Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 9:8 - ಕನ್ನಡ ಸಮಕಾಲಿಕ ಅನುವಾದ

8 ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವುದಕ್ಕೆ ಶಕ್ತರಾಗಿರುವುದರಿಂದ ನೀವು ಯಾವಾಗಲೂ ಎಲ್ಲಾ ವಿಷಯಗಳಲ್ಲಿಯೂ ಪರಿಪೂರ್ಣತೆಯುಳ್ಳವರಾಗಿ ಸಕಲ ಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದೇವರು ಸಕಲ ವಿಧವಾದ ದಾನಗಳನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವುದಕ್ಕೆ ಶಕ್ತನಾದ್ದರಿಂದ, ನೀವೂ ಯಾವಾಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆಯುಳ್ಳವರಾಗಿ ಸಕಲ ಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸಕಲ ವಿಧವಾದ ವರದಾನಗಳನ್ನು ನಿಮಗೆ ಯಥೇಚ್ಛವಾಗಿ ನೀಡಬಲ್ಲ ಶಕ್ತಿ ದೇವರಿಗಿದೆ. ನೀವು ಸದಾ ಸಮೃದ್ಧಿಯಿಂದಿರುವಿರಿ. ಹೀಗೆ ಸಕಲ ಸತ್ಕಾರ್ಯಗಳಿಗೆ ಹೃತ್ಪೂರ್ವಕವಾಗಿ ನೆರವಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದೇವರು ಸಕಲವಿಧವಾದ ದಾನಗಳನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವದಕ್ಕೆ ಶಕ್ತನಾದ್ದರಿಂದ ನೀವು ಯಾವಾಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆಯುಳ್ಳವರಾಗಿ ಸಕಲಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಮತ್ತು ನಿಮಗೆ ಅಗತ್ಯವಾದದ್ದಕ್ಕಿಂತಲೂ ಹೆಚ್ಚು ಆಶೀರ್ವಾದಗಳನ್ನು ದೇವರು ಕೊಡಬಲ್ಲನು. ಆಗ ನಿಮ್ಮಲ್ಲಿ ನಿಮಗೆ ಅಗತ್ಯವಾದ ಪ್ರತಿಯೊಂದೂ ಯಾವಾಗಲೂ ಇರುವುದು. ಪ್ರತಿಯೊಂದು ಒಳ್ಳೆಯ ಕಾರ್ಯಕ್ಕೆ ಕೊಡಲು ನಿಮ್ಮಲ್ಲಿ ಸಾಕಷ್ಟು ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಮಾಪ್ ನಸ್ತಾನಾ ತುಮ್ಕಾ ಅಶಿರ್ವಾದ್ ದಿವ್ಕ್ ದೆವಾಕ್ ಹೊತಾ. ಅಶೆ ತುಮ್ಕಾ ಕನ್ನಾಬಿ ಗರ್ಜೆಕ್ ಪಾಜೆ ಹೊಲ್ಲೆ ತವ್ಡೆ ರ್‍ಹಾವ್ನ್, ಹರಿಎಕ್ ಬರ್‍ಯಾ ಕಾಮಾಕ್ನಿ ದಿವ್ಕ್ ಬಿ ತುಮ್ಚ್ಯಾ ಕಡೆ ಜಾಸ್ತಿ ಉರ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 9:8
28 ತಿಳಿವುಗಳ ಹೋಲಿಕೆ  

ನಮ್ಮಲ್ಲಿ ಕಾರ್ಯಸಾಧಿಸುವ ತಮ್ಮ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾಗಿಯೇ ಎಲ್ಲವನ್ನೂ ಮಾಡಲು ಶಕ್ತರಾದ ದೇವರಿಗೆ


ಯೆಹೋವ ದೇವರ ಆಶೀರ್ವಾದವು ಸಂಪತ್ತನ್ನು ಉಂಟುಮಾಡುವುದು; ಅವರು ಅದರೊಂದಿಗೆ ಯಾವ ದುಃಖವನ್ನೂ ಸೇರಿಸುವುದಿಲ್ಲ.


ನನ್ನ ಆಲಯದಲ್ಲಿ ಆಹಾರ ಇರುವಂತೆ ಹತ್ತನೆಯ ಪಾಲುಗಳನ್ನೆಲ್ಲಾ ಬೊಕ್ಕಸಕ್ಕೆ ತನ್ನಿರಿ. ನಾನು ನಿಮಗೆ ಪರಲೋಕದ ಮಹಾದ್ವಾರಗಳನ್ನು ತೆರೆದು, ಸ್ಥಳ ಹಿಡಿಸಲಾರದಷ್ಟು ನಿಮಗೆ ಆಶೀರ್ವಾದವನ್ನು ಸುರಿಸದಿರುವೆನೋ, ಇಲ್ಲವೋ ಎಂಬುದನ್ನು ನೀವು ಈಗ ನನ್ನನ್ನು ಪರೀಕ್ಷಿಸಿ ನೋಡಿರಿ?” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


‘ಬೆಳ್ಳಿ ನನ್ನದು, ಚಿನ್ನವು ನನ್ನದು,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.


ಬಡವರಿಗೆ ದಾನ ಮಾಡುವವನು, ಕೊರತೆ ಪಡುವುದಿಲ್ಲ; ಆದರೆ ತನ್ನ ಕಣ್ಣುಗಳನ್ನು ಮುಚ್ಚಿಕೊಳ್ಳುವವನಿಗೆ ಅನೇಕ ಶಾಪಗಳು.


ಯೆಹೋವ ದೇವರು ಸೂರ್ಯನಂತೆ ಪ್ರಕಾಶಿಸುವವವರೂ ಗುರಾಣಿಯೂ ಆಗಿದ್ದಾರೆ. ಯೆಹೋವ ದೇವರು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾರೆ. ನಿಷ್ಕಳಂಕವಾಗಿ ನಡೆದುಕೊಳ್ಳುವವರಿಗೆ ಅವರು ಒಳ್ಳೆಯದನ್ನು ಮಾಡಲು ಹಿಂದೆಗೆಯುವುದಿಲ್ಲ.


ನಿನ್ನ ಆಸ್ತಿಯಿಂದಲೂ ನಿನ್ನ ಎಲ್ಲಾ ಬೆಳೆಯ ಪ್ರಥಮ ಫಲದಿಂದಲೂ ಯೆಹೋವ ದೇವರನ್ನು ಸನ್ಮಾನಿಸು.


ನಮ್ಮವರು ಸತ್ಕ್ರಿಯೆಗಳನ್ನು ಮಾಡುವುದಕ್ಕಾಗಿಯೂ ಅಗತ್ಯವಾಗಿರುವ ಕೊರತೆಗಳನ್ನು ನೀಗಿಸುವುದಕ್ಕೂ ಕಲಿತುಕೊಳ್ಳಲಿ. ಆಗ ಅವರು ನಿಷ್ಪಲರಾಗದೇ ಇರುವರು.


ಹೇಗೆ ನೀವು ವಿಶ್ವಾಸ, ವಾಕ್ಚಾತುರ್ಯ, ತಿಳುವಳಿಕೆ, ಉತ್ಸಾಹ ಹಾಗೂ ನಮ್ಮ ಮೇಲೆ ನಿಮಗಿರುವ ಪ್ರೀತಿ, ಇವೆಲ್ಲವುಗಳಲ್ಲಿ ನೀವು ಸಮೃದ್ಧರಾಗಿದ್ದಂತೆ, ಈ ದಾನವೆಂಬ ಕೃಪಾಕಾರ್ಯದಲ್ಲಿಯೂ ಸಮೃದ್ಧರಾಗಿರಿ.


ಆದ್ದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರವಾಗಿ ನಿಲ್ಲಿರಿ. ಯಾವುದೂ ನಿಮ್ಮನ್ನು ಕದಲಿಸದಿರಲಿ. ಕರ್ತನಲ್ಲಿ ನಿಮ್ಮ ಪ್ರಯಾಸವು ನಿಷ್ಫಲವಾಗುವುದಿಲ್ಲವೆಂದು ತಿಳಿದು, ಕರ್ತನ ಕೆಲಸಕ್ಕೆ ಯಾವಾಗಲೂ ನಿಮ್ಮನ್ನು ಸಂಪೂರ್ಣವಾಗಿ ಒಪ್ಪಿಸಿಕೊಡಿರಿ.


ನೀವು ಸದಾ ಉದಾರಿಗಳಾಗುವಂತೆ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿಯೂ ಸಿರಿವಂತರನ್ನಾಗಿ ಮಾಡುವನು. ನಿಮ್ಮ ಕೊಡುಗೆಯು ನಮ್ಮ ಸೇವೆಯ ಮೂಲಕ ಬೇರೆಯವರಿಗೆ ಮುಟ್ಟಿ, ಅವರು ದೇವರನ್ನು ಕೃತಜ್ಞತೆಯಿಂದ ಸ್ಮರಿಸುವಂತೆ ನಡೆಸುವುದು.


ಅವರು ಘೋರ ಹಿಂಸೆಯ ನಡುವೆಯಿದ್ದರೂ ಕಡುಬಡತನದಲ್ಲಿ ಬಳಲುತ್ತಿದ್ದರೂ ಅವರು ಬಹಳ ಸಂತೋಷದಿಂದ, ಉದಾರಮನಸ್ಸಿನಿಂದ ಕೊಡುವವರಾಗಿದ್ದಾರೆ.


ಒಬ್ಬನು ತನ್ನ ಸಂಪತ್ತನ್ನು ಉದಾರವಾಗಿ ವ್ಯಯಮಾಡಿದರೂ ಅವನು ವೃದ್ಧಿಯಾಗುತ್ತಾನೆ, ಆದರೆ ಇನ್ನೊಬ್ಬನು ನ್ಯಾಯವಾದದ್ದನ್ನು ಬಿಗಿಹಿಡಿದರೂ ಅವನು ಬಡತನಕ್ಕೆ ಬರುತ್ತಾನೆ.


ಆಗ ಅಮಚ್ಯನು ದೇವರ ಮನುಷ್ಯನಿಗೆ, “ಆದರೆ ಇಸ್ರಾಯೇಲಿನ ದಂಡಿಗೆ ನಾನು ಕೊಟ್ಟ 3,400 ಕಿಲೋಗ್ರಾಂ ಬೆಳ್ಳಿಯನ್ನು ಏನು ಮಾಡಬೇಕು?” ಎಂದನು. ಅದಕ್ಕೆ ದೇವರ ಮನುಷ್ಯನು, “ಯೆಹೋವ ದೇವರು ಇದಕ್ಕಿಂತ ಅಧಿಕವಾಗಿಯೇ ನಿನಗೆ ಕೊಡಲು ಶಕ್ತರು,” ಎಂದನು.


ಇದು ನಂಬತಕ್ಕ ಮಾತಾಗಿದೆ. ದೇವರನ್ನು ನಂಬಿದವರು ಸತ್ಕ್ರಿಯೆಗಳನ್ನು ಮಾಡುವುದರಲ್ಲಿ ಜಾಗರೂಕರಾಗಿರುವಂತೆ ನೀನು ಇವುಗಳ ವಿಷಯವಾಗಿ ಪ್ರಾಮುಖ್ಯತೆಯನ್ನು ಕೊಡಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಹಿತಕರವೂ ಪ್ರಯೋಜನಕರವೂ ಆಗಿವೆ.


ನಾವು ಕ್ರಿಸ್ತ ಯೇಸುವಿನಲ್ಲಿ ಸತ್ಕ್ರಿಯೆಗಳನ್ನು ಮಾಡುವುದಕ್ಕಾಗಿಯೇ ಸೃಷ್ಟಿಸಲಾದ ದೇವರ ಕಲಾಕೃತಿಯಾಗಿದ್ದೇವೆ. ಸತ್ಕ್ರಿಯೆಗಳನ್ನು ಮಾಡುತ್ತಾ ಬಾಳಬೇಕೆಂದು ದೇವರು ನಮ್ಮನ್ನು ಮುಂಚಿತವಾಗಿ ನೇಮಿಸಿದ್ದಾರೆ.


ನೀವು ದೇವರಿಂದ ವಿವಿಧ ಕೃಪಾವರಗಳನ್ನು ಹೊಂದಿರಲಾಗಿ ಒಳ್ಳೆಯ ನಿರ್ವಾಹಕರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿರುವ ವರಗಳನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ.


ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


ಅಲ್ಲದೆ, ಕರ್ತ ಯೇಸುವಿನ ಮಹಿಮೆಗಾಗಿಯೂ ಸಹಾಯಮಾಡಬೇಕೆಂಬ ಸದುದ್ದೇಶ ತೋರಿಸುವುದಕ್ಕಾಗಿಯೂ ನಾವು ಸೇವೆಯನ್ನು ನಿರ್ವಹಿಸುತ್ತೇವೆ. ಇದಕ್ಕಾಗಿಯೇ, ನಮ್ಮ ಜೊತೆ ಬಂದು ಸಹಾಯಮಾಡಲು ಸಭೆಗಳಿಂದ ಆಯ್ಕೆಯಾದವನು ಆ ಸಹೋದರನು.


ಕರ್ತ ಯೇಸುವಿಗೆ ಯೋಗ್ಯರಾಗಿ ಜೀವಿಸಿ ಎಲ್ಲಾ ವಿಧದಲ್ಲಿ ಅವರನ್ನೇ ಮೆಚ್ಚಿಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯದಲ್ಲಿ ಫಲಕೊಡುತ್ತಾ ದೇವರ ತಿಳುವಳಿಕೆಯಲ್ಲಿ ವೃದ್ಧಿಯಾಗುತ್ತಿರಬೇಕೆಂತಲೂ


ಯೊಪ್ಪ ಎಂಬಲ್ಲಿ ತಬಿಥಾ ಎಂಬ ಹೆಸರಿನ ದೇವಭಕ್ತೆ ಇದ್ದಳು. ಈ ಹೆಸರಿನ ಗ್ರೀಕ್ ಭಾಷಾಂತರ “ದೊರ್ಕ” ಎಂದಾಗುತ್ತದೆ. ಆಕೆ ಬಡವರಿಗೆ ಸಹಾಯ ಮಾಡುತ್ತಾ ಯಾವಾಗಲೂ ಒಳ್ಳೆಯದನ್ನೇ ಮಾಡುತ್ತಿದ್ದಳು.


ನಿಮ್ಮ ಹೃದಯಗಳನ್ನು ಸಂತೈಸಿ, ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.


ಆದ್ದರಿಂದ ದೇವರ ಮನುಷ್ಯನು ಪರಿಪೂರ್ಣನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.


ಕ್ರಿಸ್ತ ಯೇಸು ನನ್ನ ಮೂಲಕ ಮಾತನಾಡುತ್ತಾನೆಂಬುದಕ್ಕೆ ನಿಮಗೆ ಬೇಕಾದ ನಿದರ್ಶನವು ಆಗ ತೋರಿಬರುವುದು. ಬಲಹೀನನಾಗಿ ಕ್ರಿಸ್ತನು ನಿಮ್ಮೊಂದಿಗೆ ವ್ಯವಹರಿಸದೆ, ನಿಮ್ಮ ನಡುವೆ ಶಕ್ತನಾಗಿದ್ದಾನೆ.


ನನಗೆ ಕೊರತೆಯಿದೆ ಎಂಬುದಕ್ಕಾಗಿ ನಾನು ಇದನ್ನು ಹೇಳುತ್ತಿಲ್ಲ. ಯಾವುದೇ ಪರಿಸ್ಥಿತಿಯಲ್ಲಿ ಸಂತೃಪ್ತನಾಗಿರುವುದನ್ನು ನಾನು ಕಲಿತುಕೊಂಡಿದ್ದೇನೆ.


ಒಬ್ಬನು ತನ್ನನ್ನು ಸಾಮಾನ್ಯ ಘನಹೀನತೆಯಿಂದ ಶುದ್ಧಮಾಡಿಕೊಂಡರೆ, ಅವನು ವಿಶೇಷ ಉದ್ದೇಶಕ್ಕಾಗಿ ಶುದ್ಧೀಕರಗೊಂಡವನೂ ಯಜಮಾನನಿಗೆ ಉಪಯುಕ್ತನೂ ಸಕಲ ಸತ್ಕಾರ್ಯಕ್ಕೆ ಸಿದ್ಧನೂ ಆಗಿರುವ ಗೌರವದ ಪಾತ್ರೆಯಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು