Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 3:8 - ಕನ್ನಡ ಸಮಕಾಲಿಕ ಅನುವಾದ

8 ಆದರೆ ಪವಿತ್ರಾತ್ಮ ದೇವರಿಂದ ಜೀವವನ್ನು ಉಂಟುಮಾಡುವ ಸೇವೆಯು ಎಷ್ಟೋ ಹೆಚ್ಚಾಗಿ ಮಹಿಮೆಯುಳ್ಳದ್ದಾಗಿರಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹೀಗಿದ್ದ ಮೇಲೆ ದೇವರಾತ್ಮಸಂಬಂಧವಾದ ಈ ಸೇವೆಯು ಇನ್ನೆಷ್ಟು ಮಹಿಮೆಯಿಂದ ಇರಬೇಕಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಮೃತ್ಯುಕಾರಕವಾದ ಈ ಶಾಸನ ಅಷ್ಟು ಮಹಿಮೆಯಿಂದ ಕೂಡಿತ್ತಾದರೆ ಪವಿತ್ರಾತ್ಮ ಚೈತನ್ಯದಿಂದ ಕೂಡಿದ ಸೇವೆಯು ಇನ್ನೆಷ್ಟು ಮಹಿಮೆಯಿಂದ ಕೂಡಿರಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹೀಗಿದ್ದ ಮೇಲೆ ದೇವರಾತ್ಮಸಂಬಂಧವಾದ ಸೇವೆಯು ಎಷ್ಟೋ ಹೆಚ್ಚಾಗಿ ಪ್ರಭಾವವುಳ್ಳದ್ದಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಹೀಗಿರಲಾಗಿ ಪವಿತ್ರಾತ್ಮನ ಸಂಬಂಧವಾದ ಸೇವೆಯು ಇನ್ನೂ ಹೆಚ್ಚಿನ ಮಹಿಮೆಯನ್ನು ಹೊಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಅಶೆ ರ್‍ಹಾತಾನಾ ಆತ್ಮ್ಯಾಚ್ಯಾ ಕಾಮಾಕ್ನಿ ಸಮಂದ್ ಪಡಲ್ಲಿ ಮಹಿಮಾ ಕವ್ಡಿ ಅಸಿಲ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 3:8
24 ತಿಳಿವುಗಳ ಹೋಲಿಕೆ  

ನೀವು ದೇವರ ಆಲಯವಾಗಿದ್ದೀರೆಂಬುದೂ ದೇವರ ಆತ್ಮ ನಿಮ್ಮಲ್ಲಿ ವಾಸ ಮಾಡುತ್ತಾರೆಂಬುದೂ ನಿಮಗೆ ಗೊತ್ತಿಲ್ಲವೋ?


ಏಕೆಂದರೆ ಕ್ರಿಸ್ತ ಯೇಸುವಿನ ಮೂಲಕ ನಾವೂ ನೀವೂ ಪವಿತ್ರಾತ್ಮ ದೇವರಿಂದ ತಂದೆಯ ಬಳಿಗೆ ಪ್ರವೇಶಿಸುವುದಕ್ಕೆ ಮಾರ್ಗವಾಯಿತು.


ಅಬ್ರಹಾಮನ ಆಶೀರ್ವಾದವು ಕ್ರಿಸ್ತ ಯೇಸುವಿನ ಮೂಲಕ ಯೆಹೂದ್ಯರಲ್ಲದವರಿಗೆ ಉಂಟಾಗಿ, ನಂಬಿಕೆಯ ಮೂಲಕ ವಾಗ್ದಾನದ ಪವಿತ್ರಾತ್ಮರನ್ನು ನಾವು ಪಡೆದುಕೊಳ್ಳುವುದಕ್ಕಾಗಿಯೇ ದೇವರು ನಮ್ಮನ್ನು ವಿಮೋಚಿಸಿದರು.


ಪವಿತ್ರಾತ್ಮ ದೇವರ ಕಾರ್ಯದಿಂದ ಪರಿಶುದ್ಧರಾಗಿ, ಯೇಸುಕ್ರಿಸ್ತರಿಗೆ ವಿಧೇಯರಾಗಲು ಅವರ ರಕ್ತದಿಂದ ಪ್ರೋಕ್ಷಿತರಾಗುವುದಕ್ಕೂ ನಮ್ಮ ತಂದೆ ದೇವರ ಪೂರ್ವಜ್ಞಾನಾನುಸಾರವಾಗಿ ಆಯ್ಕೆಯಾದವರಿಗೆ ಬರೆಯುವುದು: ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.


ಕರ್ತ ಯೇಸುವಿಗೆ ಪ್ರಿಯರಾಗಿರುವವರೇ, ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ಏಕೆಂದರೆ, ನೀವು ಪವಿತ್ರಾತ್ಮ ದೇವರ ಶುದ್ಧೀಕರಣದಿಂದಲೂ ಸತ್ಯವನ್ನು ನಂಬುವುದರಿಂದಲೂ ರಕ್ಷಣೆಯನ್ನು ಹೊಂದಿ ಪ್ರಥಮ ಫಲವಾಗುವುದಕ್ಕೆ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡಿದ್ದಾರೆ.


ಏಕೆಂದರೆ ನಿಯಮವು ಮೋಶೆಯ ಮೂಲಕ ಕೊಡಲಾಯಿತು. ಕೃಪೆಯೂ ಸತ್ಯವೂ ಕ್ರಿಸ್ತ ಯೇಸುವಿನ ಮೂಲಕ ಬಂದವು.


ಮಾತ್ರವಲ್ಲದೆ, “ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ. ಎಂದು ಯೆಹೋವ ದೇವರು ಹೇಳುತ್ತಾರೆ. ನಿನ್ನ ಮೇಲಿರುವ ನನ್ನ ಆತ್ಮನೂ, ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ, ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ, ನಿನ್ನ ಸಂತಾನದ ಬಾಯಿಂದಲೂ ತೊಲಗುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ಏಕೆಂದರೆ ನಾನು ಬಾಯಾರಿದ ಭೂಮಿಯ ಮೇಲೆ ನೀರನ್ನು ಸುರಿಸುವೆನು. ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು. ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ, ನಿನ್ನಿಂದ ಹುಟ್ಟುವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸುವೆನು.


ಅವನ ಮೇಲೆ ಯೆಹೋವ ದೇವರ ಆತ್ಮ, ಜ್ಞಾನ ಮತ್ತು ವಿವೇಕದಾಯಕ ಆತ್ಮ, ಸಮಾಲೋಚನೆ ಮತ್ತು ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳುವಳಿಕೆ ಮತ್ತು ಯೆಹೋವ ದೇವರ ಭಯದ ಆತ್ಮ,


ನಾವಾದರೋ ನಂಬಿಕೆಯಿಂದ ನೀತಿವಂತರಾಗುವ ನಮ್ಮ ನಿರೀಕ್ಷೆಯನ್ನು ದೇವರ ಆತ್ಮನ ಮೂಲಕ ಆತುರದಿಂದ ಎದುರುನೋಡುತ್ತಿದ್ದೇವೆ.


ಏಕೆಂದರೆ ಯಾವನಾದರೂ ನಿಮ್ಮ ಬಳಿಗೆ ಬಂದು ನಾನು ನಿಮಗೆ ಬೋಧಿಸದೆ ಇರುವ ಬೇರೊಬ್ಬ ಯೇಸುವಿನ ವಿಷಯ ಬೋಧಿಸಿದರೆ, ನೀವು ಸ್ವೀಕರಿಸುವಿರಿ. ನೀವು ಹೊಂದಿದ ಆತ್ಮನ ಬದಲಿಗೆ ಬೇರೊಂದು ಆತ್ಮವನ್ನು ಪಡೆಯುವಂತೆ ಮಾಡಿದರೆ, ನೀವು ಸ್ವಾಗತಿಸುತ್ತೀರಿ. ನೀವು ಕೇಳಿರುವ ಸುವಾರ್ತೆಯ ಬದಲು ಬೇರೊಂದು ಸುವಾರ್ತೆಯನ್ನು ಯಾರಾದರೂ ಬೋಧಿಸಿದರೆ, ನೀವು ಬೇಗನೇ ಒಪ್ಪಿಕೊಳ್ಳುತ್ತೀರಿ.


ಕರ್ತದೇವರೇ ಆತ್ಮರಾಗಿದ್ದಾರೆ. “ಕರ್ತದೇವರ ಆತ್ಮವು ಎಲ್ಲಿರುತ್ತದೋ ಅಲ್ಲಿ ಸ್ವಾತಂತ್ರ್ಯವಿರುವುದು.”


ದೇವರು ನಮಗೆ ಹೊಸ ಒಡಂಬಡಿಕೆಯ ಸೇವಕರಾಗುವಂತೆ ಸಾಮರ್ಥ್ಯವನ್ನು ನೀಡಿರುತ್ತಾರೆ. ಇದು ಲಿಖಿತ ನಿಯಮಕ್ಕೆ ಸೇರಿದ್ದಾಗಿರದೆ, ಪವಿತ್ರಾತ್ಮನ ನಿಯಮದ ಸೇವೆಯಾಗಿರುತ್ತದೆ. ಏಕೆಂದರೆ, ಲಿಖಿತವಾದದ್ದು ಮರಣವನ್ನುಂಟುಮಾಡುತ್ತದೆ. ದೇವರಾತ್ಮನಿಂದಾದದ್ದು ಜೀವವನ್ನು ಉಂಟುಮಾಡುತ್ತದೆ.


ಆದರೆ ಯೇಸು ತಮ್ಮಲ್ಲಿ ನಂಬಿಕೆಯಿಡುವವರು ಹೊಂದಲಿರುವ ಪವಿತ್ರಾತ್ಮರನ್ನು ಕುರಿತು ಹೀಗೆ ಹೇಳಿದರು. ಯೇಸು ಇನ್ನೂ ಮಹಿಮೆ ಹೊಂದಿರಲಿಲ್ಲ. ಈ ಕಾರಣದಿಂದ ಪವಿತ್ರ ಆತ್ಮ ಇನ್ನೂ ಬಂದಿರಲಿಲ್ಲ.


ಕಲ್ಲಿನ ಮೇಲೆ ಅಕ್ಷರಗಳನ್ನು ಕೆತ್ತಿಸಿದ್ದೂ, ಮರಣವನ್ನುಂಟುಮಾಡುವಂಥದ್ದೂ ಆಗಿರುವ ಆ ಸೇವೆಯು ಮಹಿಮೆಯಿಂದ ಕೂಡಿದ್ದಾಗಿತ್ತು. ಕುಂದಿಹೋಗುವಂಥ ಆ ಮಹಿಮೆಯಿಂದ ತುಂಬಿದ ಮೋಶೆಯ ಮುಖವನ್ನು ಇಸ್ರಾಯೇಲರಿಗೆ ದಿಟ್ಟಿಸಿ ನೋಡಲು ಸಾಧ್ಯವಾಗಲಿಲ್ಲ.


ಮನುಷ್ಯರನ್ನು ದಂಡನಾ ತೀರ್ಪಿಗೆ ಒಳಪಡಿಸುವಂಥ ಸೇವೆಯೇ ಮಹಿಮೆಯುಳ್ಳದ್ದಾಗಿದ್ದರೆ, ನೀತಿವಂತರೆಂದು ನಿರ್ಣಯಿಸುವ ಸೇವೆಯು ಇನ್ನೆಷ್ಟು ಮಹಿಮೆಯುಳ್ಳದ್ದಾಗಿರಬೇಕು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು