತೆ ಈಗ ಪ್ರವಾದಿಗಳ ಗ್ರಂಥಗಳ ಮೂಲಕ ಮುಂತಿಳಿಸಿರುವಂತೆ, ಈ ಸಂದೇಶವು ಯೆಹೂದ್ಯರಲ್ಲದ ಜನರೆಲ್ಲರಿಗೂ ತಿಳಿಸಲಾಗಿದೆ. ಹೀಗೆ ಅವರು ನಂಬಿದ್ದರಿಂದ ವಿಧೇಯರಾಗುತ್ತಾರೆ.


ನೀನು ಯಾರನ್ನು ನಿಂದಿಸಿ, ಯಾರನ್ನು ದೂಷಿಸಿದೆ? ಯಾರಿಗೆ ವಿರೋಧವಾಗಿ ನಿನ್ನ ಧ್ವನಿಯನ್ನು ಎತ್ತಿದ್ದೀ? ನಿನ್ನ ಕಣ್ಣುಗಳು ಗರ್ವದಿಂದ ನೋಡಿದ್ದು ಯಾರನ್ನು? ಇಸ್ರಾಯೇಲಿನ ಪರಿಶುದ್ಧ ದೇವರಿಗೆ ವಿರೋಧವಾಗಿಯಲ್ಲವೇ?


ಯೇಸುವಿನ ನಾಮದ ಮಹಿಮೆಗಾಗಿ ಯೆಹೂದ್ಯರಲ್ಲದವರಲ್ಲಿಯೂ ನಂಬಿಕೆಯ ವಿಧೇಯತೆ ಉಂಟಾಗುವುದಕ್ಕಾಗಿ ನಾವು ಯೇಸುವಿನ ಮೂಲಕವಾಗಿ ಕೃಪೆಯನ್ನೂ ಅಪೊಸ್ತಲರಾಗಿರುವುದನ್ನೂ ಹೊಂದಿದೆವು.


ಆಗ ನಿನ್ನನ್ನು ಕುಗ್ಗಿಸಿದವರು, ಬಗ್ಗಿಕೊಂಡು ನಿನ್ನ ಬಳಿಗೆ ಬರುವರು. ನಿನ್ನನ್ನು ಅಸಹ್ಯಿಸಿದವರೆಲ್ಲರೂ ನಿನ್ನ ಪಾದಗಳಿಗೆ ಅಡ್ಡಬಿದ್ದು, ನಿನ್ನನ್ನು ಯೆಹೋವ ದೇವರ ಪಟ್ಟಣವೆಂದೂ, ಇಸ್ರಾಯೇಲಿನ ಪರಿಶುದ್ಧನ ಚೀಯೋನೆಂದೂ ಕರೆಯುವರು.


ನೀನು ನನಗೆ ವಿರೋಧವಾಗಿ ಮಾಡುವ ನಿನ್ನ ರೌದ್ರವೂ, ನಿನ್ನ ಅಹಂಕಾರವೂ ನನ್ನ ಕಿವಿಗಳಿಗೆ ತಲುಪಿದೆ. ಆದ್ದರಿಂದ ನಾನು ನನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ, ನನ್ನ ಕಡಿವಾಣವನ್ನು ನಿನ್ನ ಬಾಯಲ್ಲಿಯೂ ಹಾಕಿ, ನೀನು ಬಂದ ದಾರಿಯಿಂದಲೇ ನಿನ್ನನ್ನು ಹಿಂದಿರುಗಿಸುವೆನು.’


ಪವಿತ್ರಾತ್ಮ ದೇವರ ಕಾರ್ಯದಿಂದ ಪರಿಶುದ್ಧರಾಗಿ, ಯೇಸುಕ್ರಿಸ್ತರಿಗೆ ವಿಧೇಯರಾಗಲು ಅವರ ರಕ್ತದಿಂದ ಪ್ರೋಕ್ಷಿತರಾಗುವುದಕ್ಕೂ ನಮ್ಮ ತಂದೆ ದೇವರ ಪೂರ್ವಜ್ಞಾನಾನುಸಾರವಾಗಿ ಆಯ್ಕೆಯಾದವರಿಗೆ ಬರೆಯುವುದು: ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.


ದೀನರನ್ನು ರಕ್ಷಿಸುತ್ತೀರಿ, ಆದರೆ ನೀವು ಗರ್ವಿಷ್ಠರ ಕಣ್ಣುಗಳನ್ನು ತಗ್ಗಿಸುತ್ತೀರಿ.


ಆದ್ದರಿಂದ ನಾನು ಹೇಳಿದ್ದನ್ನೆಲ್ಲಾ ಹಿಂತೆಗೆದುಕೊಂಡು, ಧೂಳಿನಲ್ಲಿಯೂ ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ,” ಎಂದನು.


ವಿದೇಶಿಯರು ನನಗೆ ಅಧೀನರಾದರು; ನನ್ನ ಸುದ್ದಿ ಕೇಳಿದ ಕೂಡಲೇ ನನಗೆ ವಿಧೇಯರಾಗುವರು.


ಆಗ ಫರೋಹನು, “ನಾನು ಆತನ ಮಾತಿಗೆ ವಿಧೇಯನಾಗಿ ಇಸ್ರಾಯೇಲರನ್ನು ಕಳುಹಿಸಿಬಿಡುವಂತೆ ಆ ಯೆಹೋವ ಯಾರು? ಆ ಯೆಹೋವ ದೇವರನ್ನು ನಾನರಿಯೆನು. ಇಸ್ರಾಯೇಲರನ್ನೂ ಕಳುಹಿಸುವುದಿಲ್ಲ,” ಎಂದನು.


ಅದರ ಸುವಾಸನೆಯು ಯೆಹೋವ ದೇವರಿಗೆ ಗಮಗಮಿಸಲು, ಅವರು ಹೃದಯದೊಳಗೆ, “ಮನುಷ್ಯನ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಮನುಷ್ಯರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಸಂಹರಿಸಿದಂತೆ ಇನ್ನು ಮೇಲೆ ಸಂಹರಿಸುವುದಿಲ್ಲ.


“ನನ್ನ ವಾಕ್ಯ ಬೆಂಕಿಗೆ ಸಮಾನ, ಬಂಡೆಯನ್ನು ಪುಡಿಪುಡಿ ಮಾಡುವ ಸುತ್ತಿಗೆಗೆ ಸಮಾನ.” ಇದು ಯೆಹೋವ ದೇವರಾದ ನನ್ನ ನುಡಿ.


ನಿಜವಾಗಿ ಹೇಳಬೇಕಾದರೆ, ಯಾರಾದರೂ ನಿಮ್ಮನ್ನು ಗುಲಾಮರನ್ನಾಗಿ ಮಾಡಿಕೊಂಡರೂ, ನಿಮ್ಮನ್ನು ಮರುಳುಗೊಳಿಸಿದರೂ, ತಮ್ಮ ಸ್ವಂತ ಪ್ರಯೋಜನಕ್ಕಾಗಿ ಬಳಸಿಕೊಂಡರೂ, ನಿಮ್ಮ ಕೆನ್ನೆಗೆ ಬಾರಿಸಿದರೂ, ನೀವು ಸಹಿಸಿಕೊಳ್ಳುತ್ತೀರಲ್ಲಾ.


ಆಗ ಎಲ್ಲಾ ಗ್ರಹಿಕೆಯನ್ನೂ ಮೀರುವ ದೇವರ ಸಮಾಧಾನವು ನಿಮ್ಮ ಹೃದಯಗಳನ್ನೂ ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಯುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು