Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 5:1 - ಕನ್ನಡ ಸಮಕಾಲಿಕ ಅನುವಾದ

1 ನಾವು ಜೀವಿಸುತ್ತಿರುವ ನಮ್ಮ ದೇಹವೆಂಬ ಗುಡಾರವು ನಾಶವಾಗಿ ಹೋದರೂ, ಪರಲೋಕದಲ್ಲಿ ಶಾಶ್ವತವಾದ ನಿವಾಸವು ನಮಗೆ ಉಂಟೆಂದು ಬಲ್ಲೆವು. ಅದು ಮಾನವರ ಕೈಯಿಂದ ಕಟ್ಟಿದ ನಿವಾಸವಲ್ಲ, ದೇವರಿಂದಲೇ ನಿರ್ಮಿತವಾದದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಭೂಮಿಯ ಮೇಲಿರುವ ನಮ್ಮ ಈ ದೇಹವೆಂಬ ಗುಡಾರವು ಅಳಿದುಹೊದರೂ, ದೇವರಿಂದ ನಿರ್ಮಿತವಾಗಿರುವ ಒಂದು ಕಟ್ಟಡವು ಪರಲೋಕದಲ್ಲಿ ನಮಗುಂಟೆಂದು ಬಲ್ಲೆವು; ಅದು ಮನುಷ್ಯನ ಕೈಗಳಿಂದ ಕಟ್ಟಿರುವ ಮನೆಯಲ್ಲ ಬದಲಾಗಿ ಶಾಶ್ವತವಾದ ಮನೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಭೂಮಿಯ ಮೇಲಿನ ನಮ್ಮ ಈ ದೇಹ ಎಂಬ ಗುಡಾರವು ನಾಶವಾಗಿಹೋದರೂ ಸ್ವರ್ಗದಲ್ಲಿ ಶಾಶ್ವತವಾದ ಗೃಹವೊಂದು ನಮಗೆ ದೊರಕುವುದು. ಅದು ಮಾನವರಿಂದ ನಿರ್ಮಿತ ಆದುದಲ್ಲ, ದೇವರಿಂದಲೇ ನಿರ್ಮಿತವಾದುದು. ಇದು ನಮಗೆ ತಿಳಿದ ವಿಷಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಭೂವಿುಯ ಮೇಲಿರುವ ನಮ್ಮ ಮನೆಯು ಅಂದರೆ ನಮ್ಮ ದೇಹವೆಂಬ ಗುಡಾರವು ಕಿತ್ತುಹಾಕಲ್ಪಟ್ಟರೂ ದೇವರಿಂದುಂಟಾದ ಒಂದು ಕಟ್ಟಡವು ಪರಲೋಕದಲ್ಲಿ ನಮಗುಂಟೆಂದು ಬಲ್ಲೆವು. ಅದು ಕೈಯಿಂದ ಕಟ್ಟಿದ ಮನೆಯಾಗಿರದೆ ನಿತ್ಯವಾಗಿರುವಂಥದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಭೂಮಿಯ ಮೇಲೆ ನಾವು ವಾಸವಾಗಿರುವ ಈ ಗುಡಾರವು ಅಂದರೆ ಈ ದೇಹವು ನಾಶವಾಗುವುದೆಂದು ನಮಗೆ ಗೊತ್ತಿದೆ. ಆದರೆ ಅದು ಸಂಭವಿಸಿದಾಗ, ನಮ್ಮ ವಾಸಕ್ಕಾಗಿ ದೇವರು ನಮಗೊಂದು ಮನೆಯನ್ನು ಕೊಡುವನು. ಅದು ಮನುಷ್ಯರಿಂದ ನಿರ್ಮಿತವಾದ ಮನೆಯಲ್ಲ. ಅದು ಪರಲೋಕದಲ್ಲಿರುವ ಶಾಶ್ವತವಾದ ಮನೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜಗಾತ್ ಹೊತ್ತಿ ಅಮ್ಚೆ ಬಿಡಾರ್ ಮಟ್ಲ್ಯಾರ್ ಅಮ್ಚೆ ಆಂಗ್ ಮನ್ತಲೆ ಮೊಡುನ್ ಗೆಲ್ಯಾರ್ ಬಿ, ದೆವಾನ್ ತಯಾರ್ ಕರಲ್ಲೆ ಮಟ್ಲ್ಯಾರ್ ಹಾತಿನ್ ಭಾಂದಿನಸಲ್ಲೆ ಸರ್ವತಾಕ್ ರ್‍ಹಾತಲೆ ಘರ್ ಅಮ್ಕಾ ತಯಾರ್ ಹಾಯ್ ಮನುನ್ ಅಮ್ಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 5:1
25 ತಿಳಿವುಗಳ ಹೋಲಿಕೆ  

ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತಕ್ಷವಾಗಲಿಲ್ಲ. ಕ್ರಿಸ್ತ ಯೇಸು ಪ್ರತ್ಯಕ್ಷರಾದಾಗ ನಾವು ಅವರ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ನಾವು ಅವರನ್ನು ಅವರಿರುವ ಪ್ರಕಾರವೇ ನೋಡುವೆವು.


ಏಕೆಂದರೆ ಕ್ರಿಸ್ತ ಯೇಸು ನಿಜ ದೇವಾಲಯದ ಪ್ರತಿರೂಪದಂತಿರುವ, ಕೈಯಿಂದ ಕಟ್ಟಿದ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳುವಂತೆ ಪರಲೋಕದಲ್ಲಿಯೇ ಪ್ರವೇಶಿಸಿದರು.


ಆದರೆ ಸರ್ವೋನ್ನತವಾದ ಈ ಶಕ್ತಿಯೂ ನಮ್ಮಿಂದಲ್ಲ ದೇವರಿಂದಲೇ ಬಂದಿರುತ್ತದೆ ಎಂಬುದನ್ನು ತೋರಿಸುವಂತೆ ಮಣ್ಣಿನ ಮಡಕೆಗಳಾದ ನಮ್ಮಲ್ಲಿ ನಿಕ್ಷೇಪವಿದೆ.


ಆದರೆ ಕ್ರಿಸ್ತ ಯೇಸು ಈಗಾಗಲೇ ಮಹಾಯಾಜಕರಾಗಿ ಬಂದಿದ್ದಾರೆ. ಅವರು ಕೊಡುವ ಒಳ್ಳೆಯವುಗಳು ಈಗಾಗಲೇ ನಮಗೆ ದೊರೆತಿವೆ. ಅವರು ಹಿಂದಿನವುಗಳಿಗಿಂತಲೂ ಶ್ರೇಷ್ಠವಾದದ್ದೂ ಪರಿಪೂರ್ಣವಾದದ್ದೂ ಆಗಿರುವ ಗುಡಾರವನ್ನು ಅಂದರೆ ಕೈಯಿಂದ ಕಟ್ಟಿರದಂತದ್ದೂ ಇಹಲೋಕದ ಸೃಷ್ಟಿಗೆ ಸಂಬಂಧಪಟ್ಟಿರದಂತದ್ದೂ ಆಗಿರುವ ಗುಡಾರವನ್ನು ಪ್ರವೇಶಿಸಿದರು.


ಧೂಳಿನಲ್ಲಿರುವ ಅಸ್ತಿವಾರದ ಮೇಲೆ ಮಣ್ಣಿನ ಮನೆಗಳ ನಿವಾಸಿಗಳು, ನುಸಿಗಿಂತಲೂ ಹೆಚ್ಚಾಗಿ ಜಜ್ಜಿಹೋದವರು, ಇನ್ನೂ ಹೆಚ್ಚಾಗಿ ದಂಡನೆಗೆ ಒಳಪಡುವರಲ್ಲವೇ?


ಈ ನಿರೀಕ್ಷೆಯು ಲಯ, ಕಳಂಕ, ಕ್ಷಯಗಳಿಲ್ಲದ ಬಾಧ್ಯತೆಯಾಗಿದೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ.


ನಾವು ಈ ದೇಹವೆಂಬ ಗುಡಾರದಲ್ಲಿರುವ ತನಕ ನರಳುತ್ತೇವೆ, ಭಾರದಿಂದ ಬಳಲುತ್ತೇವೆ. ಈ ಗುಡಾರವೆಂಬ ಹಳೆಯ ಶರೀರವು ನಮ್ಮಿಂದ ಕಳಚಿ ಹೋಗಬೇಕೆಂಬುದು ನಮ್ಮ ಇಷ್ಟವಲ್ಲ. ಆದರೆ ಪರಲೋಕದ ನಿವಾಸವೆಂಬ ನೂತನ ಶರೀರವನ್ನು ನಾವು ಧರಿಸಿಕೊಳ್ಳಲು ಬಯಸುತ್ತೇವೆ. ಏಕೆಂದರೆ ನಶ್ವರವಾದ ಈ ನಮ್ಮ ದೇಹವು ಅಮರತ್ವವನ್ನು ಧರಿಸಿಕೊಳ್ಳಬೇಕು.


ನೀನು ಪುನಃ ಮಣ್ಣಿಗೆ ಸೇರುವ ತನಕ, ಬೆವರಿಡುತ್ತಾ ಆಹಾರವನ್ನು ಉಣ್ಣುವೆ. ನೀನು ಮಣ್ಣಿನಿಂದ ತೆಗೆದವನಾಗಿರುವುದರಿಂದ ನೀನು ಮಣ್ಣೇ. ನೀನು ಪುನಃ ಮಣ್ಣಿಗೆ ಸೇರತಕ್ಕವನು.”


“ ‘ಕೈಯಿಂದ ಕಟ್ಟಿರುವ ಈ ದೇವಾಲಯವನ್ನು ನಾನು ಕೆಡವಿಬಿಟ್ಟು ಕೈಯಿಂದ ಕಟ್ಟದಿರುವ ಮತ್ತೊಂದನ್ನು ಮೂರು ದಿನಗಳಲ್ಲಿ ಕಟ್ಟುವೆನು,’ ಎಂದು ಈತನು ಹೇಳಿದ್ದನ್ನು ನಾವು ಕೇಳಿಸಿಕೊಂಡಿದ್ದೇವೆ,” ಎಂದರು.


ಇವೆಲ್ಲವುಗಳು ಹೀಗೆ ಲಯವಾಗಿ ಹೋಗುವುದರಿಂದ ನೀವು ಎಷ್ಟೋ ಪರಿಶುದ್ಧವಾದ ನಡವಳಿಕೆಯೂ ಭಕ್ತಿಯೂ ಉಳ್ಳವರಾಗಿರಬೇಕು.


ನೀವು ಕ್ರಿಸ್ತ ಯೇಸುವಿನಲ್ಲಿ ಸ್ವೀಕರಿಸಿದ ಸುನ್ನತಿಯು ಕೈಯಿಂದ ಮಾಡಿದ್ದಲ್ಲ, ಅದು ನಿಮ್ಮ ಮಾಂಸಭಾವವನ್ನು ಆಳುವ ಇಡೀ ಸ್ವಾರ್ಥವನ್ನೇ ಬಿಟ್ಟುಬಿಡುವ ಆತ್ಮಿಕ ಸುನ್ನತಿಯಾಗಿದೆ.


ದೇವರ ಸಮಕ್ಷಮದಲ್ಲಿ ನಾವು ನಮ್ಮ ಹೃದಯವನ್ನು ವಿಶ್ರಾಂತಿಗೊಳಿಸಿರುವುದರಿಂದ ನಾವು ಸತ್ಯಕ್ಕೆ ಸೇರಿದವರು ಎಂಬುದು ಇದರಿಂದಲೇ ನಮಗೆ ತಿಳಿಯುತ್ತದೆ:


ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವುದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬುದು ನಮಗೆ ಗೊತ್ತಾಗಿದೆ. ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.


ಏಕೆಂದರೆ ದೇವರು ಯಾವುದನ್ನು ಕಟ್ಟುವವರೂ ಮಾಡುವವರೂ ಆಗಿದ್ದಾರೋ ಆ ಅಸ್ತಿವಾರಗಳುಳ್ಳ ಪಟ್ಟಣಕ್ಕೋಸ್ಕರ ಅವರು ಎದುರುನೋಡುತ್ತಿದ್ದರು.


ನಾವು ದೇವರ ಜೊತೆಕೆಲಸದವರು. ನೀವು ದೇವರ ಹೊಲವೂ ದೇವರ ಕಟ್ಟಡವೂ ಆಗಿದ್ದೀರಿ.


ನಾನು ನಿಮಗೆ ಮೊರೆಯಿಟ್ಟಾಗ, ನನ್ನ ಶತ್ರುಗಳು ಹಿಂದಿರುಗುವರು. ಇದರಿಂದ ದೇವರು ನನಗಿದ್ದಾರೆ ಎಂಬುದನ್ನು ತಿಳಿದುಕೊಳ್ಳುವೆನು.


ನನ್ನನ್ನು ಗಾಳಿಗೆ ಎತ್ತಿ ತೂರಿಬಿಟ್ಟಿರುವಿರಿ, ನನ್ನನ್ನು ಬಿರುಗಾಳಿಗೆ ತೊಳಲಾಡುವಂತೆ ಮಾಡಿದ್ದೀರಿ.


ಇದಕ್ಕಾಗಿಯೇ ನಾನು ಈ ಶ್ರಮೆಗಳನ್ನು ಅನುಭವಿಸುತ್ತಿದ್ದೇನೆ. ಆದರೆ ನಾನು ನಾಚಿಕೆಪಡುವುದಿಲ್ಲ. ಏಕೆಂದರೆ ನಾನು ನಂಬಿರುವ ಕ್ರಿಸ್ತ ಯೇಸುವನ್ನು ಬಲ್ಲೆನು. ನಾನು ಕ್ರಿಸ್ತ ಯೇಸುವಿಗೆ ಒಪ್ಪಿಸಿದ್ದನ್ನು ಅವರು ಆ ದಿನಕ್ಕಾಗಿ ಕಾಪಾಡುವುದಕ್ಕೆ ಶಕ್ತರಾಗಿದ್ದಾರೆಂಬ ದೃಢವಿಶ್ವಾಸ ನನಗಿದೆ.


ನನ್ನ ಆಶ್ರಯವು ಕುರುಬನ ಗುಡಾರದಂತೆ ಕಿತ್ತು ನನ್ನ ಕಡೆಯಿಂದ ಒಯ್ಯಲಾಗಿದೆ. ದೇವರು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೆಯಿಗೆಯವನಂತೆ ನನ್ನ ಜೀವಮಾನವನ್ನು ಸುತ್ತಿಬಿಟ್ಟಿದ್ದೇನೆ; ಹಗಲುರಾತ್ರಿ ದೇವರೇ, ನೀವು ನನ್ನನ್ನು ಅಂತ್ಯಗೊಳಿಸುತ್ತೀರಿ.


“ಹೀಗಿದ್ದರೂ ಮಹೋನ್ನತ ದೇವರು ಮಾನವರು ನಿರ್ಮಿಸಿದ ಆಲಯಗಳಲ್ಲಿ ವಾಸಮಾಡುವುದಿಲ್ಲ. ಪ್ರವಾದಿಯು ಹೇಳಿದಂತೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು