Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 7:11 - ಕನ್ನಡ ಸಮಕಾಲಿಕ ಅನುವಾದ

11 ಈ ದೈವಿಕ ದುಃಖವು ನಿಮ್ಮಲ್ಲಿ ಏನು ಉಂಟುಮಾಡಿದೆ ಗಮನಿಸಿರಿ: ನಿಮ್ಮಲ್ಲಿ ಎಂಥಾ ಉತ್ಸಾಹ, ನಿರಪರಾಧಕ್ಕಾಗಿ ಎಂಥಾ ಪ್ರಯಾಸ, ಎಷ್ಟು ರೋಷ, ಎಷ್ಟು ಭಯ, ಎಷ್ಟು ಹಂಬಲ, ಎಷ್ಟು ಆಸಕ್ತಿ, ನ್ಯಾಯಕ್ಕಾಗಿ ಎಷ್ಟು ಆತುರ. ಪ್ರತಿಯೊಂದು ವಿಷಯದಲ್ಲಿಯೂ ನೀವು ನಿರ್ದೋಷಿಗಳೆಂದು ರುಜುಪಡಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನೀವು ದೇವರ ಚಿತ್ತಾನುಸಾರವಾಗಿ ಪಟ್ಟ ದುಃಖವು ನಿಮ್ಮಲ್ಲಿ ಎಂಥ ಶ್ರದ್ದೆಯನ್ನು ಉಂಟುಮಾಡಿತು ನೋಡಿರಿ. ನೀವು ನಿರ್ದೋಷಿಗಳೆಂದು ಸಾಬೀತುಪಡಿಸುವುದಕ್ಕೆ ಎಂಥ ಪ್ರಯಾಸ, ಎಂಥ ರೋಷ; ಎಂಥ ಭಯ; ಎಂಥ ಹಂಬಲ; ಎಂಥ ಉತ್ಸಾಹ; ತಪ್ಪಿತಸ್ಥರನ್ನು ಶಿಕ್ಷಿಸಲು ಎಂಥ ಬಯಕೆ. ನೀವು ಆ ಕಾರ್ಯದಲ್ಲಿ ನಿರ್ದೋಷಿಗಳೆಂದು ಎಲ್ಲಾ ವಿಧದಲ್ಲಿಯೂ ತೋರಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ದೇವರ ಚಿತ್ತಾನುಸಾರವಾದ ನಿಮ್ಮ ದುಃಖದಿಂದ ಎಂಥಾ ಶ್ರದ್ಧೆ ಉಂಟಾಗಿದೆ ಎಂಬುದನ್ನು ಗಮನಿಸಿನೋಡಿರಿ; ನಿಮ್ಮಲ್ಲಿ ಎಂಥ ಉತ್ಸಾಹ, ದೋಷವಿಮುಕ್ತರಾಗಲು ಎಂಥ ಪ್ರಯಾಸ, ಎಷ್ಟು ರೋಷ, ಎಷ್ಟು ಆವೇಶ, ಎಷ್ಟು ಎಚ್ಚರಿಕೆ, ಎಷ್ಟು ಹಂಬಲ, ತಪ್ಪಿತಸ್ಥರನ್ನು ಶಿಕ್ಷಿಸಲು ಎಷ್ಟು ಕಟ್ಟುನಿಟ್ಟು! ನೀವು ನಿರ್ದೋಷಿಗಳೆಂಬುದಕ್ಕೆ ಇವೆಲ್ಲವೂ ಸಾದೃಶ್ಯಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀವು ದೇವರ ಚಿತ್ತಾನುಸಾರವಾಗಿ ಪಟ್ಟ ದುಃಖವು ನಿಮಗೆ ಎಂಥ ತಹತಹವನ್ನು ಉಂಟುಮಾಡಿತು ನೋಡಿರಿ. ನೀವು ನಿರ್ದೋಷಿಗಳೆಂದು ಸ್ಥಾಪಿಸುವದಕ್ಕೆ ಎಷ್ಟೋ ಪ್ರಯಾಸಪಟ್ಟಿರಿ, ಎಷ್ಟೋ ಮನೋವ್ಯಥೆಯನ್ನು ಅನುಭವಿಸಿದಿರಿ; ಎಂಥ ಭಯವನ್ನು ಎಂಥ ಹಂಬಲವನ್ನು ತೋರಿಸಿದಿರಿ; ಮಾನಹಾನಿಗಾಗಿ ಎಷ್ಟೋ ರೋಷಪಟ್ಟು ಶಿಕ್ಷೆಮಾಡಿದಿರಿ. ನೀವು ಆ ಕಾರ್ಯಕ್ಕೆ ಸೇರಿದವರಲ್ಲವೆಂಬದನ್ನು ಎಲ್ಲಾ ವಿಧದಲ್ಲಿಯೂ ತೋರಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನೀವು ಯಾವ ದುಃಖವನ್ನು ಹೊಂದಿರಬೇಕೆಂದು ದೇವರು ಬಯಸಿದ್ದನೋ ಅದೇ ದುಃಖವನ್ನು ನೀವು ಹೊಂದಿದ್ದೀರಿ. ಆ ದುಃಖವು ನಿಮ್ಮನ್ನು ಬಹು ಆಸಕ್ತಿಯುಳ್ಳವರನ್ನಾಗಿ ಮಾಡಿತು; ನೀವು ತಪ್ಪಿತಸ್ಥರಾಗಿರಲಿಲ್ಲವೆಂದು ನಿರೂಪಿಸಬೇಕೆಂಬ ಬಯಕೆಯನ್ನು ನಿಮ್ಮಲ್ಲಿ ಉಂಟುಮಾಡಿತು; ನಿಮ್ಮನ್ನು ಕೋಪಗೊಳಿಸಿತು ಮತ್ತು ಭಯಗೊಳಿಸಿತು; ನನ್ನನ್ನು ನೋಡಬೇಕೆಂಬ ಬಯಕೆಯನ್ನು ನಿಮ್ಮಲ್ಲಿ ಉಂಟುಮಾಡಿತು; ನನ್ನ ಬಗ್ಗೆ ಚಿಂತಿಸುವಂತೆ ಮಾಡಿತು; ತಪ್ಪಿತಸ್ಥರನ್ನು ದಂಡಿಸಬೇಕೆಂಬ ಬಯಕೆಯನ್ನು ಉಂಟು ಮಾಡಿತು. ಆ ಸಮಸ್ಯೆಯ ಯಾವ ವಿಷಯದಲ್ಲಿಯೂ ನೀವು ಅಪರಾಧಿಗಳಾಗಿರಲಿಲ್ಲವೆಂದು ನಿರೂಪಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಬಗಾ ತುಮಿ ದೆವಾಚ್ಯಾ ಇಚ್ಚಾ ಪರ್ಕಾರ್ ದುಖ್ ಸೊಸಲ್ಲ್ಯಾಕ್ ಕಾಯ್ ಸಗ್ಳೆ ಪ್ರತಿ ಫಳ್ ತುಮ್ಕಾ ಗಾವ್ಲಾ, ಕವ್ಡಿ ಉಮ್ಮೆದ್ ತುಮ್ಚ್ಯಾ ಮದ್ದಿ ಭರ್ಲಾ! ತುಮಿ ಚುಕೆತ್ ನಸಲ್ಲೆ ಮನುನ್ ದಾಕ್ವುಕ್ ಕವ್ಡೆ ಬಗುಲ್ಯಾಶಿ, ಕಸ್ಲೊ ಸಂತಾಪ್, ಕಸ್ಲೆ ಭಿಂಯೆ, ಅನಿ ಕಸ್ಲಿ ಉರ್ಬಾ, ನ್ಯಾಯ್‍ನಿತ್ ಹುರಿ ಸರ್ಕೆ ಕರುನ್ ತುಮಿ ಚುಕೆತ್ ನಾಶಿ ಮನುನ್ ತುಮಿ ದಾಕ್ವುನ್ ದಿಲ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 7:11
54 ತಿಳಿವುಗಳ ಹೋಲಿಕೆ  

ಈ ರೀತಿಯಲ್ಲಿ ಕ್ರಿಸ್ತನಿಗೆ ಸೇವೆಮಾಡುವವರು ದೇವರಿಗೆ ಮೆಚ್ಚುಗೆಯಾದವರೂ ಜನರಿಂದ ಅನುಮೋದನೆ ಹೊಂದಿದವರೂ ಆಗಿರುತ್ತಾರೆ.


ನೀನು ನಾಚಿಕೆಗೆ ಒಳಪಡದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಬೋಧಿಸುವವನೂ ಆಗಿರುವಂತೆ ನಿನ್ನನ್ನು ದೇವರಿಗೆ ಮೆಚ್ಚಿಕೆಯಾದವನಾಗಿರಲು ಸಮರ್ಪಿಸಲು ಅತ್ಯಂತ ಆಸಕ್ತನಾಗಿರು.


ತೀತನು ಬರುವುದರಿಂದ ಮಾತ್ರವಲ್ಲ, ನೀವು ಅವನನ್ನು ಸ್ವೀಕರಿಸಿ, ಆದರಣೆಗಳಿಂದ ಸತ್ಕರಿಸಿದ್ದನ್ನು ಕೇಳಿ ನಮಗೆ ಸಂತೋಷವಾಯಿತು. ನೀವು ನನಗಾಗಿ ಹಂಬಲಿಸುತ್ತಿರುವುದನ್ನೂ, ಚಿಂತಿಸುವುದನ್ನೂ, ನನ್ನ ಮೇಲೆ ನಿಮಗಿರುವ ಆಳವಾದ ಅನುಕಂಪವನ್ನೂ ನಾವು ತೀತನಿಂದ ಕೇಳಿದಾಗ, ನಾನು ಇನ್ನೂ ಅಧಿಕ ಆನಂದಪಟ್ಟೆನು.


ಆದರೆ ಹೊರಗಿನವರನ್ನು ತೀರ್ಪುಮಾಡುವವರು ದೇವರೇ. “ಆ ದುಷ್ಟನನ್ನು ನಿಮ್ಮಿಂದ ತೆಗೆದು ಹೊರಗೆ ಹಾಕಿರಿ.”


ಭಯಭಕ್ತಿಯಿಂದ ಯೆಹೋವ ದೇವರ ಸೇವೆಮಾಡಿರಿ, ನಡುಗುತ್ತಾ ಅವರ ಆಳ್ವಿಕೆಯಲ್ಲಿ ಉಲ್ಲಾಸಪಡಿರಿ.


ನಾನು ಯಾರನ್ನು ಪ್ರೀತಿಸುತ್ತೇನೋ, ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಆಸಕ್ತನಾಗಿರು, ಪಶ್ಚಾತ್ತಾಪಪಡು.


ಬೇರೆಯವರನ್ನು ಬೆಂಕಿಯಿಂದ ಎಳೆದು ರಕ್ಷಿಸಿರಿ. ಭಯದಿಂದ ಕರುಣೆ ತೋರಿಸಿರಿ. ಪಾಪ ಕೃತ್ಯಗಳಿಂದ ಮೈಲಿಗೆಯಾದ ಅವರ ಜೀವನವನ್ನು ಸಹ ಹಗೆ ಮಾಡಿರಿ.


ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ರಕ್ಷಣೆಯಲ್ಲಿ ಬೆಳೆಯುವ ಹಾಗೆ ಆತ್ಮಿಕವಾದ ಶುದ್ಧಹಾಲನ್ನು ಬಯಸಿರಿ.


ಪ್ರತಿಯೊಬ್ಬನ ಕೆಲಸವನ್ನು ಪಕ್ಷಪಾತವಿಲ್ಲದೆ ತೀರ್ಪುಮಾಡುವ ದೇವರನ್ನು ನೀವು ತಂದೆಯೆಂದು ಬೇಡಿಕೊಳ್ಳುವವರಾಗಿದ್ದು ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.


ಹೀಗಿರಲಾಗಿ ದೇವರ ವಿಶ್ರಾಂತಿಯಲ್ಲಿ ಸೇರುವೆವು ಎಂಬ ವಾಗ್ದಾನವು ಇನ್ನೂ ಉಳಿದಿರಲು ನಿಮ್ಮಲ್ಲಿ ಯಾರಾದರೂ ಅದನ್ನು ಹೊಂದದೆ ಇರಬಾರದು ಎಂದು ಎಚ್ಚರವಹಿಸೋಣ.


ಇದು ನಂಬತಕ್ಕ ಮಾತಾಗಿದೆ. ದೇವರನ್ನು ನಂಬಿದವರು ಸತ್ಕ್ರಿಯೆಗಳನ್ನು ಮಾಡುವುದರಲ್ಲಿ ಜಾಗರೂಕರಾಗಿರುವಂತೆ ನೀನು ಇವುಗಳ ವಿಷಯವಾಗಿ ಪ್ರಾಮುಖ್ಯತೆಯನ್ನು ಕೊಡಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಹಿತಕರವೂ ಪ್ರಯೋಜನಕರವೂ ಆಗಿವೆ.


ಹೀಗಿರುವಲ್ಲಿ ನನ್ನ ಪ್ರಿಯ ಸ್ನೇಹಿತರೇ, ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರುವಾಗಲೂ ನೀವು ಯಾವಾಗಲೂ ನನಗೆ ವಿಧೇಯರಾದಂತೆ ಈಗಲೂ ವಿಧೇಯರಾಗಿ, ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ರಕ್ಷಣೆಯನ್ನು ಕಾರ್ಯರೂಪಕ್ಕೆ ತನ್ನಿರಿ.


ನಿಷ್ಪ್ರಯೋಜಕವಾದ ಕತ್ತಲೆಯ ಕಾರ್ಯಗಳೊಂದಿಗೆ ಪಾಲುಗಾರರಾಗಿರದೆ ಅವುಗಳನ್ನು ಬೆಳಕಿಗೆ ತನ್ನಿರಿ.


“ಕೋಪ ಮಾಡಬೇಕಾಗಿ ಬಂದರೂ ಪಾಪಮಾಡಬೇಡಿರಿ,” ಸೂರ್ಯನು ಮುಳುಗುವುದಕ್ಕಿಂತ ಮುಂಚೆ ನಿಮ್ಮ ಕೋಪವು ಇಳಿಯಲಿ.


ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾವು ದೇವರನ್ನು ಪ್ರಾರ್ಥಿಸುತ್ತೇವೆ. ಇದರಲ್ಲಿ ನಾವೇ ಉತ್ತೀರ್ಣರಾದವರು ಎಂದು ಕಂಡುಬರಬೇಕೆಂಬುದು ನಮ್ಮ ಉದ್ದೇಶವಲ್ಲ. ನಾವು ಸೋತವರಾಗಿ ಕಂಡುಬಂದರೂ ನೀವು ಒಳ್ಳೆಯದನ್ನೇ ಮಾಡಬೇಕೆಂಬುದು ನಮ್ಮ ಪ್ರಾರ್ಥನೆಯಾಗಿದೆ.


ಅಖಾಯದಲ್ಲಿರುವ ನೀವು ಕಳೆದ ಒಂದು ವರ್ಷದಿಂದ ಉದಾರವಾಗಿ ದಾನ ಮಾಡಲು ಸಿದ್ಧರಾಗಿದ್ದೀರಿ ಎಂಬ ವಿಷಯವನ್ನು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳಿದ್ದೇನೆ. ನಿಮ್ಮ ಆಸಕ್ತಿಯನ್ನು ಕೇಳಿ ಮಕೆದೋನ್ಯದವರಲ್ಲಿ ಎಷ್ಟೋ ಮಂದಿ ಕಾರ್ಯರೂಪಕ್ಕೆ ಉತ್ತೇಜನಗೊಂಡಿರುತ್ತಾರೆ.


ಪ್ರಿಯರೇ, ಇಂಥಾ ವಾಗ್ದಾನಗಳು ನಮಗಿರುವುದರಿಂದ ನಮ್ಮ ದೇಹಾತ್ಮಗಳನ್ನು ಮಲಿನಗೊಳಿಸುವ ಎಲ್ಲಾ ವಿಷಯಗಳಿಂದ ನಮ್ಮನ್ನು ಶುದ್ಧಮಾಡಿ, ದೇವರ ಮೇಲಿನ ಭಯಭಕ್ತಿಯಿಂದ ನಮ್ಮ ಪವಿತ್ರತೆಯನ್ನು ಪರಿಪೂರ್ಣಗೊಳಿಸೋಣ.


ಅದಕ್ಕೆ ಬದಲಾಗಿ, ಸರ್ವ ವಿಷಯಗಳಲ್ಲಿ ನಾವು ದೇವರ ಸೇವಕರಾಗಿದ್ದೇವೆಂದು ತೋರಿಸುತ್ತೇವೆ. ಕಷ್ಟ, ಸಂಕಟ ತೊಂದರೆಗಳಲ್ಲಿ ಮಹಾ ದೀರ್ಘತಾಳ್ಮೆಯನ್ನು ತೋರಿಸುತ್ತೇವೆ.


ಅವನಿಗೆ ನಿಮ್ಮಲ್ಲಿ ಅನೇಕರಿಂದ ಉಂಟಾದ ಶಿಕ್ಷೆಯೇ ಸಾಕು.


ಹೀಗೆ ದೇವರು ದೇಹದಲ್ಲಿ ಭಿನ್ನಭೇದವಿಲ್ಲದೇ, ಎಲ್ಲವೂ ಒಂದಕ್ಕೊಂದು ಪರಸ್ಪರ ಚಿಂತಿಸುವುದಾಗಿ ಕೂಡಿ ಹೋಗುವಂತೆ ಸಮಾನವಾಗಿ ಮಾಡಿದ್ದಾರೆ.


ಹೀಗಿದ್ದರೂ ಗರ್ವಪಡುತ್ತಿದ್ದೀರಲ್ಲಾ! ನೀವು ದುಃಖಪಟ್ಟು, ಈ ಕಾರ್ಯ ಮಾಡಿದವನನ್ನು ನಿಮ್ಮೊಳಗಿಂದ ಬಹಿಷ್ಕರಿಸಬೇಕಲ್ಲವೇ?


ಅದು ನಿಜವೆ, ಆದರೆ ಅವರ ಅವಿಶ್ವಾಸದಿಂದಲೇ ಅವರನ್ನು ಮುರಿದು ಹಾಕಲಾಯಿತು. ನೀನಾದರೋ ವಿಶ್ವಾಸದಿಂದಲೇ ಇನ್ನೂ ನಿಂತಿರುವೆ. ಗರ್ವಪಡದೆ ಭಯದಿಂದಿರು.


ಪೌಲನು ಅವರಿಗಾಗಿ ಕಾಯುತ್ತಾ ಅಥೇನೆಯಲ್ಲಿ ಇದ್ದಾಗ, ಆ ಪಟ್ಟಣವು ವಿಗ್ರಹಗಳಿಂದ ತುಂಬಿಕೊಂಡಿದ್ದನ್ನು ಕಂಡು, ಅವನ ಆತ್ಮವು ಅವನೊಳಗೆ ಕುದಿಯಿತು.


ಯೇಸುವಿನ ಶಿಷ್ಯರು, “ನಿನ್ನ ಆಲಯದ ಮೇಲಿನ ಆಸಕ್ತಿಯು ನನ್ನನ್ನು ಬೆಂಕಿಯಂತೆ ದಹಿಸುತ್ತದೆ,” ಎಂದು ಪವಿತ್ರ ವೇದದಲ್ಲಿ ಬರೆದಿರುವುದನ್ನು ಜ್ಞಾಪಕಮಾಡಿಕೊಂಡರು.


ಆಗ ಯೇಸು ಸುತ್ತಲೂ ಇದ್ದವರನ್ನು ಕೋಪದಿಂದ ನೋಡಿ, ಅವರ ಹೃದಯಕಾಠಿಣ್ಯಕ್ಕಾಗಿ ದುಃಖಪಟ್ಟು, ಆ ಮನುಷ್ಯನಿಗೆ, “ನಿನ್ನ ಕೈಚಾಚು,” ಎಂದು ಹೇಳಿದರು. ಅವನು ಕೈಚಾಚಿದಾಗ, ಅವನ ಕೈ ಸಂಪೂರ್ಣವಾಗಿ ಗುಣವಾಯಿತು.


ಅರಸನು ಯಾವಾಗ ಈ ಮಾತುಗಳನ್ನು ಕೇಳಿದನೋ, ಆಗ ತನ್ನಲ್ಲಿಯೇ ಬಹಳವಾಗಿ ಬೇಸರಗೊಂಡು ದಾನಿಯೇಲನನ್ನು ಅದರಿಂದ ತಪ್ಪಿಸಬೇಕೆಂದು ತನ್ನ ಹೃದಯದಲ್ಲಿ ತಿಳಿದು, ಸೂರ್ಯಾಸ್ತಮಾನದವರೆಗೂ ಪ್ರಯತ್ನಪಟ್ಟನು.


ಇವುಗಳನ್ನೆಲ್ಲಾ ನಿರ್ಮಿಸಿದ್ದು ನನ್ನ ಕೈಯೇ. ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಕಟಾಕ್ಷಿಸುವವನು ಎಂಥವನೆಂದರೆ: ದೀನನೂ, ಮನಮುರಿದವನೂ, ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.


ಹೌದು, ಯೆಹೋವ ದೇವರೇ, ನಿಮ್ಮ ನ್ಯಾಯತೀರ್ಪಿನ ಮಾರ್ಗದಲ್ಲಿ ನಡೆಯುತ್ತಾ ನಾವು ನಿಮಗೋಸ್ಕರ ಕಾದುಕೊಂಡಿದ್ದೇವೆ, ನಿಮ್ಮ ನಾಮಸ್ಮರಣೆಯೇ ನಮ್ಮ ಹೃದಯದ ಬಯಕೆ.


ನನ್ನನ್ನು ನಿನ್ನ ಹೃದಯದ ಮೇಲೆ ಒಂದು ಮುದ್ರೆಯಾಗಿ ಧರಿಸಿಕೋ. ನಾನು ನಿನ್ನ ಕೈಮೇಲೆ ಒಂದು ಮುದ್ರೆಯಾಗಿರುವೆ. ಪ್ರೀತಿಯು ಮರಣದಷ್ಟು ಬಲವಾಗಿದೆ. ಮತ್ಸರವು ಸಮಾಧಿಯಷ್ಟು ಕ್ರೂರ. ಪ್ರೀತಿಯು ಉರಿಯುವ ಬೆಂಕಿ ಪ್ರಜ್ವಲಿಸುವ ಜ್ವಾಲೆಯ ಹಾಗಿರುವುದು.


ಯಾವಾಗಲೂ ಯೆಹೋವ ದೇವರ ಭಯಭಕ್ತಿಯಲ್ಲಿ ನಡೆದುಕೊಳ್ಳುವವನು ಧನ್ಯನು. ಆದರೆ ಹೃದಯವನ್ನು ಕಠಿಣಪಡಿಸಿಕೊಳ್ಳುವವನು ಕೇಡಿಗೆ ಸಿಕ್ಕಿಬೀಳುವನು.


ಜ್ಞಾನಿಯು ಯೆಹೋವ ದೇವರಿಗೆ ಭಯಪಟ್ಟು ಕೆಟ್ಟತನದಿಂದ ದೂರ ಹೋಗುವನು, ಆದರೆ ಬುದ್ಧಿಹೀನನು ಯೋಚಿಸದೆ ಆತ್ಮವಿಶ್ವಾಸದಿಂದ ನಡೆಯುವನು.


ತಮಗೆ ಭಯಪಡುವವರ ಇಷ್ಟವನ್ನು ನೆರವೇರಿಸುತ್ತಾರೆ. ಅವರ ಮೊರೆಯನ್ನು ಕೇಳಿ, ಅವರನ್ನು ರಕ್ಷಿಸುತ್ತಾರೆ.


ಉದಯಕ್ಕಾಗಿ ಕಾವಲುಗಾರ ಕಾದಿರುತ್ತಾರೆ. ನಾನು ಆ ಕಾವಲುಗಾರರು ಕಾದಿರುವುದಕ್ಕಿಂತ ಹೆಚ್ಚಾಗಿಯೇ ಯೆಹೋವ ದೇವರಿಗಾಗಿ ನಿರೀಕ್ಷಿಸುತ್ತಿದ್ದೇನೆ.


ನನ್ನ ವೈರಿಗಳು ನಿಮ್ಮ ಮಾತುಗಳನ್ನು ತಿರಸ್ಕರಿಸುವುದರಿಂದ, ನನ್ನ ಆಸಕ್ತಿಯು ನನ್ನನ್ನು ದಹಿಸಿಬಿಟ್ಟಿದೆ.


ಏಕೆಂದರೆ ನಿಮ್ಮ ಆಲಯದ ಮೇಲಿನ ಆಸಕ್ತಿಯು ಬೆಂಕಿಯಂತೆ ನನ್ನನ್ನು ದಹಿಸಿಬಿಟ್ಟಿದೆ. ನಿಮ್ಮನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ.


ದೇವರೇ, ಜಿಂಕೆಯು ನೀರಿನ ತೊರೆಗಳನ್ನು ಹೇಗೆ ಬಯಸುವುದೋ, ಹಾಗೆಯೇ ನನ್ನ ಪ್ರಾಣವು ನಿಮ್ಮನ್ನು ಬಯಸುತ್ತದೆ.


ಯೆಹೋವ ದೇವರೇ, ನಿಮಗೆ ನನ್ನ ಅಪೇಕ್ಷೆಗಳೆಲ್ಲಾ ಗೊತ್ತೇ ಇದೆ; ನನ್ನ ನಿಟ್ಟುಸಿರು ನಿಮಗೆ ಮರೆಯಾದದ್ದಲ್ಲ.


ನಾನಾದರೋ ಅವರು ಅಸ್ವಸ್ಥರಾದಾಗ ಗೋಣಿತಟ್ಟು ಹೊದ್ದುಕೊಂಡು ಉಪವಾಸದಿಂದ ತಗ್ಗಿಸಿಕೊಂಡೆನು; ನನ್ನ ಪ್ರಾರ್ಥನೆಗಳಿಗೆ ಉತ್ತರ ದೊರೆಯಲಿಲ್ಲ.


ಆಗ ನಾನು ಅವರನ್ನು ಗದರಿಸಿ, ಶಪಿಸಿ, ಅವರಲ್ಲಿ ಕೆಲವರನ್ನು ಹೊಡೆದು, ಅವರ ಕೂದಲನ್ನು ಕಿತ್ತು, “ನೀವು ನಿಮ್ಮ ಪುತ್ರಿಯರನ್ನು ಅವರ ಪುತ್ರರಿಗೂ, ಅವರ ಪುತ್ರಿಯರನ್ನು ನಿಮ್ಮ ಪುತ್ರರಿಗೂ, ಮದುವೆಮಾಡಿಕೊಡಬೇಡಿರಿ, ಎಂದು ದೇವರ ಹೆಸರಿನಲ್ಲಿ ಅವರಿಂದ ಪ್ರಮಾಣಮಾಡಿಸಿದೆನು.


ಈಗ ಸಂತೋಷಪಡುತ್ತೇನೆ. ನಿಮಗೆ ದುಃಖವಾಯಿತೆಂಬ ಕಾರಣಕ್ಕಾಗಿ ಅಲ್ಲ. ಆ ದುಃಖವು ನಿಮ್ಮನ್ನು ಪಶ್ಚಾತ್ತಾಪಕ್ಕೆ ನಡೆಸಿ, ನಿಮಗಾದ ದುಃಖವು ದೇವರ ಚಿತ್ತದಿಂದ ಆಗಿದ್ದರಿಂದ ನಮ್ಮಿಂದ ನಿಮಗೆ ನಷ್ಟವಾಗಲಿಲ್ಲ ಎಂಬುದಕ್ಕಾಗಿಯೂ ಈಗ ಸಂತೋಷಪಡುತ್ತೇನೆ.


ಆದ್ದರಿಂದ ನಾನು ಹೇಳಿದ್ದನ್ನೆಲ್ಲಾ ಹಿಂತೆಗೆದುಕೊಂಡು, ಧೂಳಿನಲ್ಲಿಯೂ ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ,” ಎಂದನು.


ಹೀಗೆ ನಮ್ಮ ಅನೀತಿಯೂ ದೇವರ ನೀತಿಯನ್ನು ಪ್ರಸಿದ್ಧಿಗೆ ತರುವುದಾದರೆ, ಕೋಪವನ್ನು ಸುರಿಸುವ ದೇವರು ಅನ್ಯಾಯಗಾರರೇನು? ನಾನು ಮಾನವ ರೀತಿಯಲ್ಲಿ ಮಾತನಾಡಿದ್ದೇನೆ.


ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತಮ್ಮ ಸಹೋದರ ಸಹೋದರಿಯನ್ನು ವಂಚಿಸದಿರಲಿ. ಏಕೆಂದರೆ ನಾವು ಮೊದಲು ತಿಳಿಸಿ ನಿಮಗೆ ಗಂಭೀರವಾಗಿ ಎಚ್ಚರಿಸಿದಂತೆ ಈ ಪಾಪಗಳ ವಿಷಯದಲ್ಲಿ ಕರ್ತ ಯೇಸುವು ಮುಯ್ಯಿಗೆ ಮುಯ್ಯಿ ತೀರಿಸುವವರಾಗಿದ್ದಾರೆ.


ಪಾಪಮಾಡುವ ಹಿರಿಯರನ್ನು ಎಲ್ಲರ ಮುಂದೆಯೇ ಗದರಿಸು. ಇದರಿಂದ ಇತರರಿಗೂ ಎಚ್ಚರಿಕೆಯಾಗುವುದು.


ಆದರೆ ಸ್ವರ್ಗೀಯ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಅಧೀನವಾದದ್ದು, ಕರುಣೆಯಿಂದ ತುಂಬಿದ್ದು ಒಳ್ಳೆಯ ಫಲವನ್ನು ಕೊಡುವಂಥದ್ದು ಆಗಿದೆ. ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು