Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 2:18 - ಕನ್ನಡ ಸಮಕಾಲಿಕ ಅನುವಾದ

18 ಅವರು ಪುನರುತ್ಥಾನವು ಆಗಲೇ ಆಗಿ ಹೋಯಿತೆಂದು ಹೇಳುತ್ತಾ ಸತ್ಯದ ಗುರಿಯನ್ನು ತಪ್ಪಿದವರಾಗಿ ಕೆಲವರ ವಿಶ್ವಾಸವನ್ನು ಕೆಡಿಸಿಬಿಡುವವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರು ಸತ್ಯಭ್ರಷ್ಟರಾಗಿ ಪುನರುತ್ಥಾನವು ಆಗಿಹೋಯಿತೆಂದು ಹೇಳುತ್ತಾ ಹಲವರ ನಂಬಿಕೆಯನ್ನು ಕೆಡಿಸುವವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇವರು ಸತ್ಯಮಾರ್ಗವನ್ನು ತ್ಯಜಿಸಿದ್ದಾರಲ್ಲದೆ ನಮ್ಮ ಪುನರುತ್ಥಾನವು ಈಗಾಗಲೇ ಮುಗಿದುಹೋಗಿದೆಯೆಂದು ಹೇಳುತ್ತಾ ಕೆಲವರ ವಿಶ್ವಾಸವನ್ನು ಕೆಡಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವರು ಪುನರುತ್ಥಾನವು ಆಗಿಹೋಯಿತೆಂದು ಹೇಳುತ್ತಾ ಸತ್ಯಭ್ರಷ್ಟರಾಗಿ ಕೆಲವರ ನಂಬಿಕೆಯನ್ನು ಕೆಡಿಸುವವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅವರು ಸತ್ಯೋಪದೇಶವನ್ನು ತಿರಸ್ಕರಿಸಿದರು. ಎಲ್ಲಾ ಜನರಿಗೆ ಉಂಟಾಗುವ ಪುನರುತ್ಥಾನವು ಈಗಾಗಲೇ ಆಗಿ ಹೋಗಿದೆಯೆಂದು ಅವರು ಹೇಳುತ್ತಾರೆ. ಅವರಿಬ್ಬರು ಕೆಲವು ಜನರ ನಂಬಿಕೆಯನ್ನು ಹಾಳುಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಹೆನಿ ಖರಿ ವಾಟ್ ಸೊಡುನ್ ದಿಲ್ಯಾನಾತ್ ಅನಿ ಅಮ್ಚೆ ಅನಿಪರ್‍ತುನ್ ಝಿತ್ತೆ ಹೊತಲೆ ಹೊವ್ನ್ ಸರ್ಲೆ ಮನುನ್ ಸಾಂಗುನ್, ಸುಮಾರ್ ಲೊಕಾಂಚೊ ವಿಶ್ವಾಸ್ ಹಾಲಿ ಸರ್ಕೊ ಕರ್‍ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 2:18
16 ತಿಳಿವುಗಳ ಹೋಲಿಕೆ  

ಆದರೆ ಕ್ರಿಸ್ತ ಯೇಸು ಸತ್ತವರೊಳಗಿಂದ ಎದ್ದು ಬಂದಿರುತ್ತಾರೆಂದು ಸಾರುತ್ತಿರುವಲ್ಲಿ ನಿಮ್ಮೊಳಗೆ ಕೆಲವರು ಸತ್ತವರಿಗೆ ಪುನರುತ್ಥಾನ ಇಲ್ಲ ಎಂದು ಹೇಳುವುದು ಹೇಗೆ?


ನಂಬಿಗಸ್ತನೂ ಒಳ್ಳೆಯ ಮನಸ್ಸಾಕ್ಷಿಯುಳ್ಳವನೂ ಆಗಿರು. ಕೆಲವರು ಈ ಒಳ್ಳೆಯ ಮನಸ್ಸಾಕ್ಷಿಯನ್ನು ತಳ್ಳಿಬಿಟ್ಟು ನಂಬಿಕೆಯ ಹಡಗನ್ನು ಒಡೆದವರ ಹಾಗೆ ಇದ್ದಾರೆ.


ಆದ್ದರಿಂದ ನಾನು ಆ ಸಂತತಿಯವರ ಮೇಲೆ ಕೋಪಿಸಿಕೊಂಡು, ‘ಅವರು ಯಾವಾಗಲೂ ತಮ್ಮ ಹೃದಯದಲ್ಲಿ ತಪ್ಪಿಹೋಗುತ್ತಾರೆ, ಅವರು ನನ್ನ ಮಾರ್ಗಗಳನ್ನು ತಿಳಿದುಕೊಳ್ಳಲಿಲ್ಲ.’


ಅವರು ನಮ್ಮಿಂದ ಹೊರಟು ಹೋದರು. ಆದರೆ ಅವರು ನಮ್ಮವರಾಗಿರಲಿಲ್ಲ. ಏಕೆಂದರೆ ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದುದರಿಂದ ಅವರೆಲ್ಲರೂ ನಮ್ಮವರಲ್ಲವೆಂಬುದು ತೋರಿಬಂತು.


ಪ್ರಿಯರೇ, ನಿಮ್ಮಲ್ಲಿ ಯಾವನಾದರೂ ಸತ್ಯದಿಂದ ತಪ್ಪಿಹೋಗಿರಲಾಗಿ ಮತ್ತೊಬ್ಬನು ಅವನನ್ನು ಯಥಾಸ್ಥಾನಕ್ಕೆ ತಂದರೆ,


ಈ ವಿಷಯಗಳನ್ನು ದೇವಜನರ ನೆನಪಿಗೆ ತರಬೇಕು. ಕೇಳುವವರಿಗೆ ಯಾವ ಪ್ರಯೋಜನವನ್ನೂ ಉಂಟು ಮಾಡದೆ ಕೆಡವಿ ಹಾಕುವ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ದೇವರ ಮುಂದೆ ಎಚ್ಚರಿಸು.


ಕೆಲವರು ಇಂಥವುಗಳಿಗೆ ಒಳಪಟ್ಟು ನಂಬಿಕೆಯಿಂದ ಗುರಿತಪ್ಪಿ ಹೋಗಿದ್ದಾರೆ. ಕೃಪೆಯು ನಿಮ್ಮೊಂದಿಗಿರಲಿ.


ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಬೇರಾಗಿದೆ. ಕೆಲವರು ಹಣಕ್ಕಾಗಿ ಆತುರಪಟ್ಟು ನಂಬಿಕೆಯಿಂದ ದೂರಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.


ನೀವು ಕ್ರಿಸ್ತನೊಂದಿಗೆ ಜೀವಂತವಾಗಿ ಎದ್ದವರಾಗಿದ್ದರೆ, ಮೇಲಿರುವವುಗಳನ್ನೇ ಹುಡುಕಿರಿ. ಅಲ್ಲಿ ಕ್ರಿಸ್ತ ಯೇಸು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾರೆ.


ದೇವರ ಮೆಚ್ಚುಗೆ ನಿಮ್ಮಲ್ಲಿ ಯಾರ ಮೇಲೆ ಇದೆ ಎಂಬುದು ಕಂಡುಬರುವಂತೆ ಭಿನ್ನಾಭಿಪ್ರಾಯಗಳು ಇರುವುದು ಅವಶ್ಯವೇ.


ಒಂದು ವೇಳೆ ಇದು ದೇವರಿಂದ ಬಂದದ್ದಾಗಿದ್ದರೆ, ಅವರನ್ನು ನಿಲ್ಲಿಸಲು ನಿಮ್ಮಿಂದಾಗದು. ಹಾಗೆ ಮಾಡಲು ಪ್ರಯತ್ನಿಸಿದರೆ ನೀವು ದೇವರಿಗೆ ವಿರೋಧವಾಗಿ ಹೋರಾಡುವವರಾಗಿ ಕಂಡು ಬರುವಿರಿ,” ಎಂದು ಹೇಳಿದನು.


ಬೀಜ ಬಿದ್ದ ಕಲ್ಲುಭೂಮಿಯು ಯಾರೆಂದರೆ ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಸ್ವೀಕರಿಸುವವರು, ಆದರೆ ಇವರು ಬೇರಿಲ್ಲದಿರುವುದರಿಂದ, ಸ್ವಲ್ಪಕಾಲ ನಂಬಿ, ಶೋಧನೆ ಬಂದಾಗ ಬಿದ್ದುಹೋಗುವವರು.


ಅದಕ್ಕೆ ಯೇಸು ಉತ್ತರವಾಗಿ, “ನೀವು ಪವಿತ್ರ ವೇದವನ್ನಾಗಲಿ ದೇವರ ಶಕ್ತಿಯನ್ನಾಗಲಿ ಅರ್ಥ ಮಾಡಿಕೊಳ್ಳದೆ ತಪ್ಪುತ್ತಿದ್ದೀರಿ.


ಅದಕ್ಕೆ ಯೇಸು ಉತ್ತರವಾಗಿ ಅವರಿಗೆ, “ಪರಲೋಕದ ನನ್ನ ತಂದೆಯು ನೆಡದೆ ಇರುವ ಪ್ರತಿಯೊಂದು ಗಿಡವು ಬೇರುಸಹಿತವಾಗಿ ಕಿತ್ತುಹಾಕಲಾಗುವುದು.


ಅವರು ನೀಚಲಾಭವನ್ನು ಹೊಂದುವುದಕ್ಕಾಗಿ ಮಾಡಬಾರದ ಬೋಧನೆಯನ್ನು ಮಾಡಿ ಇಡೀ ಕುಟುಂಬಗಳನ್ನೇ ಹಾಳು ಮಾಡುತ್ತಿದ್ದಾರೆ. ಆದ್ದರಿಂದ ಅವರ ಬಾಯಿಗಳನ್ನು ಮುಚ್ಚಿಸಬೇಕಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು