Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 2:13 - ಕನ್ನಡ ಸಮಕಾಲಿಕ ಅನುವಾದ

13 ನನ್ನ ಸಹೋದರನಾದ ತೀತನು ನನಗೆ ಅಲ್ಲಿ ಸಿಗದಿದ್ದ ಕಾರಣ, ನನ್ನ ಆತ್ಮಕ್ಕೆ ಇನ್ನೂ ವಿಶ್ರಾಂತಿಯಿರಲಿಲ್ಲ. ಆದ್ದರಿಂದ ತ್ರೋವದವರಿಗೆ ನಾನು ನನ್ನ ವಂದನೆಗಳನ್ನರ್ಪಿಸಿ ಮಕೆದೋನ್ಯ ಪ್ರಾಂತಕ್ಕೆ ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದರೂ ನನ್ನ ಸಹೋದರ ತೀತನು ನನಗೆ ಅಲ್ಲಿ ಸಿಕ್ಕಲಿಲ್ಲವಾದ ಕಾರಣ ನನ್ನ ಮನಸ್ಸಿಗೆ ಸಮಾಧಾನವಿಲ್ಲದೆ ಅಲ್ಲಿದ್ದವರಿಗೆ ವಂದಿಸಿ ಅಲ್ಲಿಂದ ಹೊರಟು ಮಕೆದೋನ್ಯಕ್ಕೆ ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆದರೆ ನನ್ನ ಸಹೋದರ ತೀತನನ್ನು ಅಲ್ಲಿ ಕಾಣದೆಹೋದುದರಿಂದ ನನ್ನ ಮನಸ್ಸಿಗೆ ನೆಮ್ಮದಿ ಇಲ್ಲವಾಯಿತು. ಕೂಡಲೇ ಅಲ್ಲಿಯ ಜನರಿಂದ ಬೀಳ್ಕೊಂಡು ಮಕೆದೋನಿಯಕ್ಕೆ ಹೊರಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದರೂ ನನ್ನ ಸಹೋದರನಾದ ತೀತನು ನನಗೆ ಸಿಕ್ಕಲಿಲ್ಲವಾದ ಕಾರಣ ನನ್ನ ಆತ್ಮಕ್ಕೆ ಉಪಶಮನವಿಲ್ಲದೆ ಅಲ್ಲಿದ್ದವರಿಂದ ಕಳುಹಿಸಿಕೊಂಡವನಾಗಿ ಹೊರಟು ಮಕೆದೋನ್ಯಕ್ಕೆ ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೆ ನನ್ನ ಸಹೋದರನಾದ ತೀತನನ್ನು ನಾನು ಅಲ್ಲಿ ಕಾಣಲಿಲ್ಲವಾದ್ದರಿಂದ ನನಗೆ ಸಮಾಧಾನವಿರಲಿಲ್ಲ. ಆದ್ದರಿಂದ ನಾನು ಅವರನ್ನು ವಂದಿಸಿ ಮಕೆದೋನಿಯಕ್ಕೆ ಹೊರಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಖರೆ ಮಾಜೊ ವಾಂಗ್ಡಿ ಭಾವ್ ತಿತ್ ಮಾಕಾ ಥೈ ಗಾವುಕ್ನಾ ಮನುನ್ ಮಾಜ್ಯಾ ಮನಾಕ್ ಬೆಜಾರ್ ಹೊಲೊ. ತಸೆ ಮನುನ್ ಥೈ ಲೊಕಾಕ್ನಿ ಜಾವ್ನ್ ಯೆತಾ ಮನುನ್ ಸಾಂಗುನ್ ಮಿಯಾ ಮೆಸಿದೊನಿಯಾಕ್ ಜಾವುಕ್ ಲಾಗ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 2:13
16 ತಿಳಿವುಗಳ ಹೋಲಿಕೆ  

ನಿಮ್ಮ ಬಳಿಗೆ ಹೋಗುವುದಕ್ಕೆ ನಾನು ತೀತನನ್ನು ಒತ್ತಾಯಪಡಿಸಿ, ಅವನ ಜೊತೆಯಲ್ಲಿ ಆ ಸಹೋದರನನ್ನು ಕಳುಹಿಸಿಕೊಟ್ಟೆನು. ತೀತನು ನಿಮ್ಮನ್ನು ವಂಚಿಸಿ ಏನಾದರೂ ತೆಗೆದುಕೊಂಡನೋ? ನಾವಿಬ್ಬರೂ ಒಂದೇ ಆತ್ಮದಲ್ಲಿ ನಡೆದು ಒಂದೇ ಹೆಜ್ಜೆ ಜಾಡಿನಲ್ಲಿ ನಡೆಯಲಿಲ್ಲವೋ?


ನಮ್ಮಲ್ಲಿ ಹುದುವಾಗಿರುವ ವಿಶ್ವಾಸಕ್ಕೆ ಅನುಸಾರವಾಗಿ ನನ್ನ ನಿಜಕುಮಾರನಾದ ತೀತನಿಗೆ ಬರೆಯುವುದು: ತಂದೆಯಾದ ದೇವರಿಂದಲೂ ನಮಗೆ ರಕ್ಷಕ ಹಾಗೂ ಕರ್ತ ಆಗಿರುವ ಕ್ರಿಸ್ತ ಯೇಸುವಿನಿಂದಲೂ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.


ಏಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ, ತೀತನು ದಲ್ಮಾತ್ಯಕ್ಕೂ ಹೋದನು.


ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಅವನನ್ನು ಬಲಾತ್ಕಾರ ಮಾಡಲಿಲ್ಲ.


ಹದಿನಾಲ್ಕು ವರ್ಷಗಳಾದ ಮೇಲೆ ನಾನು ತೀತನನ್ನು ಕರೆದುಕೊಂಡು ಬಾರ್ನಬನ ಜೊತೆಯಲ್ಲಿ ಪುನಃ ಯೆರೂಸಲೇಮಿಗೆ ಹೋದೆನು.


ತೀತನು ನನ್ನ ಸಹೋದ್ಯೋಗಿ ಮತ್ತು ನಿಮ್ಮ ನಡುವೆಯಿರುವ ನನ್ನ ಸಹಕಾರಿಯಾಗಿರುತ್ತಾನೆ. ಇವನ ಸಂಗಡ ಬರುತ್ತಿರುವ ನಮ್ಮ ಸಹೋದರರು ಸಭೆಗಳ ಪ್ರತಿನಿಧಿಗಳಾಗಿದ್ದಾರೆ ಮತ್ತು ಕ್ರಿಸ್ತ ಯೇಸುವಿನ ಮಹಿಮೆಗೆ ಕಾರಣಸ್ಥರೂ ಆಗಿದ್ದಾರೆ.


ನಿಮ್ಮ ವಿಷಯವಾಗಿ ನನಗಿರುವ ಹಿತಚಿಂತನೆಯನ್ನು ತೀತನ ಹೃದಯದಲ್ಲಿಯೂ ಹುಟ್ಟಿಸಿದ್ದಕ್ಕಾಗಿ ದೇವರಿಗೆ ಕೃತಜ್ಞತೆ ಸಲ್ಲಿಸುತ್ತೇವೆ.


ಹೀಗಿರಲಾಗಿ, ತೀತನು ಪ್ರಾರಂಭಿಸಿದ ಈ ದಾನ ಕಾರ್ಯವನ್ನು ನಿಮ್ಮಲ್ಲಿ ಸಹ ಪೂರ್ಣಗೊಳಿಸಬೇಕೆಂದು ನಾವು ಅವನನ್ನು ಬಹಳವಾಗಿ ಕೇಳಿಕೊಂಡೆವು.


ಆದಕಾರಣ ಇವೆಲ್ಲವುಗಳಿಂದ ನಮಗೆ ಉತ್ತೇಜನವಾಯಿತು. ನಮಗೆ ಉತ್ತೇಜನವಾಗಿದ್ದು ಅಲ್ಲದೆ, ನಿಮ್ಮೆಲ್ಲರಿಂದ ತೀತನ ಆತ್ಮಕ್ಕೆ ಉಪಶಮನವಾದ ಕಾರಣ, ನಾವು ಅವನ ಸಂತೋಷಕ್ಕಾಗಿ ಇನ್ನಷ್ಟು ಆನಂದಿಸಿದೆವು.


ಯೇಸು ಜನಸಮೂಹವನ್ನು ಕಳುಹಿಸಿದ ಮೇಲೆ ಪ್ರಾರ್ಥನೆಮಾಡಲು ಬೆಟ್ಟಕ್ಕೆ ಹೋದರು.


ಮಕೆದೋನ್ಯ ಮತ್ತು ಅಖಾಯದವರು ಯೆರೂಸಲೇಮಿನ ಭಕ್ತರಲ್ಲಿರುವ ಬಡವರಾಗಿರುವವರಿಗೆ ಸಹಾಯ ಮಾಡುವುದು ಒಳ್ಳೆಯದೆಂದು ಭಾವಿಸಿದ್ದಾರೆ.


ನಿಮ್ಮ ವಿಷಯವಾಗಿ ನಾನು ತೀತನ ಮುಂದೆ ಹೊಗಳಿದ್ದಕ್ಕೆ ನಾನು ಬೇಸರಪಡಬೇಕಾಗಿರಲಿಲ್ಲ. ನಾನು ನಿಮಗೆ ಹೇಳಿದ್ದೆಲ್ಲವೂ ಹೇಗೆ ಸತ್ಯವಾಗಿತ್ತೋ, ಹಾಗೆಯೇ ನಿಮ್ಮ ಬಗ್ಗೆ ನಾವು ತೀತನ ಬಗ್ಗೆ ಹೊಗಳಿದ್ದೆಲ್ಲವೂ ಸತ್ಯವಾದವು.


ಮುಂಜಾನೆಗೆ ಮೊದಲೇ ಅರಸನು ಎದ್ದು, ತ್ವರೆಯಾಗಿ ಸಿಂಹಗಳ ಗವಿಯ ಬಳಿಗೆ ಹೋದನು.


ಪರಸ್ಪರ ಬೀಳ್ಕೊಡುಗೆಯಾದ ನಂತರ, ನಾವು ನೌಕೆಯನ್ನೇರಿದೆವು. ಅವರು ತಮ್ಮ ಮನೆಗೆ ಹೊರಟು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು