Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 2:9 - ಕನ್ನಡ ಸಮಕಾಲಿಕ ಅನುವಾದ

9 ಎಲ್ಲಾ ವಿಷಯಗಳಲ್ಲಿ ನೀವು ವಿಧೇಯರಾಗುತ್ತೀರೋ ಏನೋ ಎಂದು ಪರೀಕ್ಷಿಸಿ ಅರಿತುಕೊಳ್ಳಬೇಕೆಂಬ ಕಾರಣಕ್ಕಾಗಿ ನಾನು ನಿಮಗೆ ಹಾಗೆ ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಎಲ್ಲಾ ವಿಷಯದಲ್ಲೂ ನೀವು ವಿಧೇಯರಾಗಿದ್ದೀರೋ ಎಂದು ನಿಮ್ಮ ಗುಣವನ್ನು ಪರೀಕ್ಷಿಸಿ ತಿಳಿದುಕೊಳ್ಳಬೇಕೆಂಬುವ ಉದ್ದೇಶದಿಂದಲೇ ಹೀಗೆ ಬರೆದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನೀವು ಎಲ್ಲ ವಿಷಯಗಳಲ್ಲೂ ನನಗೆ ವಿಧೇಯರಾಗಿದ್ದೀರೋ ಇಲ್ಲವೋ ಎಂದು ಪರೀಕ್ಷಿಸಲು ನಾನು ಬರೆದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಸರ್ವವಿಷಯದಲ್ಲಿಯೂ ನೀವು ವಿಧೇಯರಾಗಿದ್ದೀರೋ ಏನೋ ನಿಮ್ಮ ಗುಣವನ್ನು ಪರೀಕ್ಷಿಸಿ ತಿಳುಕೊಳ್ಳಬೇಕೆಂಬುವ ಉದ್ದೇಶದಿಂದಲೇ ಮೊದಲು ಬರೆದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನೀವು ಎಲ್ಲಾ ವಿಷಯಗಳಲ್ಲಿ ವಿಧೇಯರಾಗಿದ್ದೀರೋ ಇಲ್ಲವೋ ಎಂಬುದನ್ನು ಪರೀಕ್ಷಿಸಿ ತಿಳಿದುಕೊಳ್ಳಲು ನಿಮಗೆ ಬರೆದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಮಿಯಾ ದಿಲ್ಲ್ಯಾ ಸಗ್ಳ್ಯಾ ಸಂಗ್ತಿಯಾ ತುಮಿ ಖಾಲ್ತಿ ಹೊವ್ನ್ ಪಾಳ್ತ್ಯಾಶಿ ಕಾಯ್ ನಾ ಮನುನ್ ತುಮ್ಚಿ ಪರಿಕ್ಷಾ ಕರುಕ್ ಮನುನ್ ಮಿಯಾ ತುಮ್ಕಾ ತಿ ಚಿಟ್ ಲಿವಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 2:9
15 ತಿಳಿವುಗಳ ಹೋಲಿಕೆ  

ನಿಮ್ಮ ವಿಧೇಯತ್ವವು ಪರಿಪೂರ್ಣವಾದಾಗ, ನಾವು ಪ್ರತಿಯೊಂದು ಅವಿಧೇಯತ್ವವನ್ನೂ ಶಿಕ್ಷಿಸಲು ಸಿದ್ಧರಾಗಿದ್ದೇವೆ.


ನಿನ್ನ ವಿಧೇಯತೆಯಲ್ಲಿ ಭರವಸೆಯುಳ್ಳವನಾಗಿ ನಾನು ನಿನಗೆ ಬರೆದಿದ್ದೇನೆ. ನಾನು ಹೇಳಿದ್ದಕ್ಕಿಂತಲೂ ಹೆಚ್ಚಾಗಿಯೇ ನೀನು ಮಾಡುವೆಯೆಂದು ನನಗೆ ಗೊತ್ತಿದೆ.


ಆದರೆ ತಿಮೊಥೆಯನ ಗುಣಸ್ವಭಾವವನ್ನು ನೀವು ಬಲ್ಲಿರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ಸುವಾರ್ತೆಯಲ್ಲಿ ನನ್ನೊಂದಿಗೆ ಶ್ರಮಿಸಿದ್ದಾನೆ.


ಈ ಪತ್ರದ ಮೂಲಕ ಹೇಳಿರುವ ನಮ್ಮ ಮಾತಿಗೆ ಯಾರಾದರೂ ವಿಧೇಯರಾಗದಿದ್ದರೆ ಅಂಥವರನ್ನು ಗುರುತಿಸಿ ಅವರಿಗೆ ನಾಚಿಕೆಯಾಗುವಂತೆ ಅವರ ಸಹವಾಸದಲ್ಲಿ ಸೇರಬೇಡಿರಿ.


ಹೀಗಿರುವಲ್ಲಿ ನನ್ನ ಪ್ರಿಯ ಸ್ನೇಹಿತರೇ, ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರುವಾಗಲೂ ನೀವು ಯಾವಾಗಲೂ ನನಗೆ ವಿಧೇಯರಾದಂತೆ ಈಗಲೂ ವಿಧೇಯರಾಗಿ, ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ರಕ್ಷಣೆಯನ್ನು ಕಾರ್ಯರೂಪಕ್ಕೆ ತನ್ನಿರಿ.


ಆದ್ದರಿಂದ, ಇವರೊಂದಿಗೆ ನಿಮಗಿರುವ ಪ್ರೀತಿಯನ್ನೂ ನಿಮ್ಮ ಬಗ್ಗೆಯಿರುವ ನಮ್ಮ ಹೊಗಳಿಕೆಯನ್ನೂ ಸಭೆಗಳವರ ಮುಂದೆ ರುಜುಪಡಿಸಿ ತೋರಿಸಿರಿ.


ಅವನು ಹೇಳಿದಂತೆಯೇ ಅದು ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನೀವು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸುತ್ತೀರೋ ಇಲ್ಲವೋ ಎಂಬುದನ್ನು ಕಂಡುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾರೆ.


ನಿಮ್ಮನ್ನು ದೀನತ್ವಕೆ ಒಳಪಡಿಸಿ, ಪರೀಕ್ಷಿಸಿದ ನಂತರ, ಕಡೆಯಲ್ಲಿ ನಿಮಗೆ ಒಳ್ಳೆಯದನ್ನು ಮಾಡುವಂತೆ ನಿಮ್ಮ ಪಿತೃಗಳು ಅರಿಯದ ಮನ್ನವನ್ನು ಮರುಭೂಮಿಯಲ್ಲಿ ನಿಮಗೆ ಪೋಷಿಸಿದರು.


ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಈ ನಲವತ್ತು ವರ್ಷ ಮರುಭೂಮಿಯಲ್ಲಿ ತಗ್ಗಿಸಿ, ನೀವು ದೇವರ ಆಜ್ಞೆಗಳನ್ನು ಕಾಪಾಡುವಿರೋ ಇಲ್ಲವೋ ಎಂದು ನಿಮ್ಮ ಹೃದಯವನ್ನು ಪರೀಕ್ಷಿಸುವುದಕ್ಕೆ ನಿಮ್ಮನ್ನು ನಡೆಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಿರಿ.


ಆಗ ಯೆಹೋವ ದೇವರು ಮೋಶೆಗೆ, “ನಾನು ರೊಟ್ಟಿಯನ್ನು ನಿಮಗಾಗಿ ಆಕಾಶದಿಂದ ಸುರಿಸುತ್ತೇನೆ. ಜನರು ಹೊರಗೆ ಹೋಗಿ ಪ್ರತಿದಿನ ಆ ದಿನಕ್ಕೆ ಬೇಕಾದದ್ದನ್ನು ಕೂಡಿಸಲಿ. ಇದರಿಂದ ಅವರು ನನ್ನ ಆಜ್ಞೆಗಳನ್ನು ಕೈಗೊಳ್ಳುವರೋ, ಇಲ್ಲವೋ ಎಂಬುದನ್ನು ಪರೀಕ್ಷಿಸುತ್ತೇನೆ.


ನಾನು ಬಂದಾಗ ನನ್ನನ್ನು ಆನಂದಪಡಿಸತಕ್ಕವರಿಂದಲೇ ದುಃಖ ಹೊಂದಬಾರದೆಂದು ನಾನು ಹಿಂದಿನ ಪತ್ರವನ್ನು ನಿಮಗೆ ಬರೆದಿದ್ದೇನೆ. ನನ್ನ ಆನಂದದಲ್ಲಿ ನೀವೆಲ್ಲರೂ ಪಾಲಾಗುವಿರಿ ಎಂದು ನಿಮ್ಮೆಲ್ಲರ ವಿಷಯದಲ್ಲಿ ನನಗೆ ಭರವಸೆ ಇದೆ.


ಏಕೆಂದರೆ, ನಿಮಗೆ ದುಃಖವಾಗಬೇಕೆಂದಲ್ಲ, ನಿಮ್ಮ ಮೇಲೆ ನನಗಿರುವ ಅಧಿಕವಾದ ಪ್ರೀತಿಯನ್ನು ನೀವು ತಿಳಿದುಕೊಳ್ಳಬೇಕೆಂತಲೇ ನಾನು ಮಹಾ ದುಃಖದಿಂದಲೂ ಬಹಳ ಕಣ್ಣೀರಿನಿಂದಲೂ ಹೃದಯದ ವೇದನೆಯಿಂದಲೂ ನಿಮಗೆ ಬರೆದೆನು.


ಅದಕ್ಕಾಗಿ ನೀವು ನಿಮ್ಮ ಪ್ರೀತಿಯನ್ನು ಮೊದಲು ಇದ್ದಂತೆ ಈಗಲೂ ಅವನ ಮೇಲೆ ತೋರಿಸಿರಿ ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.


ಅವರು ಘೋರ ಹಿಂಸೆಯ ನಡುವೆಯಿದ್ದರೂ ಕಡುಬಡತನದಲ್ಲಿ ಬಳಲುತ್ತಿದ್ದರೂ ಅವರು ಬಹಳ ಸಂತೋಷದಿಂದ, ಉದಾರಮನಸ್ಸಿನಿಂದ ಕೊಡುವವರಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು