Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 13:11 - ಕನ್ನಡ ಸಮಕಾಲಿಕ ಅನುವಾದ

11 ಪ್ರಿಯರೇ, ಕಡೆಯ ಮಾತೇನೆಂದರೆ, ಆನಂದಪಡಿರಿ! ನಿಮ್ಮನ್ನು ಪೂರ್ಣ ಪುನಃಸ್ಥಾಪನೆಗಾಗಿ ಕ್ರಮಪಡಿಸಿಕೊಳ್ಳಿರಿ, ಉತ್ತೇಜನಗೊಳ್ಳಿರಿ, ಒಂದೇ ಮನಸ್ಸುಳ್ಳವರಾಗಿರಿ, ಸಮಾಧಾನದಿಂದಿರಿ. ಆಗ ಪ್ರೀತಿ ಹಾಗೂ ಶಾಂತಿಯ ದೇವರು ನಿಮ್ಮ ಸಂಗಡ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕಡೆಯದಾಗಿ ಸಹೋದರರೇ, ಸಂತೋಷಪಡಿರಿ! ಕ್ರಮಪಡಿಸಿಕೊಳ್ಳಿರಿ. ಧೈರ್ಯವುಳ್ಳವರಾಗಿರಿ, ಏಕ ಮನಸ್ಸುಳ್ಳವರಾಗಿರಿ, ಸಮಾಧಾನದಿಂದ ಇರಿ; ಆಗ ಪ್ರೀತಿಸ್ವರೂಪನೂ, ಶಾಂತಿದಾಯಕನೂ ಆದ ದೇವರು ನಿಮ್ಮ ಸಂಗಡ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಕೊನೆಯದಾಗಿ ಪ್ರಿಯ ಸಹೋದರರೇ, ಸಂತೋಷದಿಂದಿರಿ, ಪರಿಪೂರ್ಣರಾಗಲು ಪ್ರಯತ್ನಿಸಿರಿ. ನನ್ನ ಬುದ್ಧಿಮಾತುಗಳಿಗೆ ಕಿವಿಗೊಡಿ; ಒಮ್ಮನಸ್ಸಿನಿಂದ ಬಾಳಿರಿ; ಸಮಾಧಾನದಿಂದ ಜೀವಿಸಿರಿ; ಆಗ ಪ್ರೀತಿ ಮತ್ತು ಶಾಂತಿ ಸ್ವರೂಪರಾದ ದೇವರು ನಿಮ್ಮೊಡನೆ ಇರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕಡೇ ಮಾತೇನಂದರೆ ಸಹೋದರರೇ ಸಂತೋಷಪಡಿರಿ, ಕ್ರಮಪಡಿಸಿಕೊಳ್ಳಿರಿ; ಧೈರ್ಯವುಳ್ಳವರಾಗಿರಿ, ಒಂದೇ ಮನಸ್ಸುಳ್ಳವರಾಗಿರಿ, ಸಮಾಧಾನದಿಂದಿರಿ; ಆಗ ಪ್ರೀತಿಯನ್ನೂ ಶಾಂತಿಯನ್ನೂ ಕೊಡುವ ದೇವರು ನಿಮ್ಮ ಸಂಗಡ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಸಹೋದರ ಸಹೋದರಿಯರೇ, ನಿಮಗೆ ವಂದನೆಗಳು. ಪರಿಪೂರ್ಣರಾಗಿರಲು ಪ್ರಯತ್ನಿಸಿ. ನಾನು ಕೇಳಿಕೊಂಡ ಕಾರ್ಯಗಳನ್ನು ಮಾಡಿರಿ. ಒಂದೇ ಮನಸ್ಸು ಉಳ್ಳವರಾಗಿದ್ದು ಸಮಾಧಾನದಿಂದ ಜೀವಿಸಿರಿ. ಆಗ ಪ್ರೀತಿಸ್ವರೂಪನೂ ಶಾಂತಿದಾಯಕನೂ ಆದ ದೇವರು ನಿಮ್ಮೊಂದಿಗೆ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಆಕ್ರಿಕ್ ಮಾಜ್ಯಾ ಭಾವಾನು ಅನಿ ಭೆನಿಯಾನು ಮಿಯಾ ತುಮ್ಕಾ ವಿದಾಯ್ ಮನ್ತಾ, ಸಂಪುರ್ನತಾ ಜೊಡುಕ್ ರಾಬಾ. ಮಾಜ್ಯಾ ಗೊಸ್ಟಿಯಾ ಆಯ್ಕಾ, ಎಕ್ ಮನಾಚೆ ಹೊವಾ, ಸಮಾದಾನ್ ಹುಡ್ಕಾ, ತನ್ನಾ ಪ್ರೆಮಾಚೊ ಅನಿ ಶಾಂತಿಚೊ ದೆವ್ ತುಮ್ಚ್ಯಾ ವಾಂಗ್ಡಾ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 13:11
51 ತಿಳಿವುಗಳ ಹೋಲಿಕೆ  

ಎಲ್ಲರ ಸಂಗಡ ಸಮಾಧಾನದಿಂದ ಜೀವಿಸಲು ಮತ್ತು ಪವಿತ್ರರಾಗಿರಲು ಸರ್ವಪ್ರಯತ್ನ ಮಾಡಿರಿ. ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವುದಿಲ್ಲ.


ಪ್ರಿಯರೇ, ನೀವೆಲ್ಲರೂ ಒಂದೇ ಅಭಿಪ್ರಾಯವುಳ್ಳವರಾಗಿದ್ದು, ನಿಮ್ಮೊಳಗೆ ಗುಂಪುಗಾರಿಕೆ, ಪಕ್ಷಬೇಧಗಳಿರದೆ, ಒಂದೇ ಮನಸ್ಸು ಮತ್ತು ಒಂದೇ ಆಲೋಚನೆಗಳಲ್ಲಿ ಪರಿಪೂರ್ಣವಾದ ಅನ್ಯೋನ್ಯತೆಯಲ್ಲಿರಬೇಕೆಂದು ನಾನು ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳವರಾಗಿರಿ. ನೀವು ಮನಸ್ಸಿನಲ್ಲಿ ಅಹಂಕಾರಿಗಳಾಗಿರದೆ, ದೀನರೊಂದಿಗೆ ಸಂತೋಷದಿಂದ ಸಹಭಾಗಿಗಳಾಗಿರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ.


ಸಮಾಧಾನದ ದೇವರು ನಿಮ್ಮೆಲ್ಲರೊಂದಿಗಿರಲಿ. ಆಮೆನ್.


ಸಾಧ್ಯವಾದರೆ, ನಿಮ್ಮಿಂದ ಆದಷ್ಟು ಎಲ್ಲರೊಂದಿಗೂ ಸಮಾಧಾನದಿಂದಿರಿ.


“ಉಪ್ಪು ಒಳ್ಳೆಯದು. ಆದರೆ ಉಪ್ಪೇ ಸಪ್ಪಗಾದರೆ, ಇನ್ನಾವುದರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರುವಂತೆ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ,” ಎಂದರು.


ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನು ಮಾಡಲಿ. ಸಮಾಧಾನವನ್ನು ಹುಡುಕಿ ಅದಕ್ಕೋಸ್ಕರ ಪ್ರಯತ್ನಪಡಲಿ.


ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮ ದೇವರ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡ ಇರಲಿ.


ನಾವು ಬಲಹೀನರಾಗಿದ್ದರೂ, ನೀವು ಬಲಿಷ್ಠರಾಗಿದ್ದಿರೆಂದು ತಿಳಿದು ಆನಂದಪಡುತ್ತೇವೆ. ನೀವು ಪರಿಪೂರ್ಣರಾಗಬೇಕೆಂದೇ ನಾವು ಪ್ರಾರ್ಥಿಸುತ್ತೇವೆ.


ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತಮ್ಮ ನಿತ್ಯ ಪ್ರಭಾವಕ್ಕೆ ಕರೆದ ಕೃಪಾಪೂರ್ಣ ಆಗಿರುವ ದೇವರು ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ತಾವೇ ನಿಮ್ಮನ್ನು ಪರಿಪೂರ್ಣಮಾಡಿ, ಸ್ಥಿರಪಡಿಸಿ, ಬಲಪಡಿಸಿ ನೆಲೆಗೊಳಿಸುವರು.


ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರಿ, ಒಬ್ಬರಿಗೊಬ್ಬರೂ ಕರುಣೆಯುಳ್ಳವರಾಗಿದ್ದು ಸಹೋದರರಂತೆ ಪ್ರೀತಿಸಿರಿ. ಕನಿಕರವೂ ದೀನತೆ ಉಳ್ಳವರಾಗಿರಿ,


ಆ ದೃಢ ನಿಷ್ಠೆಯು ನಿಮ್ಮಲ್ಲಿ ಪೂರ್ಣ ಕ್ರಿಯೆಯನ್ನು ಉಂಟುಮಾಡಿದಾಗ, ಆಗ ನೀವು ಪರಿಪಕ್ವತೆಗೆ ಬಂದವರೂ ಪರಿಪೂರ್ಣರೂ ಯಾವ ಕೊರತೆಯೂ ಇಲ್ಲದವರೂ ಆಗಿರುವಿರಿ.


ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರು ಹಾಗೂ ನಮ್ಮ ತಂದೆ ದೇವರು ನಮ್ಮನ್ನು ಪ್ರೀತಿಸಿ ಕೃಪೆಯಿಂದ ಕೊಟ್ಟಿರುವ ನಮಗೆ ನಿತ್ಯ ಆದರಣೆಯನ್ನೂ ಒಳ್ಳೆಯ ನಿರೀಕ್ಷೆಯನ್ನೂ ನೀಡಿ,


ಪ್ರಿಯರೇ, ನೀವು ಹೇಗೆ ನಡೆದುಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿದಂತೆಯೇ ಜೀವಿಸುತಿರುವಿರಿ. ಇದರಲ್ಲಿ ನೀವು ಹೆಚ್ಚೆಚ್ಚಾಗಿ ಮಾಡಬೇಕೆಂದು ನಾವು ಕಡೆಯದಾಗಿ ನಮಗೆ ಕರ್ತ ಆಗಿರುವ ಯೇಸುವಿನಲ್ಲಿ ನಿಮ್ಮನ್ನು ಪ್ರಬೋಧಿಸುತ್ತೇವೆ ಮತ್ತು ಉತ್ತೇಜಿಸುತ್ತೇವೆ.


ನೀವು ಯಾವುದನ್ನು ನನ್ನಿಂದ ಕಲಿತು ಹೊಂದಿದ್ದೀರೋ ಮತ್ತು ಯಾವುದನ್ನು ನನ್ನಲ್ಲಿ ಕೇಳಿ ಕಂಡಿದ್ದೀರೋ ಅದನ್ನೇ ಮಾಡುವವರಾಗಿರಿ. ಆಗ ಸಮಾಧಾನದ ದೇವರು ನಿಮ್ಮೊಂದಿಗಿರುವರು.


ಏನೇ ಸಂಭವಿಸಿದರೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿ, ದೂರದಲ್ಲಿದ್ದು ನಿಮ್ಮ ವಿಷಯವಾಗಿ ಕೇಳಿದರೂ ಸರಿ, ನೀವು ಒಂದೇ ಆತ್ಮದಲ್ಲಿ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗಾಗಿ ಒಂದೇ ಮನಸ್ಸಿನಿಂದ ಒಟ್ಟಿಗೆ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.


ಆಗ ಸಮಾಧಾನದ ದೇವರು ಬೇಗನೆ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ಜಜ್ಜಿಬಿಡುವನು. ನಮ್ಮ ಕರ್ತ ಆಗಿರುವ ಯೇಸುವಿನ ಕೃಪೆಯು ನಿಮ್ಮೊಂದಿಗಿರಲಿ.


ನಿರೀಕ್ಷೆಯ ದೇವರು, ನೀವು ಪವಿತ್ರಾತ್ಮನ ಶಕ್ತಿಯಿಂದ ನಿಮ್ಮ ನಿರೀಕ್ಷೆಯನ್ನು ಹೆಚ್ಚಿಸಿ, ನೀವು ನಿಮ್ಮ ವಿಶ್ವಾಸದಿಂದ ಸಕಲ ಸಂತೋಷದಿಂದಲೂ ಸಮಾಧಾನದಿಂದಲೂ ಪ್ರವಾಹಿಸುವಂತೆ ಮಾಡಲಿ.


ನಮ್ಮ ಕರ್ತ ಯೇಸುವಿನ ಕೃಪೆಯು ಎಲ್ಲರೊಂದಿಗೆ ಇರಲಿ. ಆಮೆನ್!


ಕುರಿ ಹಿಂಡಿಗೆ ಮಹಾಕುರುಬ ಆಗಿರುವ ನಮ್ಮ ಕರ್ತ ಯೇಸುವನ್ನು ನಿತ್ಯಒಡಂಬಡಿಕೆಯ ರಕ್ತದ ಮೂಲಕ ಸಮಾಧಾನದ ದೇವರು ಸತ್ತವರೊಳಗಿಂದ ಜೀವಂತವಾಗಿ ಬರಮಾಡಿದರು.


ಯೌವನದ ಆಶೆಗಳನ್ನು ಬಿಟ್ಟು ಓಡಿಹೋಗು. ಶುದ್ಧ ಹೃದಯವುಳ್ಳವರಾಗಿ ಕರ್ತ ಯೇಸುವನ್ನು ಬೇಡಿಕೊಳ್ಳುವವರ ಸಂಗಡ ನೀತಿ, ವಿಶ್ವಾಸ, ಪ್ರೀತಿ, ಸಮಾಧಾನ ಇವುಗಳನ್ನು ಬೆನ್ನಟ್ಟು.


ನಮಗೆ ಕರ್ತ ಆಗಿರುವ ಯೇಸು ಈ ಸಮಾಧಾನದಲ್ಲಿ ತಾವೇ ಸದಾಕಾಲದಲ್ಲಿಯೂ ಸಕಲ ವಿಧದಲ್ಲಿಯೂ ನಿಮಗೆ ಸಮಾಧಾನವನ್ನು ದಯಪಾಲಿಸಲಿ. ಕರ್ತದೇವರು ನಿಮ್ಮೆಲ್ಲರೊಂದಿಗೆ ಇರಲಿ.


ಸಮಾಧಾನದ ದೇವರು ತಾವಾಗಿಯೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ. ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಪುನರಾಗಮನದಲ್ಲಿ ನಿಮ್ಮ ಆತ್ಮ, ಪ್ರಾಣ, ಶರೀರಗಳು ದೋಷವಿಲ್ಲದೆ ಸಂಪೂರ್ಣವಾಗಿ ಸುರಕ್ಷಿತವಾಗಿರಲಿ.


ಅವರ ಕೆಲಸದ ನಿಮಿತ್ತ ಅವರನ್ನು ಪ್ರೀತಿಯಿಂದ ಅತ್ಯಧಿಕವಾಗಿ ಸನ್ಮಾನ ಮಾಡಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇವೆ. ನಿಮ್ಮನಿಮ್ಮೊಳಗೆ ಸಮಾಧಾನದಿಂದಿರಿ.


ಆದಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.


ಯಾವಾಗಲೂ ಕರ್ತ ದೇವರಲ್ಲಿ ಆನಂದಿಸಿರಿ, ಆನಂದಪಡಿರಿ ಎಂದು ಮತ್ತೆ ಹೇಳುತ್ತೇನೆ.


ಕರ್ತ ದೇವರಲ್ಲಿ ಒಂದೇ ಮನಸ್ಸುಳ್ಳವರಾಗಿರಬೇಕೆಂದು ಯುವೊದ್ಯಳನ್ನೂ ಸಂತುಕೆಯನ್ನೂ ಬೇಡಿಕೊಳ್ಳುತ್ತೇನೆ.


ಆದರೂ ಈಗಾಗಲೇ ನಾವು ಯಾವುದರಲ್ಲಿ ಮುಂದುವರೆದಿದ್ದೇವೋ ಆ ಸೂತ್ರದ ಪ್ರಕಾರ ಒಂದೇ ಮನಸ್ಸುಳ್ಳವರಾಗಿ ಬಾಳೋಣ.


ತಂದೆಯಾದ ದೇವರಿಂದಲೂ ಕರ್ತ ಆಗಿರುವ ಯೇಸು ಕ್ರಿಸ್ತರಿಂದಲೂ ಶಾಂತಿಯೂ ಮತ್ತು ನಂಬಿಕೆಯಿಂದ ಕೂಡಿದ ಪ್ರೀತಿಯೂ ಸಹೋದರರಿಗೆ ಇರಲಿ.


ದೇವರು ನಮಗಾಗುವ ಎಲ್ಲಾ ಬಾಧೆಗಳಲ್ಲಿ ನಮ್ಮನ್ನು ಸಂತೈಸುವವರಾಗಿದ್ದಾರೆ. ಇತರರು ಬಾಧೆಗಳನ್ನು ಅನುಭವಿಸುತ್ತಿರುವಾಗ, ನಾವು ಸಹ ದೇವರಿಂದ ಹೊಂದಿರುವ ಸಂತೈಸುವಿಕೆಯಿಂದ ಅವರನ್ನು ಸಂತೈಸಲು ನಮ್ಮನ್ನು ಶಕ್ತರನ್ನಾಗಿ ಮಾಡಿದ್ದಾರೆ.


ಆದರೂ ಪೌಲನ ವಿರೋಧವಾಗಿ ಒಂದು ಒಳಸಂಚು ನಡೆದಿದೆ ಎಂದು ನನಗೆ ರಹಸ್ಯ ಸುದ್ದಿ ಬಂದದ್ದರಿಂದ, ಕೂಡಲೇ ಇವನನ್ನು ನಿಮ್ಮ ಬಳಿಗೆ ಕಳುಹಿಸುತ್ತಿದ್ದೇನೆ. ಇವನಿಗೆ ವಿರೋಧವಾದ ಆರೋಪಣೆಯನ್ನು ನಿಮಗೆ ಸಲ್ಲಿಸಬೇಕೆಂದು ಇವನ ವಿರೋಧಿಗಳಿಗೆ ಅಪ್ಪಣೆ ಕೊಟ್ಟಿದ್ದೇನೆ.


ಆದರೆ ಅವನು ಅಲ್ಲಿಂದ ಹೊರಟು ಹೋಗಲಿಕ್ಕಿದ್ದಾಗ, “ದೇವರ ಚಿತ್ತವಾದರೆ, ನಾನು ಹಿಂದಿರುಗಿ ಬರುವೆ,” ಎಂದನು. ಆಮೇಲೆ ಎಫೆಸದಿಂದ ನೌಕೆಯಲ್ಲಿ ಪ್ರಯಾಣಮಾಡಿದನು.


ದೇವರಲ್ಲದವುಗಳಿಗೆ ಅರ್ಪಿತವಾದ ಮಲಿನ ಆಹಾರದಿಂದಲೂ ರಕ್ತದಿಂದಲೂ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಯ ಮಾಂಸದಿಂದಲೂ ಅನೈತಿಕತೆಯಿಂದಲೂ ದೂರವಿರಬೇಕು. ಇವುಗಳಿಂದ ನಿಮ್ಮನ್ನು ಕಾಪಾಡಿಕೊಳ್ಳುವುದರಿಂದ ನಿಮಗೆ ಒಳಿತಾಗುವುದು. ನಿಮಗೆ ಶುಭವಾಗಲಿ.


ಹೀಗೆ ನಾನು ಇವರಲ್ಲಿಯೂ ನೀವು ನನ್ನಲ್ಲಿಯೂ ಇರುವಂತೆ ಇವರೂ ಐಕ್ಯತೆಯಲ್ಲಿ ಪರಿಪೂರ್ಣವಾಗಿರಲಿ. ಆಗ ನೀವು ನನ್ನನ್ನು ಕಳುಹಿಸಿದ್ದೀರಿ ಎಂದೂ ನನ್ನನ್ನು ಪ್ರೀತಿಸಿದಂತೆ ಇವರನ್ನು ನೀವು ಪ್ರೀತಿಸಿದ್ದೀರಿ ಎಂದೂ ಲೋಕವು ತಿಳಿದುಕೊಳ್ಳುವುದು.


ಇದಲ್ಲದೆ ಮತ್ತೊಬ್ಬನು ಸಹ, “ಕರ್ತದೇವರೇ, ನಾನು ನಿಮ್ಮನ್ನು ಹಿಂಬಾಲಿಸುವೆನು, ಆದರೆ ನಾನು ಮೊದಲು ಹೋಗಿ ನನ್ನ ಮನೆಯಲ್ಲಿದ್ದವರನ್ನು ಬೀಳ್ಕೊಡುವಂತೆ ನನಗೆ ಅಪ್ಪಣೆಕೊಡಿ,” ಎಂದನು.


ಯೇಸು ನಿಂತು, ಅವನನ್ನು ಕರೆಯಬೇಕೆಂದು ಆಜ್ಞಾಪಿಸಲು, ಅವರು ಆ ಕುರುಡನನ್ನು ಕರೆದು, “ಧೈರ್ಯವಾಗಿರು, ಏಳು, ಯೇಸು ನಿನ್ನನ್ನು ಕರೆಯುತ್ತಿದ್ದಾರೆ,” ಎಂದು ಅವನಿಗೆ ಹೇಳಿದರು.


ಆದ್ದರಿಂದ, ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣರಾಗಿರುವಂತೆ ನೀವೂ ಪರಿಪೂರ್ಣರಾಗಿರಿ.


“ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು, ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.” ಈ ಹೆಸರಿನ ಅರ್ಥ, “ದೇವರು ನಮ್ಮ ಸಂಗಡ ಇದ್ದಾರೆ,” ಎಂಬುದು.


ಯೋಸೇಫನು ಅವರಿಗೆ, “ಮಾರ್ಗದಲ್ಲಿ ಜಗಳವಾಡಬೇಡಿರಿ,” ಎಂದು ಹೇಳಿ ಕಳುಹಿಸಿದನು.


ತಮ್ಮ ತಂದೆಯು ಅವನನ್ನು ಎಲ್ಲಾ ಸಹೋದರರಿಗಿಂತ ಹೆಚ್ಚು ಪ್ರೀತಿಮಾಡುತ್ತಿರುವುದನ್ನು ಅವನ ಸಹೋದರರು ಕಂಡು, ಅವನನ್ನು ದ್ವೇಷಿಸಿ, ಅವನ ಸಂಗಡ ಸಮಾಧಾನದಿಂದ ಮಾತಾಡದೆಹೋದರು.


ಸಮಾಧಾನದ ಬಂಧನದಲ್ಲಿದ್ದವರಾಗಿ, ಪವಿತ್ರಾತ್ಮ ದೇವರಿಂದ ಉಂಟಾಗುವ ಐಕ್ಯತೆಯನ್ನು ಕಾಪಾಡಿಕೊಳ್ಳಲು ಆಸಕ್ತರಾಗಿರಿ.


ಆದ್ದರಿಂದ ಯಾವುದು ನಮ್ಮನ್ನು ಸಮಾಧಾನಕ್ಕೂ ಪರಸ್ಪರ ಭಕ್ತಿವೃದ್ಧಿಗೂ ನಡೆಸುತ್ತದೋ ಅದನ್ನೇ ಮಾಡೋಣ.


ಕ್ರಿಸ್ತನ ದೇಹವನ್ನು ಕಟ್ಟುವುದಕ್ಕಾಗಿಯೂ ದೇವಜನರನ್ನು ಸೇವಾ ಕೆಲಸಕ್ಕಾಗಿ ಪರಿಣಿತರನ್ನಾಗಿ ಮಾಡುವುದಕ್ಕಾಗಿಯೂ ಕ್ರಿಸ್ತನು ಅವರನ್ನು ಕೊಟ್ಟ ಉದ್ದೇಶವಾಗಿತ್ತು.


ನಿಮ್ಮ ಮುಖವನ್ನು ನೋಡುವುದಕ್ಕಾಗಿಯೂ ನಿಮ್ಮ ನಂಬಿಕೆಯಲ್ಲಿರುವ ಕೊರತೆಯನ್ನು ನಿವಾರಿಸುವುದಕ್ಕೂ ನಾವು ಹಗಲಿರುಳು ಆಸಕ್ತಿಯಿಂದ ಪ್ರಾರ್ಥಿಸುತ್ತಿದ್ದೇವೆ.


ಕೊನೆಯದಾಗಿ ಪ್ರಿಯರೇ, ಕರ್ತ ಯೇಸುವಿನ ವಾಕ್ಯವು ನಿಮ್ಮಲ್ಲಿ ಹಬ್ಬಿದಂತೆ ಎಲ್ಲ ಕಡೆಗಳಲ್ಲಿಯೂ ಅತಿವೇಗದಿಂದ ಹಬ್ಬಿ ಹರಡುವಂತೆ ನಮಗಾಗಿ ಬೇಡಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು