Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 6:6 - ಕನ್ನಡ ಸಮಕಾಲಿಕ ಅನುವಾದ

6 ಪವಿತ್ರಾತ್ಮ ದೇವರ ಸಹಾಯದಿಂದ ಶುದ್ಧ ಮನಸ್ಸು, ತಿಳುವಳಿಕೆ, ಸಹನೆಯು ಮತ್ತು ದಯೆಯಿಂದಕೂಡಿ, ನಿಷ್ಕಪಟ ಪ್ರೀತಿಯಲ್ಲಿ ಜೀವಿಸಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಶುದ್ಧಮನಸ್ಸು, ಜ್ಞಾನ, ದೀರ್ಘಶಾಂತಿ, ದಯೆ, ಪವಿತ್ರಾತ್ಮ, ನಿಷ್ಕಪಟವಾದ ಪ್ರೀತಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಿರ್ಮಲ ಮನಸ್ಸು, ಸನ್ಮತಿ, ಸಹನೆ, ಸದಯತೆಯಿಂದಲೂ, ಪವಿತ್ರಾತ್ಮ, ನಿಷ್ಕಪಟ ಪ್ರೇಮ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಶುದ್ಧಮನಸ್ಸು ಜ್ಞಾನ ದೀರ್ಘಶಾಂತಿ ದಯೆ ಪವಿತ್ರಾತ್ಮ ಕಪಟವಿಲ್ಲದ ಪ್ರೀತಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾವು ದೇವರ ಸೇವಕರೆಂಬುದನ್ನು ನಮ್ಮ ತಿಳುವಳಿಕೆಯಿಂದಲೂ ತಾಳ್ಮೆಯಿಂದಲೂ ಕನಿಕರದಿಂದಲೂ ಮತ್ತು ಪರಿಶುದ್ಧ ಜೀವಿತದಿಂದಲೂ ತೋರ್ಪಡಿಸಿದ್ದೇವೆ. ನಾವು ಇದನ್ನು ಪವಿತ್ರಾತ್ಮನಿಂದಲೂ ನಿಜವಾದ ಪ್ರೀತಿಯಿಂದಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತಶೆಚ್ ನಿತಳ್ ಮನಾನಿ, ಶಾನ್ಪಾನಾನ್, ಲೈ ಸಂಬಾಳುನ್ ಅನಿ ದಯಾಳ್ ಸ್ವಭಾವಾನ್ ಅಮಿ ಕ್ರಿಸ್ತಾಚಿ ಸೆವಕಾ ಮನುನ್ ಪವಿತ್ರ್ ಆತ್ಮ್ಯಾ ವೈನಾ ಅಮ್ಚೊ ಖರೊ ಪ್ರೆಮ್ ದಾಕ್ವುನ್ ದಿಲಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 6:6
41 ತಿಳಿವುಗಳ ಹೋಲಿಕೆ  

ಯೆಹೂದ್ಯರಲ್ಲದವರಲ್ಲಿ ಆ ರಹಸ್ಯದ ಮಹಿಮೆಯ ಐಶ್ವರ್ಯವು ಎಷ್ಟೆಂಬುದನ್ನು ದೇವರು ತಮ್ಮ ಜನರಿಗೆ ಪ್ರಕಟಿಸುವುದಕ್ಕೆ ಮನಸ್ಸು ಮಾಡಿದ್ದಾರೆ. ಆ ರಹಸ್ಯವು ಏನೆಂದರೆ, ನಿಮ್ಮಲ್ಲಿರುವ ಕ್ರಿಸ್ತ ಯೇಸು ಮಹಿಮೆಯ ನಿರೀಕ್ಷೆಯಾಗಿದ್ದಾರೆ ಎಂಬುದೇ.


ನೀವು ದಯೆಯುಳ್ಳವರೂ ಮೃದು ಹೃದಯುಳ್ಳವರೂ ಆಗಿದ್ದು, ದೇವರು ಕ್ರಿಸ್ತನಲ್ಲಿ ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಸಹ ಒಬ್ಬರೊನ್ನಬ್ಬರನ್ನು ಕ್ಷಮಿಸಿರಿ.


ನೀವು ಸಂಪೂರ್ಣ ದೀನತ್ವದಿಂದಲೂ ಸಾತ್ವಿಕತ್ವಗಳಿಂದಲೂ ದೀರ್ಘಶಾಂತಿಯಿಂದಲೂ ಒಬ್ಬರನ್ನೊಬ್ಬರು ಪ್ರೀತಿಯಿಂದ ಸಹಿಸಿಕೊಳ್ಳಿರಿ.


ಪವಿತ್ರಾತ್ಮರ ಫಲವೇನೆಂದರೆ: ಪ್ರೀತಿ, ಆನಂದ, ಸಮಾಧಾನ, ಸಹನೆ, ದಯೆ, ಸದ್ಗುಣ, ನಂಬಿಗಸ್ತಿಕೆ,


ನಿಜವಾಗಿಯೂ ವ್ಯರ್ಥವಾಯಿತು. ದೇವರು ಪವಿತ್ರ ಆತ್ಮರನ್ನು ನಿಮಗೆ ಕೊಟ್ಟದ್ದು ಮತ್ತು ನಿಮ್ಮಲ್ಲಿ ಅದ್ಭುತಕಾರ್ಯಗಳನ್ನು ನಡೆಸಿದ್ದು ನಿಯಮದ ಕ್ರಿಯೆಗಳಿಂದಲೋ ಅಥವಾ ನೀವು ಕೇಳಿ ನಂಬಿದ್ದರಿಂದಲೋ?


ನಾನಂತೂ ನನಗಿರುವುದೆಲ್ಲವನ್ನೂ ನಿಮ್ಮ ಆತ್ಮಗಳಿಗೋಸ್ಕರ ಬಹು ಸಂತೋಷದಿಂದ ವೆಚ್ಚಮಾಡುತ್ತೇನೆ. ನನ್ನನ್ನು ಕೂಡ ನಿಮಗೋಸ್ಕರ ವೆಚ್ಚಮಾಡಲು ಸಿದ್ಧನಾಗಿದ್ದೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ, ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುವಿರೋ?


ಏಕೆ? ನಾನು ನಿಮ್ಮನ್ನು ಪ್ರೀತಿ ಇಲ್ಲದ್ದರಿಂದಲೋ? ನಾನು ಪ್ರೀತಿಸುತ್ತೇನೆಂದು ದೇವರಿಗೆ ಗೊತ್ತುಂಟು!


ನನ್ನ ಮಾತಿನಲ್ಲಿ ಚಾತುರ್ಯ ಇಲ್ಲದಿದ್ದರೂ ನನಗೆ ತಿಳುವಳಿಕೆಯಿದೆ. ಇದನ್ನು ನಾನು ಪ್ರತಿಯೊಂದು ಸಂದರ್ಭಗಳಲ್ಲಿಯೂ ಬಹಳ ಸ್ಪಷ್ಟಪಡಿಸಿರುತ್ತೇನೆ.


ಏಕೆಂದರೆ ಯಾವನಾದರೂ ನಿಮ್ಮ ಬಳಿಗೆ ಬಂದು ನಾನು ನಿಮಗೆ ಬೋಧಿಸದೆ ಇರುವ ಬೇರೊಬ್ಬ ಯೇಸುವಿನ ವಿಷಯ ಬೋಧಿಸಿದರೆ, ನೀವು ಸ್ವೀಕರಿಸುವಿರಿ. ನೀವು ಹೊಂದಿದ ಆತ್ಮನ ಬದಲಿಗೆ ಬೇರೊಂದು ಆತ್ಮವನ್ನು ಪಡೆಯುವಂತೆ ಮಾಡಿದರೆ, ನೀವು ಸ್ವಾಗತಿಸುತ್ತೀರಿ. ನೀವು ಕೇಳಿರುವ ಸುವಾರ್ತೆಯ ಬದಲು ಬೇರೊಂದು ಸುವಾರ್ತೆಯನ್ನು ಯಾರಾದರೂ ಬೋಧಿಸಿದರೆ, ನೀವು ಬೇಗನೇ ಒಪ್ಪಿಕೊಳ್ಳುತ್ತೀರಿ.


ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳ ಕೊಡಿರಿ. ನಾವು ಯಾರಿಗೂ ಅನ್ಯಾಯ ಮಾಡಲಿಲ್ಲ, ಯಾರಿಗೂ ನಾವು ಕೇಡು ಬಗೆಯಲಿಲ್ಲ, ನಾವು ಸ್ವಂತ ಲಾಭಕ್ಕಾಗಿ ಯಾರನ್ನೂ ದುಡಿಸಿಕೊಳ್ಳಲಿಲ್ಲ.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದು ಆಜ್ಞಾಪಿಸಿದ ದೇವರು ತಾವೇ, ತಮ್ಮ ಪ್ರಕಾಶವನ್ನು ನಮ್ಮ ಹೃದಯದ ಮೇಲೆ ಬೆಳಗಿಸಿದ್ದಾರೆ. ಹೀಗೆ ಕ್ರಿಸ್ತ ಯೇಸುವಿನ ಮುಖದಲ್ಲಿ ಪ್ರತಿಬಿಂಬಿಸುತ್ತಿರುವ ದೇವರ ಮಹಿಮೆಯ ತಿಳುವಳಿಕೆಯನ್ನು ನಮ್ಮಲ್ಲಿ ಉದಯಿಸುವಂತಾಗಿದೆ.


ನಮ್ಮ ಸುವಾರ್ತಾ ಸೇವೆಯ ಫಲಿತಾಂಶವಾಗಿ, ನೀವು ಕ್ರಿಸ್ತ ಯೇಸುವಿನ ಪತ್ರವೆಂದು ಪ್ರಕಟಿಸುತ್ತಿದ್ದೀರಿ ಎಂಬುದು ಸ್ಪಷ್ಟವಾಗಿದೆ. ಆ ಪತ್ರವು ಮಸಿಯಿಂದ ಬರೆದದ್ದಲ್ಲ, ಜೀವವುಳ್ಳ ದೇವರ ಆತ್ಮನಿಂದಲೇ ಬರೆಯಲಾಗಿದೆ, ಕಲ್ಲಿನ ಹಲಗೆಗಳ ಮೇಲೆಯಲ್ಲ, ಮಾನವ ಹೃದಯಗಳೆಂಬ ಹಲಗೆಗಳ ಮೇಲೆ ಬರೆಯಲಾಗಿದೆ.


ಏಕೆಂದರೆ, ನಿಮಗೆ ದುಃಖವಾಗಬೇಕೆಂದಲ್ಲ, ನಿಮ್ಮ ಮೇಲೆ ನನಗಿರುವ ಅಧಿಕವಾದ ಪ್ರೀತಿಯನ್ನು ನೀವು ತಿಳಿದುಕೊಳ್ಳಬೇಕೆಂತಲೇ ನಾನು ಮಹಾ ದುಃಖದಿಂದಲೂ ಬಹಳ ಕಣ್ಣೀರಿನಿಂದಲೂ ಹೃದಯದ ವೇದನೆಯಿಂದಲೂ ನಿಮಗೆ ಬರೆದೆನು.


ಪ್ರೀತಿ ತಾಳ್ಮೆಯುಳ್ಳದ್ದು, ಪ್ರೀತಿ ದಯೆಯುಳ್ಳದ್ದು, ಪ್ರೀತಿ ಅಸೂಯೆಪಡುವುದಿಲ್ಲ, ಪ್ರೀತಿ ಹೊಗಳಿಕೊಳ್ಳುವುದಿಲ್ಲ, ಗರ್ವಪಡುವುದಿಲ್ಲ,


ಏಕೆಂದರೆ, “ಕರ್ತದೇವರ ಮನಸ್ಸನ್ನು ತಿಳಿದುಕೊಂಡು, ಅವರಿಗೆ ಉಪದೇಶಿಸುವವನಾರು?” ಆದರೆ ನಮಗೆ ಕ್ರಿಸ್ತ ಯೇಸುವಿನ ಮನಸ್ಸು ಇದೆ.


ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟದ್ದನ್ನು ದ್ವೇಷಿಸಿ ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.


ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು. ಅವರು ನಿನ್ನ ವಾಕ್ಯಗಳನ್ನು ಕೇಳುವರು. ಆದರೆ ಅವರು ಅವುಗಳನ್ನು ಪಾಲಿಸುವುದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು. ಆದರೆ ಅವರ ಹೃದಯವು ಅನ್ಯಾಯದ ಲಾಭದ ಕಡೆಗೆ ಹೋಗುವುದು.


ಅವಳು ಅವನಿಗೆ, “ನಿನ್ನ ಹೃದಯವು ನನ್ನ ಸಂಗಡ ಇಲ್ಲದೆ ಇರುವಾಗ, ನಿನ್ನನ್ನು ಪ್ರೀತಿಮಾಡುತ್ತೇನೆ ಎಂದು ನೀನು ಹೇಗೆ ಹೇಳುತ್ತೀ? ನೀನು ಈ ಮೂರು ಸಾರಿ ನನಗೆ ವಂಚನೆ ಮಾಡಿದೆ; ನಿನ್ನ ದೊಡ್ಡ ಶಕ್ತಿಯ ರಹಸ್ಯ ಯಾವುದರಲ್ಲಿ ಉಂಟೋ ನನಗೆ ತಿಳಿಸಲಿಲ್ಲ,” ಎಂದಳು.


ನನ್ನ ಪ್ರಿಯ ಮಕ್ಕಳೇ, ನೀವು ಬರೀಮಾತಿನಿಂದಾಗಲಿ, ಹೊಗಳಿಕೆಯ ಮಾತಿನಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದಲ್ಲಿಯೂ ಪ್ರೀತಿಸುವವರಾಗಿರಬೇಕು.


ನೀವು ಕ್ರಿಸ್ತ ಯೇಸುವಿನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡಿದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.


ನಿನ್ನ ಯೌವನವನ್ನೂ ಯಾರೂ ತಾತ್ಸಾರ ಮಾಡದಿರಲಿ. ಆದರೆ ನಂಬುವವರಿಗೆ ನುಡಿಯಲ್ಲಿ, ನಡೆಯಲ್ಲಿ, ಪ್ರೀತಿಯಲ್ಲಿ, ವಿಶ್ವಾಸದಲ್ಲಿ, ಶುದ್ಧತ್ವದಲ್ಲಿ ನೀನೇ ಆದರ್ಶನಾಗಿರು.


ನಂಬುವವರಾದ ನಿಮ್ಮೊಂದಿಗೆ ನಾವು ಎಷ್ಟೋ ಪವಿತ್ರರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬುದಕ್ಕೆ ನೀವೇ ಸಾಕ್ಷಿಗಳು, ಮಾತ್ರವಲ್ಲದೆ ದೇವರೂ ಸಾಕ್ಷಿ.


ಆದಕಾರಣ ದೇವರಿಂದ ಆಯ್ಕೆಯಾದವರೂ ಪರಿಶುದ್ಧರೂ ಪ್ರಿಯರೂ ಆಗಿರುವ ನೀವು ಕನಿಕರ, ದಯೆ, ದೀನತ್ವ, ಸಾತ್ವಿಕತ್ವ, ದೀರ್ಘಶಾಂತಿ ಇವುಗಳನ್ನು ಧರಿಸಿಕೊಳ್ಳಿರಿ.


ಅದನ್ನು ನೀವು ಓದಿದರೆ ಕ್ರಿಸ್ತನ ರಹಸ್ಯದ ಕುರಿತಾಗಿ ನನಗಿರುವ ಒಳನೋಟವನ್ನು ನೀವೇ ಅರ್ಥಮಾಡಿಕೊಳ್ಳುವಿರಿ.


ಇದೊಂದನ್ನು ಮಾತ್ರ ನಿಮ್ಮಿಂದ ತಿಳಿಯಬಯಸುತ್ತೇನೆ. ನೀವು ಪವಿತ್ರ ಆತ್ಮರನ್ನು ಹೊಂದಿದ್ದು ನಿಯಮದ ಕ್ರಿಯೆಯಿಂದಲೋ? ಇಲ್ಲವೆ ಕೇಳಿದ್ದನ್ನು ನಂಬಿದ್ದರಿಂದಲೋ?


ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಜ್ಞಾನ ಹಾಗೂ ಮನವೊಲಿಸುವ ವಾಕ್ಯಗಳನ್ನು ಪ್ರಯೋಗಿಸದೆ, ದೇವರಾತ್ಮನ ಶಕ್ತಿಯನ್ನೇ ಪ್ರಯೋಗಿಸಿದೆನು.


ಬಲವಾದ ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ಪವಿತ್ರಾತ್ಮ ಶಕ್ತಿಯಿಂದಲೂ ಮಾಡಿದ ಕಾರ್ಯಗಳನ್ನೇ ಹೊರತು ಬೇರೆ ಯಾವ ಕಾರ್ಯಗಳನ್ನೂ ಹೇಳುವುದಕ್ಕೆ ನನಗೆ ಧೈರ್ಯ ಸಾಲದು. ಯೆರೂಸಲೇಮಿನಿಂದ ಪ್ರಾರಂಭಿಸಿ, ಇಲ್ಲುರಿಕದವರೆಗೆ ನಾನು ಕ್ರಿಸ್ತನ ಸುವಾರ್ತೆಯನ್ನು ಸಂಪೂರ್ಣವಾಗಿ ಸಾರಿದ್ದೇನೆ.


ತಮಗೋಸ್ಕರವಲ್ಲ ಆದರೆ ನಿಮಗೋಸ್ಕರ ಸೇವೆಮಾಡಿದರೆಂದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು, ಪರಲೋಕದಿಂದ ಕಳುಹಿಸಲಾದ ಪವಿತ್ರಾತ್ಮ ದೇವರಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ಪ್ರಸಿದ್ಧಿಮಾಡಲಾಗಿದೆ. ದೇವದೂತರು ಸಹ ಈ ಸಂಗತಿಗಳನ್ನು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುತ್ತಾರೆ.


ಎಲ್ಲಾ ವಿಷಯಗಳಲ್ಲಿ ನಿನ್ನನ್ನು ಸತ್ಕಾರ್ಯ ಮಾಡುವುದರಲ್ಲಿ ಆದರ್ಶವಾಗಿ ತೋರಿಸು. ಬೋಧನೆಯಲ್ಲಿ ಪ್ರಾಮಾಣಿಕತೆಯನ್ನೂ ಗಂಭೀರತೆಯನ್ನೂ


ವಾಕ್ಯವನ್ನು ಸಾರು; ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಸಿದ್ಧವಾಗಿರು. ಎಲ್ಲಾ ತಾಳ್ಮೆಯಿಂದ ಉಪದೇಶಿಸಿ ಖಂಡಿಸು, ಗದರಿಸು, ಪ್ರೋತ್ಸಾಹಿಸು.


ನೀನಾದರೋ ನನ್ನ ಎಲ್ಲಾ ಬೋಧನೆ, ನನ್ನ ನಡತೆ, ನನ್ನ ಉದ್ದೇಶ, ನಂಬಿಕೆ, ದೀರ್ಘಶಾಂತಿ, ಪ್ರೀತಿ, ಸೈರಣೆ,


ವೃದ್ಧ ಸ್ತ್ರೀಯರನ್ನು ತಾಯಿಯಂತೆಯೂ ಯೌವನ ಸ್ತ್ರೀಯರನ್ನು ಪೂರ್ಣ ಪವಿತ್ರತೆಯಿಂದ ಸಹೋದರಿಯರಂತೆಯೂ ಅವರವರಿಗೆ ಬುದ್ಧಿ ಹೇಳು.


ಏಕೆಂದರೆ, ಜ್ಞಾನ ಮತ್ತು ತಿಳುವಳಿಕೆಯ ಎಲ್ಲಾ ನಿಕ್ಷೇಪಗಳೂ ಕ್ರಿಸ್ತ ಯೇಸುವಿನಲ್ಲಿಯೇ ಮರೆಯಾಗಿವೆ.


ಹೇಗೆಂದರೆ, ಪವಿತ್ರಾತ್ಮ ದೇವರ ಮೂಲಕ ಒಬ್ಬನಿಗೆ ಜ್ಞಾನ ವಾಕ್ಯವು, ಒಬ್ಬನಿಗೆ ಆ ಆತ್ಮರ ಅನುಸಾರವಾಗಿ ವಿದ್ಯಾವಾಕ್ಯವು,


ನಿಮಗೆ ಶ್ರಮೆ ಪಡಿಸಬಾರದೆಂದು ನಾನು ಕೊರಿಂಥಕ್ಕೆ ಹಿಂದಿರುಗಿ ಬರಲಿಲ್ಲ. ಇದಕ್ಕೆ ದೇವರೇ ಸಾಕ್ಷಿ.


ನೀವು ಯಾರನ್ನಾದರೂ ಕ್ಷಮಿಸಿದರೆ, ನಾನು ಅವರನ್ನು ಕ್ಷಮಿಸುವೆನು. ನಾನು ಯಾರನ್ನಾದರೂ ಕ್ಷಮಿಸಿದರೆ, ನಿಮ್ಮ ನಿಮಿತ್ತವಾಗಿಯೇ ಕ್ರಿಸ್ತ ಯೇಸುವಿನ ಸನ್ನಿಧಾನದಲ್ಲಿ ಕ್ಷಮಿಸುವೆನು.


ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗ, ಈ ಮಾತುಗಳನ್ನು ಬರೆದಿದ್ದೇನೆ. ನಾನು ಬಂದಾಗ ನಿಮ್ಮನ್ನು ಕೆಡವಿ ಹಾಕುವುದಕ್ಕಲ್ಲ ಆದರೆ ಕಟ್ಟುವುದಕ್ಕಾಗಿ ಕರ್ತ ಯೇಸು ನನಗೆ ಕೊಟ್ಟಿರುವ ಅಧಿಕಾರದಿಂದ ನಿಮಗೆ ಕಾಠಿಣ್ಯವನ್ನು ತೋರಿಸುವುದಕ್ಕೆ ಅವಕಾಶವಿರಬಾರದೆಂದು ಅಪೇಕ್ಷಿಸುತ್ತೇನೆ.


ಆದರೆ ಸ್ವರ್ಗೀಯ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಅಧೀನವಾದದ್ದು, ಕರುಣೆಯಿಂದ ತುಂಬಿದ್ದು ಒಳ್ಳೆಯ ಫಲವನ್ನು ಕೊಡುವಂಥದ್ದು ಆಗಿದೆ. ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು