Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 6:15 - ಕನ್ನಡ ಸಮಕಾಲಿಕ ಅನುವಾದ

15 ಕ್ರಿಸ್ತ ಯೇಸುವಿಗೂ ಪಿಶಾಚನಿಗೂ ಐಕ್ಯತೆಯೇನು? ಅಥವಾ ಕ್ರಿಸ್ತ ವಿಶ್ವಾಸಿಗೂ ಅವಿಶ್ವಾಸಿಗೂ ಹುದುವಾಗಿರುವುದೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಬೆಳಕಿಗೂ, ಕತ್ತಲೆಗೂ ಅನ್ಯೋನ್ಯತೆಯೇನು? ಕ್ರಿಸ್ತನಿಗೂ ಸೈತಾನನಿಗೂ ಒಪ್ಪಂದವೇನು? ವಿಶ್ವಾಸಿಗೂ ಅವಿಶ್ವಾಸಿಗೂ ಪಾಲುಗಾರಿಕೆಯೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಕ್ರಿಸ್ತಯೇಸುವಿಗೂ ಸೈತಾನನಿಗೂ ಎಲ್ಲಿಯ ನಂಟು? ವಿಶ್ವಾಸಿಗೂ ಅವಿಶ್ವಾಸಿಗೂ ಎಲ್ಲಿಯ ಸಹವಾಸ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಬೆಳಕಿಗೂ ಕತ್ತಲೆಗೂ ಐಕ್ಯವೇನು? ಕ್ರಿಸ್ತನಿಗೂ ಸೈತಾನನಿಗೂ ಒಡನಾಟವೇನು? ನಂಬುವವನಿಗೂ ನಂಬದೆ ಇರುವವನಿಗೂ ಪಾಲುಗಾರಿಕೆ ಏನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಕ್ರಿಸ್ತನೂ ಸೈತಾನನೂ ಅನ್ಯೋನ್ಯವಾಗಿರಲು ಸಾಧ್ಯವೇ? ವಿಶ್ವಾಸಿಗಳಿಗೂ ಅವಿಶ್ವಾಸಿಗಳಿಗೂ ಪಾಲುಗಾರಿಕೆಯೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಕ್ರಿಸ್ತಾನ್ ಅನಿ ಮ್ಹಾರ್ವಾನ್ ಕಶೆ ಎಕಾಮೆಕಾ ವಾಂಗ್ಡಾ ರ್‍ಹಾವ್ಕ್ ತಯಾರ್ ಹೊವ್ಕ್ ಹೊತಾ? ವಿಶ್ವಾಸಿ ಲೊಕಾ ವಿಶ್ವಾಸ್ ನಸಲ್ಲ್ಯಾಂಚ್ಯಾ ವಾಂಗ್ಡಾ ಕಶೆ ಭಾಗ್ ಘೆವ್ಕ್ ಹೊತಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 6:15
14 ತಿಳಿವುಗಳ ಹೋಲಿಕೆ  

ಆಗ ಎಲೀಯನು ಸಕಲ ಜನರ ಬಳಿಗೆ ಬಂದು, “ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರವರೆಗೂ ನಿಂತುಕೊಂಡಿರುವಿರಿ? ಯೆಹೋವ ದೇವರು ದೇವರಾಗಿದ್ದರೆ, ಅವರನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ, ಅವನನ್ನೇ ಹಿಂಬಾಲಿಸಿರಿ,” ಎಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ.


ಯಾವನಾದರೂ ಸ್ವಂತದವರನ್ನು ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ನಂಬಿಕೆಯನ್ನು ಅಲ್ಲಗಳೆದವನೂ ಅವಿಶ್ವಾಸಿಗಿಂತ ನೀಚನೂ ಆಗಿದ್ದಾನೆ.


ಅದಕ್ಕೆ ಪೇತ್ರನು, “ದೇವರ ವರವನ್ನು ಹಣಕೊಟ್ಟು ಕೊಂಡುಕೊಳ್ಳಬಹುದೆಂದು ನೀನು ಭಾವಿಸಿದ್ದರಿಂದ ನೀನು ನಿನ್ನ ಹಣದೊಂದಿಗೆ ನಾಶವಾಗಿಹೋಗು!


ಆದರೂ ಹೆಚ್ಚು ಜನ ಪುರುಷರೂ ಸ್ತ್ರೀಯರೂ ಕರ್ತ ದೇವರಲ್ಲಿ ವಿಶ್ವಾಸವನ್ನಿಟ್ಟು ಅವರ ಜೊತೆ ಸೇರಿಕೊಂಡರು. ಅವರು ವಿಶ್ವಾಸಿಗಳ ಸಂಖ್ಯೆಯಲ್ಲಿ ಸೇರಿದರು.


ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.


ಆದರೆ ಜೆರುಬ್ಬಾಬೆಲನೂ, ಯೇಷೂವನೂ, ಮಿಕ್ಕಾದ ಇಸ್ರಾಯೇಲಿನ ಕುಟುಂಬಗಳ ಮುಖ್ಯಸ್ಥರೂ ಅವರಿಗೆ, “ನಮ್ಮ ದೇವರಿಗೆ ಆಲಯವನ್ನು ಕಟ್ಟುವುದರಲ್ಲಿ ನಿಮಗೆ ಭಾಗವಿಲ್ಲ. ಪಾರಸಿಯ ಅರಸನಾದ ಕೋರೆಷನು ನಮಗೆ ಆಜ್ಞಾಪಿಸಿದ ಹಾಗೆ, ನಾವು ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರಿಗೆ ಅದನ್ನು ಕಟ್ಟುವೆವು,” ಎಂದರು.


ಅವರು ಸಂತೋಷಿಸುತ್ತಿರುವ ವೇಳೆಯಲ್ಲಿ ಆ ಪಟ್ಟಣದ ದುಷ್ಟ ಮನುಷ್ಯರಲ್ಲಿ ಕೆಲವರು ಆ ಮನೆಯನ್ನು ಸುತ್ತಿಕೊಂಡು, ಕದವನ್ನು ಬಡಿದು, ಆ ಮನೆಯ ಯಜಮಾನನಾದ ಮುದುಕನಿಗೆ, “ನಿನ್ನ ಮನೆಗೆ ಬಂದ ಆ ಮನುಷ್ಯನೊಡನೆ ನಮಗೆ ಸಂಗಮವಾಗಬೇಕು, ಹೊರಗೆ ಬಾ,” ಎಂದು ಹೇಳಿದರು.


ಗಿಬೆಯದಲ್ಲಿರುವ ದುಷ್ಟ ಮನುಷ್ಯರನ್ನು ನಾವು ಕೊಂದು, ಕೆಟ್ಟತನವನ್ನು ಇಸ್ರಾಯೇಲಿನಿಂದ ತೆಗೆದುಹಾಕುವ ಹಾಗೆ, ಅವರನ್ನು ಒಪ್ಪಿಸಿಕೊಡಿರಿ,” ಎಂದು ಹೇಳಿ ಕಳುಹಿಸಿದರು. ಆದರೆ ಬೆನ್ಯಾಮೀನ್ಯರು ಇಸ್ರಾಯೇಲರಾದ ತಮ್ಮ ಸಹೋದರರ ಮಾತನ್ನು ಕೇಳುವುದಕ್ಕೆ ಮನಸ್ಸಿಲ್ಲದೆ,


ಆದರೆ ಏಲಿಯ ಪುತ್ರರು ಯೆಹೋವ ದೇವರನ್ನು ಗೌರವಿಸದೆ ದುಷ್ಟರಾಗಿದ್ದರು.


ಇದಕ್ಕೆ ಬದಲಾಗಿ ಒಬ್ಬ ಸಹೋದರನು ಇನ್ನೊಬ್ಬ ಸಹೋದರನ ವಿರೋಧವಾಗಿ ನ್ಯಾಯಾಲಯಕ್ಕೆ ಹೋಗುತ್ತಾನೆ. ಅದೂ ಅವಿಶ್ವಾಸಿಗಳ ಮುಂದೆ ನ್ಯಾಯಕ್ಕಾಗಿ ಹೋಗುವುದು ಸರಿಯೇ?


ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿ ಅವರಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಕ್ರಿಸ್ತ ಯೇಸುವಿನ ಮೂಲಕ ವಿಶ್ವಾಸವಿಟ್ಟಿದ್ದೀರಿ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು