Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 8:19 - ಕನ್ನಡ ಸಮಕಾಲಿಕ ಅನುವಾದ

19 ಅಲ್ಲದೆ, ಕರ್ತ ಯೇಸುವಿನ ಮಹಿಮೆಗಾಗಿಯೂ ಸಹಾಯಮಾಡಬೇಕೆಂಬ ಸದುದ್ದೇಶ ತೋರಿಸುವುದಕ್ಕಾಗಿಯೂ ನಾವು ಸೇವೆಯನ್ನು ನಿರ್ವಹಿಸುತ್ತೇವೆ. ಇದಕ್ಕಾಗಿಯೇ, ನಮ್ಮ ಜೊತೆ ಬಂದು ಸಹಾಯಮಾಡಲು ಸಭೆಗಳಿಂದ ಆಯ್ಕೆಯಾದವನು ಆ ಸಹೋದರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇದು ಮಾತ್ರವಲ್ಲದೆ, ಕರ್ತನ ಮಹಿಮೆಗಾಗಿ ಮತ್ತು ನಮ್ಮ ಸಿದ್ಧ ಮನಸ್ಸನ್ನು ತೋರಿಸುವುದಕ್ಕಾಗಿ ನಾವು ನಡಿಸುವ ಧರ್ಮಕಾರ್ಯದ ಸಂಬಂಧವಾಗಿ ನಮ್ಮ ಸಂಗಡ ಪ್ರಯಾಣಮಾಡುವಂತೆ ಸಭೆಗಳಿಂದ ಇವನು ಆರಿಸಲ್ಪಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇದಷ್ಟೇ ಅಲ್ಲದೆ, ಪ್ರಭುವಿನ ಮಹಿಮೆ ಬೆಳಗುವಂತೆಯೂ ಇತರರಿಗೆ ನೆರವಾಗಬೇಕೆಂಬ ಸದುದ್ದೇಶದಿಂದಲೂ ನಾವು ಕೈಗೊಂಡಿರುವ ಸೇವಾಕಾರ್ಯದಲ್ಲಿ ನಮ್ಮ ಸಂಗಡ ಪ್ರಯಾಣಮಾಡಲೆಂದು ಸಭೆಯವರು ಈತನನ್ನು ನೇಮಕಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇದು ಮಾತ್ರವಲ್ಲದೆ ನಾವು ನಡಿಸುವ ಈ ಧರ್ಮಕಾರ್ಯ ಸಂಬಂಧವಾಗಿ ಸಭೆಗಳವರು ಈತನನ್ನು ನಮ್ಮ ಸಂಗಡ ಪ್ರಯಾಣಮಾಡುವಂತೆ ಗೊತ್ತುಮಾಡಿದ್ದಾರೆ. ಅವರು ಹೀಗೆ ಮಾಡಿದ್ದರಿಂದ ಕರ್ತನಿಗೆ ಘನವೂ ನಮ್ಮಲ್ಲಿ ಸಿದ್ಧಮನಸ್ಸೂ ಉಂಟಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಇದಲ್ಲದೆ, ನಾವು ಈ ಸಹಾಯಧನವನ್ನು ತೆಗೆದುಕೊಂಡು ಹೋಗುವಾಗ ನಮ್ಮ ಸಂಗಡವಿರುವುದಕ್ಕಾಗಿ ಸಭೆಗಳವರು ಈ ಸಹೋದರನನ್ನು ಆಯ್ಕೆಮಾಡಿದ್ದಾರೆ. ದೇವರ ಮಹಿಮೆಗಾಗಿಯೂ ಮತ್ತು ಸಹಾಯ ಮಾಡಲು ನಿಜವಾಗಿ ಬಯಸುತ್ತೇವೆ ಎಂಬುದನ್ನು ತೋರಿಸುವುದಕ್ಕಾಗಿಯೂ ಈ ಸೇವಾಕಾರ್ಯವನ್ನು ಮಾಡುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತವ್ಡೆಚ್ ನ್ಹಯ್ ದೆವಾಚ್ಯಾ ಮಹಿಮೆಕ್ ಫುರಾ ಮನಾನ್ ಅಮಿ ಕರ್ತಾಂವ್ ತ್ಯಾ ದಯಾಳ್ ಕಾಮಾತ್ನಿ, ಅಮ್ಚ್ಯಾ ಫಿರಾಟಾತ್ನಿ ಅಮ್ಚೊ ವಾಂಗ್ಡಿ ಕರುನ್ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾನಿ ತೆಕಾ ನೆಮಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 8:19
20 ತಿಳಿವುಗಳ ಹೋಲಿಕೆ  

ಇವೆಲ್ಲವೂ ನಿಮ್ಮ ಒಳ್ಳೆಯದಕ್ಕಾಗಿಯೇ. ಇದರಿಂದ ಹೆಚ್ಚಾದ ಜನರಿಗೆ ತಲುಪುತ್ತಿರುವ ಕೃಪೆಯು, ಕೃತಜ್ಞತೆಯಿಂದ ತುಂಬಿ ಹರಿಯುವುದು. ಆಗ ದೇವರ ಮಹಿಮೆಯು ಸ್ಪಷ್ಟವಾಗುವುದು.


ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವುದಕ್ಕೆ ಶಕ್ತರಾಗಿರುವುದರಿಂದ ನೀವು ಯಾವಾಗಲೂ ಎಲ್ಲಾ ವಿಷಯಗಳಲ್ಲಿಯೂ ಪರಿಪೂರ್ಣತೆಯುಳ್ಳವರಾಗಿ ಸಕಲ ಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರಿ.


ಆದ್ದರಿಂದ ಕೆಲವರನ್ನು ಆಯ್ದುಕೊಂಡು ಅವರನ್ನು ನಮ್ಮ ಪ್ರಿಯರಾದ ಬಾರ್ನಬ ಮತ್ತು ಪೌಲರೊಂದಿಗೆ ನಿಮ್ಮ ಬಳಿಗೆ ಕಳುಹಿಸುವುದು ಯುಕ್ತವೆಂದು ಒಂದೇ ಮನಸ್ಸಾಗಿರುವ ನಮಗೆ ತೋಚಿತು.


ಆಗ ಅಪೊಸ್ತಲರು ಮತ್ತು ಹಿರಿಯರು ಇಡೀ ಸಭೆಯ ಸಮ್ಮತಿ ಪಡೆದು, ಸಹೋದರರಲ್ಲಿ ನಾಯಕರಾಗಿದ್ದ ಬಾರ್ಸಬನೆಂದು ಕರೆಯಲಾದ ಯೂದ ಮತ್ತು ಸೀಲ ಎಂಬಿಬ್ಬರನ್ನು ಆಯ್ದುಕೊಂಡರು. ಅವರನ್ನು ಪೌಲ ಮತ್ತು ಬಾರ್ನಬರೊಂದಿಗೆ ಅಂತಿಯೋಕ್ಯಕ್ಕೆ ಕಳುಹಿಸಲು ನಿರ್ಧರಿಸಿದರು.


ಪ್ರತಿಯೊಂದು ಸಭೆಯಲ್ಲಿ ಪೌಲ, ಬಾರ್ನಬರು ಸಭಾ ಹಿರಿಯರನ್ನು ನೇಮಿಸಿ, ಉಪವಾಸ ಪ್ರಾರ್ಥನೆಯನ್ನು ಮಾಡಿ ಅವರು ನಂಬಿದ್ದ ಕರ್ತ ಯೇಸುವಿಗೆ ಅವರನ್ನು ಒಪ್ಪಿಸಿಕೊಟ್ಟರು.


ತನ್ನ ಇಬ್ಬರು ಸಹಾಯಕರಾದ ತಿಮೊಥೆ ಮತ್ತು ಎರಸ್ತನನ್ನು ಮಕೆದೋನ್ಯಕ್ಕೆ ಕಳುಹಿಸಿ ತಾನು ಇನ್ನೂ ಸ್ವಲ್ಪಕಾಲ ಏಷ್ಯಾ ಪ್ರಾಂತದಲ್ಲಿ ಇದ್ದನು.


ಕೂಡಲೇ ಇಡೀ ಪಟ್ಟಣದಲ್ಲೆಲ್ಲಾ ಕೋಲಾಹಲ ಉಂಟಾಯಿತು. ಜನರು ಗುಂಪಾಗಿ ಕೂಡಿಕೊಂಡು ಬಂದು ಮಕೆದೋನ್ಯದಿಂದ ಪೌಲನೊಂದಿಗೆ ಪ್ರಯಾಣಮಾಡಿ ಬಂದ, ಗಾಯ ಮತ್ತು ಅರಿಸ್ತಾರ್ಕರನ್ನು ಬಂಧಿಸಿ ಕ್ರೀಡಾಂಗಣದೊಳಗೆ ಎಳೆದುಕೊಂಡು ಬಂದರು.


ಅಷ್ಟು ಮಾತ್ರವೇ ಅಲ್ಲ, ನಮ್ಮ ಕಷ್ಟಸಂಕಟಗಳಲ್ಲಿಯೂ ಸಂತೋಷ ಪಡುವವರಾಗಿರುತ್ತೇವೆ. ಏಕೆಂದರೆ ಕಷ್ಟಸಂಕಟವು ತಾಳ್ಮೆಯನ್ನು ಉಂಟುಮಾಡುತ್ತದೆಂದೂ


ಇಷ್ಟು ಮಾತ್ರವೇ ಅಲ್ಲ, ಈಗ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಾವು ದೇವರೊಂದಿಗೆ ಮಿತ್ರರಾಗಿ, ಯೇಸುವಿನ ಮೂಲಕವೇ ದೇವರಲ್ಲಿ ಉಲ್ಲಾಸ ಪಡುತ್ತೇವೆ.


ಆದ್ದರಿಂದ ನೀವು ಎಷ್ಟು ಆಸಕ್ತರಾಗಿ ಪ್ರಾರಂಭಿಸಿದ್ದೀರೋ, ಅಷ್ಟೇ ಆಸಕ್ತಿಯಿಂದ ಅದನ್ನು ಮುಗಿಸಿರಿ. ನಿಮ್ಮ ನಿಮ್ಮ ಶಕ್ತ್ಯಾನುಸಾರವಾಗಿ ಈ ಯೋಜನೆಯನ್ನು ಪೂರ್ಣಗೊಳಿಸಿರಿ.


ಯಾರಿಗಾದರೂ ಕೊಡುವ ಮನಸ್ಸಿದ್ದರೆ, ಅದು ದೇವರ ದೃಷ್ಟಿಯಲ್ಲಿ ಕೊಟ್ಟಂತೆ ಪರಿಗಣಿಸಲಾಗುವುದು. ಏಕೆಂದರೆ ಕೊಡುವವರು ಎಷ್ಟು ಕೊಟ್ಟಿದ್ದಾರೆ ಎಂಬುದು ಪ್ರಾಮುಖ್ಯವಲ್ಲ, ಆದರೆ ಇಲ್ಲದಿರುವುದನ್ನು ದೇವರು ಬಯಸದೇ ಇರುವುದನ್ನು ಕೊಡಬಯಸುತ್ತಾರೆ.


ಹೀಗೆ ನಮ್ಮ ಕೈಗೆ ಒಪ್ಪಿಸಲಾದ ಈ ಉದಾರ ಕೊಡುಗೆಯ ವಿತರಣೆಯ ಕಾರ್ಯದಲ್ಲಿ ಯಾರೂ ನಮ್ಮ ಮೇಲೆ ತಪ್ಪು ಹೊರಿಸಲು ಆಸ್ಪದವಿರಕೂಡದು.


ಅಖಾಯದಲ್ಲಿರುವ ನೀವು ಕಳೆದ ಒಂದು ವರ್ಷದಿಂದ ಉದಾರವಾಗಿ ದಾನ ಮಾಡಲು ಸಿದ್ಧರಾಗಿದ್ದೀರಿ ಎಂಬ ವಿಷಯವನ್ನು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳಿದ್ದೇನೆ. ನಿಮ್ಮ ಆಸಕ್ತಿಯನ್ನು ಕೇಳಿ ಮಕೆದೋನ್ಯದವರಲ್ಲಿ ಎಷ್ಟೋ ಮಂದಿ ಕಾರ್ಯರೂಪಕ್ಕೆ ಉತ್ತೇಜನಗೊಂಡಿರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು