Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 5:13 - ಕನ್ನಡ ಸಮಕಾಲಿಕ ಅನುವಾದ

13 ನಮಗೆ ಬುದ್ಧಿ ಭ್ರಮಣೆಯಾಗಿದ್ದರೆ, ಅದು ದೇವರಿಗಾಗಿಯೇ. ನಾವು ಸ್ವಸ್ಥಬುದ್ಧಿಯುಳ್ಳವರಾಗಿದ್ದರೆ, ಅದು ನಿಮಗಾಗಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಮಗೆ ಬುದ್ಧಿಭ್ರಮಣೆಯಾಗಿದ್ದರೆ ಅದು ದೇವರ ಮಹಿಮೆಗಾಗಿಯೇ; ಹಾಗೂ ನಮಗೆ ಸ್ವಸ್ಥಬುದ್ಧಿ ಇದ್ದರೆ ಅದು ನಿಮ್ಮ ಪ್ರಯೋಜನಕ್ಕಾಗಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಮಗೆ ಬುದ್ಧಿಭ್ರಮಣೆಯಾಗಿದೆಯೆಂದು ಭಾವಿಸುತ್ತೀರೋ? ಹಾಗಿದ್ದರೆ ಅದು ದೇವರ ಮಹಿಮೆಗಾಗಿ ನಾವು ಸ್ವಸ್ಥಬುದ್ಧಿಯುಳ್ಳವರೆಂದು ನೆನೆಸುತ್ತೀರೋ? ಹಾಗಿದ್ದರೆ ಅದು ನಿಮ್ಮ ಹಿತಕ್ಕಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಮಗೆ ಬುದ್ಧಿಪರವಶವಾಗಿದ್ದರೆ ಅದು ದೇವರ ಮಹಿಮೆಗಾಗಿಯೇ ಅದೆ; ನಮಗೆ ಸ್ವಸ್ಥಬುದ್ಧಿ ಇದ್ದರೆ ಅದು ನಿಮ್ಮ ಪ್ರಯೋಜನಕ್ಕಾಗಿ ಅದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾವು ಹುಚ್ಚರಾಗಿದ್ದರೆ ಅದು ದೇವರಿಗೋಸ್ಕರವಾಗಿಯೇ. ನಮಗೆ ಸ್ವಸ್ಥಬುದ್ಧಿಯಿದ್ದರೆ ಅದು ನಿಮಗೋಸ್ಕರವಾಗಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಕಶ್ಯಾಕ್ ಮಟ್ಲ್ಯಾರ್ ಅಮಿ ಬುದ್ದ್ ನಸಲ್ಲೆ ಹೊಲಾಂವ್ ಜಾಲ್ಯಾರ್, ತೆ ದೆವಾಸಾಟಿ ಹೊಲಾಂವ್. ಅಮಿ ಸಮಾ ಬುದ್ದಿನ್ ಹಾವ್ ಜಾಲ್ಯಾರ್ ತುಮ್ಚ್ಯಾಸಾಟ್ನಿ ಹಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 5:13
15 ತಿಳಿವುಗಳ ಹೋಲಿಕೆ  

ನೀವೇ ನನ್ನನ್ನು ಹೊಗಳಿಕೊಳ್ಳುವಂತೆ ಮಾಡಿ, ನಾನು ಬುದ್ಧಿಹೀನನಾಗಿ ನಡೆಯಲು ಒತ್ತಾಯಿಸಿದ್ದೀರಿ. ನನಗೆ ನಿಮ್ಮಿಂದಲೇ ಹೊಗಳಿಕೆಯು ಬೇಕಾಗಿತ್ತು. ಏಕೆಂದರೆ ನಾನು ಕೇವಲ ಅತ್ಯಲ್ಪನಾದರೂ “ಅತಿಶ್ರೇಷ್ಠರಾದ ಅಪೊಸ್ತಲರಿಗಿಂತ” ಕಡಿಮೆ ಅಲ್ಲ.


ಒಂದು ವೇಳೆ ಹೊಗಳಿಕೊಳ್ಳಲು ಬಯಸಿದರೂ ನಾನು ಬುದ್ಧಿಹೀನನಾಗುವುದಿಲ್ಲ. ಏಕೆಂದರೆ, ನಾನು ಸತ್ಯವನ್ನೇ ಹೇಳುತ್ತಿದ್ದೇನೆ. ಆದರೆ ಯಾರೂ ನಾನು ಮಾಡುವುದಕ್ಕಿಂತಲೂ ನನ್ನಿಂದ ಕೇಳುವುದಕ್ಕಿಂತಲೂ ಹೆಚ್ಚಾಗಿ ನನ್ನ ಬಗ್ಗೆ ಎಣಿಸಬಾರದು.


ನನ್ನ ಬುದ್ಧಿಹೀನತೆಯನ್ನು ನೀವು ಇನ್ನೂ ಸ್ವಲ್ಪ ಸಹಿಸಿಕೊಳ್ಳಬೇಕೆಂದು ನಾನು ಅಪೇಕ್ಷಿಸುತ್ತೇನೆ. ಈಗಾಗಲೇ ನೀವು ಸಹಿಸಿಕೊಂಡಿದ್ದೀರಿ.


ನನಗೆ ದಯಪಾಲಿಸಿರುವ ಕೃಪೆಯಿಂದ ನಿಮ್ಮಲ್ಲಿ ಪ್ರತಿಯೊಬ್ಬರಿಗೂ ನಾನು ಹೇಳುವುದೇನೆಂದರೆ, ನೀವು ಭಾವಿಸುವುದಕ್ಕಿಂತ ಹೆಚ್ಚಾಗಿ ಯಾರೂ ನಿಮ್ಮನ್ನು ನೀವೇ ಉನ್ನತವಾಗಿ ಭಾವಿಸಿಕೊಳ್ಳಬೇಡಿರಿ. ಅದರ ಬದಲಾಗಿ ದೇವರು ನಿಮಗೆ ಅನುಗ್ರಹಿಸಿರುವ ವಿಶ್ವಾಸದ ಅಳತೆಗೆ ಅನುಸಾರವಾಗಿ ಸ್ವಸ್ಥಚಿತ್ತವುಳ್ಳವರಾಗಿ ಭಾವಿಸಿಕೊಳ್ಳಿರಿ.


ಆದಕಾರಣ ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ಸಹಿಸಿಕೊಳ್ಳುತ್ತೇನೆ.


ಏಕೆಂದರೆ ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ, ಶಕ್ತಿಯಲ್ಲಿಯೂ ಪವಿತ್ರಾತ್ಮ ದೇವರ ಸನ್ನಿಧಿಯಲ್ಲಿಯೂ ಬಹು ನಿಶ್ಚಯದಲ್ಲಿಯೂ ಬಂತೆಂಬುದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದುಕೊಂಡು ನಿಮಗೋಸ್ಕರ ಮಾಡಿದ ಜೀವನ ಎಂಥದ್ದೆಂದು ನೀವೇ ಬಲ್ಲಿರಿ.


ಈಗ ನಾನು ನಿಮಗೋಸ್ಕರ ಸಹಿಸುತ್ತಿರುವ ಬಾಧೆಗಳಲ್ಲಿ ಆನಂದಿಸುತ್ತೇನೆ. ಕ್ರಿಸ್ತ ಯೇಸುವಿನ ಸಂಕಟಗಳೊಳಗೆ ಇನ್ನೂ ಕೊರತೆಯಾಗಿರುವುದನ್ನು ಅವರ ದೇಹವಾಗಿರುವ ಸಭೆಗಾಗಿ ನನ್ನ ದೇಹದಲ್ಲಿ ತೀರಿಸುತ್ತೇನೆ.


ನಾನು ಆ ಪತ್ರ ನಿಮಗೆ ಬರೆದದ್ದು, ತಪ್ಪು ಮಾಡಿದವನಿಗೋಸ್ಕರವಾಗಿ ಅಲ್ಲ ಮತ್ತು ಆ ತಪ್ಪಿನಿಂದ ಹಾನಿಯಾದವರಿಗೋಸ್ಕರವಾಗಿಯೂ ಅಲ್ಲ, ನೀವು ನಮಗೆ ಎಷ್ಟು ನಿಷ್ಠೆಯುಳ್ಳವರು ಎಂದು ದೇವರ ಸನ್ನಿಧಿಯಲ್ಲಿ ನಿಮಗೆ ನೀವೇ ನೋಡುವಂತೆ ಬರೆದೆನು.


‘ಏಕೆಂದರೆ, ಹುಚ್ಚನಾದ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವಂಥ ಪ್ರತಿ ಮನುಷ್ಯನಿಗೆ ಯೆಹೋವ ದೇವರ ಆಲಯದಲ್ಲಿ ಅಧಿಕಾರಿಗಳು ಇರುವ ಹಾಗೆಯೂ, ನೀನು ಅಂಥವರನ್ನು ಕೋಳದಲ್ಲಿಯೂ, ಸೆರೆಯಲ್ಲಿಯೂ ಇಡುವ ಹಾಗೆಯೂ, ಯೆಹೋವ ದೇವರು ಯಾಜಕನಾದ ಯೆಹೋಯಾದನಿಗೆ ಬದಲಾಗಿ ನಿನ್ನನ್ನು ಯಾಜಕನಾಗಿ ಇಟ್ಟಿದ್ದಾರೆ.


ಯೇಸುವಿನ ಕುಟುಂಬದವರು ಇದನ್ನು ಕೇಳಿದಾಗ, “ಆತನಿಗೆ ಹುಚ್ಚುಹಿಡಿದಿದೆ,” ಎಂದು ಹೇಳಿ, ಯೇಸುವನ್ನು ಹಿಡಿದು ತರಲು ಹೊರಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು