Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 2:7 - ಕನ್ನಡ ಸಮಕಾಲಿಕ ಅನುವಾದ

7 ಈಗ ಅವನನ್ನು ನೀವು ಕ್ಷಮಿಸಿ ಸಂತೈಸಿರಿ. ಇಲ್ಲವಾದರೆ, ಅವನು ದುಃಖದಲ್ಲಿ ಮುಳುಗಿ ಹೋದಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇನ್ನೂ ಅವನನ್ನು ಶಿಕ್ಷಿಸದೇ ಮನ್ನಿಸಿರಿ, ಸಂತೈಸಿರಿ. ಇಲ್ಲವಾದರೆ ಅವನು ಅಧಿಕವಾದ ದುಃಖದಲ್ಲಿ ಮುಳುಗಿ ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಈಗ ನೀವು ಅವನನ್ನು ಕ್ಷಮಿಸಿ ಸಂತೈಸಿರಿ. ಇಲ್ಲವಾದರೆ ಅವನು ಅತೀವ ದುಃಖದಲ್ಲಿಯೇ ಮುಳುಗಿಹೋದಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇನ್ನೂ ಅವನನ್ನು ಶಿಕ್ಷಿಸದೆ ಮನ್ನಿಸಿರಿ, ಸಂತೈಸಿರಿ; ಇಲ್ಲವಾದರೆ ಅವನು ಅಧಿಕವಾದ ದುಃಖದಲ್ಲಿ ಮುಳುಗಿಹೋದಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ಈಗ ನೀವು ಅವನನ್ನು ಕ್ಷಮಿಸಬೇಕು ಮತ್ತು ಸಂತೈಸಬೇಕು. ಆಗ ಅವನು ಅತೀವ ದುಃಖದಿಂದ ಸಂಪೂರ್ಣವಾಗಿ ಸೋತುಹೋಗಲು ಸಾಧ್ಯವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಅತ್ತಾ ತುಮಿ ತೆಕಾ ಮಾಪ್ ಕರುನ್ ಅನಿ ತೆಕಾ ಧೈರೊ ದಿವ್ಕ್ ಪಾಜೆ, ನಾ ಹೊಲ್ಯಾರ್ ಲೈ ಬೆಜಾರಾತ್ ಪಡುನ್ ತೊ ದುಕ್ಕಾತ್ ರ್‍ಹಾಯ್ಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 2:7
20 ತಿಳಿವುಗಳ ಹೋಲಿಕೆ  

ನೀವು ದಯೆಯುಳ್ಳವರೂ ಮೃದು ಹೃದಯುಳ್ಳವರೂ ಆಗಿದ್ದು, ದೇವರು ಕ್ರಿಸ್ತನಲ್ಲಿ ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಸಹ ಒಬ್ಬರೊನ್ನಬ್ಬರನ್ನು ಕ್ಷಮಿಸಿರಿ.


ಯಾವನಿಗಾದರೂ ಇನ್ನೊಬ್ಬನ ಮೇಲೆ ದೂರು ಇದ್ದರೂ, ಒಬ್ಬರನ್ನೊಬ್ಬರು ಸಹಿಸಿಕೊಂಡು ಕ್ಷಮಿಸಿರಿ. ಕರ್ತ ಯೇಸುವು ನಿಮ್ಮನ್ನು ಕ್ಷಮಿಸಿದಂತೆಯೇ, ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.


ಇವರು ಸಹ ದ್ರಾಕ್ಷಾರಸದಿಂದ ಮತ್ತರಾಗಿದ್ದಾರೆ. ಮದ್ಯದಿಂದಲೂ ಓಲಾಡುತ್ತಿದ್ದಾರೆ. ಯಾಜಕನೂ ಪ್ರವಾದಿಯೂ ಮದ್ಯದಿಂದ ಮತ್ತರಾಗಿದ್ದಾರೆ. ದ್ರಾಕ್ಷಾರಸದಿಂದ ತೂರಾಡುತ್ತಿದ್ದಾರೆ. ಮದ್ಯದಿಂದ ಓಲಾಡುತ್ತಿದ್ದಾರೆ. ದರ್ಶನವಾಗುತ್ತಿರುವಾಗಲೂ ಅವರು ತಪ್ಪುತ್ತಾರೆ. ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ.


ಹರ್ಷಹೃದಯವು ಒಳ್ಳೆಯ ಔಷಧ; ಆದರೆ ಕುಗ್ಗಿದ ಮನಸ್ಸು ಎಲುಬುಗಳನ್ನು ಒಣಗಿಸುತ್ತದೆ.


ಪ್ರಿಯರೇ, ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುವುದೇನೆಂದರೆ, ನಮ್ಮಿಂದ ಸ್ವೀಕರಿಸಿದ ಬೋಧನೆಯನ್ನು ಅನುಸರಿಸದೆ, ಸೋಮಾರಿಯಾಗಿ ಅಶಿಸ್ತಿನಿಂದ ನಡೆಯುವ ಪ್ರತಿ ವಿಶ್ವಾಸಿಗೆ ನೀವು ದೂರವಾಗಿರಬೇಕು.


ಪ್ರಿಯರೇ, ನೀವು ನಿರೀಕ್ಷೆಯಿಲ್ಲದೆ ಗೋಳಾಡುವವರಂತೆ ಮರಣ ಹೊಂದಿದ ವಿಶ್ವಾಸಿಗಳ ಬಗ್ಗೆ ಅಜ್ಞಾನಿಗಳಾಗಿರಬಾರದೆಂದು ನಾವು ಅಪೇಕ್ಷಿಸುತ್ತೇವೆ.


ಅವನು ಅಸ್ವಸ್ಥನಾಗಿ ಸಾಯುವ ಹಾಗೆ ಇದ್ದದ್ದು ನಿಜವೇ. ಆದರೆ ದೇವರು ಅವನನ್ನು ಕರುಣಿಸಿದರು. ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖ ಬಾರದಂತೆ ನನ್ನನ್ನು ಕರುಣಿಸಿದರು.


ದೈವಿಕ ದುಃಖವು ಪಶ್ಚಾತ್ತಾಪವನ್ನು ತಂದು ರಕ್ಷಣೆಗೆ ನಡೆಸುತ್ತದೆ. ಆ ಪಶ್ಚಾತ್ತಾಪದಲ್ಲಿ ವಿಷಾಧವಿರುವುದಿಲ್ಲ. ಆದರೆ ಪ್ರಾಪಂಚಿಕ ದುಃಖವು ಮರಣಕ್ಕೆ ನಡೆಸುತ್ತದೆ.


ನಾವು ಈ ದೇಹವೆಂಬ ಗುಡಾರದಲ್ಲಿರುವ ತನಕ ನರಳುತ್ತೇವೆ, ಭಾರದಿಂದ ಬಳಲುತ್ತೇವೆ. ಈ ಗುಡಾರವೆಂಬ ಹಳೆಯ ಶರೀರವು ನಮ್ಮಿಂದ ಕಳಚಿ ಹೋಗಬೇಕೆಂಬುದು ನಮ್ಮ ಇಷ್ಟವಲ್ಲ. ಆದರೆ ಪರಲೋಕದ ನಿವಾಸವೆಂಬ ನೂತನ ಶರೀರವನ್ನು ನಾವು ಧರಿಸಿಕೊಳ್ಳಲು ಬಯಸುತ್ತೇವೆ. ಏಕೆಂದರೆ ನಶ್ವರವಾದ ಈ ನಮ್ಮ ದೇಹವು ಅಮರತ್ವವನ್ನು ಧರಿಸಿಕೊಳ್ಳಬೇಕು.


ನಶಿಸಿಹೋಗುವಂಥದ್ದು ನಶಿಸಿಹೋಗದಂಥದ್ದನ್ನೂ, ಮರಣಾಧೀನವಾದ ಈ ದೇಹವು ಅಮರತ್ವವನ್ನೂ ಧರಿಸಿಕೊಳ್ಳುವಾಗ, ಬರೆದಿರುವ ಈ ಮಾತುಗಳು ನೆರವೇರುವುದು: “ಮರಣವು ನುಂಗಿಯೇ ಹೋಯಿತು, ಜಯವಾಯಿತು.”


ಸಮಾಧಿಯು ನುಂಗುವಂತೆ ಜೀವಂತವಾಗಿ ಅವರನ್ನು ದಾಳಿಮಾಡೋಣ ಗುಂಡಿಯೊಳಕ್ಕೆ ಹೋಗುವವರನ್ನು ಸಂಪೂರ್ಣವಾಗಿ ನಾವು ಅವರನ್ನು ನುಂಗಿಬಿಡೋಣ.


ಅವರು ನಮ್ಮ ಮೇಲೆ ರೋಷಗೊಂಡು ನಮ್ಮನ್ನು ನಾಶಮಾಡಿಬಿಡುತ್ತಿದ್ದರು.


ನೀವು ಬರುವ ಕಾಲದಲ್ಲಿ ಅವರನ್ನು ಅಗ್ನಿಕುಂಡದಂತೆ ದಹಿಸಿಬಿಡುವಿರಿ. ಯೆಹೋವ ದೇವರು ತಮ್ಮ ಬೇಸರದಿಂದ ಅವರನ್ನು ದಂಡಿಸಿಬಿಡುವರು; ಬೆಂಕಿಯು ಅವರನ್ನು ಭಸ್ಮ ಮಾಡುವುದು.


ದೇವರು ಪರಲೋಕದಿಂದ ಸಹಾಯ ಕಳುಹಿಸಿ, ನನ್ನನ್ನು ನಿಂದಿಸುವವರನ್ನು ದಂಡಿಸಿ, ನನ್ನನ್ನು ರಕ್ಷಿಸುವರು. ದೇವರು ತಮ್ಮ ಒಡಂಬಡಿಕೆಯ ಪ್ರೀತಿಯನ್ನೂ ತಮ್ಮ ಸತ್ಯವನ್ನೂ ಕಳುಹಿಸುವರು.


ಅದಕ್ಕಾಗಿ ನೀವು ನಿಮ್ಮ ಪ್ರೀತಿಯನ್ನು ಮೊದಲು ಇದ್ದಂತೆ ಈಗಲೂ ಅವನ ಮೇಲೆ ತೋರಿಸಿರಿ ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು