Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 6:9 - ಕನ್ನಡ ಸಮಕಾಲಿಕ ಅನುವಾದ

9 ಪ್ರಖ್ಯಾತರಾಗಿದ್ದರೂ ಅಪ್ರಖ್ಯಾತರಾಗಿದ್ದೇವೆ; ಸಾಯುತ್ತಿದ್ದರೂ ನಾವು ಜೀವಿಸುತ್ತಿದ್ದೇವೆ, ನಾವು ಪೆಟ್ಟು ತಿಂದಿದ್ದೇವೆ, ಕೊಲೆಗೆ ಗುರಿಯಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾವು ಪ್ರಸಿದ್ಧರಾಗಿದ್ದರೂ ಅಪರಿಚಿತರೆನ್ನಿಸಿಕೊಂಡು ಸೇವೆ ಮಾಡಿದ್ದೇವೆ. ಸಾಯುವವರಾಗಿ ತೋರಿದರೂ, ಬದುಕಿದ್ದೇವೆ! ನೋಡಿ, ಶಿಕ್ಷೆಗೆ ಗುರಿಯಾದರೂ ಕೊಲ್ಲಲ್ಪಡದವರಾಗಿದ್ದೇವೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಪ್ರಖ್ಯಾತರಾಗಿದ್ದರೂ ಖ್ಯಾತರಹಿತರಾಗಿದ್ದೇವೆ. ಬದುಕಿದ್ದರೂ ಸತ್ತವರೆನಿಸಿಕೊಂಡಿದ್ದೇವೆ. ಶಿಕ್ಷೆಗೆ ಗುರಿಯಾಗಿದ್ದರೂ ಇನ್ನೂ ಕೊಲೆಗೆ ಈಡಾಗದೆ ಇದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮೋಸಗಾರರೆನಿಸಿಕೊಂಡರೂ ಸತ್ಯವಂತರೂ, ಅಜ್ಞಾತರೆನಿಸಿಕೊಂಡರೂ ವಿಜ್ಞಾತರೂ, ಸಾಯುವವರಾಗಿ ತೋರಿದರೂ ಬದುಕುವವರೂ ಆಗಿದ್ದೇವೆ. ಶಿಕ್ಷೆ ಹೊಂದುವವರಾಗಿದ್ದರೂ ಕೊಲ್ಲಲ್ಪಡದವರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾವು ಪ್ರಸಿದ್ಧರಾಗಿದ್ದರೂ ಕೆಲವರು ನಮ್ಮನ್ನು ಅಪ್ರಸಿದ್ಧರಂತೆ ಕಾಣುತ್ತಾರೆ. ನಾವು ಸಾಯುವಂತಿದ್ದರೂ ಬದುಕಿದ್ದೇವೆ; ಶಿಕ್ಷಿಸಲ್ಪಟ್ಟರೂ ಕೊಲ್ಲಲ್ಪಡಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ವಳಕ್ ನಸಲ್ಲ್ಯಾಂಚ್ಯಾ ಸಾರ್ಕೆ ಅಮ್ಕಾ ಕರ್‍ತ್ಯಾತ್, ಜಾಲ್ಯಾರ್ಬಿ ಅಮಿ ಸಗ್ಳ್ಯಾಕ್ನಿ ವಳ್ಕಿಚೆ, ಅಮಿ ಮರ್ನಾಚ್ಯಾ ಪರಿಸ್ಥಿತಿತ್ ಪಾವಲ್ಲೆ ಸರ್ಕೆ ದಿಸ್ತಾವ್, ಜಾಲ್ಯಾರ್ ಬಿ ಅಮಿ ಝಿತ್ತೆಚ್ ಹಾಂವ್, ಅಮ್ಕಾ ಮಾರುನ್ ಬಡ್ವುಲ್ಯಾನಾತ್ ಜಾಲ್ಯಾರ್ಬಿ ಅಮ್ಚೊ ಜಿವ್ ಕಾಡುನ್ ಹೊವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 6:9
18 ತಿಳಿವುಗಳ ಹೋಲಿಕೆ  

ಇವು ಪವಿತ್ರ ವೇದದಲ್ಲಿ ಬರೆದಿರುವಂತೆ ಇವೆ: “ನಿನಗೋಸ್ಕರ ನಾವು ದಿನವೆಲ್ಲಾ ಮರಣಕ್ಕೆ ಗುರಿಯಾಗಿದ್ದೇವೆ; ವಧಿಸಲಿಕ್ಕಾಗಿರುವ ಕುರಿಗಳಂತೆ ನಾವು ಭಾವಿಸಿರುತ್ತೇವೆ.”


ನನ್ನ ಮಾತಿನಲ್ಲಿ ಚಾತುರ್ಯ ಇಲ್ಲದಿದ್ದರೂ ನನಗೆ ತಿಳುವಳಿಕೆಯಿದೆ. ಇದನ್ನು ನಾನು ಪ್ರತಿಯೊಂದು ಸಂದರ್ಭಗಳಲ್ಲಿಯೂ ಬಹಳ ಸ್ಪಷ್ಟಪಡಿಸಿರುತ್ತೇನೆ.


ನಾವು ನಾಚಿಕೆಯ ಗುಪ್ತ ಕಾರ್ಯಗಳನ್ನು ಬಿಟ್ಟುಬಿಟ್ಟು, ಕುತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯಗಳನ್ನು ವ್ಯಾಖ್ಯಾನ ಮಾಡದೆಯೂ ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತಾ, ಎಲ್ಲಾ ಮನುಷ್ಯರ ಮನಸ್ಸಾಕ್ಷಿಯು ಒಪ್ಪಬೇಕಾದ ರೀತಿಯಲ್ಲಿ ನಮ್ಮನ್ನು ನಾವೇ ದೇವರ ಮುಂದೆ ಸಮರ್ಪಿಸಿಕೊಳ್ಳುತ್ತೇವೆ.


ಅಪೊಸ್ತಲರಾದ ನಮ್ಮನ್ನು ಮರಣದಂಡನೆ ಹೊಂದಿದವರಂತೆ ದೇವರು ಮೆರವಣಿಗೆಯ ಕಡೆಯವರನ್ನಾಗಿ ಮಾಡಿ ತೋರಿಸಿದ್ದಾರೆಂದು ನನಗನಿಸುತ್ತದೆ. ಏಕೆಂದರೆ, ದೇವರು ನಮ್ಮನ್ನು ದೇವದೂತರಿಗೂ ಮನುಷ್ಯರಿಗೂ ಇಡೀ ಜಗತ್ತಿಗೂ ಹಾಸ್ಯಾಸ್ಪದವಾದ ನೋಟವನ್ನಾಗಿ ಮಾಡಿದ್ದಾರೆ.


ಕರ್ತನ ಭಯಭಕ್ತಿಯನ್ನು ಅರಿತಿರುವ ಕಾರಣ, ಜನರ ಮನವೊಲಿಸಲು ನಾವು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲವರಾಗಿದ್ದಾರೆ. ಅದು ನಿಮ್ಮ ಮನಸ್ಸಾಕ್ಷಿಗೂ ತಿಳಿದಿದೆ ಎಂದು ನಾನು ನಂಬುತ್ತೇನೆ.


ಸಹೋದರರೇ ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ನನಗೆ ನಿಮ್ಮ ಬಗ್ಗೆ ನಿಶ್ಚಯವಾಗಿರುವ ಹೆಮ್ಮೆಯಿಂದ ನಾನು ದಿನದಿನವು ಸಾಯುತ್ತಲಿದ್ದೇನೆ.


ನಾವು ಲೋಕದವರ ಸಂಗಡ ದಂಡನೆಗೆ ಗುರಿಯಾಗಬಾರದೆಂದು, ದೇವರು ನಮ್ಮನ್ನು ಈಗ ಈ ರೀತಿಯಾಗಿ ಶಿಸ್ತಿನ ನ್ಯಾಯವಿಚಾರಣೆಗೆ ಒಳಪಡಿಸುತ್ತಾರೆ.


ಬಲವಾದ ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ಪವಿತ್ರಾತ್ಮ ಶಕ್ತಿಯಿಂದಲೂ ಮಾಡಿದ ಕಾರ್ಯಗಳನ್ನೇ ಹೊರತು ಬೇರೆ ಯಾವ ಕಾರ್ಯಗಳನ್ನೂ ಹೇಳುವುದಕ್ಕೆ ನನಗೆ ಧೈರ್ಯ ಸಾಲದು. ಯೆರೂಸಲೇಮಿನಿಂದ ಪ್ರಾರಂಭಿಸಿ, ಇಲ್ಲುರಿಕದವರೆಗೆ ನಾನು ಕ್ರಿಸ್ತನ ಸುವಾರ್ತೆಯನ್ನು ಸಂಪೂರ್ಣವಾಗಿ ಸಾರಿದ್ದೇನೆ.


ಆದರೂ ಇವನ ಬಗ್ಗೆ ಖಚಿತವಾಗಿ ತಮಗೆ ಬರೆಯಲು ನನಗೇನು ಇಲ್ಲದಿರುವುದರಿಂದ, ಅಗ್ರಿಪ್ಪ ರಾಜನೇ, ಇವನನ್ನು ತಮ್ಮ ಮುಂದೆ ತಂದಿದ್ದೇನೆ. ಹೀಗೆ ಈ ವಿಚಾರಣೆಯ ಮೂಲಕ ಬರೆಯಲು ನನಗೇನಾದರೂ ಸಿಕ್ಕಬಹುದು.


ಆದರೆ ಅವರಿಗೆ ತಮ್ಮ ಸಂಪ್ರದಾಯದ ಬಗ್ಗೆಯೂ ಸತ್ತು ಹೋಗಿದ್ದ ಯೇಸು ಎಂಬ ಮನುಷ್ಯನು ಜೀವಿಸುತ್ತಿದ್ದಾನೆಂದೂ ಪೌಲ ಹೇಳುವಂಥದ್ದರ ಬಗ್ಗೆ ವಾದವಿವಾದವಿತ್ತು.


ಪೌಲನೆಂಬ ಈ ಮನುಷ್ಯನು ಎಫೆಸದಲ್ಲಿಯೂ ಇಡೀ ಏಷ್ಯಾ ಪ್ರಾಂತದಲ್ಲಿಯೂ ದೊಡ್ಡ ಸಂಖ್ಯೆಯಲ್ಲಿ ಜನರನ್ನು ಮನವೊಲಿಸಿ, ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲ ಎಂದು ಹೇಳಿ, ಅವರನ್ನು ಮಾರ್ಪಡಿಸಿಬಿಟ್ಟಿದ್ದಾನೆ ಎಂಬುದನ್ನು ನೀವು ಕೇಳಿದ್ದೀರಿ ಹಾಗೂ ಕಂಡಿದ್ದೀರಿ.


ಆದರೆ ಎಪಿಕೂರಿಯರು ಹಾಗೂ ಸ್ತೋಯಿಕರು ಎಂಬ ತತ್ವಜ್ಞಾನಿಗಳಲ್ಲಿ ಸಹ ಕೆಲವರು ಅವನೊಂದಿಗೆ ವಾಗ್ವಾದ ಮಾಡಲು ಪ್ರಾರಂಭಿಸಿ, “ಈ ಬಾಯಿಬಡುಕ ಏನು ಹೇಳಬೇಕೆಂದಿದ್ದಾನೆ?” ಎಂದರು. ಇನ್ನೂ ಕೆಲವರು, “ಅವನು ವಿದೇಶದ ದೇವರುಗಳ ಬಗ್ಗೆ ಪ್ರಸ್ತಾಪಿಸುವಂತೆ ತೋರುತ್ತದೆ,” ಎಂದರು. ಏಕೆಂದರೆ ಅವನು ಯೇಸುವನ್ನು ಮತ್ತು ಪುನರುತ್ಥಾನವನ್ನು ಕುರಿತ ಸುವಾರ್ತೆ ಸಾರುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು