Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 6:2 - ಕನ್ನಡ ಸಮಕಾಲಿಕ ಅನುವಾದ

2 ಏಕೆಂದರೆ ದೇವರು ಹೇಳಿದ ಹಾಗೆ, “ಪ್ರಸನ್ನತೆಯ ಕಾಲದಲ್ಲಿ ನಿನ್ನ ಪ್ರಾರ್ಥನೆಯನ್ನು ನಾನು ಲಾಲಿಸಿದೆನು. ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದೆನು,” ಇಗೋ, ಇದೇ ದೇವರ ಮೆಚ್ಚುಗೆಯ ಕಾಲ, ಈಗಲೇ ರಕ್ಷಣೆಯ ದಿನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಸುಪ್ರಸನ್ನತೆಯ ಕಾಲದಲ್ಲಿ ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಿನಗೆ ಸಹಾಯ ಮಾಡಿದೆನು” ಎಂದು ದೇವರು ಹೇಳುತ್ತಾನಲ್ಲಾ. ನೋಡಿ, ಈಗಲೇ ಆ ಸುಪ್ರಸನ್ನತೆಯ ಕಾಲವು; ಇಂದೇ ಆ ರಕ್ಷಣೆಯ ದಿನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 :ಸುಪ್ರಸನ್ನತೆಯ ಕಾಲದಲ್ಲಿ ನಿನ್ನನ್ನಾಲಿಸಿದೆನು; ಉದ್ಧಾರ ದಿನದಂದು ನಿನಗೆ ನೆರವಾದೆನು,” ಎಂದಿದ್ದಾರೆ ದೇವರು. ಇದೇ ಆ ಸುಪ್ರಸನ್ನತೆಯ ಕಾಲ. ಇದೇ ಆ ಉದ್ಧಾರದ ಸುದಿನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಪ್ರಸನ್ನತೆಯ ಕಾಲದಲ್ಲಿ ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಿನಗೆ ಸಹಾಯ ಮಾಡಿದೆನು ಎಂದು ದೇವರು ಹೇಳುತ್ತಾನಲ್ಲಾ. ಈಗಲೇ ಆ ಸುಪ್ರಸನ್ನತೆಯಕಾಲ; ಇದೇ ಆ ರಕ್ಷಣೆಯ ದಿನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದೇವರು ಹೀಗೆನ್ನುತ್ತಾನೆ: “ಸುಪ್ರಸನ್ನತೆಯ ಕಾಲದಲ್ಲಿ ನಾನು ನಿನಗೆ ಕಿವಿಗೊಟ್ಟೆನು, ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದೆನು.” ಇದೇ ಆ “ಸುಪ್ರಸನ್ನತೆಯ ಕಾಲ.” ಇದೇ ಆ “ರಕ್ಷಣೆಯ ದಿನ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಕಶ್ಯಾಕ್ ಮಟ್ಲ್ಯಾರ್ ತೆನಿಚ್ ಅಶೆ ಮಟಲ್ಲೆ ಹಾಯ್: ಆಯಿನ್ ಎಳಾರ್ ಮಿಯಾ ತೆಂಚಿ ಮಾಗ್ನಿ ಆಯಿಕ್ಲೊ, ಸುಟ್ಕೆಚ್ಯಾ ದಿಸಿ ಮಿಯಾ ತುಕಾ ಆದಾರ್ ದಿಲೊ, “ಹ್ಯೊಚ್ ತೊ ಆಯಿನ್ ಕಾಲ್,” ಹ್ಯೊಚ್ ತೊ ಸುಟ್ಕೆಚೊ ದಿಸ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 6:2
10 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಹೇಳುವುದೇನೆಂದರೆ: “ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ. ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದ್ದೇನೆ. ನಾನು ನಿನ್ನನ್ನು ಕಾಪಾಡಿ, ಭೂಮಿಯನ್ನು ಸ್ಥಾಪಿಸುವುದಕ್ಕೂ, ಹಾಳಾಗಿರುವ ಸ್ಥಳಗಳನ್ನು ಸೊತ್ತಾಗಿ ಹೊಂದುವುದಕ್ಕೂ, ಜನರ ಒಡಂಬಡಿಕೆಯನ್ನಾಗಿಯೂ ನೇಮಿಸಿದ್ದೇನೆ.


ದೇವರು “ಈ ಹೊತ್ತೇ” ಎಂದು ಬೇರೊಂದು ದಿವಸವನ್ನು ಗೊತ್ತು ಮಾಡುತ್ತಾರೆ. ಈ ದಿನವನ್ನು ಕುರಿತೇ ಬಹುಕಾಲದ ನಂತರ ದಾವೀದನ ಮೂಲಕ ಮೊದಲೇ ಹೀಗೆ ಹೇಳಿದ್ದಾರೆ: “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ, ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ.”


ನಿಮ್ಮಲ್ಲಿ ಯಾರೂ ಪಾಪದಿಂದ ಮೋಸಹೋಗಿ ಕಠಿಣರಾಗದಂತೆ, “ಈ ಹೊತ್ತು” ಎಂಬುದು ಇರುವವರೆಗೆ ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ.


ಯೆಹೋವ ದೇವರ ಮೆಚ್ಚುಗೆಯ ವರ್ಷವನ್ನು ಸಾರಿ ಹೇಳುವುದಕ್ಕೂ, ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧ ಮಾಡುವುದಕ್ಕೂ, ದುಃಖವುಳ್ಳವರೆಲ್ಲರನ್ನು ಆದರಿಸುವುದಕ್ಕೂ,


ಆದ್ದರಿಂದ ಪವಿತ್ರಾತ್ಮ ದೇವರು ಹೇಳುವ ಪ್ರಕಾರ, “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ,


ಕರ್ತದೇವರ ಮೆಚ್ಚುಗೆಯ ವರ್ಷವನ್ನು ಸಾರುವುದಕ್ಕೂ ಅವರು ನನ್ನನ್ನು ಕಳುಹಿಸಿದ್ದಾರೆ.”


“ ‘ಈಗ ನಾನು ನಿನ್ನ ಬಳಿ ಹಾದುಹೋಗುವಾಗ ನಿನ್ನನ್ನು ನೋಡಲು, ನಿನ್ನ ಕಾಲವು ಪ್ರೇಮಿಸುವ ಕಾಲವಾಗಿತ್ತು. ಆಗ ನಾನು ನನ್ನ ಸೆರಗನ್ನು ನಿನ್ನ ಮೇಲೆ ಹೊದಿಸಿ, ನಿನ್ನ ಮಾನವನ್ನು ಕಾಪಾಡಿದೆ. ಹೌದು, ನಾನು ನಿನಗೆ ಆಣೆಯಿಟ್ಟು ಒಡಂಬಡಿಕೆ ಮಾಡಿಕೊಂಡಿದ್ದರಿಂದ ನೀನು ನನ್ನವಳಾದೆ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರೇ, ನಾನಾದರೋ ನಿಮಗೆ ಮೊರೆಯಿಟ್ಟಿದ್ದೇನೆ. ಇದು ನಿಮ್ಮ ಮೆಚ್ಚಿಕೆಯ ಸಕಾಲ. ಓ ದೇವರೇ, ನಿಮ್ಮ ಮಹಾಪ್ರೀತಿಯಿಂದ ನನಗೆ ನಿಮ್ಮ ನಿಶ್ಚಯ ರಕ್ಷಣೆಯನ್ನು ದಯಪಾಲಿಸಿರಿ.


“ನಜರೇತಿನ ಯೇಸು ಹಾದು ಹೋಗುತ್ತಿದ್ದಾರೆ,” ಎಂದು ಜನರು ಅವನಿಗೆ ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು