Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 11:25 - ಕನ್ನಡ ಸಮಕಾಲಿಕ ಅನುವಾದ

25 ಮೂರು ಸಾರಿ ದೊಣ್ಣೆಯಿಂದ ಬಡಿಸಿಕೊಂಡಿದ್ದೇನೆ. ಒಂದು ಸಾರಿ ಕಲ್ಲೆಸೆದು ನನ್ನನ್ನು ಕೊಲ್ಲಲು ನೋಡಿದರು. ಮೂರು ಬಾರಿ ನಾನು ಪ್ರಯಾಣಿಸುತ್ತಿದ್ದ ಹಡಗು ಒಡೆದು ನೀರು ಪಾಲಾಯಿತು. ಒಂದು ಇಡೀ ಹಗಲುರಾತ್ರಿ ನಾನು ಸಮುದ್ರದ ಮೇಲೆ ತೇಲಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಮೂರು ಸಾರಿ ಬಾರುಕೋಲಿನಿಂದ ನನ್ನನ್ನು ಹೊಡೆದರು. ಒಂದು ಸಾರಿ ಜನರು ನನ್ನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು. ಮೂರು ಸಾರಿ ನಾನಿದ್ದ ಹಡಗು ಒಡೆದು ಹೋಯಿತು. ಒಂದು ರಾತ್ರಿ ಒಂದು ಹಗಲು ಸಮುದ್ರದ ನೀರಿನಲ್ಲಿ ಕಳೆದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಮೂರು ಸಾರಿ ರೋಮನರು ನನ್ನನ್ನು ಛಡಿಗಳಿಂದ ಹೊಡೆಸಿದರು. ಒಮ್ಮೆ ಜನರು ನನ್ನನ್ನು ಕೊಲ್ಲಲೆಂದು ಕಲ್ಲು ತೂರಿದರು. ಮೂರು ಸಲ ನಾನಿದ್ದ ಹಡಗು ಒಡೆದು ನೀರುಪಾಲಾಯಿತು. ಒಂದು ರಾತ್ರಿ, ಒಂದು ಹಗಲು ನಡುಗಡಲಲ್ಲಿ ತೇಲಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಮೂರು ಸಾರಿ ಸರಕಾರದವರು ಚಡಿಗಳಿಂದ ನನ್ನನ್ನು ಹೊಡಿಸಿದರು; ಒಂದು ಸಾರಿ ಜನರು ನನ್ನನ್ನು ಕೊಲ್ಲುವದಕ್ಕೆ ಕಲ್ಲೆಸೆದರು; ಮೂರು ಸಾರಿ ನಾನಿದ್ದ ಹಡಗು ಒಡೆದು ಹೋಯಿತು; ಒಂದು ರಾತ್ರಿ ಒಂದು ಹಗಲು ಸಮುದ್ರದ ನೀರಿನಲ್ಲಿ ಕಳೆದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಮೂರು ಸಲ ಕಬ್ಬಿಣದ ಸರಳುಗಳಿಂದ ಏಟನ್ನು ತಿಂದಿದ್ದೇನೆ. ಒಂದು ಸಲ ಕಲ್ಲೆಸೆದು ನನ್ನನ್ನು ಅರೆಜೀವ ಮಾಡಿದರು. ಮೂರು ಸಲ ನಾನಿದ್ದ ಹಡಗುಗಳು ಒಡೆದುಹೋದವು. ಒಮ್ಮೆ, ಒಂದು ರಾತ್ರಿ ಒಂದು ಹಗಲು ಸಮುದ್ರದ ನೀರಿನಲ್ಲಿರಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತಿನ್ ದಾ ಮಾಕಾ ಟೊನ್ಯಾನಿ ಮಾರಲ್ಲೆ ಹಾಯ್ ; ಎಗ್ದಾ ಮಾಕಾ ಗುಂಡ್ಯಾನಿ ಮಾರುನ್ ಹೊಲಾ, ತಿನ್ ದಾ ಮಾಜಿ ಢೊನ್ ಫುಟ್ಲಾ; ಎಕ್ ರಾತ್ ಅನಿ ಎಕ್ ದಿಸ್ ಸಮುಂದರಾಚ್ಯಾ ಪಾನಿಯಾತ್ ಮಿಯಾ ರ್‍ಹಾಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 11:25
12 ತಿಳಿವುಗಳ ಹೋಲಿಕೆ  

ಅದೇ ಸಮಯದಲ್ಲಿ ಅಂತಿಯೋಕ್ಯ ಮತ್ತು ಇಕೋನ್ಯದಿಂದ ಕೆಲವು ಜನ ಯೆಹೂದ್ಯರು ಬಂದು ಜನಸಮೂಹವನ್ನು ತಮ್ಮ ಕಡೆಗೆ ಒಲಿಸಿಕೊಂಡು, ಪೌಲನ ಮೇಲೆ ಕಲ್ಲೆಸೆಯಲು, ಅವನು ಸತ್ತನೆಂದು ಭಾವಿಸಿ ಅವನನ್ನು ಊರ ಹೊರಗೆ ಎಳೆದು ಹಾಕಿದರು.


ಕೆಲವರ ಮೇಲೆ ಕಲ್ಲೆಸೆದರು, ಕೆಲವರನ್ನು ಗರಗಸದಿಂದ ಎರಡು ಭಾಗವಾಗಿ ಕೊಯ್ದು ಸಾಯಿಸಿದರು, ಕೆಲವರನ್ನು ಶೋಧಿಸಿದರು, ಕೆಲವರನ್ನು ಕತ್ತಿಯಿಂದ ಕೊಂದರು, ಕೆಲವರು ಕೊರತೆ, ಹಿಂಸೆ, ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ


ಆದರೆ ಪೌಲನು ಅಧಿಕಾರಿಗಳಿಗೆ, “ನಾವು ರೋಮ್ ಪೌರರಾಗಿದ್ದು ಯಾವ ನ್ಯಾಯವಿಚಾರಣೆ ಮಾಡದೇ ಬಹಿರಂಗವಾಗಿ ನಮ್ಮನ್ನು ಛಡಿಯಿಂದ ಹೊಡೆಸಿ, ನಮ್ಮನ್ನು ಸೆರೆಮನೆಗೆ ತಳ್ಳಿದ್ದಾರೆ. ಈಗ ರಹಸ್ಯವಾಗಿ ನಮ್ಮನ್ನು ಕಳುಹಿಸಿಬಿಡಬೇಕೆಂದಿದ್ದಾರೋ? ಇಲ್ಲ, ಅವರು ತಾವೇ ಬಂದು ನಮ್ಮನ್ನು ಹೊರಗೆ ಕರೆದುಕೊಂಡು ಹೋಗಲಿ,” ಎಂದನು.


ಆ ಅಧಿಕಾರಿ, ರಾತ್ರಿಯ ಅದೇ ಗಳಿಗೆಯಲ್ಲಿ ಪೌಲ, ಸೀಲರನ್ನು ಕರೆದುಕೊಂಡು ಹೋಗಿ, ಅವರ ಗಾಯಗಳನ್ನು ತೊಳೆದನು. ಆಮೇಲೆ ಅವನೂ ಅವನ ಮನೆಯವರೆಲ್ಲರೂ ದೀಕ್ಷಾಸ್ನಾನವನ್ನು ಹೊಂದಿದರು.


ಯೆಹೂದ್ಯರೂ ಯೆಹೂದ್ಯರಲ್ಲದವರೂ ತಮ್ಮ ನಾಯಕರನ್ನು ಕೂಡಿಕೊಂಡು ಪೌಲ, ಬಾರ್ನಬರನ್ನು ಅವಮಾನ ಮಾಡಿ ಅವರ ಮೇಲೆ ಕಲ್ಲೆಸೆಯಬೇಕೆಂದು ನುಗ್ಗಿದಾಗ,


“ಆಗ ಗೇಣಿಗೆದಾರರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು, ಇನ್ನೊಬ್ಬನನ್ನು ಕೊಂದುಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು.


ಸಹಸ್ರಾಧಿಪತಿಯು ಪೌಲನನ್ನು ಸೈನಿಕರ ಪಾಳ್ಯದೊಳಗೆ ಒಯ್ಯಬೇಕೆಂದು, ಅವನನ್ನು ಕೊರಡೆಗಳಿಂದ ಹೊಡೆದು ಯಾವ ಅಪರಾಧಕ್ಕಾಗಿ ಜನರು ಅವನಿಗೆ ವಿರೋಧವಾಗಿ ಅರಚುತ್ತಿದ್ದರು ಎಂಬುದನ್ನು ಅವನಿಂದ ವಿಚಾರಿಸಬೇಕೆಂದು ಆಜ್ಞಾಪಿಸಿದನು.


ಇದಲ್ಲದೆ ನನ್ನನ್ನು ಹಾಸ್ಯಮಾಡುವುದಕ್ಕೂ ಕೊರಡೆಗಳಿಂದ ಹೊಡೆಯುವುದಕ್ಕೂ ಶಿಲುಬೆಗೆ ಹಾಕುವುದಕ್ಕೂ ಯೆಹೂದ್ಯರಲ್ಲದವರ ಕೈಗೆ ಒಪ್ಪಿಸಿಕೊಡುವರು. ನಾನಾದರೋ ಮೂರು ದಿನದ ಮೇಲೆ ಜೀವಿತನಾಗಿ ಎದ್ದು ಬರುವೆನು,” ಎಂದು ಹೇಳಿದರು.


ನಂಬಿಗಸ್ತನೂ ಒಳ್ಳೆಯ ಮನಸ್ಸಾಕ್ಷಿಯುಳ್ಳವನೂ ಆಗಿರು. ಕೆಲವರು ಈ ಒಳ್ಳೆಯ ಮನಸ್ಸಾಕ್ಷಿಯನ್ನು ತಳ್ಳಿಬಿಟ್ಟು ನಂಬಿಕೆಯ ಹಡಗನ್ನು ಒಡೆದವರ ಹಾಗೆ ಇದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು