Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 7:10 - ಕನ್ನಡ ಸಮಕಾಲಿಕ ಅನುವಾದ

10 ದೈವಿಕ ದುಃಖವು ಪಶ್ಚಾತ್ತಾಪವನ್ನು ತಂದು ರಕ್ಷಣೆಗೆ ನಡೆಸುತ್ತದೆ. ಆ ಪಶ್ಚಾತ್ತಾಪದಲ್ಲಿ ವಿಷಾಧವಿರುವುದಿಲ್ಲ. ಆದರೆ ಪ್ರಾಪಂಚಿಕ ದುಃಖವು ಮರಣಕ್ಕೆ ನಡೆಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದೇವರ ಚಿತ್ತಾನುಸಾರವಾಗಿರುವ ದುಃಖವು ರಕ್ಷಣೆಗೆ ಕಾರಣವಾಗುವ ಮಾನಸಾಂತರವನ್ನುಂಟು ಮಾಡುತ್ತದೆ, ಆ ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಆಸ್ಪದವಿಲ್ಲ; ಆದರೆ ಲೋಕದವರಿಗಿರುವಂಥ ದುಃಖವು ಮರಣವನ್ನುಂಟುಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ದೇವರ ಚಿತ್ತಾನುಸಾರ ಬಂದೊದಗುವ ದುಃಖವು ಹೃದಯ ಪರಿವರ್ತನೆಗೆ ಕಾರಣವಾಗುತ್ತದೆ; ಜೀವೋದ್ಧಾರಕ್ಕೆ ಎಡೆಮಾಡುತ್ತದೆ. ಕೇವಲ ಪ್ರಾಪಂಚಿಕವಾದ ದುಃಖವು ಸಾವಿಗೆ ಒಯ್ಯುತ್ತದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದೇವರ ಚಿತ್ತಾನುಸಾರವಾಗಿರುವ ದುಃಖವು ಮಾನಸಾಂತರವನ್ನುಂಟುಮಾಡಿ ರಕ್ಷಣೆಗೆ ಕಾರಣವಾಗಿದೆ; ಆ ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಆಸ್ಪದವಿಲ್ಲ; ಆದರೆ ಲೋಕದವರಿಗಿರುವಂಥ ದುಃಖವು ಮರಣವನ್ನುಂಟುಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದೇವರ ಇಷ್ಟಾನುಸಾರವಾದ ದುಃಖವು ಹೃದಯವನ್ನೂ ಜೀವಿತವನ್ನೂ ಪರಿವರ್ತಿಸುತ್ತದೆ. ಈ ಪರಿವರ್ತನೆಯು ರಕ್ಷಣೆಗೆ ನಡೆಸುತ್ತದೆ. ಈ ಪರಿವರ್ತನೆಯ ವಿಷಯದಲ್ಲಿ ನಾವು ವ್ಯಸನಪಡಬೇಕಾಗಿಲ್ಲ. ಆದರೆ, ಲೋಕವು ಹೊಂದಿರುವ ದುಃಖವು ಮರಣವನ್ನು ಬರಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ದೆವಾಚ್ಯಾ ಇಚ್ಚಾ ಸಾರ್ಕೆ ಸೊಸಲ್ಲೊ ದುಖ್ ಮನಾತ್ ಪಶ್ಚಾತಾಪ್ ಹೊಯ್ ಸರ್ಕೆ ಕರ್‍ತಾ ಅನಿ ತೆಕಾ ಸುಟ್ಕಾ ದಿವ್ಕ್ ಕಾರನ್ ಹೊತಾ. ಅನಿ ಹ್ಯಾತುರ್ ಕಸ್ಲೊಬಿ ಬೆಜಾರ್ ಮನ್ತಲೊ ನಾ. ಖರೆ ಜಗಾಚ್ಯಾ ರಿತಿ ಸರ್ಕೆ ಸೊಸಲ್ಲೊ ದುಖ್ ಮರಾನ್ ಹಾನ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 7:10
32 ತಿಳಿವುಗಳ ಹೋಲಿಕೆ  

ಆದ್ದರಿಂದ ನಿಮ್ಮ ಪಾಪಗಳು ತೊಳೆದುಹೋಗುವಂತೆ ಪಶ್ಚಾತ್ತಾಪಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಿರಿ. ಆಗ ನಿಮ್ಮ ಪಾಪಗಳು ಪರಿಹಾರವಾಗಿ ಕರ್ತ ದೇವರಿಂದ ವಿಶ್ರಾಂತಿಯ ಕಾಲಗಳು ನಿಮಗೆ ಒದಗಿ ಬರುವವು.


ಯೆಹೂದಿ ವಿಶ್ವಾಸಿಗಳು ಇದನ್ನು ಕೇಳಿದಾಗ, ಅವರಿಗೆ ಯಾವ ಆಕ್ಷೇಪಣೆಯೂ ಇರಲಿಲ್ಲ. ಹಾಗಾದರೆ ದೇವರು, “ಯೆಹೂದ್ಯರಲ್ಲದವರಿಗೂ ಸಹ ಜೀವಕ್ಕಾಗಿ ಪಶ್ಚಾತ್ತಾಪವನ್ನು ಕೊಟ್ಟಿದ್ದಾರೆ,” ಎಂದು ಹೇಳಿ ದೇವರನ್ನು ಕೊಂಡಾಡಿದರು.


ಆಗ ದಾವೀದನು ನಾತಾನನಿಗೆ, “ನಾನು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದೇನೆ,” ಎಂದನು. ನಾತಾನನು ದಾವೀದನಿಗೆ, “ನೀನು ಸಾಯದ ಹಾಗೆ ಯೆಹೋವ ದೇವರು ನಿನ್ನ ಪಾಪವನ್ನು ಪರಿಹರಿಸಿದರು.


“ಆದರೆ ಸುಂಕದವನು ದೂರದಲ್ಲಿ ನಿಂತು, ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಧೈರ್ಯಗೊಳ್ಳದೇ ತನ್ನ ಎದೆಯನ್ನು ಬಡಿದುಕೊಳ್ಳುತ್ತಾ, ‘ದೇವರೇ ಪಾಪಿಯಾದವನು ನಾನೇ ನನ್ನನ್ನು ಕರುಣಿಸು,’ ಎಂದು ಪ್ರಾರ್ಥಿಸಿದನು.


ಅದೇ ಪ್ರಕಾರ, ಪಶ್ಚಾತ್ತಾಪಪಟ್ಟು ದೇವರ ಕಡೆ ತಿರುಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವುದು, ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.


ಆಗ ದೇವರು, ನಿನೆವೆಯವರು ತಮ್ಮ ದುರ್ಮಾರ್ಗವನ್ನು ಬಿಟ್ಟು ತಿರುಗಿಕೊಂಡರೆಂದು ಕಂಡು, ತಾವು ವಿಧಿಸುವುದಾಗಿ ನುಡಿದ ವಿನಾಶವನ್ನು ಅವರ ಮೇಲೆ ಬರಮಾಡದೆ, ಅವರನ್ನು ಕನಿಕರಿಸಿದರು.


ತರುವಾಯ ಅವನು ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಬಯಸಿ, ಕಣ್ಣೀರನ್ನು ಸುರಿಸುತ್ತಾ ಬೇಡಿಕೊಂಡರೂ ಪಶ್ಚಾತ್ತಾಪಕ್ಕೆ ಮಾರ್ಗವಿಲ್ಲದೆ ನಿರಾಕರಿಸಲಾದವನೆಂದು ನೀವು ಬಲ್ಲಿರಿ.


ಹರ್ಷಹೃದಯವು ಒಳ್ಳೆಯ ಔಷಧ; ಆದರೆ ಕುಗ್ಗಿದ ಮನಸ್ಸು ಎಲುಬುಗಳನ್ನು ಒಣಗಿಸುತ್ತದೆ.


ಆದರೆ ದೇವರು ಯೋನನಿಗೆ, “ನೀನು ಸೋರೆ ಬಳ್ಳಿಯನ್ನು ಕುರಿತು ಕೋಪ ಮಾಡುವುದು ಸರಿಯೋ?” ಎಂದರು. ಅವನು, “ನಾನು ಸಾಯುವಷ್ಟು ಕೋಪ ಮಾಡುವುದು ಒಳ್ಳೆಯದೇ,” ಎಂದನು.


ಜನರೆಲ್ಲರೂ ಪ್ರತಿಯೊಬ್ಬನು ತನ್ನ ಪುತ್ರಪುತ್ರಿಯರಿಗೋಸ್ಕರವಾಗಿಯೂ ಮನೋವ್ಯಥೆಪಟ್ಟು, ದಾವೀದನನ್ನು ಕಲ್ಲೆಸೆಯಬೇಕೆಂದು ಹೇಳಿಕೊಂಡದ್ದರಿಂದ, ಅವನು ಬಹಳ ಇಕ್ಕಟ್ಟಿನಲ್ಲಿ ಸಿಕ್ಕಿಕೊಂಡಿದ್ದನು. ಆದರೂ ದಾವೀದನು ಯೆಹೋವ ದೇವರಲ್ಲಿ ತನ್ನನ್ನು ಬಲಪಡಿಸಿಕೊಂಡನು.


ನಾನು ತಿರುಗಿ ಬಂದಾಗ, ಹಿಂದೆ ನಿಮ್ಮಲ್ಲಿ ಅಶುದ್ಧತ್ವ, ಲೈಂಗಿಕ ಅನೈತಿಕತೆ, ಪೋಕರಿತನ ಮುಂತಾದ ಪಾಪಗಳನ್ನು ಮಾಡಿ ಪಶ್ಚಾತ್ತಾಪ ಪಡದಿರುವ ಅನೇಕರ ವಿಷಯವಾಗಿ ನನ್ನ ದೇವರು ನಿಮ್ಮ ವಿಷಯದಲ್ಲಿ ನನ್ನನ್ನು ತಗ್ಗಿಸಿಬಿಡುವನು ಎಂದು ದುಃಖಪಡಬೇಕಾಗಿರುವುದರಿಂದ ನಾನು ಭಯಪಡುತ್ತೇನೆ.


ಆಗ ಪೇತ್ರನು, “ಹುಂಜ ಕೂಗುವುದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ನಿರಾಕರಿಸುವೆ,” ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹಳವಾಗಿ ವ್ಯಥೆಪಟ್ಟು ಅತ್ತನು.


ಆದರೆ ಮನುಷ್ಯರೂ ಮೃಗಗಳೂ ಗೋಣಿತಟ್ಟು ಹಾಕಿಕೊಂಡು, ಜೋರಾದ ಧ್ವನಿಯಿಂದ ದೇವರಿಗೆ ಮೊರೆಯಿಡಲಿ. ಎಲ್ಲರೂ ತಮ್ಮ ತಮ್ಮ ದುರ್ಮಾರ್ಗಗಳನ್ನೂ, ತಮ್ಮ ತಮ್ಮ ಕೈಗಳಲ್ಲಿರುವ ಹಿಂಸಾಚಾರವನ್ನೂ ಬಿಟ್ಟು ತಿರುಗಲಿ.


ಆದರೆ ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಳ್ಳುವರು. ಪ್ರತಿಯೊಬ್ಬರೂ ತಮ್ಮ ತಮ್ಮ ಅಕ್ರಮಗಳ ನಿಮಿತ್ತ ಕಣಿವೆಯಲ್ಲಿರುವ ಪಾರಿವಾಳದ ಹಾಗೆ ಗೋಳಾಡಿ, ಪರ್ವತಗಳ ಮೇಲೆ ಇರುವರು.


ಅವರು ಅಳುತ್ತಾ ಬರುವರು. ಬಿನ್ನಹಗಳ ಸಂಗಡ ಅವರನ್ನು ನಡೆಸುವೆನು. ಅವು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು. ಏಕೆಂದರೆ ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ. ಎಫ್ರಾಯೀಮನು ನನ್ನ ಚೊಚ್ಚಲ ಮಗನೇ.


ಮನುಷ್ಯನ ಆತ್ಮವು ಅಸ್ವಸ್ಥತೆಯನ್ನು ಸಹಿಸುವುದು; ಆದರೆ ಮುರಿದ ಆತ್ಮವನ್ನು ಸಹಿಸುವವರು ಯಾರು?


ಬಾಧಿತರ ದಿನಗಳೆಲ್ಲವೂ ದುಃಖಭರಿತ. ಆದರೆ ಸಂತೋಷ ಹೃದಯವುಳ್ಳವನಿಗೆ ನಿತ್ಯವೂ ಔತಣ.


ಸಂತೋಷದ ಹೃದಯವು ಹರ್ಷವುಳ್ಳ ಮುಖಭಾವ ತೋರುವುದು. ಆದರೆ ನೊಂದ ಹೃದಯವು ಆತ್ಮಚೈತನ್ಯವನ್ನು ಕುಂದಿಸುತ್ತದೆ.


“ನಾನು ನನ್ನ ಪಿತೃಗಳ ಬಾಧ್ಯತೆಯನ್ನು ನಿನಗೆ ಕೊಡುವುದಿಲ್ಲ,” ಎಂದು ಇಜ್ರೆಯೇಲಿನವನಾದ ನಾಬೋತನು ಹೇಳಿದ ಮಾತಿಗೋಸ್ಕರ, ಅಹಾಬನು ವ್ಯಸನದಿಂದಲೂ ಕೋಪದಿಂದಲೂ ತನ್ನ ಮನೆಗೆ ಬಂದು, ತನ್ನ ಮಂಚದ ಮೇಲೆ ಮಲಗಿ, ತನ್ನ ಮುಖವನ್ನು ತಿರುಗಿಸಿಕೊಂಡು ಊಟಮಾಡದೆ ಇದ್ದನು.


ಆದರೆ ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ, ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ, ತನ್ನ ಪಟ್ಟಣದಲ್ಲಿರುವ ತನ್ನ ಮನೆಗೆ ಹೋದನು. ಅವನು ಮನೆಯನ್ನು ಕ್ರಮಪಡಿಸಿ, ಉರುಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.


ಯೋನಾದಾಬನು ಅಮ್ನೋನನಿಗೆ, “ಅರಸನ ಮಗನಾದ ನೀನು ದಿನದಿನಕ್ಕೆ ಏಕೆ ಕ್ಷೀಣವಾಗಿ ಹೋಗುತ್ತೀ? ನನಗೆ ತಿಳಿಸುವುದಿಲ್ಲವೋ?” ಎಂದನು. ಅದಕ್ಕೆ ಅಮ್ನೋನನು ಅವನಿಗೆ, “ನಾನು ನನ್ನ ಸಹೋದರನಾಗಿರುವ ಅಬ್ಷಾಲೋಮನ ಸಹೋದರಿ ತಾಮಾರಳನ್ನು ಪ್ರೀತಿಮಾಡುತ್ತಿದ್ದೇನೆ,” ಎಂದನು.


ರಾಹೇಲಳು ತಾನು ಯಾಕೋಬನಿಗೆ ಮಕ್ಕಳನ್ನು ಹೆರಲಿಲ್ಲ ಎಂದು ತಿಳಿದಾಗ, ಆಕೆಯು ತನ್ನ ಸಹೋದರಿಯ ಮೇಲೆ ಹೊಟ್ಟೆಕಿಚ್ಚು ಪಟ್ಟು ಯಾಕೋಬನಿಗೆ, “ನನಗೆ ಮಕ್ಕಳನ್ನು ಕೊಡು, ಇಲ್ಲದಿದ್ದರೆ ನಾನು ಸಾಯುತ್ತೇನೆ,” ಎಂದಳು.


ನನ್ನ ಅಕ್ರಮವನ್ನು ಅರಿಕೆ ಮಾಡುವೆನು; ನನ್ನ ಪಾಪಕ್ಕೋಸ್ಕರ ದುಃಖಪಡುವೆನು.


ನಗೆಗಿಂತ ದುಃಖವು ವಾಸಿ, ಏಕೆಂದರೆ ಮುಖದಲ್ಲಿ ದುಃಖ ಹೃದಯಕ್ಕೆ ಸುಖ.


ಈಗ ಸಂತೋಷಪಡುತ್ತೇನೆ. ನಿಮಗೆ ದುಃಖವಾಯಿತೆಂಬ ಕಾರಣಕ್ಕಾಗಿ ಅಲ್ಲ. ಆ ದುಃಖವು ನಿಮ್ಮನ್ನು ಪಶ್ಚಾತ್ತಾಪಕ್ಕೆ ನಡೆಸಿ, ನಿಮಗಾದ ದುಃಖವು ದೇವರ ಚಿತ್ತದಿಂದ ಆಗಿದ್ದರಿಂದ ನಮ್ಮಿಂದ ನಿಮಗೆ ನಷ್ಟವಾಗಲಿಲ್ಲ ಎಂಬುದಕ್ಕಾಗಿಯೂ ಈಗ ಸಂತೋಷಪಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು