Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 3:15 - ಕನ್ನಡ ಸಮಕಾಲಿಕ ಅನುವಾದ

15 ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸದ ಮೂಲಕ ರಕ್ಷಣೆ ಹೊಂದುವಂತೆ ನಿನ್ನನ್ನು ಜ್ಞಾನಿಯನ್ನಾಗಿ ಮಾಡಲು ಶಕ್ತವಾಗಿರುವ ಪವಿತ್ರ ವೇದಗಳನ್ನು ನೀನು ಚಿಕ್ಕಂದಿನಿಂದಲೂ ತಿಳಿದವನಾಗಿದ್ದೀಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಚಿಕ್ಕಂದಿನಿಂದಲೂ ನಿನಗೆ ಪರಿಶುದ್ಧ ಗ್ರಂಥಗಳ ಪರಿಚಯವಾಗಿದೆಯಲ್ಲಾ. ಆ ಗ್ರಂಥಗಳು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದುವ ಜ್ಞಾನವನ್ನು ನಿನಗೆ ಕೊಡುವುದಕ್ಕೆ ಶಕ್ತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಿನ್ನ ಬೋಧಕರು ಯಾರೆಂಬುದು ನಿನಗೆ ಗೊತ್ತಿದೆ. ಚಿಕ್ಕಂದಿನಿಂದಲೇ ನೀನು ಪವಿತ್ರಗ್ರಂಥವನ್ನು ಪರಿಚಯಮಾಡಿಕೊಂಡಿರುವೆ. ಯೇಸುಕ್ರಿಸ್ತರನ್ನು ವಿಶ್ವಾಸಿಸುವುದರ ಮೂಲಕ ಜೀವೋದ್ಧಾರವನ್ನು ಪಡೆಯಬಹುದೆಂಬ ಜ್ಞಾನವು ಲಭಿಸುವುದು ಆ ಪವಿತ್ರಗ್ರಂಥದಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆ ಗ್ರಂಥಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಚಿಕ್ಕಂದಿನಿಂದಲೂ ನಿನಗೆ ಪವಿತ್ರ ಗ್ರಂಥದ ಪರಿಚಯವಿದೆ. ನಿನ್ನನ್ನು ಜ್ಞಾನಿಯನ್ನಾಗಿ ಮಾಡಲು ಆ ಪವಿತ್ರ ಗ್ರಂಥವು ಶಕ್ತವಾಗಿದೆ. ಕ್ರಿಸ್ತ ಯೇಸುವಿನಲ್ಲಿನ ನಂಬಿಕೆಯ ಮೂಲಕ ಆ ಜ್ಞಾನವು ರಕ್ಷಣೆಯ ಕಡೆಗೆ ನಡೆಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತಿಯಾ ಬಾರಿಕ್ ಹೊತ್ತ್ಯಾ ತನ್ನಾಚ್ಯಾನುಚ್ ತುಕಾ ಪವಿತ್ರ್ ಪುಸ್ತಕಾಚೆ ಜ್ಞಾನ್ ಶಿಕ್ವುನ್ ಹೊಲ್ಲೆ ಹಾಯ್, ತೆ ಜ್ಞಾನ್ ದಿತಾ ಅನಿ ತುಕಾ ಜೆಜು ಕ್ರಿಸ್ತಾಚ್ಯಾ ವರ್‍ತಿ ಥವಲ್ಲ್ಯಾ ವಿಶ್ವಾಸಾಚ್ಯಾ ವೈನಾ ಗಾವ್ತಲ್ಯಾ ಸುಟ್ಕೆಚ್ಯಾ ವಾಟೆನ್ ಚಾಲ್ವುನ್ ನ್ಹೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 3:15
38 ತಿಳಿವುಗಳ ಹೋಲಿಕೆ  

ತರುವಾಯ ಅವರು ಪವಿತ್ರ ವೇದಗಳನ್ನು ಅರ್ಥಮಾಡಿಕೊಳ್ಳುವಂತೆ ಯೇಸು ಅವರ ಬುದ್ಧಿಯನ್ನು ತೆರೆದರು.


ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳಿಗೆ ಶಿಕ್ಷಣವನ್ನು ಕೊಡು; ಆಗ ಮುಪ್ಪಿನಲ್ಲಿಯೂ ಅವನು ಅದರಿಂದ ದೂರ ಹೋಗುವುದಿಲ್ಲ.


ಮೋಶೆಯ ಮತ್ತು ಎಲ್ಲಾ ಪ್ರವಾದಿಗಳಿಂದ ಆರಂಭಿಸಿ, ಪವಿತ್ರ ವೇದಗಳಲ್ಲಿ ತನ್ನ ವಿಷಯವಾಗಿ ಬರೆದವುಗಳನ್ನು ಯೇಸು ಅವರಿಗೆ ವಿವರಿಸಿದರು.


ಅದಕ್ಕೆ ಯೇಸು ಉತ್ತರವಾಗಿ, “ನೀವು ಪವಿತ್ರ ವೇದವನ್ನಾಗಲಿ ದೇವರ ಶಕ್ತಿಯನ್ನಾಗಲಿ ಅರ್ಥ ಮಾಡಿಕೊಳ್ಳದೆ ತಪ್ಪುತ್ತಿದ್ದೀರಿ.


ನಿನ್ನಲ್ಲಿರುವ ನಿಷ್ಕಪಟವಾದ ನಂಬಿಕೆಯು ನನ್ನ ನೆನಪಿನಲ್ಲಿದೆ. ನಿನ್ನ ಅಜ್ಜಿಯಾದ ಲೋವಿಯಲ್ಲಿಯೂ ನಿನ್ನ ತಾಯಿಯಾದ ಯೂನಿಕೆಯಲ್ಲಿಯೂ ಮೊದಲು ಇದ್ದ ನಂಬಿಕೆಯು ಈಗ ನಿನ್ನಲ್ಲಿಯೂ ಇದೆಯೆಂದು ನಾನು ದೃಢವಾಗಿ ನಂಬಿದ್ದೇನೆ.


ಆ ಶಿಶುವು ಬೆಳೆದು ಬಲಗೊಂಡು; ಜ್ಞಾನದಲ್ಲಿ ವೃದ್ಧಿಯಾಯಿತು ಮತ್ತು ದೇವರ ಕೃಪೆಯು ಶಿಶುವಿನ ಮೇಲೆ ಇತ್ತು.


ಯೆಹೋವ ದೇವರ ನಿಯಮವು ಸಂಪೂರ್ಣವಾಗಿದ್ದು, ಪ್ರಾಣಕ್ಕೆ ಜೀವಕರವಾಗಿದೆ; ಯೆಹೋವ ದೇವರ ಶಾಸನಗಳು ವಿಶ್ವಾಸಪಾತ್ರವಾಗಿದ್ದು, ಮುಗ್ಧನನ್ನು ಜ್ಞಾನಿಗಳನ್ನಾಗಿ ಮಾಡುತ್ತವೆ.


ಆದರೆ ನಿತ್ಯ ದೇವರು ಆಜ್ಞಾಪಿಸಿದಂತೆ ಈಗ ಪ್ರವಾದಿಗಳ ಗ್ರಂಥಗಳ ಮೂಲಕ ಮುಂತಿಳಿಸಿರುವಂತೆ, ಈ ಸಂದೇಶವು ಯೆಹೂದ್ಯರಲ್ಲದ ಜನರೆಲ್ಲರಿಗೂ ತಿಳಿಸಲಾಗಿದೆ. ಹೀಗೆ ಅವರು ನಂಬಿದ್ದರಿಂದ ವಿಧೇಯರಾಗುತ್ತಾರೆ.


ದೇವರು ಮುಂಚಿತವಾಗಿ ಪವಿತ್ರ ವೇದಗಳಲ್ಲಿ ತಮ್ಮ ಪ್ರವಾದಿಗಳ ಮೂಲಕ ವಾಗ್ದಾನಮಾಡಿದ,


ಯೇಸುವಿನಲ್ಲಿ ನಂಬಿಕೆಯನ್ನಿಡುವ ಪ್ರತಿಯೊಬ್ಬನು ಅವರ ಹೆಸರಿನ ಮುಖಾಂತರ ಪಾಪಗಳ ಕ್ಷಮಾಪಣೆ ಹೊಂದುವನು ಎಂದು ಅವರ ಬಗ್ಗೆ ಎಲ್ಲಾ ಪ್ರವಾದಿಗಳು ಸಾಕ್ಷಿಕೊಟ್ಟಿದ್ದಾರೆ,” ಎಂದನು.


ಅವರು ಒಬ್ಬರಿಗೊಬ್ಬರು, “ಅವರು ದಾರಿಯಲ್ಲಿ ನಮ್ಮ ಕೂಡ ಮಾತನಾಡುತ್ತಾ, ಪವಿತ್ರ ವೇದವನ್ನು ನಮಗೆ ವಿವರಿಸಿದಾಗ ನಮ್ಮ ಹೃದಯವು ಬೆಂಕಿಯಂತೆ ದಹಿಸಿತಲ್ಲವೇ?” ಎಂದುಕೊಂಡರು.


ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ; ಹಂಬಲಿಸಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು.


ದೇವರೇ, ನನ್ನ ಯೌವನದಿಂದ ನನಗೆ ನೀವು ಕಲಿಸಿದ್ದೀರಿ. ಈವರೆಗೂ ನಿಮ್ಮ ಅದ್ಭುತಕಾರ್ಯಗಳನ್ನು ಘೋಷಿಸುತ್ತಿದ್ದೇನೆ.


ಪೌಲನು ತನ್ನ ವಾಡಿಕೆಯಂತೆ ಮೂರು ಸಬ್ಬತ್ ದಿನಗಳಂದು ಅವರ ಬಳಿ ಹೋಗಿ, ಅವರಲ್ಲಿ ಪವಿತ್ರ ವೇದಗಳ ಬಗ್ಗೆ ವಾದಿಸಿ,


ಬಾಲಕನಾದ ಸಮುಯೇಲನು ನಾರುಮಡಿಯ ಏಫೋದನ್ನು ಕಟ್ಟಿಕೊಂಡು ಯೆಹೋವ ದೇವರ ಸನ್ನಿಧಿಯಲ್ಲಿ ಸೇವೆ ಮಾಡುತ್ತಿದ್ದನು.


ಆಗ ನಾನು ಅವನನ್ನು ಆರಾಧಿಸಬೇಕೆಂದು ಅವನ ಪಾದಗಳಿಗೆ ಬೀಳಲು ಅವನು, “ಹಾಗೆ ಮಾಡಬೇಡ, ನಾನು ನಿನಗೂ ಯೇಸುವಿನ ಸಾಕ್ಷಿಯುಳ್ಳ ನಿನ್ನ ಸಹೋದರರಿಗೂ ಜೊತೆಯ ದಾಸನಾಗಿದ್ದೇನೆ. ದೇವರನ್ನೇ ಆರಾಧಿಸು. ಏಕೆಂದರೆ ಯೇಸುವಿನ ಸಾಕ್ಷಿಯೇ ಪ್ರವಾದನೆಯ ಆತ್ಮವಾಗಿದೆ!” ಎಂದನು.


ಪವಿತ್ರ ವೇದದಲ್ಲಿ ಯೇಸುವನ್ನು ಕುರಿತು ಬರೆದಿರುವ ಪ್ರಕಾರ ನೆರವೇರಿದ ನಂತರ, ಅವರನ್ನು ಶಿಲುಬೆಯಿಂದ ಕೆಳಗಿಳಿಸಿ ಸಮಾಧಿಯಲ್ಲಿಟ್ಟರು.


ಆದರೆ ಸತ್ಯ ಗ್ರಂಥದಲ್ಲಿ ಲಿಖಿತವಾದದ್ದನ್ನು ಈಗ ನಿನಗೆ ತಿಳಿಸುತ್ತೇನೆ. ನಿಮ್ಮ ರಾಜಕುಮಾರನಾದ ಮೀಕಾಯೇಲನ ಹೊರತು ಮತ್ತೆ ಯಾರೂ ಅವರಿಗೆ ವಿರೋಧವಾಗಿ ನನಗೆ ಸಹಕಾರ ಕೊಡುವುದಿಲ್ಲ.”


ಅವನು ಇನ್ನೂ ಬಾಲಕನಾಗಿರುವಾಗ, ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ತನ್ನ ಪೂರ್ವಜನಾದ ದಾವೀದನ ದೇವರನ್ನು ಹುಡುಕಲು ಆರಂಭಿಸಿದನು. ಅವನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಉನ್ನತ ಪೂಜಾಸ್ಥಳಗಳನ್ನೂ, ಅಶೇರ ಸ್ತಂಭಗಳನ್ನೂ, ಕೆತ್ತಿದ ವಿಗ್ರಹಗಳನ್ನೂ ತೆಗೆದುಹಾಕಿ, ಯೆಹೂದ ಮತ್ತು ಯೆರೂಸಲೇಮನ್ನು ಶುಚಿಮಾಡಲು ಆರಂಭಿಸಿದನು.


ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಗಳಲ್ಲಿರುವ ಕೆಲವು ವಿಷಯಗಳು ತಿಳಿಯುವುದಕ್ಕೆ ಕಷ್ಟವಾಗಿವೆ. ಪವಿತ್ರ ವೇದದ ಮಿಕ್ಕಾದ ಭಾಗಗಳಿಗೆ ಸಹ ತಪ್ಪಾದ ಅರ್ಥಮಾಡಿಕೊಂಡ ಹಾಗೆಯೇ ವಿದ್ಯಾಹೀನರೂ ಚಪಲಚಿತ್ತರೂ ಇವುಗಳಿಗೂ ತಪ್ಪಾದ ಅರ್ಥಮಾಡಿಕೊಂಡು ತಮಗೆ ನಾಶವನ್ನುಂಟುಮಾಡಿಕೊಳ್ಳುತ್ತಾರೆ.


ಕಷ್ಟದ ದಿನಗಳು ಬರುವುದಕ್ಕೆ ಮೊದಲು, “ಇವುಗಳಲ್ಲಿ ನನಗೆ ಸಂತೋಷವಿಲ್ಲ,” ಎಂದು ನೀನು ಹೇಳುವ ವರ್ಷಗಳು ಸಮೀಪಿಸುವುದಕ್ಕೆ ಮೊದಲು, ನಿನ್ನ ಯೌವನದ ದಿನಗಳಲ್ಲಿ ಸೃಷ್ಟಿಕರ್ತ ದೇವರನ್ನು ಸ್ಮರಿಸು.


ಅವನು ಕರ್ತದೇವರ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು. ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಅವನು ಕುಡಿಯುವುದಿಲ್ಲ, ಅವನು ತಾಯಿಯ ಗರ್ಭದಿಂದಲೇ ಪವಿತ್ರಾತ್ಮ ಭರಿತನಾಗಿರುವನು.


ಹೀಗಿರುವುದರಿಂದ ನೀವು ಅವುಗಳನ್ನು ಎಚ್ಚರದಿಂದ ಕೈಗೊಂಡು ಅನುಸರಿಸಿರಿ. ಏಕೆಂದರೆ ಇತರ ಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು. ಈ ಆಜ್ಞೆಗಳ ಬಗ್ಗೆ ಅವರು ಅರಿತುಕೊಂಡಾಗ, “ನಿಶ್ಚಯವಾಗಿ ಇದು ದೊಡ್ಡ ಜನಾಂಗವು ಎಂತಹ ಜ್ಞಾನವೂ ವಿವೇಕವೂ ಉಳ್ಳ ಜನಾಂಗವಾಗಿದೆ” ಎನ್ನುವರು.


ಅವನು ಪವಿತ್ರ ವೇದಗಳಲ್ಲಿ ಬರೆದದ್ದನ್ನು ನೀವು ನಂಬದಿದ್ದರೆ ನನ್ನ ಮಾತುಗಳನ್ನು ಹೇಗೆ ನಂಬುವಿರಿ?” ಎಂದರು.


ಪೌಲನು ದೆರ್ಬೆಗೂ ಲುಸ್ತ್ರಕ್ಕೂ ಬಂದನು. ಅಲ್ಲಿ, ತಿಮೊಥೆಯನೆಂಬ ಹೆಸರಿನ ಒಬ್ಬ ಶಿಷ್ಯನಿದ್ದನು. ಅವನ ತಾಯಿ ವಿಶ್ವಾಸಿಯಾಗಿದ್ದ ಯೆಹೂದ್ಯ ಸ್ತ್ರೀ. ಆದರೆ ಅವನ ತಂದೆ ಒಬ್ಬ ಗ್ರೀಕನಾಗಿದ್ದನು.


ಹೀಗೆ ಪೌಲನು ಪ್ರತಿವಾದ ಮಾಡುತ್ತಿದ್ದಾಗ, ಫೆಸ್ತನು ಮಧ್ಯೆ ಬಾಯಿ ಹಾಕಿ, “ಪೌಲನೇ, ನಿನಗೆ ಹುಚ್ಚುಹಿಡಿದಿದೆ! ನಿನ್ನ ಅಧಿಕಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ,” ಎಂದು ಗಟ್ಟಿಯಾಗಿ ಕೂಗಿದನು.


ಅವನು ಶಾರೀರಿಕವಾಗಿ ಸುನ್ನತಿಯಿಲ್ಲದವನಾಗಿದ್ದರೂ ನಿಯಮವನ್ನು ಅನುಸರಿಸುವುದರಿಂದ ಲಿಖಿತ ನಿಯಮವೂ ಸುನ್ನತಿಯೂ ಇದ್ದು ನಿಯಮವನ್ನು ಮೀರಿ ನಡೆಯುವ ನಿನ್ನನ್ನು ದೋಷಿಯೆಂದು ತೀರ್ಪು ಮಾಡುವನಲ್ಲವೇ?


ಈ ಪ್ರಪಂಚವು ತನ್ನ ಜ್ಞಾನದ ಮೂಲಕ ದೇವರನ್ನು ಅರಿತುಕೊಳ್ಳಲಿಲ್ಲ; ಆದ್ದರಿಂದ ದೇವರ ಜ್ಞಾನದಿಂದ, ನಂಬಿದವರನ್ನು ಪ್ರಸಂಗದ ಬುದ್ದಿಹೀನತೆಯಿಂದ ರಕ್ಷಿಸುವುದು ದೇವರಿಗೆ ಮೆಚ್ಚುಗೆಯಾಯಿತು.


ತಂದೆಗಳೇ, ನಿಮ್ಮ ಮಕ್ಕಳನ್ನು ಸಿಟ್ಟಿಗೆಬ್ಬಿಸಬೇಡಿರಿ; ಕರ್ತನ ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಮಕ್ಕಳನ್ನು ಬೆಳೆಸಿರಿ.


ನಾನು ಬರುವ ತನಕ ಓದುವುದರಲ್ಲಿಯೂ ಎಚ್ಚರಿಸುವುದರಲ್ಲಿಯೂ ಬೋಧಿಸುವುದರಲ್ಲಿಯೂ ಲಕ್ಷ್ಯಕೊಡು.


ಕ್ರಿಸ್ತ ಯೇಸುವಿನಲ್ಲಿರುವ ಜೀವ ವಾಗ್ದಾನದ ಪ್ರಕಾರ ದೇವರ ಚಿತ್ತದಿಂದ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೆಂಬ ನಾನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು