Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 13:7 - ಕನ್ನಡ ಸಮಕಾಲಿಕ ಅನುವಾದ

7 ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾವು ದೇವರನ್ನು ಪ್ರಾರ್ಥಿಸುತ್ತೇವೆ. ಇದರಲ್ಲಿ ನಾವೇ ಉತ್ತೀರ್ಣರಾದವರು ಎಂದು ಕಂಡುಬರಬೇಕೆಂಬುದು ನಮ್ಮ ಉದ್ದೇಶವಲ್ಲ. ನಾವು ಸೋತವರಾಗಿ ಕಂಡುಬಂದರೂ ನೀವು ಒಳ್ಳೆಯದನ್ನೇ ಮಾಡಬೇಕೆಂಬುದು ನಮ್ಮ ಪ್ರಾರ್ಥನೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾವು ದೇವರನ್ನು ಪ್ರಾರ್ಥಿಸುತ್ತೇವೆ. ಇದರಲ್ಲಿ ನಾವೇ ಆ ಪರೀಕ್ಷೆಗೆ ಒಳ್ಳಗಾದವರೆಂದು ತೋರಿ ಬರಬೇಕೆಂಬುದು ನಮ್ಮ ಉದ್ದೇಶವಲ್ಲ. ನಾವು ಆ ಪರೀಕ್ಷೆಗೆ ಒಳ್ಳಗಾದವರೆನಿಸಿಕೊಂಡರೂ ನೀವು ಒಳ್ಳೆಯದನ್ನು ಮಾಡುವವರಾಗಬೇಕೆಂಬುದೇ ನಮ್ಮ ಉದ್ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನೀವು ಯಾವ ಕೇಡನ್ನೂ ಮಾಡಬಾರದೆಂದು ದೇವರಲ್ಲಿ ನಾವು ಪ್ರಾರ್ಥಿಸುತ್ತೇವೆ. ಇದರಲ್ಲಿ ನಾವು ಮಾತ್ರ ಯೋಗ್ಯರೆಂದು ತೋರಿಸಿಕೊಳ್ಳುವ ಉದ್ದೇಶ ನಮಗಿಲ್ಲ. ನಾವು ಅಯೋಗ್ಯರೆನಿಸಿಕೊಂಡಿದ್ದರೂ ನೀವು ಒಳಿತನ್ನೇ ಮಾಡಬೇಕೆಂಬುದು ನಮ್ಮ ಉದ್ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾವು ದೇವರನ್ನು ಪ್ರಾರ್ಥಿಸುತ್ತೇವೆ; ಇದರಲ್ಲಿ ನಾವೇ ಯೋಗ್ಯರಾಗಿ ತೋರಿಬರಬೇಕೆಂಬದು ನಮ್ಮ ಉದ್ದೇಶವಲ್ಲ; ನಾವು ಅಯೋಗ್ಯರೆನಿಸಿಕೊಂಡರೂ ನೀವು ಒಳ್ಳೇದನ್ನು ಮಾಡುವವರಾಗಬೇಕೆಂಬದೇ ನಮ್ಮ ಉದ್ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀವು ಯಾವ ತಪ್ಪನ್ನೂ ಮಾಡದಿರಲಿ ಎಂಬುದಾಗಿ ನಾವು ದೇವರಲ್ಲಿ ಪ್ರಾರ್ಥಿಸುತ್ತೇವೆ. ನಮ್ಮನ್ನು ಅಯೋಗ್ಯರೆಂದು ಜನರು ಭಾವಿಸಿಕೊಂಡರೂ ನೀವು ಒಳ್ಳೆಯದನ್ನು ಮಾಡುವುದೇ ಮುಖ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತುಮಿ ಕಾಯ್ಬಿ ವಾಯ್ಟ್ ಕರಿನಸ್ಲ್ಯಾರ್ ಫಿರೆ ಮನುನ್ ಮಿಯಾ ದೆವಾಕ್ಡೆ ಮಾಗ್ತಾ. ಹೆಚ್ಯಾ ವೈನಾ ಅಮಿ ದಾಕ್ವುನ್ ದಿಲ್ಲಿ ವಾಟ್ ಯೆವ್ಡಿಚ್ ಸಮಾ ಮನುನ್ ದಾಕ್ವುಚೆ ಮನ್ತಲೊ ಮಾಜೊ ಉದ್ದೆಸ್ ನ್ಹಯ್, ಅಮಿ ಅದಿಕಾರಾಕ್ ಯೊಗ್ಯ್ ಮನ್ತಲೊ ತಿರ್ಮಾನ್ ಹೊಲ್ಯಾರ್ ಬಿ ಮೊಟೆ ನ್ಹಯ್, ಖರೆ ಕನ್ನಾಬಿ ಬರೆ ಕರುಚೆ ಮನ್ತಲಿಚ್ ಅಮ್ಚಿ ಗುರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 13:7
25 ತಿಳಿವುಗಳ ಹೋಲಿಕೆ  

ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತದೇವರು ತಮ್ಮನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದ ಜೀವದ ಕಿರೀಟವನ್ನು ಹೊಂದುವನು.


ನನ್ನನ್ನು ಪ್ರತಿಯೊಂದು ದುಷ್ಟದಾಳಿಯಿಂದ ಕರ್ತ ಯೇಸು ತಪ್ಪಿಸಿ, ತಮ್ಮ ಪರಲೋಕ ರಾಜ್ಯಕ್ಕೆ ನನ್ನನ್ನು ಸುರಕ್ಷಿತವಾಗಿ ತರುವರು. ಯುಗಯುಗಾಂತರಗಳಲ್ಲಿಯೂ ಅವರಿಗೆ ಮಹಿಮೆ. ಆಮೆನ್.


ನೀನು ನಾಚಿಕೆಗೆ ಒಳಪಡದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಬೋಧಿಸುವವನೂ ಆಗಿರುವಂತೆ ನಿನ್ನನ್ನು ದೇವರಿಗೆ ಮೆಚ್ಚಿಕೆಯಾದವನಾಗಿರಲು ಸಮರ್ಪಿಸಲು ಅತ್ಯಂತ ಆಸಕ್ತನಾಗಿರು.


ಹೀಗೆ ಮಾಡಿದರೆ ನಾವು ನೆಮ್ಮದಿ ಹಾಗೂ ಸಮಾಧಾನಗಳಿಂದ ಕೂಡಿದ ಜೀವನವನ್ನು ಪೂರ್ಣಭಕ್ತಿಯಿಂದಲೂ ಗೌರವದಿಂದಲೂ ನಡೆಸುವುದಕ್ಕಾಗುವುದು.


ಸಮಾಧಾನದ ದೇವರು ತಾವಾಗಿಯೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ. ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಪುನರಾಗಮನದಲ್ಲಿ ನಿಮ್ಮ ಆತ್ಮ, ಪ್ರಾಣ, ಶರೀರಗಳು ದೋಷವಿಲ್ಲದೆ ಸಂಪೂರ್ಣವಾಗಿ ಸುರಕ್ಷಿತವಾಗಿರಲಿ.


ಕಡೆಯದಾಗಿ ಪ್ರಿಯರೇ, ಯಾವುದು ಸತ್ಯವೂ ಯಾವುದು ಮಾನ್ಯವೂ ಯಾವುದು ನ್ಯಾಯವೂ ಯಾವುದು ಶುದ್ಧವೂ ಯಾವುದು ಪ್ರೀತಿಕರವೂ ಯಾವುದು ಮನೋಹರವೂ ಯಾವುದು ಉತ್ತಮವಾದದ್ದೋ ಯಾವುದು ಕೀರ್ತಿಗೆ ಯೋಗ್ಯವೋ ಅವೆಲ್ಲವುಗಳನ್ನೇ ಆಲೋಚಿಸಿರಿ.


ನಿಮ್ಮ ನಡವಳಿಕೆಯು ಯೆಹೂದ್ಯರಲ್ಲದವರ ನಡುವೆ ಯೋಗ್ಯವಾಗಿರಲಿ, ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ, ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಕರ್ತ ಯೇಸು ನಮ್ಮನ್ನು ದರ್ಶಿಸುವ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು.


ನಾವು ಬಲಹೀನರಾಗಿದ್ದರೂ, ನೀವು ಬಲಿಷ್ಠರಾಗಿದ್ದಿರೆಂದು ತಿಳಿದು ಆನಂದಪಡುತ್ತೇವೆ. ನೀವು ಪರಿಪೂರ್ಣರಾಗಬೇಕೆಂದೇ ನಾವು ಪ್ರಾರ್ಥಿಸುತ್ತೇವೆ.


ತನ್ನನ್ನು ತಾನೇ ಹೊಗಳಿಕೊಳ್ಳುವವನಲ್ಲ, ಕರ್ತ ಯೇಸು ಯಾರನ್ನು ಹೊಗಳುತ್ತಾರೋ ಅವನೇ ಯೋಗ್ಯನು.


“ಅವನ ಪತ್ರಗಳು ತೀಕ್ಷ್ಣವಾಗಿಯೂ ಶಕ್ತಿಯುತವಾಗಿಯೂ ಇವೆ. ಆದರೆ ಅವನು ಎದುರು ಬಂದಾಗ ನಿರ್ಬಲನೂ ಕೆಲಸಕ್ಕೆ ಬಾರದ ಮಾತುಗಳನ್ನಾಡುವವನೂ ಆಗಿದ್ದಾನೆ,” ಎಂದು ಕೆಲವರು ಹೇಳುತ್ತಾರೆ.


ಏಕೆಂದರೆ, ಕರ್ತ ಯೇಸುವಿನ ದೃಷ್ಟಿಯಲ್ಲಿ ಮಾತ್ರ ಅಲ್ಲ, ಜನರ ದೃಷ್ಟಿಯಲ್ಲಿಯೂ ಯೋಗ್ಯವಾದದ್ದನ್ನು ಮಾಡಬೇಕೆಂಬುದು ನಮ್ಮ ಪ್ರಯಾಸವಾಗಿದೆ.


ಅದಕ್ಕೆ ಬದಲಾಗಿ, ಸರ್ವ ವಿಷಯಗಳಲ್ಲಿ ನಾವು ದೇವರ ಸೇವಕರಾಗಿದ್ದೇವೆಂದು ತೋರಿಸುತ್ತೇವೆ. ಕಷ್ಟ, ಸಂಕಟ ತೊಂದರೆಗಳಲ್ಲಿ ಮಹಾ ದೀರ್ಘತಾಳ್ಮೆಯನ್ನು ತೋರಿಸುತ್ತೇವೆ.


ದೇವರ ಮೆಚ್ಚುಗೆ ನಿಮ್ಮಲ್ಲಿ ಯಾರ ಮೇಲೆ ಇದೆ ಎಂಬುದು ಕಂಡುಬರುವಂತೆ ಭಿನ್ನಾಭಿಪ್ರಾಯಗಳು ಇರುವುದು ಅವಶ್ಯವೇ.


ಕ್ರಿಸ್ತನಲ್ಲಿ ಪರಿಶೋಧಿತನಾದ ಅಪೆಲ್ಲನಿಗೆ ವಂದನೆಗಳು, ಅರಿಸ್ತೊಬೂಲನ ಮನೆಯವರಿಗೆ ವಂದನೆಗಳು.


ಪಕ್ಷತನ ಕುಡಿಕತನಗಳಲ್ಲಾಗಲಿ, ಕಾಮವಿಲಾಸ ನಿರ್ಲಜ್ಯ ಕೃತ್ಯಗಳಲ್ಲಾಗಲಿ, ಮತ್ಸರಗಳಲ್ಲಾಗಲಿ ನಿರತರಾಗಿರದೆ ಹಗಲಿನಲ್ಲಿರುವವರಂತೆ ಸಭ್ಯತೆಯಿಂದ ನಡೆದುಕೊಳ್ಳೋಣ.


ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿಯೂ ಒಳ್ಳೆಯದನ್ನು ಮಾಡಿರಿ.


ನೀವು ಇವರನ್ನು ಲೋಕದಿಂದ ತೆಗೆಯಬೇಕೆಂದು ಬೇಡಿಕೊಳ್ಳದೆ ಇವರನ್ನು ಕೆಡುಕನಿಂದ ಕಾಪಾಡಬೇಕೆಂದು ನಾನು ಬೇಡಿಕೊಳ್ಳುತ್ತೇನೆ.


ನಮ್ಮನ್ನು ಶೋಧನೆಗೆ ಸೇರಿಸದೆ, ಕೇಡಿನಿಂದ ತಪ್ಪಿಸಿರಿ. ಏಕೆಂದರೆ ರಾಜ್ಯವೂ ಬಲವೂ ಮಹಿಮೆಯೂ ಸದಾಕಾಲ ನಿಮ್ಮದೇ. ಆಮೆನ್.’


ಆದರೆ ಯಾಬೇಚನು ಇಸ್ರಾಯೇಲಿನ ದೇವರಿಗೆ, “ನೀವು ನನ್ನನ್ನು ನಿಜವಾಗಿ ಆಶೀರ್ವದಿಸಬೇಕು; ನನ್ನ ಮೇರೆಯನ್ನು ವಿಸ್ತರಿಸಬೇಕು; ನಿಮ್ಮ ಹಸ್ತವು ನನ್ನ ಸಂಗಡ ಇರಲಿ; ನನ್ನನ್ನು ವ್ಯಥೆಪಡಿಸದ ಹಾಗೆ ನನ್ನನ್ನು ಕೇಡಿನಿಂದ ತಪ್ಪಿಸಿರಿ,” ಎಂದು ಮೊರೆಯಿಟ್ಟನು. ದೇವರು ಅವನು ಬೇಡಿಕೊಂಡದ್ದನ್ನು ಅನುಗ್ರಹಿಸಿದರು.


ಇದಲ್ಲದೆ, ದೇವರನ್ನು ಒಪ್ಪಿಕೊಳ್ಳಲು ಅವರಿಗೆ ಇಷ್ಟವಿಲ್ಲದ್ದರಿಂದ ಅಲ್ಲದ ಕೃತ್ಯಗಳನ್ನು ನಡೆಸುವವರಾಗುವಂತೆ ದೇವರು ಅನಾಚಾರದ ಮನಸ್ಸಿಗೆ ಅವರನ್ನು ಒಪ್ಪಿಸಿದರು.


ನಾವಂತೂ ಉತ್ತೀರ್ಣರಾದವರೆಂದು ನಿಮಗೆ ಗೊತ್ತಾಗುವುದೆಂದು ನಾನು ನಿರೀಕ್ಷಿಸುತ್ತೇನೆ.


ಸತ್ಯಕ್ಕೆ ವಿರುದ್ಧವಾಗಿ ನಾವೇನೂ ಮಾಡಲಾರೆವು. ಸತ್ಯದ ಪರವಾಗಿಯೇ ಎಲ್ಲವನ್ನೂ ಮಾಡುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು