Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 13:5 - ಕನ್ನಡ ಸಮಕಾಲಿಕ ಅನುವಾದ

5 ನಂಬಿಕೆಯಲ್ಲಿ ಇದ್ದೀರೋ, ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ. ನಿಮ್ಮನ್ನು ಪರಿಶೋಧಿಸಿಕೊಳ್ಳಿರಿ. ಏನು, ಕ್ರಿಸ್ತ ಯೇಸು ನಿಮ್ಮಲ್ಲಿದ್ದಾರೆಂಬುದರ ಬಗ್ಗೆ ನಿಮಗೆ ನಂಬಿಕೆಯಿಲ್ಲವೋ? ಅವರು ನಿಮ್ಮಲ್ಲಿಲ್ಲದಿದ್ದರೆ, ನೀವು ಪರೀಕ್ಷೆಯಲ್ಲಿ ಉತ್ತೀರ್ಣರಾದವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀವು ಕ್ರಿಸ್ತ ನಂಬಿಕೆಯಲ್ಲಿ ಇದ್ದೀರೋ ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ, ನಿಮ್ಮನ್ನು ನೀವೇ ಪರಿಶೋಧಿಸಿಕೊಳ್ಳಿರಿ. ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದು ನಿಮಗೆ ತಿಳಿಯುವುದಿಲ್ಲವೋ? ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಆಯೋಗ್ಯರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿಮ್ಮ ಜೀವನ ವಿಶ್ವಾಸದಲ್ಲಿ ಬೇರೂರಿದೆಯೇ ಎಂಬುದನ್ನು ನೀವೇ ಪರೀಕ್ಷಿಸಿನೋಡಿ. ನಿಮ್ಮ ಅಂತರಂಗವನ್ನು ಪರಿಶೋಧಿಸಿ ನೋಡಿ. ಕ್ರಿಸ್ತಯೇಸು ನಿಮ್ಮಲ್ಲಿ ಇದ್ದಾರೆ ಎಂಬುದನ್ನು ಅರಿತಿದ್ದೀರಿ ಅಲ್ಲವೇ? ಅವರು ನಿಮ್ಮಲ್ಲಿ ಇಲ್ಲವಾದರೆ ನೀವು ಅಯೋಗ್ಯರೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕ್ರಿಸ್ತನಂಬಿಕೆಯಲ್ಲಿ ಇದ್ದೀರೋ ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ, ನಿಮ್ಮನ್ನು ಪರಿಶೋಧಿಸಿಕೊಳ್ಳಿರಿ. ಏನು, ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂಬದು ನಿಮ್ಮನ್ನು ಕುರಿತು ನಿಮಗೆ ಚೆನ್ನಾಗಿ ತಿಳಿಯುವದಿಲ್ಲವೋ? ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಅಯೋಗ್ಯರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನೀವು ನಂಬಿಕೆಯಲ್ಲಿ ಜೀವಿಸುತ್ತಿದ್ದೀರೋ ಎಂಬುದನ್ನು ತಿಳಿದುಕೊಳ್ಳಲು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ. ಕ್ರಿಸ್ತಯೇಸುವು ನಿಮ್ಮೊಳಗೆ ಇದ್ದಾನೆಂಬುದು ನಿಮಗೆ ಗೊತ್ತಿದೆ. ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಅಯೋಗ್ಯರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತುಮಿ ವಿಶ್ವಾಸಾನ್ ಜಿವನ್ ಕರುಕ್ ಲಾಗ್ಲ್ಯಾಶಿ ಕಾಯ್ ನಾ, ಹೆಚ್ಯಾ ವಿಶಯಾತ್ ತುಮ್ಚಿಚ್ ತಪಾಸ್ನಿ ಕರುನ್ ಬಗಾ. ಕ್ರಿಸ್ತ್ ತುಮ್ಚ್ಯಾ ಮದ್ದಿ ಹಾಯ್ ಮನುನ್ ತುಮ್ಕಾ ಗೊತ್ತ್ ನಾ ಕಾಯ್? ತುಮ್ಚ್ಯಾ ಖಟ್ಪಟಾತ್ನಿ ತುಮ್ಕಾ ಕಾಯ್ಬಿ ಫಳ್ ಗಾವುಕ್‍ನಾ ಹೊಲ್ಯಾರ್ ಅಶೆ ಘಡಿಲ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 13:5
50 ತಿಳಿವುಗಳ ಹೋಲಿಕೆ  

ನಾವು ನಮ್ಮ ಮಾರ್ಗಗಳನ್ನು ಪರಿಶೋಧಿಸಿ, ಪರೀಕ್ಷಿಸಿಕೊಂಡು ಆಮೇಲೆ ಯೆಹೋವ ದೇವರ ಬಳಿಗೆ ತಿರುಗಿಕೊಳ್ಳೋಣ.


ಆದರೆ ಪ್ರತಿಯೊಬ್ಬರೂ ತಮ್ಮನ್ನು ಪರೀಕ್ಷಿಸಿಕೊಂಡವರಾಗಿ, ಆ ರೊಟ್ಟಿಯನ್ನು ತೆಗೆದುಕೊಂಡು ತಿನ್ನಲಿ, ಆ ಪಾತ್ರೆಯಲ್ಲಿ ಕುಡಿಯಲಿ.


ನಾನು ಇತರರಿಗೆ ಸುವಾರ್ತೆ ಸಾರಿದ ಮೇಲೆ, ನಾನೇ ಬಹುಮಾನ ಹೊಂದಲು ಅಯೋಗ್ಯನಾಗದಂತೆ ನನ್ನ ದೇಹವನ್ನು ದಂಡಿಸಿ, ನನ್ನ ಸ್ವಾಧೀನದಲ್ಲಿಟ್ಟುಕೊಳ್ಳುತ್ತೇನೆ.


ಆದ್ದರಿಂದ ನೀನು ಎಲ್ಲಿಂದ ಬಿದ್ದಿದ್ದೀಯೋ, ಅದನ್ನು ಜ್ಞಾಪಿಸಿಕೊಂಡು ಪಶ್ಚಾತ್ತಾಪಪಡು. ನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನಿನ್ನ ಮನಸ್ಸು ಪರಿವರ್ತನೆ ಹೊಂದದಿದ್ದರೆ, ನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುವೆನು.


ಪ್ರತಿಯೊಬ್ಬನು ತನ್ನ ಸ್ವಂತ ಕೆಲಸವನ್ನು ಪರೀಕ್ಷಿಸಿಕೊಳ್ಳಲಿ, ಆಗ ಅವನು ತನ್ನಲ್ಲಿ ಮಾತ್ರ ಸಂತೋಷಪಡುವುದಕ್ಕೆ ಆಸ್ಪದವಾಗುವುದೇ ಹೊರತು ಮತ್ತೊಬ್ಬನಲ್ಲಿ ಅಲ್ಲ.


ನಿಮ್ಮಲ್ಲಿ ಯಾರೂ ದೇವರ ಕೃಪೆಗೆ ತಪ್ಪಿಹೋಗದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅದರಿಂದ ಅನೇಕರು ಮಲಿನರಾಗದಂತೆಯೂ


ನಮ್ಮನ್ನು ನಾವೇ ತೀರ್ಪುಮಾಡಿಕೊಂಡರೆ, ನಾವು ನ್ಯಾಯವಿಚಾರಣೆಗೆ ಒಳಗಾಗುವುದಿಲ್ಲ.


ತಾವು ದೇವರನ್ನು ತಿಳಿದವರೆಂದು ಅವರು ವಾದಿಸುತ್ತಾರೆ. ಆದರೆ ತಮ್ಮ ಕೃತ್ಯಗಳಿಂದ ದೇವರನ್ನೇ ಅಲ್ಲಗಳೆಯುವರಾಗಿದ್ದಾರೆ. ಅವರು ಅಸಹ್ಯರೂ ಅವಿಧೇಯರೂ ಯಾವ ಸತ್ಕಾರ್ಯಗಳನ್ನು ಮಾಡುವುದಕ್ಕೆ ಅಯೋಗ್ಯರಾಗಿದ್ದಾರೆ.


ಕ್ರಿಸ್ತ ಯೇಸುವಿನೊಂದಿಗೆ ನಾನೂ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ. ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತ ಯೇಸುವೇ ನನ್ನಲ್ಲಿ ಜೀವಿಸುತ್ತಾರೆ. ನನ್ನನ್ನು ಪ್ರೀತಿಸಿ ನನಗೋಸ್ಕರ ತಮ್ಮನ್ನೇ ಒಪ್ಪಿಸಿಕೊಟ್ಟ ದೇವಪುತ್ರ ಆಗಿರುವವರ ನಂಬಿಕೆಯಲ್ಲಿಯೇ ಈಗ ನಾನು ಈ ಶರೀರದಲ್ಲಿ ಜೀವಿಸುತ್ತಿದ್ದೇನೆ.


ಯೇಸು ಅವನಿಗೆ, “ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ಅವನು ನನ್ನ ವಾಕ್ಯವನ್ನು ಕೈಗೊಳ್ಳುವನು. ನನ್ನ ತಂದೆಯು ಅವನನ್ನು ಪ್ರೀತಿಸುವರು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಿವಾಸಮಾಡಿಕೊಳ್ಳುವೆವು.


ಯೆಹೋವ ದೇವರೇ, ನನ್ನನ್ನು ಶೋಧಿಸಿ, ಪರೀಕ್ಷಿಸಿರಿ; ನನ್ನ ಅಂತರಿಂದ್ರಿಯಗಳನ್ನೂ ನನ್ನ ಹೃದಯವನ್ನೂ ಶೋಧಿಸಿರಿ.


ಆದರೆ ಕ್ರಿಸ್ತ ಯೇಸು ನಿಮ್ಮಲ್ಲಿ ಇರುವುದಾದರೆ, ನಿಮ್ಮ ಶರೀರವು ಪಾಪದ ನಿಮಿತ್ತ ಸತ್ತಿದ್ದರೂ ನಿಮ್ಮ ಆತ್ಮವು ನೀತಿಯ ನಿಮಿತ್ತ ಜೀವಿಸುತ್ತದೆ.


ನಾನು ನನ್ನ ನಡತೆಯನ್ನು ಪರಿಶೋಧಿಸುತ್ತಾ ನನ್ನ ಹೆಜ್ಜೆಗಳನ್ನು ನಿಮ್ಮ ಶಾಸನಗಳ ಕಡೆಗೆ ತಿರುಗಿಸಿದ್ದೇನೆ.


ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ, “ನಿಮ್ಮ ಮಾರ್ಗಗಳನ್ನು ಆಲೋಚಿಸಿ ನೋಡಿರಿ.


ಹೀಗಿರಲಾಗಿ ದೇವರ ವಿಶ್ರಾಂತಿಯಲ್ಲಿ ಸೇರುವೆವು ಎಂಬ ವಾಗ್ದಾನವು ಇನ್ನೂ ಉಳಿದಿರಲು ನಿಮ್ಮಲ್ಲಿ ಯಾರಾದರೂ ಅದನ್ನು ಹೊಂದದೆ ಇರಬಾರದು ಎಂದು ಎಚ್ಚರವಹಿಸೋಣ.


ಪಂದ್ಯಗಳಲ್ಲಿ ಎಲ್ಲರೂ ಓಡುತ್ತಾರೆ. ಆದರೆ ಒಬ್ಬನಿಗೆ ಮಾತ್ರ ಬಹುಮಾನ ದೊರೆಯುತ್ತದೆ ಎಂಬುದು ನಿಮಗೆ ತಿಳಿಯದೋ? ಬಹುಮಾನವನ್ನು ಪಡಕೊಳ್ಳಬೇಕೆಂದು ನೀವೂ ಓಡಿರಿ.


ನೀವು ದೇವರ ಆಲಯವಾಗಿದ್ದೀರೆಂಬುದೂ ದೇವರ ಆತ್ಮ ನಿಮ್ಮಲ್ಲಿ ವಾಸ ಮಾಡುತ್ತಾರೆಂಬುದೂ ನಿಮಗೆ ಗೊತ್ತಿಲ್ಲವೋ?


ಈಗ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮ್ಮ ಮಾರ್ಗಗಳನ್ನು ಆಲೋಚಿಸಿ ನೋಡಿರಿ.


ನಾನು ನಿಮ್ಮಲ್ಲಿ ನೆಲೆಗೊಂಡಿರುವ ಹಾಗೇ ನನ್ನಲ್ಲಿ ನೆಲೆಗೊಂಡಿರಿ. ಕವಲುಬಳ್ಳಿಯು ದ್ರಾಕ್ಷಿಯ ಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲ ಕೊಡಲಾರದೋ ಹಾಗೆಯೇ ನೀವೂ ನನ್ನಲ್ಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.


ನೀವು ನನ್ನ ಹೃದಯವನ್ನು ಶೋಧಿಸಿದರೂ, ನೀವು ರಾತ್ರಿಯಲ್ಲಿ ನನ್ನನ್ನು ಪರೀಕ್ಷಿಸಿ ವಿಚಾರಿಸಿದರೂ, ನಾನು ಕೆಟ್ಟಯೋಜನೆ ಮಾಡಿಕೊಳ್ಳಲಿಲ್ಲವೆಂದು ನೀವು ಕಂಡುಕೊಳ್ಳುವಿರಿ; ನನ್ನ ಬಾಯಿಯೂ ಅತಿಕ್ರಮಿಸುವುದಿಲ್ಲವೆಂದು ನಾನು ತೀರ್ಮಾನಿಸಿಕೊಂಡಿದ್ದೇನೆ.


ವೃದ್ಧರು ಆತ್ಮ ಸಂಯಮವುಳ್ಳವರೂ ಗೌರವಕ್ಕೆ ಯೋಗ್ಯರೂ ಸ್ವಯಂನಿಯಂತ್ರಿತರೂ ನಂಬಿಕೆ, ಪ್ರೀತಿ, ತಾಳ್ಮೆ ಇವುಗಳಲ್ಲಿ ಬದಲಾಗದವರೂ ಆಗಿರಬೇಕೆಂದು ಉಪದೇಶಿಸು.


ನಂಬಿಕೆಯ ಮೂಲಕ ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ವಾಸಿಸಲಿ. ನೀವು ಪ್ರೀತಿಯಲ್ಲಿ ಬೇರೂರಿ ನೆಲೆಗೊಂಡು ನಿಂತು


ನೀವು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಇವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿಮ್ಮ ಹೆಸರನ್ನು ತಿಳಿಸಿದ್ದೇನೆ, ಇನ್ನೂ ತಿಳಿಸುವೆನು,” ಎಂದರು.


ಹೀಗೆ ನಾನು ಇವರಲ್ಲಿಯೂ ನೀವು ನನ್ನಲ್ಲಿಯೂ ಇರುವಂತೆ ಇವರೂ ಐಕ್ಯತೆಯಲ್ಲಿ ಪರಿಪೂರ್ಣವಾಗಿರಲಿ. ಆಗ ನೀವು ನನ್ನನ್ನು ಕಳುಹಿಸಿದ್ದೀರಿ ಎಂದೂ ನನ್ನನ್ನು ಪ್ರೀತಿಸಿದಂತೆ ಇವರನ್ನು ನೀವು ಪ್ರೀತಿಸಿದ್ದೀರಿ ಎಂದೂ ಲೋಕವು ತಿಳಿದುಕೊಳ್ಳುವುದು.


ವ್ಯಭಿಚಾರಿಗಳೇ, ಇಹಲೋಕ ಸ್ನೇಹವು ದೇವರೊಂದಿಗಿರುವ ಶತ್ರುತ್ವ ಎಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರಬೇಕೆಂಬುವವನು ದೇವರಿಗೆ ಶತ್ರುವಾಗಿದ್ದಾನೆ.


ನೀವು ಕ್ರಿಸ್ತ ಯೇಸುವಿನಲ್ಲಿ ಬೇರೂರಿದವರಾಗಿಯೂ ಕಟ್ಟಲಾದವರಾಗಿಯೂ ಇದ್ದು, ನಿಮಗೆ ಬೋಧನೆ ನೀಡಿದ ಪ್ರಕಾರ ನಿಮ್ಮ ವಿಶ್ವಾಸದಲ್ಲಿ ಬಲಹೊಂದಿ ಕೃತಜ್ಞತೆಯಿಂದ ತುಂಬಿ ಪ್ರವಾಹಿಸುವವರಾಗಿರಿ.


ಯೆಹೂದ್ಯರಲ್ಲದವರಲ್ಲಿ ಆ ರಹಸ್ಯದ ಮಹಿಮೆಯ ಐಶ್ವರ್ಯವು ಎಷ್ಟೆಂಬುದನ್ನು ದೇವರು ತಮ್ಮ ಜನರಿಗೆ ಪ್ರಕಟಿಸುವುದಕ್ಕೆ ಮನಸ್ಸು ಮಾಡಿದ್ದಾರೆ. ಆ ರಹಸ್ಯವು ಏನೆಂದರೆ, ನಿಮ್ಮಲ್ಲಿರುವ ಕ್ರಿಸ್ತ ಯೇಸು ಮಹಿಮೆಯ ನಿರೀಕ್ಷೆಯಾಗಿದ್ದಾರೆ ಎಂಬುದೇ.


ನೀವು ನಿಮ್ಮ ನಂಬಿಕೆಯಲ್ಲಿ ಸ್ಥಿರವಾಗಿ ಮುಂದುವರೆದು ನೆಲೆಗೊಂಡು, ಸುವಾರ್ತೆಯ ನಿರೀಕ್ಷೆಯಿಂದ ತೊಲಗಿ ಹೋಗದಿರಿ. ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲಾದ ಈ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾದೆನು.


ನನ್ನ ಮಕ್ಕಳೇ, ಕ್ರಿಸ್ತ ಯೇಸುವು ನಿಮ್ಮಲ್ಲಿ ರೂಪುಗೊಳ್ಳುವ ತನಕ ನಾನು ನಿಮಗಾಗಿ ಪುನಃ ಪ್ರಸವವೇದನೆ ಪಡುತ್ತೇನೆ.


ದೇವರ ಆಲಯಕ್ಕೂ ವಿಗ್ರಹಗಳಿಗೂ ಏನು ಒಪ್ಪಂದ? ನಾವು ಜೀವಿಸುವ ದೇವರ ಆಲಯವಾಗಿದ್ದೇವೆ. ದೇವರು ಹೀಗೆ ಹೇಳಿದ್ದಾರೆ: “ನಾನು ಅವರೊಂದಿಗೆ ವಾಸಿಸುವೆನು, ಅವರ ಮಧ್ಯದಲ್ಲಿ ತಿರುಗಾಡುವೆನು. ನಾನು ಅವರಿಗೆ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು.”


ದೇವರಿಂದ ನಿಮಗೆ ದೊರಕಿ, ನಿಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮರ ಆಲಯವು ನಿಮ್ಮ ದೇಹವಾಗಿದೆ ಎಂಬುದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ.


ಕರ್ತದೇವರ ಜನರು ಲೋಕಕ್ಕೆ ತೀರ್ಪುಮಾಡುವರೆಂಬುದು ನಿಮಗೆ ತಿಳಿಯದೋ? ನೀವೇ ಲೋಕವನ್ನು ನ್ಯಾಯತೀರ್ಪು ಮಾಡಬೇಕಾಗಿರುವಲ್ಲಿ, ಅತ್ಯಲ್ಪ ಸಂಗತಿಗಳನ್ನು ಕುರಿತು ತೀರ್ಪುಮಾಡುವುದಕ್ಕೆ ನೀವು ಅಯೋಗ್ಯರಾಗಿದ್ದೀರೋ?


ಯಾರು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾರೋ ಅವರು ನನ್ನಲ್ಲಿ ನೆಲೆಸಿರುತ್ತಾರೆ. ನಾನು ಅವರಲ್ಲಿ ನೆಲೆಸಿರುತ್ತೇನೆ.


ಅವನನ್ನು ಪರೀಕ್ಷಿಸುವುದಕ್ಕಾಗಿ ಯೇಸು ಇದನ್ನು ಹೇಳಿದರು. ಏಕೆಂದರೆ ತಾನು ಮಾಡಲಿರುವುದು ಏನೆಂದು ಯೇಸುವಿಗೆ ತಿಳಿದಿತ್ತು.


ನೀವು ನಂಬಿಕೆಯಲ್ಲಿ ದೃಢವಾಗಿದ್ದು ಸೈತಾನನನ್ನು ಎದುರಿಸಿರಿ. ಲೋಕದಲ್ಲಿರುವ ನಿಮ್ಮ ಸಹೋದರರಿಗೂ ಸಹೋದರಿಯರಿಗೂ ಅಂಥಾ ಬಾಧೆಗಳೇ ಸಂಭವಿಸುತ್ತವೆ ಎಂದು ನಿಮಗೆ ತಿಳಿದದೆಯಲ್ಲಾ.


ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ, ನಿಷ್ಪ್ರಯೋಜಕವಾದದ್ದಾಗಿ ಶಾಪಕ್ಕೆ ಗುರಿಯಾಗಿ, ಕೊನೆಗದು ಬೆಂಕಿಗೆ ತುತ್ತಾಗುತ್ತದೆ.


ಏಕೆಂದರೆ ಅವನು ತಾನು ಮಾಡಿದ ದುಷ್ಕೃತ್ಯಗಳನ್ನು ಯೋಚಿಸಿ, ಅವುಗಳನ್ನು ಬಿಟ್ಟು ತಿರುಗಿಕೊಳ್ಳುವುದರಿಂದ ಸಾಯದೆ ನಿಶ್ಚಯವಾಗಿ ಬದುಕುವನು.


ನಿಮ್ಮ ದೇಹಗಳು ಕ್ರಿಸ್ತ ಯೇಸುವಿನ ಅಂಗಗಳಾಗಿವೆ ಎಂಬುದು ನಿಮಗೆ ತಿಳಿಯದೋ? ಹೀಗಿರಲಾಗಿ ನಾವು ಕ್ರಿಸ್ತ ಯೇಸುವಿನ ಅಂಗಗಳಾಗಿರುವಂಥವುಗಳನ್ನೇ ತೆಗೆದುಕೊಂಡು ವೇಶ್ಯೆಯ ಅಂಗಗಳನ್ನಾಗಿ ಮಾಡಬಹುದೇ? ಎಂದಿಗೂ ಬೇಡ.


ಇದಲ್ಲದೆ, ದೇವರನ್ನು ಒಪ್ಪಿಕೊಳ್ಳಲು ಅವರಿಗೆ ಇಷ್ಟವಿಲ್ಲದ್ದರಿಂದ ಅಲ್ಲದ ಕೃತ್ಯಗಳನ್ನು ನಡೆಸುವವರಾಗುವಂತೆ ದೇವರು ಅನಾಚಾರದ ಮನಸ್ಸಿಗೆ ಅವರನ್ನು ಒಪ್ಪಿಸಿದರು.


ಈ ಸಾಕ್ಷಿಯು ನಿಜವೇ. ಇದರ ದೆಸೆಯಿಂದ ಅವರು ನಂಬಿಕೆಯಲ್ಲಿ ಸ್ವಸ್ಥರಾಗಿರುವಂತೆ ಅವರನ್ನು ಕಠಿಣವಾಗಿ ಖಂಡಿಸು.


ಯನ್ನ, ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆಯೇ, ಈ ಸುಳ್ಳು ಬೋಧಕರು ಸಹ ಸತ್ಯವನ್ನು ವಿರೋಧಿಸುತ್ತಾರೆ. ಇದಲ್ಲದೆ ಇವರು ಬುದ್ಧಿಗೆಟ್ಟವರೂ ವಿಶ್ವಾಸದ ವಿಷಯದಲ್ಲಿ ಭ್ರಷ್ಠರೂ ಆಗಿ, ತಿರಸ್ಕಾರ ಹೊಂದಿರುತ್ತಾರೆ.


ಆದರೂ ಸ್ತ್ರೀಯರು ಸ್ವಸ್ಥಬುದ್ಧಿಯಿಂದ ನಂಬಿಕೆ, ಪ್ರೀತಿ ಹಾಗೂ ಪರಿಶುದ್ಧತೆಯಲ್ಲಿ ನೆಲೆಗೊಂಡಿದ್ದರೆ ಅವರು ಮಗುವನ್ನು ಹೆರುವುದರ ಮೂಲಕ ರಕ್ಷಣೆಹೊಂದುವರು.


ಇಂಥವರು ಶಿರಸ್ಸಾಗಿರುವ ಕ್ರಿಸ್ತ ಯೇಸುವಿನನೊಂದಿಗೆ ಸಂಬಂಧ ಕಳೆದುಕೊಂಡವರಾಗಿದ್ದಾರೆ. ಏಕೆಂದರೆ, ಕ್ರಿಸ್ತನಿಂದಲೇ ದೇಹವೆಲ್ಲಾ ಕೀಲು ನರಗಳ ಮೂಲಕ ಪೋಷಣೆ ಪಡೆದು ಒಂದಾಗಿ ಜೋಡಿಸಲಾಗಿ ದೇವರು ಬೆಳೆಸುವಂತೆ ಬೆಳೆಯುತ್ತದೆ.


ಹೊಲಸಾದ ಬೆಳ್ಳಿ ಎಂದು ಅವರಿಗೆ ಹೆಸರಾಗುವುದು; ಏಕೆಂದರೆ, ಯೆಹೋವ ದೇವರು ಅವರನ್ನು ತಳ್ಳಿದ್ದಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು