Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 2:5 - ಕನ್ನಡ ಸಮಕಾಲಿಕ ಅನುವಾದ

5 ಇದಲ್ಲದೆ ಯಾವನಾದರೂ ಆಟದ ಸ್ವರ್ಧೆಯಲ್ಲಿ ಹೋರಾಡುವಾಗ ನಿಯಮದ ಪ್ರಕಾರ ಹೋರಾಡದಿದ್ದರೆ, ಅವನು ಜಯಶಾಲಿಯ ಕಿರೀಟ ಹೊಂದುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇದಲ್ಲದೆ ಯಾವನಾದರೂ ಸ್ಪರ್ಧೆಯಲ್ಲಿ ಎದುರಾಳಿಯೊಡನೆ ಹೋರಾಡುವಾಗ ನಿಯಮದ ಪ್ರಕಾರ ಹೋರಾಡದಿದ್ದರೆ ಅವನಿಗೆ ಜಯಮಾಲೆಯು ದೊರಕುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸ್ಪರ್ಧೆಯಲ್ಲಿ ಭಾಗವಹಿಸುವ ಕ್ರೀಡಾಪಟು ಅದರ ನಿಯಮಗಳನ್ನು ಪಾಲಿಸದಿದ್ದರೆ ಬಹುಮಾನ ಗಳಿಸಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇದಲ್ಲದೆ ಯಾವನಾದರೂ ರಂಗಸ್ಥಳದಲ್ಲಿ ಎದುರಾಳಿನೊಡನೆ ಹೋರಾಡುವಾಗ ನಿಯಮದ ಪ್ರಕಾರ ಹೋರಾಡದಿದ್ದರೆ ಅವನಿಗೆ ಜಯಮಾಲೆಯು ದೊರಕುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಓಟದ ಸ್ಪರ್ಧೆಯಲ್ಲಿ ಗೆಲ್ಲಬೇಕಾದರೆ, ಓಟಗಾರನು ಎಲ್ಲಾ ನಿಯಮಗಳನ್ನು ಪಾಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಎಕ್ ಪಳಾತಲ್ಯಾ ಖೆಳಾತ್ ಬಾಗ್ ಘೆಟಲ್ಲೊ ಖೆಳ್‍‍ಗಾಡಿ ನಿರ್ದಾರ್ ಕರಲ್ಲ್ಯಾ ನಿಯಮಾ ಸರ್ಕೆ ಖೆಳುಕ್‍ ಪಾಜೆ ಅನಿ ಮುಕುಟ್ ಜಿಕುನ್ ಘೆವ್ಚೆ ಹೊಲ್ಯಾರ್, ಖೆಳಾಚ್ಯಾ ನೆಮಾಕ್ ಪಾಳುಕುಚ್ ಪಾಜೆ .

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 2:5
14 ತಿಳಿವುಗಳ ಹೋಲಿಕೆ  

ನಾನು ಬೇಗ ಬರುತ್ತೇನೆ. ನಿನ್ನ ಕಿರೀಟವನ್ನು ಯಾರೂ ಅಪಹರಿಸದಂತೆ ನಿನಗಿರುವುದನ್ನು ಹಿಡಿದುಕೊಂಡಿರು.


ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತದೇವರು ತಮ್ಮನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದ ಜೀವದ ಕಿರೀಟವನ್ನು ಹೊಂದುವನು.


ನನ್ನಲ್ಲಿ ಬಲದಿಂದ ಕಾರ್ಯ ಮಾಡುವ ಕ್ರಿಸ್ತನ ಶಕ್ತಿಗೆ ಅನುಸಾರವಾಗಿ, ನಾನೂ ಸಹ ಪ್ರಯಾಸ ಪಡುತ್ತಾ ಈ ಗುರಿಗಾಗಿ ಹೋರಾಡುತ್ತೇನೆ.


ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವುದರಲ್ಲಿ, ಇನ್ನೂ ರಕ್ತವನ್ನು ಸುರಿಸುವಷ್ಟು ಅದನ್ನು ಎದುರಿಸಲಿಲ್ಲ.


“ಇಕ್ಕಟ್ಟಾದ ಬಾಗಿಲಿನಿಂದ ಒಳಗೆ ಪ್ರವೇಶಿಸುವುದಕ್ಕೆ ಪ್ರಯಾಸಪಡಿರಿ, ಅನೇಕರು ಒಳಗೆ ಪ್ರವೇಶಿಸುವುದಕ್ಕೆ ಪ್ರಯತ್ನಿಸಿದರೂ ಆಗುವುದಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ.


ನಿನಗೆ ಸಂಭವಿಸುವುದಕ್ಕಿರುವ ಬಾಧೆಗಳಿಗೆ ಭಯಪಡಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು, ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕೆ ಇದ್ದಾನೆ. ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವವರೆಗೆ ನಂಬಿಗಸ್ತನಾಗಿರು. ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ಆದರೂ ದೇವದೂತರಿಗಿಂತ ಸ್ವಲ್ಪಕಾಲ ಕಡಿಮೆಯಾಗಿ ಮಾಡಲಾದ ಆ ಒಬ್ಬಾತನು ಯೇಸುವೇ. ಈ ಯೇಸು ಬಾಧೆಪಟ್ಟು ಮೃತಪಟ್ಟಿದ್ದರಿಂದಲೇ ಮಹಿಮೆಯನ್ನೂ ಮಾನವನ್ನೂ ಕಿರೀಟವಾಗಿ ಹೊಂದಿದರೆಂದು ಎಂದು ನಾವು ಕಾಣುತ್ತೇವೆ. ದೇವರ ಕೃಪೆಯಿಂದಲೇ ಎಲ್ಲರಿಗೋಸ್ಕರ ಮರಣವನ್ನು ಈ ಯೇಸು ಅನುಭವಿಸಬೇಕಾಗಿತ್ತು.


ನೀನು ಆತನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಿದೆಯಲ್ಲಾ? ಮಹಿಮೆಯನ್ನೂ ಮಾನವನ್ನೂ ಆತನಿಗೆ ಕಿರೀಟವನ್ನಾಗಿ ಇಟ್ಟೆ.


ಕೆಲವರು ಅಸೂಯೆಯಿಂದಲೂ ಸ್ಪರ್ಧೆಯ ಮನೋಭಾವನೆಯಿಂದಲೂ ಕ್ರಿಸ್ತನನ್ನು ಸಾರುವುದು ನಿಜ. ಆದರೆ ಇತರರು ಒಳ್ಳೆಯ ಮನೋಭಾವದಿಂದ ಕ್ರಿಸ್ತ ಯೇಸುವನ್ನು ಸಾರುತ್ತಿದ್ದಾರೆ.


ಪ್ರಧಾನ ಕುರುಬ ಆಗಿರುವವರು ಪ್ರತ್ಯಕ್ಷರಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.


ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಆಸೀನರಾದವರ ಎದುರಿಗೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ,


ಇದಲ್ಲದೆ ಸಿಂಹಾಸನದ ಸುತ್ತ ಇತರ ಇಪ್ಪತ್ನಾಲ್ಕು ಸಿಂಹಾಸನಗಳಿದ್ದವು. ಆ ಸಿಂಹಾಸನಗಳ ಮೇಲೆ ಬಿಳಿವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತಿದ್ದರು. ಅವರ ತಲೆಗಳ ಮೇಲೆ ಬಂಗಾರದ ಕಿರೀಟಗಳಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು