Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 6:14 - ಕನ್ನಡ ಸಮಕಾಲಿಕ ಅನುವಾದ

14 ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ಇಲ್ಲದವರೊಂದಿಗೆ ಸೇರಿ ಒಂದಾಗಿ ಪಾಲುಗಾರರಾಗಬೇಡಿರಿ. ನೀತಿಗೂ ಅನೀತಿಗೂ ಸಮಾನವೆಲ್ಲಿ? ಅಥವಾ ಬೆಳಕಿಗೂ ಕತ್ತಲೆಗೂ ಅನ್ಯೋನ್ಯತೆಯೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀವು ಕ್ರಿಸ್ತ ನಂಬಿಕೆಯಿಲ್ಲದವರೊಂದಿಗೆ ಸೇರಿ ಇಜ್ಜೋಡಿಯಾಗಬೇಡಿರಿ. ಧರ್ಮಕ್ಕೂ, ಅಧರ್ಮಕ್ಕೂ ಸಹವಾಸವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವಿಶ್ವಾಸಿಗಳೊಡನೆ ಒಂದಾಗಬೇಡಿ. ಧರ್ಮಕ್ಕೂ ಅಧರ್ಮಕ್ಕೂ ಸಾಟಿಯೆಲ್ಲಿ? ಬೆಳಕಿಗೂ ಕತ್ತಲೆಗೂ ಎಲ್ಲಿಯ ಸಂಬಂಧ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೀವು ಕ್ರಿಸ್ತನಂಬಿಕೆಯಿಲ್ಲದವರೊಂದಿಗೆ ಸೇರಿ ಇಜ್ಜೋಡಾಗಬೇಡಿರಿ. ಧರ್ಮಕ್ಕೂ ಅಧರ್ಮಕ್ಕೂ ಜೊತೆಯೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಕ್ರಿಸ್ತನಂಬಿಕೆಯಿಲ್ಲದ ಜನರಿಗೂ ನಿಮಗೂ ವ್ಯತ್ಯಾಸವಿದೆ. ಆದ್ದರಿಂದ ನೀವು ಅವರೊಂದಿಗೆ ಸೇರಬೇಡಿ. ಒಳ್ಳೆಯದು ಮತ್ತು ಕೆಟ್ಟದು ಒಟ್ಟಾಗಿ ಸೇರಲು ಸಾಧ್ಯವಿಲ್ಲ. ಬೆಳಕು ಕತ್ತಲೆಯೊಡನೆ ಅನ್ಯೋನ್ಯವಾಗಿರಲು ಸಾಧ್ಯವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತುಮ್ಚ್ಯಾ ಬಾಳ್ವಿಚ್ಯಾ ಜುವಾಕ್ ವಿಶ್ವಾಸಾತ್ ನಸಲ್ಲ್ಯಾಂಚ್ಯಾ ವಾಂಗ್ಡಾ ಖಾಂಜೊ ದಿವ್ನಕಾಶಿ, ಬರ್‍ಯಾನ್ ಅನಿ ಖೊಟ್ಯಾನ್ ಎಕ್ ಜೊತ್ ಹೊವ್ನ್ ಕಶೆ ಜಾವ್ಕ್ ಹೊತಾ? ಉಜ್ವೊಡಾನ್ ಅನಿ ಕಾಳ್ಕಾನ್ ವಾಂಗ್ಡಾ ಕಶೆ ಜಿವನ್ ಕರುಕ್ ಹೊತಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 6:14
44 ತಿಳಿವುಗಳ ಹೋಲಿಕೆ  

ಮೋಸಹೋಗಬೇಡಿರಿ. ಏಕೆಂದರೆ, “ದುಸ್ಸಹವಾಸವು ಸದಾಚಾರವನ್ನು ಕೆಡಿಸುತ್ತದೆ.”


ನೀವು ಕರ್ತದೇವರ ಪಾತ್ರೆಯಲ್ಲಿಯೂ ದೆವ್ವಗಳ ಪಾತ್ರೆಯಲ್ಲಿಯೂ ಕುಡಿಯಲಾರಿರಿ. ನೀವು ಕರ್ತದೇವರ ಪಂಕ್ತಿಯಲ್ಲಿಯೂ ದೆವ್ವಗಳ ಪಂಕ್ತಿಯಲ್ಲಿಯೂ ಭಾಗಿಗಳಾಗಿರಲಾರಿರಿ.


ವ್ಯಭಿಚಾರಿಗಳೇ, ಇಹಲೋಕ ಸ್ನೇಹವು ದೇವರೊಂದಿಗಿರುವ ಶತ್ರುತ್ವ ಎಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರಬೇಕೆಂಬುವವನು ದೇವರಿಗೆ ಶತ್ರುವಾಗಿದ್ದಾನೆ.


“ ‘ನೀನು ನನ್ನ ಆಜ್ಞೆಗಳನ್ನು ಕೈಗೊಳ್ಳಬೇಕು. “ ‘ನಿನ್ನ ಪಶುಗಳನ್ನು ಬೇರೆ ಜಾತಿಯೊಂದಿಗೆ ಕೂಡಗೊಡಿಸಬೇಡ. “ ‘ನಿನ್ನ ಹೊಲದಲ್ಲಿ ಮಿಶ್ರವಾದ ಬೀಜಗಳನ್ನು ಬಿತ್ತಬೇಡ. “ ‘ಇದಲ್ಲದೆ ನಾರು ಮತ್ತು ಉಣ್ಣೆ ಕೂಡಿಸಿದ ಬಟ್ಟೆ ನಿನ್ನ ಮೇಲೆ ಇರಬಾರದು.


ಅನೈತಿಕರೊಡನೆ ಸಹವಾಸ ಮಾಡಬಾರದೆಂದು ನಾನು ಪತ್ರದಲ್ಲಿ ಬರೆದಿದ್ದೆನಷ್ಟೆ.


ಆದರೆ ಇತರ ಜನಾಂಗಗಳ ಸಂಗಡ ಕೂಡಿಕೊಂಡು, ಅವರ ಪದ್ಧತಿಗಳನ್ನು ಕಲಿತುಕೊಂಡರು.


ಆಗ ಎಲೀಯನು ಸಕಲ ಜನರ ಬಳಿಗೆ ಬಂದು, “ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರವರೆಗೂ ನಿಂತುಕೊಂಡಿರುವಿರಿ? ಯೆಹೋವ ದೇವರು ದೇವರಾಗಿದ್ದರೆ, ಅವರನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ, ಅವನನ್ನೇ ಹಿಂಬಾಲಿಸಿರಿ,” ಎಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ.


ಮುಂಗೊಪಿಯೊಂದಿಗೆ ಸ್ನೇಹ ಬೆಳೆಸಬೇಡ; ಸುಲಭವಾಗಿ ಕೋಪಗೊಳ್ಳುವವರೊಂದಿಗೆ ಸಹವಾಸ ಮಾಡಬೇಡ;


ಹೀಗೆ ನೀವು ನಿಂದಾರಹಿತರೂ ದೋಷವಿಲ್ಲದವರೂ, “ನಿಷ್ಕಳಂಕರಾದ ದೇವರ ಮಕ್ಕಳಾಗಿ, ವಕ್ರವಾದ ದುಷ್ಟ ಜನಾಂಗದ ಮಧ್ಯದಲ್ಲಿ,” ಜೀವವಾಕ್ಯವನ್ನು ಹಿಡಿದುಕೊಂಡು, ಲೋಕದಲ್ಲಿ ನಕ್ಷತ್ರಗಳಂತೆ ಹೊಳೆಯುವವರಾಗಿರುವಿರಿ.


ಯೆಹೂದವು ವಂಚನೆಯಾಗಿ ನಡೆದುಕೊಂಡಿದೆ. ಇಸ್ರಾಯೇಲಿನಲ್ಲಿಯೂ, ಯೆರೂಸಲೇಮಿನಲ್ಲಿಯೂ ಅಸಹ್ಯವಾದದ್ದನ್ನು ಮಾಡಿದೆ, ಏಕೆಂದರೆ ಯೆಹೂದವು ಯೆಹೋವ ದೇವರು ಪ್ರೀತಿಮಾಡಿದ ಪರಿಶುದ್ಧ ಆಲಯವನ್ನು ಅಪವಿತ್ರ ಮಾಡಿ, ಅನ್ಯದೇವತೆಗಳನ್ನು ಆರಾಧಿಸುವ ಮಹಿಳೆಯರನ್ನು ಮದುವೆ ಮಾಡಿಕೊಂಡಿದೆ.


ನೀತಿವಂತರು ಅಪ್ರಾಮಾಣಿಕರನ್ನು ದ್ವೇಷಿಸುತ್ತಾರೆ. ದುಷ್ಟರು ಪ್ರಾಮಾಣಿಕರನ್ನು ತಿರಸ್ಕರಿಸುತ್ತಾರೆ.


ನಿಮಗೆ ಭಯಪಡುವವರೆಲ್ಲರಿಗೂ, ನಿಮ್ಮ ಸೂತ್ರಗಳನ್ನು ಹಿಂಬಾಲಿಸುವವರಿಗೂ ನಾನು ಮಿತ್ರನಾಗಿದ್ದೇನೆ.


ಲೋಕವು ನಿಮ್ಮನ್ನು ದ್ವೇಷಿಸಲಾರದು. ಲೋಕದ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯದಲ್ಲಿ ನಾನು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ.


ನಿನ್ನನ್ನು ಸೃಷ್ಟಿಸಿದವನು ಒಬ್ಬನೇ ಅಲ್ಲವೇ? ನೀವು ದೇಹ ಮತ್ತು ಆತ್ಮದಲ್ಲಿ ಅವರಿಗೆ ಸೇರಿದವರು. ಮತ್ತು ಒಬ್ಬರೇ ದೇವರಾಗಿರುವ ದೇವರು ಏನು ಹುಡುಕುತ್ತಾರೆ? ದೈವಿಕ ಸಂತಾನ. ಆದ್ದರಿಂದ ನೀವು ಜಾಗರೂಕರಾಗಿರಿ ಮತ್ತು ನಿಮ್ಮ ಯೌವನದ ಹೆಂಡತಿಗೆ ವಿಶ್ವಾಸದ್ರೋಹ ಮಾಡಬೇಡಿ.


ಹೆಂಡತಿಯು ತನ್ನ ಗಂಡನು ಜೀವದಿಂದಿರುವ ತನಕ ಅವನಿಗೆ ಬದ್ಧಳಾಗಿದ್ದಾಳೆ. ಗಂಡನು ಸತ್ತಿದ್ದರೆ, ಆಕೆಯು ತನಗೆ ಬೇಕಾದವನನ್ನು ಮದುವೆ ಮಾಡಿಕೊಳ್ಳುವುದಕ್ಕೆ ಸ್ವತಂತ್ರಳಾಗಿದ್ದಾಳೆ. ಆದರೆ ಆ ವ್ಯಕ್ತಿಯು ಕರ್ತ ದೇವರಲ್ಲಿ ವಿಶ್ವಾಸಿಯಾಗಿರಬೇಕು.


ಇದಲ್ಲದೆ ಅವರ ಪುತ್ರಿಯರನ್ನು ನಿನ್ನ ಪುತ್ರರಿಗೋಸ್ಕರ ತೆಗೆದುಕೊಳ್ಳಬೇಕಾಗಬಹುದು. ತೆಗೆದುಕೊಂಡರೆ ಅವರ ಪುತ್ರಿಯರು ತಮ್ಮ ದೇವರುಗಳನ್ನು ಆರಾಧಿಸಿ, ನಿಮ್ಮ ಪುತ್ರರನ್ನೂ ಅನ್ಯದೇವರುಗಳ ಆರಾಧನೆಯೆಂಬ ವ್ಯಭಿಚಾರಕ್ಕೆ ಎಳೆಯಬಹುದು.


ಭೂಲೋಕದಲ್ಲಿರುವ ದೇವಜನರ ಕುರಿತು, “ಇವರೇ ನನಗೆ ಶ್ರೇಷ್ಠರು. ಇವರಲ್ಲಿಯೇ ನನ್ನ ಎಲ್ಲಾ ಆನಂದವು,” ಎಂದು ಹೇಳುವೆನು.


ಇವರು ತಮ್ಮ ಹೆಂಡತಿಯರನ್ನು ಹೊರಡಿಸಿಬಿಡುವೆವೆಂದು ಪ್ರತಿಜ್ಞೆ ಮಾಡಿ, ತಾವು ಅಪರಾಧಸ್ಥರಾದ್ದರಿಂದ ಅಪರಾಧ ಕಳೆಯುವುದಕ್ಕೆ ಮಂದೆಯಿಂದ ತಂದ ಒಂದು ಟಗರನ್ನು ಅರ್ಪಿಸಿದರು.


ಆಗ ಪ್ರವಾದಿ ಹನಾನೀಯ ಮಗ ಯೇಹುವು ಅವನನ್ನು ಎದುರುಗೊಂಡು, ಅರಸನಾದ ಯೆಹೋಷಾಫಾಟನಿಗೆ ಅವನು, “ದುಷ್ಟನಿಗೆ ಸಹಾಯ ಕೊಡುವವನಾಗಿ ಯೆಹೋವ ದೇವರನ್ನು ದ್ವೇಷಮಾಡುವವರನ್ನು ಪ್ರೀತಿಮಾಡಬಹುದೋ? ಆದಕಾರಣ ನಿನ್ನ ಮೇಲೆ ಯೆಹೋವ ದೇವರ ಸನ್ನಿಧಿಯಿಂದ ಕೋಪಾಗ್ನಿ ಇದೆ.


ಬಿಡುಗಡೆ ಹೊಂದಿದ, ಪೇತ್ರ ಮತ್ತು ಯೋಹಾನರು ವಿಶ್ವಾಸಿಗಳ ಬಳಿಗೆ ಹೋಗಿ, ತಮಗೆ ಮುಖ್ಯಯಾಜಕರೂ ಹಿರಿಯರೂ ಹೇಳಿದ್ದೆಲ್ಲವನ್ನೂ ವರದಿಮಾಡಿದರು.


ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಪುತ್ರಿಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳಬಾರದು.


ಇದಕ್ಕೆ ಬದಲಾಗಿ ಒಬ್ಬ ಸಹೋದರನು ಇನ್ನೊಬ್ಬ ಸಹೋದರನ ವಿರೋಧವಾಗಿ ನ್ಯಾಯಾಲಯಕ್ಕೆ ಹೋಗುತ್ತಾನೆ. ಅದೂ ಅವಿಶ್ವಾಸಿಗಳ ಮುಂದೆ ನ್ಯಾಯಕ್ಕಾಗಿ ಹೋಗುವುದು ಸರಿಯೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು