Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 12:14 - ಕನ್ನಡ ಸಮಕಾಲಿಕ ಅನುವಾದ

14 ಇಗೋ, ನಾನು ನಿಮ್ಮ ಬಳಿಗೆ ಬರುವುದಕ್ಕೆ ಸಿದ್ದನಾಗಿರುವುದು ಇದು ಮೂರನೆಯ ಸಾರಿ. ನಾನು ಬಂದಾಗ ನಿಮಗೆ ಭಾರವಾಗಲು ಬಿಡುವುದಿಲ್ಲ. ನಾನು ನಿಮ್ಮ ಸೊತ್ತನ್ನು ಆಶಿಸುವುದಿಲ್ಲ. ನಿಮ್ಮನ್ನೇ ಆಶಿಸುತ್ತೇನೆ. ಮಕ್ಕಳು ತಂದೆತಾಯಿಗಳಿಗೋಸ್ಕರ ನಿಕ್ಷೇಪವನ್ನು ಕೂಡಿಸಿಡುವುದಿಲ್ಲ. ತಂದೆತಾಯಿಗಳು ಮಕ್ಕಳಿಗೋಸ್ಕರ ಕೂಡಿಸಿಡುತ್ತಾರಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇಗೋ ನಾನು ನಿಮ್ಮ ಬಳಿಗೆ ಮೂರನೇ ಸಾರಿ ಬರುವುದಕ್ಕೆ ಸಿದ್ಧವಾಗಿದ್ದೇನೆ ಮತ್ತು ನಿಮಗೆ ಭಾರವಾಗಿರುವುದಿಲ್ಲ. ನಾನು ನಿಮ್ಮ ಸೊತ್ತನ್ನು ಬಯಸದೇ ನಿಮ್ಮನ್ನೇ ಆಶಿಸುತ್ತೇನೆ. ಮಕ್ಕಳು ತಂದೆತಾಯಿಗಳಿಗೋಸ್ಕರ ಕೂಡಿಸಿಡುವುದು ಧರ್ಮವಲ್ಲ. ಆದರೆ ತಂದೆತಾಯಿಗಳು ಮಕ್ಕಳಿಗೋಸ್ಕರ ಕೂಡಿಸಿಡುವುದೇ ಧರ್ಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇಗೋ ಮೂರನೆಯ ಬಾರಿಗೆ ನಾನು ನಿಮ್ಮ ಬಳಿಗೆ ಬರಲು ಸಿದ್ಧನಿದ್ದೇನೆ. ಈ ಸಾರಿಯೂ ನಾನು ನಿಮಗೆ ಹೊರೆಯಾಗಿರಲಾರೆ. ನನಗೆ ಬೇಕಾದವರು ನೀವೇ ಹೊರತು ನಿಮ್ಮ ಹಣಕಾಸು ಅಲ್ಲ. ಮಕ್ಕಳು ಹೆತ್ತವರಿಗಾಗಿ ಅಲ್ಲ, ಹೆತ್ತವರು ಮಕ್ಕಳಿಗಾಗಿ ಆಸ್ತಿಪಾಸ್ತಿಯನ್ನು ಕೂಡಿಡುವುದು ನ್ಯಾಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇಗೋ, ನಾನು ನಿಮ್ಮ ಬಳಿಗೆ ಬರುವದಕ್ಕೆ ಸಿದ್ಧವಾಗಿರುವದು ಇದು ಮೂರನೆಯ ಸಾರಿ; ಮತ್ತು ನಿಮಗೆ ಭಾರವಾಗಿರುವದಿಲ್ಲ; ನಾನು ನಿಮ್ಮ ಸೊತ್ತನ್ನು ಆಶಿಸದೆ ನಿಮ್ಮನ್ನೇ ಆಶಿಸುತ್ತೇನೆ. ಮಕ್ಕಳು ತಂದೆತಾಯಿಗಳಿಗೋಸ್ಕರ ದ್ರವ್ಯವನ್ನು ಕೂಡಿಸಿಡುವದು ಧರ್ಮವಲ್ಲ, ತಂದೆತಾಯಿಗಳು ಮಕ್ಕಳಿಗೋಸ್ಕರ ಕೂಡಿಸಿಡುವದೇ ಧರ್ಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಈಗ ನಿಮ್ಮನ್ನು ಮೂರನೆ ಸಲ ಸಂದರ್ಶಿಸಲು ಸಿದ್ಧನಾಗಿದ್ದೇನೆ, ಆದರೆ ನಾನು ನಿಮಗೆ ಭಾರವಾಗಿರುವುದಿಲ್ಲ. ನಿಮ್ಮ ಸ್ವತ್ತುಗಳಲ್ಲಿ ಯಾವುದೂ ನನಗೆ ಬೇಕಾಗಿಲ್ಲ. ನನಗೆ ಬೇಕಾಗಿರುವುದು ನೀವೇ. ಮಕ್ಕಳು ತಂದೆತಾಯಿಗಳಿಗೋಸ್ಕರ ಹಣವನ್ನು ಉಳಿಸಿ ಕೊಡಬೇಕಾಗಿಲ್ಲ. ತಂದೆತಾಯಿಗಳು ಹಣವನ್ನು ಉಳಿಸಿ ಮಕ್ಕಳಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತುಮ್ಕಾ ಬೆಟ್ ದಿವ್ಚಿ ಮನುನ್ ಮಿಯಾ ಅತ್ತಾ ತಿನ್ವೆ ಪಟಿ ತಯಾರ್ ಹೊಲಾ. ಖರೆ ಯೆಲ್ಯಾರ್ ಮಿಯಾ ತುಮ್ಕಾ ಎಕ್ ವಜ್ಜೆ ಹೊವ್ಕ್ ಮಾಕಾ ಮನ್ ನಾ. ಕಶ್ಯಾಕ್ ಮಟ್ಲ್ಯಾರ್ ತುಮ್ಚೆ ಮನುನ್ ಹೊತ್ತೆ ಮಾಕಾ ಕಾಯ್ಬಿ ನಕ್ಕೊ, ಮಾಕಾ ತುಮಿ ಪಾಜೆ. ಪೊರಾನಿ ಬಾಯ್ ಬಾಬಾಂಚ್ಯಾಸಾಟ್ನಿ ಗೊಳಾ ಕರುನ್ ಥವ್ತಲೆ ಸಮಾ ನ್ಹಯ್, ಬಾಯ್ ಬಾಬಾನಿ ಪೊರಾಂಚ್ಯಾಸಾಟ್ನಿ ಗೊಳಾ ಕರುನ್ ಥವ್ತಲೆ ಸಮಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 12:14
28 ತಿಳಿವುಗಳ ಹೋಲಿಕೆ  

ಮನೆಯೂ ಸಂಪತ್ತೂ ಪಿತೃಗಳ ಸ್ವಾಸ್ತ್ಯವು; ವಿವೇಕಿಯಾದ ಹೆಂಡತಿಯು ಯೆಹೋವ ದೇವರಿಂದಲೇ.


ನಾನಂತೂ ಎಲ್ಲರನ್ನೂ, ಎಲ್ಲದರಲ್ಲೂ ಮೆಚ್ಚಿಸಲು ಶ್ರಮಿಸುವವನಾಗಿದ್ದೇನೆ. ಏಕೆಂದರೆ, ನಾನು ನನ್ನ ಸ್ವಂತ ಹಿತವನ್ನೇ ಹುಡುಕದೆ, ಅನೇಕರು ರಕ್ಷಣೆ ಹೊಂದಬೇಕೆಂದು ಇತರರ ಹಿತಕ್ಕಾಗಿ ಶ್ರಮಿಸುವವನಾಗಿದ್ದೇನೆ.


ಪ್ರತಿಯೊಬ್ಬನೂ ತನ್ನ ಹಿತವನ್ನು ಮಾತ್ರ ನೋಡಿಕೊಳ್ಳದೆ, ಪರಹಿತವನ್ನೂ ನೋಡಲಿ.


ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಟ್ಟುಬಿಡುವನು; ಆದರೆ ಪಾಪಿಯ ಸಂಪತ್ತು ನೀತಿವಂತರಿಗಾಗಿ ಸಂಗ್ರಹವಾಗಿದೆ.


“ಮನುಷ್ಯಪುತ್ರನೇ, ಇಸ್ರಾಯೇಲಿನ ಕುರುಬರಿಗೆ ವಿರುದ್ಧವಾಗಿ ಪ್ರವಾದಿಸಿ ಅವರಿಗೆ ಹೇಳು: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ತಮ್ಮನ್ನು ತಾವೇ ಮೇಯಿಸಿಕೊಳ್ಳುವ ಇಸ್ರಾಯೇಲಿನ ಕುರುಬರಿಗೆ ಕಷ್ಟ! ಕುರುಬರು ಮಂದೆಗಳನ್ನು ಮೇಯಿಸಬಾರದೋ?


ಈ ಭರವಸೆಯಿಂದ, ನಾನು ನಿಮ್ಮನ್ನು ಮೊದಲು ಸಂದರ್ಶಿಸಿ, ನಿಮಗೆ ಎರಡರಷ್ಟು ಉಪಯುಕ್ತತೆಯನ್ನು ಹೊಂದುವಂತೆ ಯೋಚನೆ ಮಾಡಿದ್ದೆನು.


ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬನನ್ನು ನಡೆಸಿದೆವು.


ನಾನು ಯಾರ ಬೆಳ್ಳಿ ಬಂಗಾರಕ್ಕಾಗಲಿ, ಬಟ್ಟೆಗಾಗಲಿ ಆಶೆಪಡಲಿಲ್ಲ.


ನಿಮ್ಮನ್ನು ಪೋಷಿಸಿದೆವು. ಏಕೆಂದರೆ ನಾವು ನಿಮ್ಮನ್ನು ಬಹಳವಾಗಿ ಪ್ರೀತಿಸಿದ್ದರಿಂದ, ದೇವರ ಸುವಾರ್ತೆಯನ್ನು ಸಾರುವುದಕ್ಕೆ ಮಾತ್ರವಲ್ಲದೆ ನಿಮಗೋಸ್ಕರ ನಾವು ನಮ್ಮ ಪ್ರಾಣವನ್ನೇ ಕೊಡುವುದಕ್ಕೂ ಇಷ್ಟವುಳ್ಳವರಾಗಿದ್ದೆವು.


ನಾನು ನಿಮ್ಮಿಂದ ದಾನವನ್ನು ನಿರೀಕ್ಷಿಸುವುದಿಲ್ಲ. ಆದರೆ ನಿಮ್ಮ ಲೆಕ್ಕಕ್ಕೆ ಲಾಭ ಹೆಚ್ಚಿಸುವುದನ್ನೇ ನೋಡುತ್ತಿದ್ದೇನೆ.


ಹೀಗಿರಲಾಗಿ, ನನಗೆ ಆಪ್ತರೂ ನಾನು ಹಂಬಲಿಸುವವರೂ ಆದ ನನ್ನ ಪ್ರಿಯರೇ, ನನ್ನ ಆನಂದವೂ ಕಿರೀಟವೂ ಆಗಿರುವ ಸ್ನೇಹಿತರೇ, ಈಗಲೂ ಕರ್ತ ದೇವರಲ್ಲಿ ದೃಢವಾಗಿ ನಿಲ್ಲಿರಿ!


ಮಕೆದೋನ್ಯವನ್ನು ದಾಟಿದ ಮೇಲೆ, ಅದೇ ಮಾರ್ಗವಾಗಿ ನಾನು ಪುನಃ ನಿಮ್ಮ ಬಳಿಗೆ ಬರುವೆನು.


ನೀವು ಒಟ್ಟಾಗಿ ಕೂಟಕ್ಕೆ ಸೇರಿಬರುವಾಗ, ನ್ಯಾಯತೀರ್ಪಿಗೆ ಒಳಗಾದಂತೆ, ಹಸಿದವರು ಮನೆಯಲ್ಲೇ ಊಟಮಾಡಲಿ. ಇನ್ನುಳಿದ ವಿಷಯಗಳನ್ನು ನಾನು ಬಂದಾಗ ಕ್ರಮಪಡಿಸುತ್ತೇನೆ.


ಆದರೆ ಕರ್ತದೇವರ ಚಿತ್ತವಿದ್ದರೆ, ನಾನು ಬೇಗ ನಿಮ್ಮ ಬಳಿಗೆ ಬಂದು, ಅಹಂಕಾರಿಗಳ ಮಾತನ್ನಲ್ಲ, ಅವರಿಗೆ ಎಷ್ಟು ಶಕ್ತಿ ಇದೆ ಎಂಬುವುದನ್ನು ಕಂಡುಕೊಳ್ಳುವೆನು.


ನೀತಿವಂತರ ಫಲವು ಜೀವವೃಕ್ಷ; ಆತ್ಮಗಳನ್ನು ಗೆಲ್ಲುವವನು ಜ್ಞಾನಿಯಾಗಿದ್ದಾನೆ.


ಇತರರಿಗೆ ನಿಮ್ಮ ಸಹಾಯದಲ್ಲಿ ಪಾಲು ಇದ್ದರೆ, ಅದರಲ್ಲಿ ನಮಗೂ ಹೆಚ್ಚು ಪಾಲು ಇರಬೇಕಲ್ಲಾ? ಆದರೆ ನಾವು ಈ ಅಧಿಕಾರವನ್ನು ಚಲಾಯಿಸಿಲ್ಲ. ಕ್ರಿಸ್ತ ಯೇಸುವಿಗೆ ಸೇರಿದ ಸುವಾರ್ತೆಗೆ ಅಡ್ಡಿಯಾಗಬಾರದೆಂದು ಎಲ್ಲವನ್ನೂ ಸಹಿಸಿಕೊಂಡೆವು.


ಹಾಗಾದರೆ ನನಗೆ ದೊರೆಯುವ ಬಹುಮಾನವೇನು? ನಾನು ಸುವಾರ್ತೆಯನ್ನು ಸಾರುವಾಗ, ಅದನ್ನು ಉಚಿತವಾಗಿ ಸಾರುತ್ತಾ, ಸುವಾರ್ತೆಯ ಪ್ರಸಂಗಿಯಾಗಿ ನನ್ನ ಪೂರ್ಣ ಹಕ್ಕನ್ನು ಉಪಯೋಗಿಸದಿರುವುದೇ ನನ್ನ ಬಹುಮಾನ.


ನಾನು ಸ್ವತಂತ್ರನಾಗಿದ್ದರೂ, ಯಾರಿಗೂ ಸೇರಿದವನಾಗಿರದಿದ್ದರೂ, ಹೆಚ್ಚು ಜನರನ್ನು ಸಂಪಾದಿಸಿಕೊಳ್ಳಬೇಕೆಂಬ ಉದ್ದೇಶದಿಂದ ನನ್ನನ್ನು ಎಲ್ಲರಿಗೂ ಗುಲಾಮನನ್ನಾಗಿ ಮಾಡಿಕೊಂಡೆನು.


ನಾನು ನಿಮ್ಮಲ್ಲಿದ್ದಾಗ, ನನಗೆ ಕೊರತೆಯಾದಾಗ, ನಾನು ನಿಮ್ಮಲ್ಲಿ ಯಾರಿಗೂ ಭಾರವಾಗಲಿಲ್ಲ. ಏಕೆಂದರೆ, ಮಕೆದೋನ್ಯದಿಂದ ಬಂದಿದ್ದ ಸಹೋದರರು ನನ್ನ ಅವಶ್ಯಕತೆಯನ್ನು ಪೂರೈಸಿದರು. ಹೀಗೆ ನಾನು ನಿಮ್ಮಲ್ಲಿ ಯಾರಿಗೂ ಭಾರವಾಗಲಿಲ್ಲ. ಇನ್ನು ಮುಂದೆಯೂ ಭಾರವಾಗಿರುವುದಿಲ್ಲ.


ನಾನು ನಿಮಗೆ ಎಂದೂ ಭಾರವಾಗಿರಲಿಲ್ಲ ಎಂಬ ಒಂದೇ ವಿಷಯದಲ್ಲಿ ಹೊರತು, ಬೇರೆ ಯಾವ ವಿಷಯದಲ್ಲಿಯೂ ನಿಮ್ಮನ್ನು ಉಳಿದ ಸಭೆಗಳವರಿಗಿಂತ ಕಡಿಮೆ ಮಾಡಲಿಲ್ಲ. ಈ ನನ್ನ ತಪ್ಪನ್ನು ಕ್ಷಮಿಸಿರಿ.


ನನ್ನ ಮಕ್ಕಳೇ, ಕ್ರಿಸ್ತ ಯೇಸುವು ನಿಮ್ಮಲ್ಲಿ ರೂಪುಗೊಳ್ಳುವ ತನಕ ನಾನು ನಿಮಗಾಗಿ ಪುನಃ ಪ್ರಸವವೇದನೆ ಪಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು