Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 2:19 - ಕನ್ನಡ ಸಮಕಾಲಿಕ ಅನುವಾದ

19 ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ, “ತನ್ನವರು ಯಾರಾರೆಂಬುದನ್ನು ಕರ್ತದೇವರು ತಿಳಿದಿದ್ದಾರೆ!” ಎಂತಲೂ, “ಕರ್ತದೇವರ ಹೆಸರನ್ನು ಅರಿಕೆಮಾಡುವವರೆಲ್ಲರೂ ದುಷ್ಟತನವನ್ನು ಬಿಟ್ಟುಬಿಡಬೇಕು!” ಎಂತಲೂ ಮುದ್ರೆ ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ “ತನ್ನವರು ಯಾರೆಂಬುದನ್ನು ಕರ್ತನು ತಿಳಿದಿದ್ದಾನೆ” ಎಂತಲೂ “ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಲಿಖಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆದರೆ ದೇವರು ಹಾಕಿದಂಥ ಸುಸ್ಥಿರವಾದ ಅಸ್ತಿವಾರವನ್ನು ಯಾರಿಂದಲೂ ಕದಲಿಸಲಾಗದು. ಅದರಲ್ಲಿ “ತನ್ನವರು ಯಾರು ಎಂದು ಪ್ರಭು ಅರಿತಿದ್ದಾರೆ; ಮತ್ತು ತಾನು ಪ್ರಭುವಿನವನೆಂದು ಹೇಳಿಕೊಳ್ಳುವವರೆಲ್ಲರೂ ದುರ್ಮಾರ್ಗದಿಂದ ದೂರವಿರಲಿ,” ಎಂದು ಲಿಖಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ - ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕಂತಲೂ ಲಿಪಿಯುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದರೆ ದೇವರ ಭದ್ರವಾದ ಬುನಾದಿಯು ಬದಲಾಗುವುದೇ ಇಲ್ಲ. “ಪ್ರಭುವಿಗೆ ತನ್ನವರು ಯಾರೆಂಬುದು ತಿಳಿದಿದೆ” ಎಂತಲೂ “ಪ್ರಭುವಿನಲ್ಲಿ ನಂಬಿಕೆಯಿಟ್ಟಿರುವವರೆಲ್ಲರೂ ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಆ ಬುನಾದಿಯ ಮೇಲೆ ಕೆತ್ತಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಖರೆ ದೆವಾನ್ ಘಾಟಲ್ಲೊ ಪಾಯಾ ಕೊನಾಕ್‍ಬಿ ಹಾಲ್ವುಕ್ ಹೊಯ್ನಾ ಅನಿ ತ್ಯಾ ಪಾಯಾಚ್ಯಾ ವರ್‍ತಿ, ಅಪ್ನಾಚೆ ಕೊನ್ ಮನುನ್ ಸರ್ವೆಸ್ವರ್ ವಳಕ್ತಾ, ಅನಿ ಎಗ್ದಾ “ಸರ್ವೆಸ್ವರಾಚೆ ನಾವ್ ಅಪ್ನಾಚ್ಯಾ ತೊಂಡಾನ್ ಸಾಂಗ್ತಲೊ, ಬುರ್ಶ್ಯಾಪಾನಾತ್ನಾ ಧುರ್ ರ್‍ಹಾಂವ್ದಿತ್. ಮನುನ್ ತೆಚೆ ವರ್ತಿ ಲಿವಲ್ಲೆ ಹಾಯ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 2:19
69 ತಿಳಿವುಗಳ ಹೋಲಿಕೆ  

“ನಾನೇ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ತಿಳಿದಿದ್ದೇನೆ. ನನ್ನ ಕುರಿಗಳು ನನ್ನನ್ನು ತಿಳಿದಿವೆ.


ಆದರೆ ದೇವರನ್ನು ಪ್ರೀತಿಸುವವರನ್ನು ದೇವರು ತಿಳಿದುಕೊಂಡಿರುತ್ತಾರೆ.


ಯೆಹೋವ ದೇವರು ಒಳ್ಳೆಯವರು. ಇಕ್ಕಟ್ಟಿನ ದಿವಸದಲ್ಲಿ ಆಶ್ರಯದಾತರಾಗಿದ್ದಾರೆ. ತಮ್ಮಲ್ಲಿ ನಂಬಿಕೆ ಇಡುವವರನ್ನು ಅವರು ಪರಿಪಾಲಿಸುತ್ತಾರೆ.


ಕೋರಹನಿಗೂ, ಅವನ ಸಮಸ್ತ ಸಮೂಹಕ್ಕೂ, “ಯೆಹೋವ ದೇವರು ತಮ್ಮ ಹತ್ತಿರ ಬರಮಾಡಿಕೊಳ್ಳುವ ಹಾಗೆ ತನ್ನವರು ಯಾರಾರೆಂಬುದನ್ನು ಮತ್ತು ಪರಿಶುದ್ಧ ಯಾರು ಎಂಬುದನ್ನು ನಾಳೆ ತೋರಿಸುವರು. ಅವರು ಯಾರನ್ನು ಆಯ್ದುಕೊಳ್ಳುವರೋ, ಅವರನ್ನು ಹತ್ತಿರ ಬರಮಾಡಿಕೊಳ್ಳುವರು. ನೀವು ಇದನ್ನು ಮಾಡಿರಿ:


“ಅದಕ್ಕೆ ಆತನು, ‘ನೀವು ಎಲ್ಲಿಯವರೋ ನಾನರಿಯೆ, ಅನೀತಿಯನ್ನು ಮಾಡುವವರಾದ ನೀವೆಲ್ಲರೂ ನನ್ನಿಂದ ತೊಲಗಿಹೋಗಿರಿ,’ ಎಂದು ಹೇಳುವರು.


ಈಗಲಾದರೋ ನೀವು ದೇವರನ್ನು ಅರಿತುಕೊಂಡಿದ್ದೀರಿ. ನಿಜವಾಗಿ ಹೇಳಬೇಕಾದರೆ, ದೇವರು ನಿಮ್ಮನ್ನು ಅರಿತುಕೊಂಡಿದ್ದಾರೆ. ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲಪಾಠಗಳಿಗೆ ಪುನಃ ಗುಲಾಮರಾಗಬೇಕೆಂದು ಅಪೇಕ್ಷಿಸಿ, ಅವುಗಳಿಗೆ ನೀವು ತಿರುಗಿಕೊಳ್ಳುವುದು ಹೇಗೆ?


ನಾನು ನಿನ್ನ ಕ್ರಿಯೆಗಳನ್ನು ಬಲ್ಲೆನು. ನಿನ್ನ ಶಕ್ತಿಯು ಸ್ವಲ್ಪವೇ ಆಗಿದ್ದರೂ ನೀನು ನನ್ನ ಹೆಸರನ್ನು ನಿರಾಕರಿಸದೆ, ನನ್ನ ವಾಕ್ಯವನ್ನು ಕಾಪಾಡಿಕೊಂಡಿದ್ದರಿಂದ, ನಿನ್ನೆದುರಿನಲ್ಲಿ ಒಂದು ದ್ವಾರವನ್ನು ತೆರೆದಿಟ್ಟಿದ್ದೇನೆ, ಅದನ್ನು ಯಾರೂ ಮುಚ್ಚಲಾರರು.


ದೇವರ ಮುಖವನ್ನು ಅವರು ಕಾಣುವರು. ಅವರ ಹಣೆಗಳ ಮೇಲೆ ದೇವರ ಹೆಸರು ಇರುವುದು.


ದೇವರ ಪವಿತ್ರಾತ್ಮರನ್ನು ದುಃಖ ಪಡಿಸಬೇಡಿರಿ. ಆ ಆತ್ಮನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.


ಕ್ರಿಸ್ತ ಯೇಸುವಿನಲ್ಲಿ ಪ್ರತ್ಯೇಕವಾಗಿ, ಪವಿತ್ರರಾಗುವುದಕ್ಕೆ ಕರೆಹೊಂದಿದ ಕೊರಿಂಥದಲ್ಲಿರುವ ದೇವರ ಸಭೆಗೆ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ನಾಮದಲ್ಲಿ ವಿಶ್ವಾಸವಿಟ್ಟ ಸಕಲ ಜನರಿಗೂ ಬರೆಯುವ ಪತ್ರ:


ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪರೀಕ್ಷಿತವಾಗಿಯೂ, ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಅಸ್ತಿವಾರವನ್ನಾಗಿ ಇಡುತ್ತೇನೆ. ಭರವಸೆ ಇಡುವವನು ಆತುರಪಡನು.


ಆದಕಾರಣ ಪ್ರಿಯ ಸ್ನೇಹಿತರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವುದರಿಂದ ಸಮಾಧಾನದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಅವರಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವರಾಗಿರಿ.


ಪ್ರಿಯರೇ, ಇಂಥಾ ವಾಗ್ದಾನಗಳು ನಮಗಿರುವುದರಿಂದ ನಮ್ಮ ದೇಹಾತ್ಮಗಳನ್ನು ಮಲಿನಗೊಳಿಸುವ ಎಲ್ಲಾ ವಿಷಯಗಳಿಂದ ನಮ್ಮನ್ನು ಶುದ್ಧಮಾಡಿ, ದೇವರ ಮೇಲಿನ ಭಯಭಕ್ತಿಯಿಂದ ನಮ್ಮ ಪವಿತ್ರತೆಯನ್ನು ಪರಿಪೂರ್ಣಗೊಳಿಸೋಣ.


ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು, ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ. ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನನ್ನು ಕೊಲ್ಲಲಾದ ದಿನಗಳಲ್ಲಿಯೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಅಲ್ಲಗಳೆಯಲಿಲ್ಲ.


ಯೆಹೋವ ದೇವರು ನೀತಿವಂತರ ಮಾರ್ಗವನ್ನು ಅರಿತಿದ್ದಾರೆ; ಆದರೆ ದುಷ್ಟರ ಮಾರ್ಗವು ನಾಶಕ್ಕೆ ನಡೆಸುವುದು.


ಆಗ ನಾನು ಅವರಿಗೆ, ‘ನಿಮ್ಮನ್ನು ನಾನೆಂದೂ ಅರಿಯೆನು, ನಿಯಮ ಮೀರಿ ಬಾಳಿದವರೇ ನನ್ನಿಂದ ತೊಲಗಿಹೋಗಿರಿ!’ ಎಂದು ಹೇಳಿಬಿಡುವೆನು.


ನಿನ್ನ ದೃಷ್ಟಿಯಲ್ಲಿ ನೀನೇ ಜ್ಞಾನಿ ಎಂದು ಇರಬೇಡ; ಯೆಹೋವ ದೇವರಿಗೆ ಭಯಪಟ್ಟು, ಕೆಟ್ಟದ್ದನ್ನು ತೊರೆದುಬಿಡು.


ನಿರ್ದೋಷಿಗಳು ತಮ್ಮ ದಿವಸಗಳನ್ನು ಯೆಹೋವ ದೇವರ ಪರಾಮರಿಕೆಯಲ್ಲಿ ಕಳೆಯುವರು. ನಿರಪರಾಧಿಯ ಬಾಧ್ಯತೆಯು ಯುಗಯುಗಕ್ಕೂ ಇರುವುದು.


ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು; ಸಮಾಧಾನವನ್ನು ಹುಡುಕಿ ಅದನ್ನು ಹಿಂಬಾಲಿಸು.


ಬೇರೊಬ್ಬರು ಹಾಕಿರುವ ಅಸ್ತಿವಾರದ ಮೇಲೆ ನಾನು ಕಟ್ಟಬಾರದೆಂದು, ಕ್ರಿಸ್ತನ ಹೆಸರು ತಿಳಿಯಪಡಿಸದೆ ಇರುವಲ್ಲಿ ಸುವಾರ್ತೆಯನ್ನು ಸಾರಬೇಕೆಂದು ಆತುರದಿಂದ ಹೋರಾಡುತ್ತಿದ್ದೇನೆ.


ಆಗ ಉಳಿದಿರುವ ಜನರಲ್ಲಿ ಯೆಹೂದ್ಯರಲ್ಲದವರೂ ನನ್ನ ಹೆಸರೆತ್ತಿ ಕರೆಯುವವರೂ ಸಹ ಕರ್ತದೇವರನ್ನು ಹುಡುಕುವರು,’


ಮಳೆಯು ಸುರಿದು ಹಳ್ಳಗಳು ಬಂದವು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆದರೂ ಆ ಮನೆ ಬೀಳಲಿಲ್ಲ. ಏಕೆಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಕಟ್ಟಲಾಗಿತ್ತು.


ಅವರು ನಮ್ಮಿಂದ ಹೊರಟು ಹೋದರು. ಆದರೆ ಅವರು ನಮ್ಮವರಾಗಿರಲಿಲ್ಲ. ಏಕೆಂದರೆ ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದುದರಿಂದ ಅವರೆಲ್ಲರೂ ನಮ್ಮವರಲ್ಲವೆಂಬುದು ತೋರಿಬಂತು.


ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟದ್ದನ್ನು ದ್ವೇಷಿಸಿ ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.


ಏಕೆಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು, ಸಾಧ್ಯವಾದರೆ ಆಯ್ಕೆಯಾದವರನ್ನು ಸಹ ಮೋಸಗೊಳಿಸುವಂತೆ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಬಿರುಗಾಳಿಯು ಬೀಸಿದರೆ, ದುಷ್ಟರು ಇಲ್ಲವಾಗುವರು; ಆದರೆ ನೀತಿವಂತರು ಶಾಶ್ವತವಾಗಿ ನಿಲ್ಲುವರು.


ದೇವರು ಮನುಷ್ಯನಿಗೆ, “ಇಗೋ, ಕರ್ತ ದೇವರಲ್ಲಿ ಭಯಭಕ್ತಿ ಇಡುವುದೇ ಜ್ಞಾನ! ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ,” ಎಂದು ಹೇಳಿದರು.


ಹೀಗೆ, ಆ ಮಕ್ಕಳು ಹುಟ್ಟುವುದಕ್ಕೆ ಮುಂಚೆ, ಒಳ್ಳೆಯದು ಅಥವಾ ಕೆಟ್ಟದ್ದನ್ನು ಮಾಡುವುದಕ್ಕೆ ಮುಂಚೆಯೇ, ದೇವರ ಆಯ್ಕೆಯ ಉದ್ದೇಶವು ಕೃತ್ಯಗಳಿಗೆ ಅನುಸಾರವಲ್ಲವೆಂಬುದು ಸ್ಥಿರವಾಯಿತು.


ಯೆಹೋವ ದೇವರನ್ನು ಪ್ರೀತಿಸುವವರು ಕೆಟ್ಟದ್ದನ್ನು ಹಗೆ ಮಾಡುವರು; ದೇವರು ತಮ್ಮ ಭಕ್ತರ ಪ್ರಾಣಗಳನ್ನು ಕಾಪಾಡಿ, ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವರು.


“ಹೀಗೆ ಅವರು ನನ್ನ ಹೆಸರನ್ನು ಇಸ್ರಾಯೇಲರ ಮೇಲೆ ಉಚ್ಛರಿಸುವರು. ನಾನೇ ಅವರನ್ನು ಆಶೀರ್ವದಿಸುವೆನು.”


ಹೀಗೆ ಮುಂದಿನ ಕಾಲಕ್ಕೆ ಯಥಾರ್ಥ ಜೀವವಾಗಿರುವ ನಿತ್ಯಜೀವವನ್ನು ಹಿಡಿದುಕೊಳ್ಳುವಂತೆ ತಮಗೋಸ್ಕರ ಸ್ಥಿರವಾದ ಅಸ್ತಿವಾರಕ್ಕಾಗಿ ನಿಕ್ಷೇಪಗಳನ್ನು ಕೂಡಿಸಿಟ್ಟುಕೊಳ್ಳಲಿ.


ದೇವರನ್ನು ಪ್ರೀತಿಸಿ ದೇವರ ಉದ್ದೇಶಕ್ಕೆ ಅನುಸಾರವಾಗಿ ಕರೆಹೊಂದಿದವರಿಗೆ ಸಕಲವನ್ನು ಒಳ್ಳೆಯದಕ್ಕಾಗಿಯೇ ದೇವರು ಮಾಡುವರು, ಎಂದು ನಮಗೆ ಗೊತ್ತಿದೆ.


ಇಲ್ಲಿ ನಿಮ್ಮ ಹೆಸರನ್ನು ಹೇಳಿಕೊಳ್ಳುವವರೆಲ್ಲರನ್ನು ಬಂಧಿಸಲು ಮುಖ್ಯಯಾಜಕನಿಂದ ಅಧಿಕಾರದ ಪತ್ರ ಪಡೆದು ಬಂದಿದ್ದಾನೆ,” ಎಂದು ಉತ್ತರಕೊಟ್ಟನು.


“ನಾನು ನಿಮ್ಮೆಲ್ಲರನ್ನು ಕುರಿತು ಮಾತನಾಡುತ್ತಿಲ್ಲ. ನಾನು ಆರಿಸಿಕೊಂಡವರನ್ನು ನಾನು ಬಲ್ಲೆನು. ಆದರೆ ‘ನನ್ನ ಸಂಗಡ ರೊಟ್ಟಿಯನ್ನು ತಿಂದವನೇ, ನನಗೆ ದ್ರೋಹ ಬಗೆದನು,’ ಎಂಬ ಪವಿತ್ರ ವಾಕ್ಯವು ನೆರವೇರಬೇಕಾಗಿದೆ.


ಏಕೆಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯ್ಕೆಯಾದವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ನಿಶ್ಚಯವಾಗಿ ನೀತಿವಂತರು ಎಂದೆಂದಿಗೂ ಕದಲರು; ನೀತಿವಂತರು ನಿತ್ಯವಾಗಿ ಜ್ಞಾಪಕದಲ್ಲಿ ಇರುವರು.


ಕ್ರಿಸ್ತ ಯೇಸು ಎಂಬ ಮುಖ್ಯ ಮೂಲೆಗಲ್ಲಿನೊಂದಿಗೆ ಅಪೊಸ್ತಲರು ಹಾಗೂ ಪ್ರವಾದಿಗಳೆಂಬ ಅಸ್ತಿವಾರದ ಮೇಲೆ ನೀವು ಕಟ್ಟಲಾಗಿದ್ದೀರಿ.


ದೇವರು ತಾವು ಮುಂದಾಗಿ ತಿಳಿದುಕೊಂಡ ತಮ್ಮ ಜನರನ್ನು ತ್ಯಜಿಸಲಿಲ್ಲ. ದೇವರ ವಾಕ್ಯವು ಎಲೀಯನನ್ನು ಕುರಿತು ಏನು ಹೇಳುತ್ತದೆಂದು ನಿಮಗೆ ಗೊತ್ತಿಲ್ಲವೋ?


ಅವರು ಆಳವಾಗಿ ಅಗೆದು ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ, ಮನೆ ಕಟ್ಟಿದವರಿಗೆ ಸಮಾನರಾಗಿದ್ದಾರೆ. ಪ್ರಳಯವು ಎದ್ದು, ಪ್ರವಾಹವು ಆ ಮನೆಗೆ ರಭಸವಾಗಿ ಬಡಿದರೂ ಅದನ್ನು ಕದಲಿಸಲಿಕ್ಕಾಗದೆ ಹೋಯಿತು, ಏಕೆಂದರೆ ಅದು ಬಲವಾಗಿ ಕಟ್ಟಲಾಗಿತ್ತು.


“ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಶೆಯಲ್ತಿಯೇಲನ ಮಗನಾದ ನನ್ನ ಸೇವಕ ಜೆರುಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದುಕೊಂಡು ನಿನ್ನನ್ನು ಮುದ್ರೆಯ ಉಂಗುರದ ಹಾಗೆ ಇಡುವೆನು. ಏಕೆಂದರೆ ನಿನ್ನನ್ನು ನಾನೇ ಆಯ್ದುಕೊಂಡಿದ್ದೇನೆ,’ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.”


ಇದಲ್ಲದೆ ಯೆಹೂದ್ಯರಲ್ಲದವರು ದೇವರ ಕರುಣೆಗಾಗಿ ದೇವರನ್ನು ಮಹಿಮೆ ಪಡಿಸುವಂತೆ ಹೀಗೆ ಮಾಡಿದರು. ಇದು ಪವಿತ್ರ ವೇದದಲ್ಲಿ ಹೀಗೆ ಬರೆದದ್ದನ್ನು ನೆರವೇರಿಸಿತು: “ಆದ್ದರಿಂದ ಯೆಹೂದ್ಯರಲ್ಲದವರ ನಡುವೆ ನಾನು ನಿನ್ನನ್ನು ಸ್ತುತಿಸುವೆನು, ನಾನು ನಿನ್ನ ನಾಮವನ್ನು ಸ್ತುತಿಸಿ ಹಾಡುವೆನು.”


ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡಬೇಕು? “ಯೆಹೋವ ದೇವರು ಚೀಯೋನನ್ನು ಸ್ಥಾಪಿಸಿದ್ದಾರೆ. ಬಾಧೆಪಟ್ಟ ಅವರ ಜನರು ಅದನ್ನು ಆಶ್ರಯಿಸಿಕೊಳ್ಳುವರು.”


ಪಟ್ಟಣದ ಗೋಡೆಗೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಕುರಿಮರಿಯಾದವರ ಹನ್ನೆರಡು ಜನ ಅಪೊಸ್ತಲರ ಹೆಸರುಗಳಿದ್ದವು.


ಏಕೆಂದರೆ ದೇವರು ಯಾವುದನ್ನು ಕಟ್ಟುವವರೂ ಮಾಡುವವರೂ ಆಗಿದ್ದಾರೋ ಆ ಅಸ್ತಿವಾರಗಳುಳ್ಳ ಪಟ್ಟಣಕ್ಕೋಸ್ಕರ ಅವರು ಎದುರುನೋಡುತ್ತಿದ್ದರು.


ಆದ್ದರಿಂದ ನೀವು ಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ. ಅವರಿಗೆ ತಂದೆಯ, ಮಗನ ಮತ್ತು ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿ,


ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡು. ಆ ಒಂದು ಕಲ್ಲಿನ ಮೇಲೆ ಏಳು ಕಣ್ಣುಗಳು ಇರುವಂತೆ ನಾನು ಅದರ ಮೇಲೆ ಒಂದು ಶಾಸನವನ್ನು ಕೆತ್ತಿಸುವೆನು. ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ. ಆ ದೇಶದ ಅಪರಾಧವನ್ನು ಒಂದೇ ದಿವಸದಲ್ಲಿ ತೊಲಗಿಸುವೆನು.


ನೀನು ಕಂಡ ಮೃಗವು ಒಮ್ಮೆ ಇತ್ತು, ಈಗ ಇಲ್ಲ, ಪಾತಾಳದೊಳಗಿನಿಂದ ಮೇಲೆ ಬಂದು ವಿನಾಶಕ್ಕೆ ಹೊರಡಲಿದೆ. ಲೋಕದ ಸೃಷ್ಟಿಯಾದ ದಿನದಿಂದ ಯಾರ ಯಾರ ಹೆಸರುಗಳು ಜೀವಗ್ರಂಥದಲ್ಲಿ ಬರೆದಿರುವುದಿಲ್ಲವೋ, ಆ ಭೂನಿವಾಸಿಗಳು ಮೃಗವನ್ನು ನೋಡಿ ಆ ಮೃಗವು ಹಿಂದೆ ಇತ್ತು, ಈಗ ಇಲ್ಲ, ಇನ್ನು ಮೇಲೆ ಬರಲಿದೆ ಎಂದು ಆಶ್ಚರ್ಯಗೊಳ್ಳುವರು.


ಅಲ್ಲಿ ಸೌಲನನ್ನು ಭೇಟಿಯಾಗಿ, ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಅನಂತರ ಇಡೀ ಒಂದು ವರ್ಷಕಾಲ ಬಾರ್ನಬನು, ಸೌಲನು ಅಲ್ಲಿ ಸಭೆಯವರೊಂದಿಗೆ ಇದ್ದುಕೊಂಡು ಬಹಳ ಜನರಿಗೆ ಬೋಧನೆ ಮಾಡಿದರು. ಶಿಷ್ಯರಿಗೆ ಪ್ರಥಮ ಬಾರಿ “ಕ್ರೈಸ್ತರು” ಎಂಬ ಹೆಸರು ಬಂದದ್ದು ಅಂತಿಯೋಕ್ಯದಲ್ಲಿಯೇ.


ನಿಮ್ಮ ಹೆಸರನ್ನು ನಾನು ಆಯ್ದುಕೊಂಡವರಿಗೆ ಶಾಪವಾಗಿ ಉಳಿಸುವಿರಿ. ಹೇಗೆಂದರೆ, ಸಾರ್ವಭೌಮ ಯೆಹೋವ ದೇವರು ಅಪನಂಬಿಗಸ್ತರಾದ ನಿಮ್ಮನ್ನು ಕೊಂದುಹಾಕಿ, ತಮ್ಮ ಸೇವಕರಿಗಾದರೋ ಬೇರೆ ಹೆಸರನ್ನು ನೀಡುವರು.


ನಾವು ಆದಿಯಿಂದಲೂ ನಿಮ್ಮವರಾಗಿದ್ದೇವೆ. ಅವರ ಮೇಲೆ ನೀವು ದೊರೆತನ ಮಾಡಲಿಲ್ಲ. ಅವರು ನಿಮ್ಮ ಹೆಸರನ್ನು ಧರಿಸಲೂ ಇಲ್ಲ.


“ಯೆರೂಸಲೇಮಿನ ಪಟ್ಟಣದ ಮಧ್ಯೆ ಹಾದು ಹೋಗಿ, ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು,” ಎಂದರು.


ಅವರ ಸಾಕ್ಷಿಯನ್ನು ಸ್ವೀಕರಿಸಿದವರು ದೇವರು ಸತ್ಯವಂತರೆಂದು ಮುದ್ರೆ ಹಾಕಿದ್ದಾರೆ.


ಒಂದು ವೇಳೆ ನಾನು ತಡ ಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಎಂದರೆ ಜೀವಸ್ವರೂಪರಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಿರಬೇಕು.


ಅವರು ಅದನ್ನು ತಂದಾಗ ಯೇಸು ಅವರಿಗೆ, “ಇದರ ಮುಖ ಮುದ್ರೆಯು ಮತ್ತು ಮೆಲ್ಬರಹವು ಯಾರದು?” ಎಂದು ಕೇಳಿದ್ದಕ್ಕೆ ಅವರು, “ಕೈಸರನದು,” ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು