Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 12:15 - ಕನ್ನಡ ಸಮಕಾಲಿಕ ಅನುವಾದ

15 ನಾನಂತೂ ನನಗಿರುವುದೆಲ್ಲವನ್ನೂ ನಿಮ್ಮ ಆತ್ಮಗಳಿಗೋಸ್ಕರ ಬಹು ಸಂತೋಷದಿಂದ ವೆಚ್ಚಮಾಡುತ್ತೇನೆ. ನನ್ನನ್ನು ಕೂಡ ನಿಮಗೋಸ್ಕರ ವೆಚ್ಚಮಾಡಲು ಸಿದ್ಧನಾಗಿದ್ದೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ, ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಾನಂತೂ ನನಗಿರುವುದನ್ನು ನಿಮ್ಮ ಆತ್ಮ ಸಂರಕ್ಷಣೆಗೋಸ್ಕರ ಅತಿ ಸಂತೋಷದಿಂದ ವೆಚ್ಚ ಮಾಡುತ್ತೇನೆ; ನನ್ನನ್ನೇ ವೆಚ್ಚ ಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅಂತೆಯೇ ನಿಮ್ಮ ಆತ್ಮಕ್ಷೇಮಕ್ಕಾಗಿ ನನಗಿರುವುದೆಲ್ಲವನ್ನೂ ಸಂತೋಷದಿಂದ ವ್ಯಯಮಾಡುತ್ತೇನೆ. ನನ್ನನ್ನೇ ಸವೆಸಲು ಸಿದ್ಧನಾಗಿದ್ದೇನೆ. ಇಷ್ಟರಮಟ್ಟಿಗೆ ನಿಮ್ಮನ್ನು ನಾನು ಪ್ರೀತಿಸುವಾಗ ನಿಮ್ಮ ಪ್ರೀತಿ ಕಡಿಮೆಯಾಗುವುದು ಸರಿಯೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಾನಂತೂ ನನಗಿರುವದನ್ನು ನಿಮ್ಮ ಆತ್ಮಸಂರಕ್ಷಣೆಗೋಸ್ಕರ ಅತಿಸಂತೋಷದಿಂದ ವೆಚ್ಚಮಾಡುತ್ತೇನೆ, ನನ್ನನ್ನೇ ವೆಚ್ಚಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದ್ದರಿಂದ ನನ್ನಲ್ಲಿರುವುದನ್ನೆಲ್ಲಾ ನಿಮಗೆ ಕೊಡಲು ಸಂತೋಷಿಸುತ್ತೇನೆ. ನನ್ನನ್ನೇ ನಿಮಗೆ ಕೊಟ್ಟುಬಿಡುತ್ತೇನೆ. ನಾನು ನಿಮ್ಮನ್ನು ಬಹಳವಾಗಿ ಪ್ರೀತಿಸಿದರೆ, ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಮಿಯಾ ತುಮ್ಚ್ಯಾಸಾಟ್ನಿ ಮಾಜೆ ಮನುನ್ ಹೊತ್ತೆ ಸಗ್ಳೆ ಖರ್ಚ್ ಕರ್‍ತಾ ಅನಿ ಮಾಜೊ ಜಿವ್ ಸೈತ್ ತುಮ್ಚ್ಯಾಸಾಟ್ನಿ ಕರಗ್ತಾ. ಮಿಯಾ ತುಮ್ಚೊ ಎವ್ಡೊ ಪ್ರೆಮ್ ಕರ್ತನಾ ತುಮಿ ಮಾಜೊ ಕಮ್ಮಿ ಪ್ರೆಮ್ ಕರುಚೆ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 12:15
22 ತಿಳಿವುಗಳ ಹೋಲಿಕೆ  

ನಿಮ್ಮನ್ನು ಪೋಷಿಸಿದೆವು. ಏಕೆಂದರೆ ನಾವು ನಿಮ್ಮನ್ನು ಬಹಳವಾಗಿ ಪ್ರೀತಿಸಿದ್ದರಿಂದ, ದೇವರ ಸುವಾರ್ತೆಯನ್ನು ಸಾರುವುದಕ್ಕೆ ಮಾತ್ರವಲ್ಲದೆ ನಿಮಗೋಸ್ಕರ ನಾವು ನಮ್ಮ ಪ್ರಾಣವನ್ನೇ ಕೊಡುವುದಕ್ಕೂ ಇಷ್ಟವುಳ್ಳವರಾಗಿದ್ದೆವು.


ನಿಮ್ಮ ವಿಶ್ವಾಸದಿಂದ ಬರುವ ಯಜ್ಞದ ಮೇಲೆಯೂ ಸೇವೆಯ ಮೇಲೆಯೂ ನಾನು ಪಾನಸಮರ್ಪಣೆಯಾದರೂ ಸಹ ಹರ್ಷದಿಂದ ನಿಮ್ಮೆಲ್ಲರೊಡನೆ ಆನಂದಿಸುವೆನು.


ನಮಗೆ ಕಷ್ಟಸಂಕಟಗಳು ಬಂದರೆ, ಅದು ನಿಮ್ಮ ಆದರಣೆ ಮತ್ತು ರಕ್ಷಣೆಗೋಸ್ಕರವೇ ಇರುತ್ತದೆ. ನಾವು ಸಂತೈಸುವಿಕೆಯನ್ನು ಹೊಂದಿರುವುದಾದರೆ, ಅದು ನಿಮ್ಮ ಆದರಣೆಗಾಗಿಯೇ. ಆ ಆದರಣೆಯು ನಮ್ಮಂತೆ ನೀವು ಅನುಭವಿಸುವ ಕಷ್ಟಸಂಕಟಗಳನ್ನು ಸಹನೆಯಿಂದ ಅನುಭವಿಸುವಂತೆ ಮಾಡುವುದು.


ಈಗ ನಾನು ನಿಮಗೋಸ್ಕರ ಸಹಿಸುತ್ತಿರುವ ಬಾಧೆಗಳಲ್ಲಿ ಆನಂದಿಸುತ್ತೇನೆ. ಕ್ರಿಸ್ತ ಯೇಸುವಿನ ಸಂಕಟಗಳೊಳಗೆ ಇನ್ನೂ ಕೊರತೆಯಾಗಿರುವುದನ್ನು ಅವರ ದೇಹವಾಗಿರುವ ಸಭೆಗಾಗಿ ನನ್ನ ದೇಹದಲ್ಲಿ ತೀರಿಸುತ್ತೇನೆ.


ಆದಕಾರಣ ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ಸಹಿಸಿಕೊಳ್ಳುತ್ತೇನೆ.


ನಾನು ಬಂದಾಗ ನನ್ನನ್ನು ಆನಂದಪಡಿಸತಕ್ಕವರಿಂದಲೇ ದುಃಖ ಹೊಂದಬಾರದೆಂದು ನಾನು ಹಿಂದಿನ ಪತ್ರವನ್ನು ನಿಮಗೆ ಬರೆದಿದ್ದೇನೆ. ನನ್ನ ಆನಂದದಲ್ಲಿ ನೀವೆಲ್ಲರೂ ಪಾಲಾಗುವಿರಿ ಎಂದು ನಿಮ್ಮೆಲ್ಲರ ವಿಷಯದಲ್ಲಿ ನನಗೆ ಭರವಸೆ ಇದೆ.


ನಿಮ್ಮ ನಾಯಕರಿಗೆ ವಿಧೇಯರಾಗಿದ್ದು, ಅವರಿಗೆ ಅಧೀನರಾಗಿರಿ. ಏಕೆಂದರೆ ಅವರು ಲೆಕ್ಕ ಒಪ್ಪಿಸಬೇಕಾದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ಮನನೊಂದವರಾಗದೆ ಸಂತೋಷದಿಂದ ಇದನ್ನು ಮಾಡುವವರಾಗಲಿ. ಏಕೆಂದರೆ ಅವರು ಮನನೊಂದವರಾಗಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.


ಇಗೋ, ನಾನು ನಿಮ್ಮ ಬಳಿಗೆ ಬರುವುದಕ್ಕೆ ಸಿದ್ದನಾಗಿರುವುದು ಇದು ಮೂರನೆಯ ಸಾರಿ. ನಾನು ಬಂದಾಗ ನಿಮಗೆ ಭಾರವಾಗಲು ಬಿಡುವುದಿಲ್ಲ. ನಾನು ನಿಮ್ಮ ಸೊತ್ತನ್ನು ಆಶಿಸುವುದಿಲ್ಲ. ನಿಮ್ಮನ್ನೇ ಆಶಿಸುತ್ತೇನೆ. ಮಕ್ಕಳು ತಂದೆತಾಯಿಗಳಿಗೋಸ್ಕರ ನಿಕ್ಷೇಪವನ್ನು ಕೂಡಿಸಿಡುವುದಿಲ್ಲ. ತಂದೆತಾಯಿಗಳು ಮಕ್ಕಳಿಗೋಸ್ಕರ ಕೂಡಿಸಿಡುತ್ತಾರಷ್ಟೇ.


ಅದಕ್ಕೆ ಕರ್ತ ಯೇಸು, “ನನ್ನ ಕೃಪೆಯೇ ನಿನಗೆ ಸಾಕು. ನನ್ನ ಶಕ್ತಿಯು ಬಲಹೀನತೆಯಲ್ಲಿಯೇ ಪರಿಪೂರ್ಣವಾಗುವುದು,” ಎಂದು ನನಗೆ ಹೇಳಿದರು. ಆದ್ದರಿಂದ ಕ್ರಿಸ್ತ ಯೇಸುವಿನ ಶಕ್ತಿಯು ನನ್ನ ಮೇಲೆ ನೆಲೆಯಾಗಿರಬೇಕೆಂದು, ಬಹಳ ಆನಂದದಿಂದ ನನ್ನ ಬಲಹೀನತೆಯಲ್ಲಿಯೇ ಹೆಚ್ಚಳ ಪಡುವೆನು.


ಈಗ ನೀವು ನಮ್ಮನ್ನು ಸ್ವಲ್ಪಮಟ್ಟಿಗೆ ಅರಿತುಕೊಂಡಿದ್ದೀರಿ. ಆದರೆ ಕರ್ತ ಆಗಿರುವ ಯೇಸುವಿನ ಪುನರಾಗಮನ ದಿನದಲ್ಲಿ ನಾವು ನಿಮ್ಮ ಬಗ್ಗೆ ಹೆಮ್ಮೆ ಪಡುವಂತೆ, ನಮ್ಮ ಬಗ್ಗೆ ಹೆಮ್ಮೆ ಪಡಲು ನೀವು ಸಂಪೂರ್ಣವಾಗಿ ನಮ್ಮನ್ನು ಅರಿತುಕೊಳ್ಳುವಿರೆಂಬ ನಿರೀಕ್ಷೆ ನಮಗಿದೆ.


ನಿಮ್ಮ ಮೇಲೆ ತಪ್ಪು ಹೊರಿಸುವುದಕ್ಕಾಗಿ ನಾನು ಇದನ್ನು ನಿಮಗೆ ಹೇಳುತ್ತಿಲ್ಲ. ನಾವು ನಿಮ್ಮೊಂದಿಗೆ ಜೀವಿಸಿ, ಸಾಯುವಷ್ಟರ ಮಟ್ಟಿಗೆ ನಾವು ನಮ್ಮ ಹೃದಯದಾಳದಿಂದ ನಿಮ್ಮನ್ನು ಪ್ರೀತಿಸುತ್ತಿದ್ದೇವೆ ಎಂದು ನಾನು ಹಿಂದೆ ಹೇಳಲಿಲ್ಲವೇ?


ನೀವು ದಿನಗಳನ್ನೂ ಮಾಸಗಳನ್ನೂ ಕಾಲಗಳನ್ನೂ ಸಂವತ್ಸರಗಳನ್ನೂ ಆಚರಿಸುತ್ತೀರಿ.


ಆಗ ಅರಸನು ನಡುಗುತ್ತಾ ಊರು ಬಾಗಿಲ ಮೇಲಿರುವ ಕೊಠಡಿಗೆ ಏರಿಹೋದನು. ಹೋಗುವಾಗ, “ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನೇ,” ಎಂದು ಹೇಳಿ ಅತ್ತನು.


ಆದರೆ ಅರಸನಾದ ದಾವೀದನು ಅಮ್ನೋನನ ಸಾವಿನ ದುಃಖ ಶಮನವಾದ ಮೇಲೆ ಅಬ್ಷಾಲೋಮನ ಬಳಿಗೆ ಹೋಗಲು ಬಯಸಿದನು.


ನನ್ನ ಸ್ವಂತ ಜನರಾದ ನನ್ನ ಯೆಹೂದ್ಯ ಸಹೋದರರಿಗಾಗಿ, ಸಾಧ್ಯವಾದರೆ ನಾನೇ ಕ್ರಿಸ್ತ ಯೇಸುವಿನಿಂದ ದೂರಹೋಗಿ ಶಾಪಗ್ರಸ್ತನಾಗಲು ಸಿದ್ಧನಾಗಿದ್ದೇನೆ.


ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳ ಕೊಡಿರಿ. ನಾವು ಯಾರಿಗೂ ಅನ್ಯಾಯ ಮಾಡಲಿಲ್ಲ, ಯಾರಿಗೂ ನಾವು ಕೇಡು ಬಗೆಯಲಿಲ್ಲ, ನಾವು ಸ್ವಂತ ಲಾಭಕ್ಕಾಗಿ ಯಾರನ್ನೂ ದುಡಿಸಿಕೊಳ್ಳಲಿಲ್ಲ.


ಏಕೆ? ನಾನು ನಿಮ್ಮನ್ನು ಪ್ರೀತಿ ಇಲ್ಲದ್ದರಿಂದಲೋ? ನಾನು ಪ್ರೀತಿಸುತ್ತೇನೆಂದು ದೇವರಿಗೆ ಗೊತ್ತುಂಟು!


ಹೀಗಿರುವುದರಿಂದ, ನಮ್ಮೊಳಗೆ ಮರಣವು ಕಾರ್ಯ ಮಾಡುತ್ತದೆ, ಆದರೆ ನಿಮ್ಮೊಳಗೆ ಜೀವವು ಕಾರ್ಯ ಮಾಡುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು