Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 8:1 - ಕನ್ನಡ ಸಮಕಾಲಿಕ ಅನುವಾದ

1 ಪ್ರಿಯರೇ, ಮಕೆದೋನ್ಯದಲ್ಲಿರುವ ಸಭೆಗಳಿಗೆ ದೇವರು ಕೊಟ್ಟಿರುವ ಕೃಪೆಯನ್ನು ಕುರಿತು ನೀವು ತಿಳಿದಿರಬೇಕೆಂದು ನಮ್ಮ ಅಪೇಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಹೋದರರೇ, ಮಕೆದೋನ್ಯದ ಸಭೆಗಳಿಗೆ ಅನುಗ್ರಹಿಸಲ್ಪಟ್ಟ ದೇವರ ಕೃಪೆಯ ಕುರಿತು ನಿಮಗೆ ತಿಳಿಯಬೇಕೆಂದು ಬಯಸುತ್ತೇವೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸಹೋದರರೇ, ಮಕೆದೋನಿಯ ಸಭೆಗಳಿಗೆ ದೇವರು ದಯಪಾಲಿಸಿದ ಕೃಪಾತಿಶಯಗಳನ್ನು ನಾನು ನಿಮಗೆ ತಿಳಿಸ ಬಯಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸಹೋದರರೇ, ಮಕೆದೋನ್ಯದ ಸಭೆಗಳಲ್ಲಿ ದೇವರ ಕೃಪೆಯು ತೋರಿದ ಬಗೆಯನ್ನು ನಿಮಗೆ ತಿಳಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಹೋದರ ಸಹೋದರಿಯರೇ, ಮಕೆದೋನಿಯದ ಸಭೆಗಳಲ್ಲಿ ದೇವರು ತೋರಿದ ಕೃಪೆಯ ಬಗ್ಗೆ ನಿಮಗೆ ತಿಳಿಸಲು ಇಷ್ಟಪಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಭಾವಾನು ಅನಿ ಭೆನಿಯಾನು, ಮೆಸಿದೊನಿಯಾಚ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ದೆವಾನ್ ದಿಲ್ಲ್ಯಾಕುರ್ಪೆಚ್ಯಾ ವಿಶಯಾತ್ ತುಮ್ಕಾ ಗೊತ್ತ್ ರ್‍ಹಾವ್ಚೆ ಮನುನ್ ಮಾಜಿ ಆಶಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 8:1
15 ತಿಳಿವುಗಳ ಹೋಲಿಕೆ  

ನನ್ನಲ್ಲಿ ಬಲದಿಂದ ಕಾರ್ಯ ಮಾಡುವ ಕ್ರಿಸ್ತನ ಶಕ್ತಿಗೆ ಅನುಸಾರವಾಗಿ, ನಾನೂ ಸಹ ಪ್ರಯಾಸ ಪಡುತ್ತಾ ಈ ಗುರಿಗಾಗಿ ಹೋರಾಡುತ್ತೇನೆ.


ಸಮಸ್ತ ಮಕೆದೋನ್ಯದಲ್ಲಿರುವ ಸಹೋದರರನ್ನೆಲ್ಲಾ ನೀವು ಪ್ರೀತಿಸುತ್ತಿರುವುದು ನಿಜವೆ. ಆದರೂ ಪ್ರಿಯರೇ, ನೀವು ಪ್ರೀತಿಯಲ್ಲಿ ಇನ್ನೂ ಸಮೃದ್ಧಿಯಾಗಬೇಕೆಂದು ನಾವು ನಿಮ್ಮನ್ನು ಉತ್ತೇಜಿಸುತ್ತೇವೆ.


ಆದರೆ ನಾನು ಎಂಥವನಾಗಿದ್ದೇನೋ, ಅದು ದೇವರ ಕೃಪೆಯಿಂದಲೇ ಆಗಿರುತ್ತದೆ. ನನಗುಂಟಾದ ದೇವರ ಕೃಪೆಯು ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.


ಆ ರಾತ್ರಿಯಲ್ಲಿ ಪೌಲನಿಗೆ ಒಂದು ದರ್ಶನವಾಯಿತು. ಅದರಲ್ಲಿ ಮಕೆದೋನ್ಯದವನೊಬ್ಬನು ನಿಂತುಕೊಂಡು, “ಮಕೆದೋನ್ಯ ದಾಟಿ ಬಂದು ನಮಗೆ ಸಹಾಯಮಾಡು,” ಎಂದು ಅವನನ್ನು ಬೇಡಿಕೊಂಡನು.


ನಾನು ಕರ್ತನ ಜನರೆಲ್ಲರಲ್ಲಿಯೂ ಅತ್ಯಲ್ಪನಾಗಿದ್ದೇನೆ. ಹಾಗಿದ್ದರೂ, ನನಗೆ ಈ ಕೃಪೆ ಕೊಡಲಾಯಿತು: ಏಕೆಂದರೆ, ನಾನು ಕ್ರಿಸ್ತನ ಅಪರಿಮಿತವಾದ ಐಶ್ವರ್ಯವನ್ನು ಯೆಹೂದ್ಯರಲ್ಲದವರಿಗೆ ಸಾರುವಂತೆಯೂ


ಅಖಾಯದಲ್ಲಿರುವ ನೀವು ಕಳೆದ ಒಂದು ವರ್ಷದಿಂದ ಉದಾರವಾಗಿ ದಾನ ಮಾಡಲು ಸಿದ್ಧರಾಗಿದ್ದೀರಿ ಎಂಬ ವಿಷಯವನ್ನು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳಿದ್ದೇನೆ. ನಿಮ್ಮ ಆಸಕ್ತಿಯನ್ನು ಕೇಳಿ ಮಕೆದೋನ್ಯದವರಲ್ಲಿ ಎಷ್ಟೋ ಮಂದಿ ಕಾರ್ಯರೂಪಕ್ಕೆ ಉತ್ತೇಜನಗೊಂಡಿರುತ್ತಾರೆ.


ಮಕೆದೋನ್ಯ ಮತ್ತು ಅಖಾಯದವರು ಯೆರೂಸಲೇಮಿನ ಭಕ್ತರಲ್ಲಿರುವ ಬಡವರಾಗಿರುವವರಿಗೆ ಸಹಾಯ ಮಾಡುವುದು ಒಳ್ಳೆಯದೆಂದು ಭಾವಿಸಿದ್ದಾರೆ.


ಅವನು ಅಲ್ಲಿಗೆ ಬಂದು ದೇವರ ಕೃಪೆಯನ್ನು ಕಂಡು ಹರ್ಷಭರಿತನಾಗಿ, ಅವರೆಲ್ಲರೂ ಕರ್ತನಿಗೆ ಹೃದಯಪೂರ್ವಕವಾಗಿ ಭಯಭಕ್ತಿ ಉಳ್ಳವರಾಗಿರಬೇಕೆಂದು ಅವರನ್ನು ಪ್ರೋತ್ಸಾಹಿಸಿದನು.


ನಾನು ನಿಮ್ಮಲ್ಲಿದ್ದಾಗ, ನನಗೆ ಕೊರತೆಯಾದಾಗ, ನಾನು ನಿಮ್ಮಲ್ಲಿ ಯಾರಿಗೂ ಭಾರವಾಗಲಿಲ್ಲ. ಏಕೆಂದರೆ, ಮಕೆದೋನ್ಯದಿಂದ ಬಂದಿದ್ದ ಸಹೋದರರು ನನ್ನ ಅವಶ್ಯಕತೆಯನ್ನು ಪೂರೈಸಿದರು. ಹೀಗೆ ನಾನು ನಿಮ್ಮಲ್ಲಿ ಯಾರಿಗೂ ಭಾರವಾಗಲಿಲ್ಲ. ಇನ್ನು ಮುಂದೆಯೂ ಭಾರವಾಗಿರುವುದಿಲ್ಲ.


ಈ ನಿಮ್ಮ ಸೇವೆಯು ಬರೀ ದೇವಜನರ ಕೊರತೆಯನ್ನು ನೀಗಿಸುವುದು ಮಾತ್ರವಲ್ಲ, ಅನೇಕರು ದೇವರಿಗೆ ತುಂಬಿ ಹರಿಯುವಷ್ಟು ಕೃತಜ್ಞತಾಸ್ತುತಿ ಸಲ್ಲಿಸುವಂತೆ ಮಾಡುವುದು.


ಏಕೆಂದರೆ, ಮಕೆದೋನ್ಯದವರಲ್ಲಿ ಯಾರಾದರೂ ನನ್ನ ಜೊತೆಯಲ್ಲಿ ಬಂದು, ನೀವು ಇನ್ನೂ ಸಿದ್ಧರಿಲ್ಲದೆ ಇರುವುದನ್ನು ಕಂಡರೆ, ನಿಮಗೆ ಬೇಸರವಾಗುವುದಲ್ಲದೆ, ನಿಮ್ಮ ಬಗ್ಗೆ ಭರವಸೆಯಿಟ್ಟಿರುವುದಕ್ಕೆ ನಾವು ಸಹ ನಾಚಿಕೆಪಡುವ ಸನ್ನಿವೇಶ ಬರಬಾರದು.


“ಅನೇಕ ವರ್ಷಗಳ ನಂತರ ದಾನಧರ್ಮಗಳನ್ನೂ ಕಾಣಿಕೆಗಳನ್ನೂ ನನ್ನ ಸ್ವದೇಶದವರಿಗೆ ಕೊಡಲು ಬಂದೆನು.


“ಎರಡು ಚಿನ್ನದ ನಾಣ್ಯಗಳನ್ನು ಹೊಂದಿದ್ದವನು ಸಹ ಬಂದು, ‘ಒಡೆಯನೇ, ನೀನು ನನಗೆ ಎರಡು ಚಿನ್ನದ ನಾಣ್ಯಗಳನ್ನು ಒಪ್ಪಿಸಿದ್ದೆ. ನೋಡು, ಇನ್ನೂ ಎರಡು ಚಿನ್ನದ ನಾಣ್ಯಗಳನ್ನು ನಾನು ಸಂಪಾದಿಸಿದ್ದೇನೆ,’ ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು