Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 8:21 - ಕನ್ನಡ ಸಮಕಾಲಿಕ ಅನುವಾದ

21 ಏಕೆಂದರೆ, ಕರ್ತ ಯೇಸುವಿನ ದೃಷ್ಟಿಯಲ್ಲಿ ಮಾತ್ರ ಅಲ್ಲ, ಜನರ ದೃಷ್ಟಿಯಲ್ಲಿಯೂ ಯೋಗ್ಯವಾದದ್ದನ್ನು ಮಾಡಬೇಕೆಂಬುದು ನಮ್ಮ ಪ್ರಯಾಸವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯಾಕೆಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಯೋಗ್ಯವಾದದ್ದನ್ನು ಮಾಡುವುದು ನಮ್ಮ ಉದ್ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಪ್ರಭುವಿನ ದೃಷ್ಟಿಯಲ್ಲಿ ಮಾತ್ರವಲ್ಲ.ಮಾನವರ ದೃಷ್ಟಿಯಲ್ಲೂ ಯೋಗ್ಯವಾದುದನ್ನು ಮಾಡುವುದೇ ನಮ್ಮ ಉದ್ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯಾಕಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಗೌರವವಾದದ್ದನ್ನು ಯೋಚನೆಗೆ ತಂದುಕೊಳ್ಳುವವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಪ್ರಭುವು ಯಾವುದನ್ನು ಸರಿಯಾದದ್ದೆಂದು ಸ್ವೀಕರಿಸಿಕೊಳ್ಳುವನೋ ಮತ್ತು ಜನರು ಯಾವುದನ್ನು ಸರಿಯಾದದ್ದೆಂದು ಯೋಚಿಸುವರೋ ಅದನ್ನೇ ಮಾಡಲು ನಾವು ಪ್ರಯತ್ನಿಸುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ದೆವಾಚ್ಯಾ ಡೊಳಾಚ್ಯಾ ಇದ್ರಾಕ್ ಎವ್ಡೆಚ್ ನ್ಹಯ್ , ಮಾನ್ಸಾಂಚ್ಯಾಬಿ ದೊಳ್ಯಾಂಚ್ಯಾ ಇದ್ರಾಕ್ ಹೊಯ್ ಸರ್ಕೆ ದಿಸುಚೆ ತಸೆ ಕರುಚೆ ಮನ್ತಲೊಚ್ ಅಮ್ಚೊ ಉದ್ದೆಸ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 8:21
19 ತಿಳಿವುಗಳ ಹೋಲಿಕೆ  

ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿಯೂ ಒಳ್ಳೆಯದನ್ನು ಮಾಡಿರಿ.


ನಿಮ್ಮ ನಡವಳಿಕೆಯು ಯೆಹೂದ್ಯರಲ್ಲದವರ ನಡುವೆ ಯೋಗ್ಯವಾಗಿರಲಿ, ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ, ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಕರ್ತ ಯೇಸು ನಮ್ಮನ್ನು ದರ್ಶಿಸುವ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು.


ಕಡೆಯದಾಗಿ ಪ್ರಿಯರೇ, ಯಾವುದು ಸತ್ಯವೂ ಯಾವುದು ಮಾನ್ಯವೂ ಯಾವುದು ನ್ಯಾಯವೂ ಯಾವುದು ಶುದ್ಧವೂ ಯಾವುದು ಪ್ರೀತಿಕರವೂ ಯಾವುದು ಮನೋಹರವೂ ಯಾವುದು ಉತ್ತಮವಾದದ್ದೋ ಯಾವುದು ಕೀರ್ತಿಗೆ ಯೋಗ್ಯವೋ ಅವೆಲ್ಲವುಗಳನ್ನೇ ಆಲೋಚಿಸಿರಿ.


ಸಕಲ ವಿಧವಾದ ಕೆಟ್ಟತನಗಳಿಗೆ ದೂರವಾಗಿರಿ.


ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ, ಅದರಿಂದ ಹಣಗಳಿಸುತ್ತಾರೆ. ನಾವಾದರೋ ಹಾಗೆ ಮಾಡುವವರಲ್ಲ. ನಾವು ದೇವರಿಂದ ಕಳುಹಿಸಲಾದವರಾಗಿ ಕ್ರಿಸ್ತ ಯೇಸುವಿನಲ್ಲಿದ್ದುಕೊಂಡು ದೇವರ ಮುಂದೆ ಯಥಾರ್ಥವಾಗಿ ಮಾತನಾಡುತ್ತೇವೆ.


ಈ ರೀತಿಯಲ್ಲಿ ಕ್ರಿಸ್ತನಿಗೆ ಸೇವೆಮಾಡುವವರು ದೇವರಿಗೆ ಮೆಚ್ಚುಗೆಯಾದವರೂ ಜನರಿಂದ ಅನುಮೋದನೆ ಹೊಂದಿದವರೂ ಆಗಿರುತ್ತಾರೆ.


ಆದ್ದರಿಂದ ಯೌವನಸ್ಥ ವಿಧವೆಯರು ಮದುವೆಮಾಡಿಕೊಂಡು, ಮಕ್ಕಳನ್ನು ಹೆತ್ತು, ಮನೆಯ ಕೆಲಸಮಾಡಿ, ವಿರೋಧಿಯ ನಿಂದೆಗೆ ಆಸ್ಪದ ಕೊಡಬಾರದೆಂಬುದೇ ನನ್ನ ಅಪೇಕ್ಷೆ.


ಹೀಗೆ ನಿನ್ನ ದಾನಧರ್ಮವು ಗುಟ್ಟಾಗಿರುವಾಗ, ಅಂತರಂಗದಲ್ಲಿ ಮಾಡುವುದನ್ನು ಕಾಣುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು.


ಅದೇ ರೀತಿಯಲ್ಲಿ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ; ಹೀಗಾದರೆ ಜನರು ನಿಮ್ಮ ಸತ್ಕ್ರಿಯೆಗಳನ್ನು ಕಂಡು ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವರು.


“ಆದರೆ ತಾವು ಮಾಡುವ ತಮ್ಮ ಕ್ರಿಯೆಗಳನ್ನೆಲ್ಲಾ ಜನರು ನೋಡುವಂತೆ ಮಾಡುತ್ತಾರೆ. ಅವರು ತಮ್ಮ ಬಾಹುಗಳ ಮೇಲೆ ದೇವರ ವಾಕ್ಯವುಳ್ಳ ಡಬ್ಬಿಗಳನ್ನು ಮತ್ತು ಹಣೆಯ ಮೇಲೆ ಅಗಲ ಪಟ್ಟಿಗಳನ್ನು ಮಾಡಿ ಉಡುಪುಗಳ ಅಂಚುಗಳನ್ನು ಉದ್ದಮಾಡುತ್ತಾರೆ.


“ಜನರು ನೋಡಲಿ ಎಂದು ಅವರ ಮುಂದೆ, ನಿಮ್ಮ ದಾನಧರ್ಮಗಳನ್ನು ಮಾಡದಂತೆ ಎಚ್ಚರಿಕೆಯಿಂದಿರಿ. ಹಾಗೆ ಮಾಡಿದರೆ, ಪರಲೋಕದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ಸಿಕ್ಕುವುದಿಲ್ಲ.


ಅವಳು ಹಾಗೆಯೇ ಉದಯಕಾಲದವರೆಗೂ ಅವನ ಪಾದಗಳ ಬಳಿಯಲ್ಲಿ ಮಲಗಿದ್ದು ಯಾರಿಗೂ ಗೊತ್ತಾಗಬಾರದೆಂದು ಹೊತ್ತಿಗೆ ಮುಂಚೆ ಎದ್ದಳು. ಅವನು, “ಒಬ್ಬ ಸ್ತ್ರೀ ಕಣದಲ್ಲಿ ಬಂದಳೆಂದು ಯಾರಿಗೂ ತಿಳಿಯದಿರಲಿ,” ಎಂದನು.


ಆಗ ದೇವರ ಮುಂದೆಯೂ ಮನುಷ್ಯರ ಮುಂದೆಯೂ ದಯೆಯನ್ನೂ, ಒಳ್ಳೆಯ ಹೆಸರನ್ನೂ ನೀನು ಪಡೆದುಕೊಳ್ಳುವೆ.


ಹೀಗೆ ನಮ್ಮ ಕೈಗೆ ಒಪ್ಪಿಸಲಾದ ಈ ಉದಾರ ಕೊಡುಗೆಯ ವಿತರಣೆಯ ಕಾರ್ಯದಲ್ಲಿ ಯಾರೂ ನಮ್ಮ ಮೇಲೆ ತಪ್ಪು ಹೊರಿಸಲು ಆಸ್ಪದವಿರಕೂಡದು.


ಇವರಿಬ್ಬರ ಜೊತೆಯಲ್ಲಿ ನಾವು ನಮ್ಮ ಅನೇಕ ಅನುಭವಗಳಿಂದ ಆಸಕ್ತಿಯುಳ್ಳವನೆಂಬುದನ್ನು ದೃಢಪಡಿಸಿಕೊಂಡ ಬೇರೊಬ್ಬ ಸಹೋದರನನ್ನೂ ಕಳುಹಿಸುತ್ತಿದ್ದೇವೆ. ಅವನು ನಿಮ್ಮ ಬಗ್ಗೆ ಪೂರ್ಣ ಭರವಸೆಯನ್ನಿಟ್ಟು ನಿಮಗೆ ನೆರವಾಗಲು ಇನ್ನೂ ಉತ್ಸುಕತೆಯಲ್ಲಿದ್ದಾನೆ.


ಇದಲ್ಲದೆ ಅವನು ನಿಂದೆಗೆ ಗುರಿಯಾಗದವನೂ ಸೈತಾನನ ಉರುಲಿಗೆ ಸಿಕ್ಕಿ ಬೀಳದವನೂ ಆಗಿದ್ದಾನೆಂಬ ಒಳ್ಳೆಯ ಸಾಕ್ಷಿಯನ್ನು ಹೊಂದಿದವನಾಗಿರಬೇಕು.


ಅವರು ಅವನು ಹೇಳಿದಂತೆ ಮಾಡಿದರು. ಆಗ ಎಲೀಯನು, “ಎರಡನೆಯ ಸಾರಿ ಹೊಯ್ಯಿರಿ,” ಎಂದನು. ಅವರು ಎರಡನೆಯ ಸಾರಿಯೂ ಹೊಯ್ದರು. ಮೂರನೆಯ ಸಾರಿ, “ಹೊಯ್ಯಿರಿ,” ಎಂದನು. ಮೂರನೆಯ ಸಾರಿಯೂ ಹೊಯ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು