Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 4:8 - ಕನ್ನಡ ಸಮಕಾಲಿಕ ಅನುವಾದ

8 ಸರ್ವವಿಧದಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಜಜ್ಜಿಹೋಗಲಿಲ್ಲ, ನಾವು ಚಂಚಲರಾಗಿದ್ದರೂ ನಿರಾಶರಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಎಲ್ಲಾದರಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಸಂಕಟಪಡುವವರಲ್ಲ. ನಾವು ಗೊಂದಲಕ್ಕೀಡಾಗಿದ್ದರೂ ಹತಾಶರಾಗುವವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಾವು ಇಕ್ಕಟ್ಟುಬಿಕ್ಕಟ್ಟುಗಳಿಗೆ ಒಳಗಾಗಿದ್ದರೂ ನಜ್ಜುಗುಜ್ಜಾಗಲಿಲ್ಲ; ಸಂಶಯ ಸಂದೇಹಗಳಿಗೊಳಗಾದರೂ ನಿರಾಶೆಗೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸರ್ವವಿಧದಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಅತಿ ಸಂಕಟ ಪಡುವವರಲ್ಲ; ನಾವು ದಿಕ್ಕು ಕಾಣದವರಾಗಿದ್ದರೂ ಕೇವಲ ದೆಸೆಗೆಟ್ಟವರಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಮ್ಮ ಸುತ್ತಮುತ್ತಲೆಲ್ಲಾ ಇಕ್ಕಟ್ಟುಗಳಿವೆ, ಆದರೆ ಸೋತುಹೋಗಿಲ್ಲ. ಅನೇಕಸಲ, ಏನು ಮಾಡಬೇಕೋ ನಮಗೆ ತಿಳಿಯದು, ಆದರೂ ನಾವು ಧೈರ್ಯಗೆಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಹರ್ ಎಕ್ ರಿತಿನ್ ಅಮಿ ಕಸ್ಟ್ ಖಾತಾವ್, ಜಾಲ್ಯಾರ್ಬಿ ಅಮಿ ಕಂಗಾಲ್ ಹೊಯ್ನಾವ್. ವಾಟ್ ಗಾವಿನಸ್ತಾನಾ ಕಾಳ್ಕಾತ್ ಶಿರಕ್ತಾವ್, ಜಾಲ್ಯಾರ್ ಬಿ ಅಮಿ ಭಿಂಯ್ನಾವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 4:8
26 ತಿಳಿವುಗಳ ಹೋಲಿಕೆ  

ಹೀಗಿರುವುದರಿಂದ ಕ್ರಿಸ್ತ ಯೇಸುವಿನ ನಿಮಿತ್ತ ನನಗೆ ಬಲಹೀನತೆಯೂ ತಿರಸ್ಕಾರವೂ ಕೊರತೆಯೂ ಹಿಂಸೆಯೂ ಇಕ್ಕಟ್ಟೂ ಸಂಭವಿಸಿದಾಗ ಹರ್ಷಿಸುತ್ತೇನೆ. ಏಕೆಂದರೆ, ಬಲಹೀನತೆಯಲ್ಲಿಯೇ ನಾನು ಶಕ್ತನಾಗಿರುವೆನು.


ನಾವು ಮಕೆದೋನ್ಯಕ್ಕೆ ಬಂದಿದ್ದಾಗ ನಮ್ಮ ದೇಹಕ್ಕೆ ವಿಶ್ರಾಂತಿ ದೊರೆಯಲಿಲ್ಲ. ಎಲ್ಲಾ ವಿಧದಲ್ಲಿಯೂ ಒತ್ತಡಗಳು: ಹೊರಗೆ ಹೋರಾಟ, ಒಳಗೆ ಅಂಜಿಕೆ.


ಆದರೆ ಯೆಹೋವ ದೇವರು ಅವನನ್ನು ದುಷ್ಟನ ಕೈಯಲ್ಲಿ ಬಿಡುವುದಿಲ್ಲ; ನ್ಯಾಯ ವಿಚಾರಣೆಯಲ್ಲಿ ನೀತಿವಂತನನ್ನು ಅಪರಾಧಿಯೆಂದು ತೀರ್ಪು ಕೊಡುವುದಿಲ್ಲ.


ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ. ನಿಮ್ಮ ಬಳಿಗೆ ನಾನು ಬರುತ್ತೇನೆ.


ಮನುಷ್ಯರಿಗಾಗುವ ಶೋಧನೆಯೇ ಹೊರತು, ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲ. ಆದರೆ ದೇವರು ನಂಬಿಗಸ್ತರು. ನಿಮ್ಮ ಶಕ್ತಿಗೆ ಮೀರಿದ ಶೋಧನೆಗಳನ್ನು ಅವರು ನಿಮ್ಮ ಮೇಲೆ ಬರುವಂತೆ ಮಾಡುವುದಿಲ್ಲ. ಆದರೆ ನಿಮಗೆ ಶೋಧನೆಗಳು ಬಂದಾಗ, ಅವುಗಳನ್ನು ಜಯಿಸುವುದಕ್ಕೆ ಶಕ್ತರಾಗುವಂತೆ, ಅವುಗಳಿಂದ ತಪ್ಪಿಸಿಕೊಳ್ಳುವ ಮಾರ್ಗವನ್ನು ಮಾಡುವರು.


ಅದಕ್ಕೆ ಬದಲಾಗಿ, ಸರ್ವ ವಿಷಯಗಳಲ್ಲಿ ನಾವು ದೇವರ ಸೇವಕರಾಗಿದ್ದೇವೆಂದು ತೋರಿಸುತ್ತೇವೆ. ಕಷ್ಟ, ಸಂಕಟ ತೊಂದರೆಗಳಲ್ಲಿ ಮಹಾ ದೀರ್ಘತಾಳ್ಮೆಯನ್ನು ತೋರಿಸುತ್ತೇವೆ.


ಯೆಹೋವ ದೇವರಿಗೆ ಭಯಪಡುವವನು ಭದ್ರಕೋಟೆಯನ್ನು ಹೊಂದಿದ್ದಾನೆ. ಆತನ ಮಕ್ಕಳಿಗೆ ಆಶ್ರಯವು ಇರುವುದು.


ಆಗ ಸಮುಯೇಲನು ಸೌಲನಿಗೆ, “ನೀನು ನನ್ನನ್ನು ಇಲ್ಲಿ ಬರಮಾಡಿ ವಿಶ್ರಾಂತಿ ಕೆಡಿಸಿದೆ,” ಎಂದನು. ಅದಕ್ಕೆ ಸೌಲನು, “ನಾನು ಬಹಳ ಇಕ್ಕಟ್ಟಿನಲ್ಲಿದ್ದೇನೆ. ಏಕೆಂದರೆ ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧಮಾಡುತ್ತಾರೆ. ಆದರೆ ದೇವರು ನನ್ನನ್ನು ಬಿಟ್ಟುಹೋದರು. ಅವರು ಪ್ರವಾದಿಗಳ ಮುಖಾಂತರವಾದರೂ, ಸ್ವಪ್ನದ ಮುಖಾಂತರವಾದರೂ ನನಗೆ ಉತ್ತರ ಕೊಡಲಿಲ್ಲ. ಆದ್ದರಿಂದ ನಾನು ಮಾಡಬೇಕಾದದ್ದನ್ನು ನೀನು ತಿಳಿಸುವ ಹಾಗೆ ನಿನ್ನನ್ನು ಕರೆಸಿದೆನು,” ಎಂದನು.


ಜನರೆಲ್ಲರೂ ಪ್ರತಿಯೊಬ್ಬನು ತನ್ನ ಪುತ್ರಪುತ್ರಿಯರಿಗೋಸ್ಕರವಾಗಿಯೂ ಮನೋವ್ಯಥೆಪಟ್ಟು, ದಾವೀದನನ್ನು ಕಲ್ಲೆಸೆಯಬೇಕೆಂದು ಹೇಳಿಕೊಂಡದ್ದರಿಂದ, ಅವನು ಬಹಳ ಇಕ್ಕಟ್ಟಿನಲ್ಲಿ ಸಿಕ್ಕಿಕೊಂಡಿದ್ದನು. ಆದರೂ ದಾವೀದನು ಯೆಹೋವ ದೇವರಲ್ಲಿ ತನ್ನನ್ನು ಬಲಪಡಿಸಿಕೊಂಡನು.


ಯೆಹೋವ ದೇವರ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿ ಭದ್ರವಾಗಿರುತ್ತಾನೆ.


ಆದಕಾರಣ ಅವನು ತನ್ನ ಆಯುಧಗಳನ್ನು ಹೊರುವವನಿಗೆ, “ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ಅವಮಾನ ಮಾಡದ ಹಾಗೆ ನೀನು ನಿನ್ನ ಖಡ್ಗವನ್ನು ಹಿರಿದು, ನನ್ನನ್ನು ತಿವಿ,” ಎಂದನು. ಆದರೆ ಅವನ ಆಯುಧ ಹೊರುವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡದೆ ಹೋದನು. ಆಗ ಸೌಲನು ತನ್ನ ಖಡ್ಗವನ್ನು ತೆಗೆದುಕೊಂಡು ಅದರ ಮೇಲೆ ಬಿದ್ದನು.


“ನನ್ನ ಯೌವನದಿಂದ ವೈರಿಗಳು ನನ್ನ ಮೇಲೆ ದಬ್ಬಾಳಿಕೆ ಮಾಡಿದರು; ಆದರೆ ಅವರು ನನ್ನ ಮೇಲೆ ವಿಜಯ ಸಾಧಿಸಲಿಲ್ಲ.


ಆದರೆ ಯೆಹೋವ ದೇವರನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು. ಅವರು ಹದ್ದುಗಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಅವರು ಓಡಿ ದಣಿಯರು. ನಡೆದು ಬಳಲರು.


ಅಂಜೂರದ ಗಿಡವು ಚಿಗುರದಿದ್ದರೂ, ದ್ರಾಕ್ಷಾಲತೆಗಳಲ್ಲಿ ಹಣ್ಣು ಫಲಿಸದಿದ್ದರೂ, ಎಣ್ಣೆಮರಗಳ ಉತ್ಪತ್ತಿಯು ಶೂನ್ಯವಾದರೂ, ಹೊಲಗಳು ಆಹಾರ ಕೊಡದಿದ್ದರೂ, ಕುರಿಹಟ್ಟಿಗಳು ಬರಿದಾಗಿ ಹೋದರೂ, ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,


ನಿಮ್ಮ ಕಡೆಗಿರುವ ನಮ್ಮ ಪ್ರೀತಿಯನ್ನು ನಿಲ್ಲಿಸಲಿಲ್ಲ. ಆದರೆ ನೀವು ನಮಗೆ ತೋರಿಸಬೇಕಾದ ಪ್ರೀತಿಯನ್ನು ತೋರಿಸಲಿಲ್ಲ.


ನಾನು ಈಗ ನಿಮ್ಮ ಜೊತೆಯಲ್ಲಿದ್ದು ನನ್ನ ಸ್ವರವನ್ನು ಬದಲಾಯಿಸಬೇಕೆಂದು ಅಪೇಕ್ಷಿಸುತ್ತೇನೆ, ಏಕೆಂದರೆ, ನಾನು ನಿಮ್ಮ ವಿಷಯದಲ್ಲಿ ಚಿಂತಿಸುವವನಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು