Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 3:16 - ಕನ್ನಡ ಸಮಕಾಲಿಕ ಅನುವಾದ

16 ಪವಿತ್ರ ವೇದಗಳೆಲ್ಲವೂ ದೇವರ ಶ್ವಾಸದಿಂದಲೇ ಉಂಟಾದದ್ದು. ಅದು ಉಪದೇಶಕ್ಕೂ ಖಂಡನೆಗೂ ತಿದ್ದುಪಾಟಿಗೂ ನೀತಿಯ ಶಿಕ್ಷಣಕ್ಕೂ ಉಪಯುಕ್ತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದೈವ ಪ್ರೇರಿತವಾದ ಪ್ರತಿಯೊಂದು ಶಾಸ್ತ್ರವು ಉಪದೇಶಕ್ಕೂ, ಖಂಡನೆಗೂ, ತಿದ್ದುಪಡಿಗೂ, ನೀತಿಶಿಕ್ಷೆಗೂ ಉಪಯುಕ್ತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಪವಿತ್ರಗ್ರಂಥ ದೈವಪ್ರೇರಣೆಯಿಂದ ರಚಿತವಾದುದು. ಆದ್ದರಿಂದ ಅದು ಪ್ರಬೋಧನೆಗೂ ಖಂಡನೆಗೂ ತಿದ್ದುಪಾಟಿಗೂ ನೀತಿಬೋಧೆಗೂ ಉಪಯುಕ್ತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ದೈವಪ್ರೇರಿತವಾದ ಪ್ರತಿಯೊಂದು ಶಾಸ್ತ್ರವು ಉಪದೇಶಕ್ಕೂ ಖಂಡನೆಗೂ ತಿದ್ದುಪಾಟಿಗೂ ನೀತಿಶಿಕ್ಷೆಗೂ ಉಪಯುಕ್ತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಪವಿತ್ರ ಗ್ರಂಥವನ್ನು ದೇವರು ದಯಪಾಲಿಸಿದನು. ಉಪದೇಶವನ್ನು ಮಾಡುವುದಕ್ಕೂ ಖಂಡನೆಗೂ ತಿದ್ದುಪಾಟಿಗೂ ನೀತಿಬೋಧೆಗೂ ಅದು ಉಪಯುಕ್ತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಹೆ ಸಗ್ಳಿ ಪವಿತ್ರ್ ಪುಸ್ತಕಾತ್ಲಿ ಶಿಕಾಪಾ ದೆವಾನ್ ಪ್ರೆರನ್ ಕರಲ್ಲ್ಯಾ ವೈನಾ ಘಡಲ್ಲಿ ಹಾತ್, ಅಶೆ ತಿ ಶಿಕಾಪಾ ಖರೆಪಾನ್ ಕಾಯ್ ಹಾಯ್ ತೆ ಶಿಕ್ವುಕ್, ಚುಕ್ ಕರಲ್ಲ್ಯಾ ತನ್ನಾ ಜೊರ್ ಕರುಕ್, ಅನಿ ಚುಕ್ ಅಸಲ್ಲೆ ಸಮಾ ಕರುಕ್, ಅನಿ ಬರೆ ಜಿವನ್ ಕರ್‍ತಲೆ ಶಿಕ್ವುಕ್ ಉಪ್‍ಯೊಗಾಕ್ ಪಡ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 3:16
43 ತಿಳಿವುಗಳ ಹೋಲಿಕೆ  

ಪವಿತ್ರ ವೇದದಲ್ಲಿ ಮುಂಚಿತವಾಗಿ ಬರೆದಿರುವುದೆಲ್ಲವೂ ನಮ್ಮ ಬೋಧನೆಗಾಗಿಯೇ ಬರೆಯಲಾಗಿದೆ. ನಾವು ಆ ಬೋಧನೆಗಳ ಮೂಲಕ ಸಹನೆಯನ್ನೂ ಉತ್ತೇಜನೆಯನ್ನೂ ಹೊಂದಿಕೊಂಡು ನಿರೀಕ್ಷೆಯುಳ್ಳವರಾಗಿರಬೇಕೆಂದು ಬರೆಯಲಾಗಿದೆ.


ಯಾಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಕ್ರಿಯಾತ್ಮಕವಾದದ್ದು, ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು, ಪ್ರಾಣ ಮತ್ತು ಆತ್ಮಗಳ ಕೀಲು ಮಜ್ಜೆಗಳನ್ನು ವಿಭಾಗಿಸುವಷ್ಟರ ಮಟ್ಟಿಗೆ ಛೇದಿಸುವಂಥದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸಿ ತೀರ್ಪು ನೀಡುವಂಥದ್ದು ಆಗಿದೆ.


ಅದಕ್ಕೆ ಯೇಸು, “ನೀವು ಪವಿತ್ರ ವೇದವನ್ನಾಗಲಿ ದೇವರ ಶಕ್ತಿಯನ್ನಾಗಲಿ ಅರ್ಥ ಮಾಡಿಕೊಳ್ಳದೆ ತಪ್ಪುತ್ತಿದ್ದಿರಲ್ಲವೇ?


ಯೌವನಸ್ಥನು ಯಾವುದರಿಂದ ತನ್ನ ನಡತೆಯನ್ನು ಶುದ್ಧವಾಗಿಟ್ಟುಕೊಳ್ಳುವನು? ನಿಮ್ಮ ವಾಕ್ಯದ ಪ್ರಕಾರ ಜೀವಿಸುವುದರಿಂದಲೇ.


ಆಜ್ಞೆಯೇ ದೀಪವಾಗಿದೆ, ಬೋಧನೆಯೇ ಬೆಳಕಾಗಿದೆ; ಶಿಕ್ಷಣದ ತಿದ್ದುವಿಕೆಗಳು ಜೀವ ಮಾರ್ಗವಾಗಿವೆ.


ವಾಕ್ಯವನ್ನು ಸಾರು; ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಸಿದ್ಧವಾಗಿರು. ಎಲ್ಲಾ ತಾಳ್ಮೆಯಿಂದ ಉಪದೇಶಿಸಿ ಖಂಡಿಸು, ಗದರಿಸು, ಪ್ರೋತ್ಸಾಹಿಸು.


ನಿಮಗೆ ವಿರೋಧವಾಗಿ ಪಾಪಮಾಡದ ಹಾಗೆ ನನ್ನ ಹೃದಯದಲ್ಲಿ ನಿಮ್ಮ ವಾಕ್ಯವನ್ನು ಬಚ್ಚಿಟ್ಟುಕೊಂಡಿದ್ದೇನೆ.


ನಿಮ್ಮ ವಾಕ್ಯಗಳನ್ನು ತೆರೆಯುವಾಗ, ಅದು ಬೆಳಕನ್ನು ಕೊಡುವುದು; ಅದು ಮುಗ್ಧರಿಗೆ ಅರಿವನ್ನು ನೀಡುವುದು.


“ಯೆಹೋವ ದೇವರ ಆತ್ಮರು ನನ್ನ ಮೂಲಕ ಮಾತನಾಡಿದರು; ಅವರ ನುಡಿ ನನ್ನ ಬಾಯಲ್ಲಿ ಇತ್ತು.


ಜೀವದ ಗದರಿಕೆಗೆ ಕಿವಿಗೊಡುವವನು, ಜ್ಞಾನಿಗಳ ನಡುವೆ ವಾಸಿಸುವವನಾಗಿದ್ದಾನೆ.


ವಿರೋಧಿಸುವವರ ಮನಸ್ಸನ್ನು ತಾಳ್ಮೆಯಿಂದ ತಿದ್ದುವವನಾಗಿದ್ದರೆ, ದೇವರು ಒಂದು ವೇಳೆ ಅಂಥವರಿಗೆ ಸತ್ಯದ ತಿಳುವಳಿಕೆಗೆ ನಡೆಸುವ ಪಶ್ಚಾತ್ತಾಪವನ್ನು ಕೊಡುವ ನಿರೀಕ್ಷೆ ಇರುವುದು.


ದೇವರು ನಿಮ್ಮ ಶಿಕ್ಷಣಕ್ಕಾಗಿ ಆಕಾಶದೊಳಗಿಂದ ತಮ್ಮ ಸ್ವರವನ್ನು ನಿಮಗೆ ಕೇಳಮಾಡಿದರು, ಭೂಮಿಯ ಮೇಲೆ ತಮ್ಮ ದೊಡ್ಡ ಬೆಂಕಿಯನ್ನು ನಿಮಗೆ ತೋರಿಸಿದರು. ನೀವು ಬೆಂಕಿಯೊಳಗಿಂದ ಅವರ ಮಾತುಗಳನ್ನು ಕೇಳಿದಿರಿ.


ನಿಮಗೆ ಹಿತಕರವಾದುದ್ದೆಲ್ಲವನ್ನೂ ಬೋಧಿಸಲು ನಾನು ಹಿಂಜರಿಯಲಿಲ್ಲ. ಬಹಿರಂಗದಲ್ಲಿಯೂ ಮನೆಮನೆಗಳಲ್ಲಿಯೂ ನಾನು ನಿಮಗೆ ಬೋಧಿಸಿದ್ದೇನೆ.


ಕೇಡನ್ನು ಮಾಡುವವರು ಬೆಳಕನ್ನು ದ್ವೇಷಿಸುತ್ತಾರೆ ಮತ್ತು ಬೆಳಕಿಗೆ ಬರುವುದಿಲ್ಲ. ಏಕೆಂದರೆ ಅವರು ಮಾಡಿರುವ ಕೆಟ್ಟ ಕಾರ್ಯಗಳನ್ನೆಲ್ಲಾ ಬೆಳಕು ತೋರಿಸುತ್ತದೆ.


ಯೇಸು ಅವರಿಗೆ, “ಆದಕಾರಣ ಪರಲೋಕ ರಾಜ್ಯದ ಶಿಷ್ಯನಾಗಿರುವ ಪ್ರತಿಯೊಬ್ಬ ನಿಯಮ ಬೋಧಕನು, ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ,” ಎಂದರು.


ಇವನು ಕರ್ತ ಯೇಸುವಿನ ಮಾರ್ಗದ ಬಗ್ಗೆ ಉಪದೇಶ ಹೊಂದಿದ್ದನು. ಯೋಹಾನನ ದೀಕ್ಷಾಸ್ನಾನವನ್ನು ಮಾತ್ರವೇ ತಿಳಿದವನಾಗಿದ್ದನು. ಇವನು ಆತ್ಮದಲ್ಲಿ ಉತ್ಸಾಹಭರಿತನಾಗಿ ಯೇಸುವಿನ ವಿಷಯದಲ್ಲಿ ಧೈರ್ಯವಾಗಿ ಬೋಧಿಸುತ್ತಿದ್ದನು.


ತಿಳುವಳಿಕೆಯಿಲ್ಲದವರಿಗೆ ಶಿಕ್ಷಕನೂ ಬಾಲಕರಿಗೆ ಉಪಾಧ್ಯಾಯನೂ ಆಗಿದ್ದೀಯೆಂದು ಧೈರ್ಯವಾಗಿದ್ದೀಯಲ್ಲಾ?


ಇದಲ್ಲದೆ ನೀವು ಅವರಿಗೆ ಬೋಧಿಸುವ ನಿಮ್ಮ ಒಳ್ಳೆಯ ಆತ್ಮವನ್ನು ಕೊಟ್ಟಿರಿ. ಅವರ ಬಾಯಿಂದ ನಿಮ್ಮ ಮನ್ನವನ್ನು ಹಿಂದೆಗೆಯಲಿಲ್ಲ. ಬಾಯಾರಿದ ಅವರಿಗೆ ನೀರನ್ನು ಕೊಟ್ಟಿರಿ.


ಯೆಹೂದ್ಯರಲ್ಲದವರನ್ನು ನಂಬಿಕೆಯಿಂದಲೇ ದೇವರು ನೀತಿವಂತರನ್ನಾಗಿ ಮಾಡುವರು ಎಂದು ಪವಿತ್ರ ವೇದವು ಮೊದಲೇ ಕಂಡು, “ನಿನ್ನ ಮೂಲಕ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು,” ಎಂಬ ಸುವಾರ್ತೆಯನ್ನು ಅಬ್ರಹಾಮನಿಗೆ, ಮುಂಚಿತವಾಗಿಯೇ ಸಾರಿತು.


ಆದ್ದರಿಂದ ಪವಿತ್ರಾತ್ಮ ದೇವರು ಹೇಳುವ ಪ್ರಕಾರ, “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ,


ಸರ್ವರ ಪ್ರಯೋಜನಕ್ಕಾಗಿ ಪವಿತ್ರಾತ್ಮರ ವರಗಳನ್ನು ಪ್ರತಿಯೊಬ್ಬರಿಗೆ ಕೊಡಲಾಗಿದೆ.


ಏಕೆಂದರೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ಬೋಧಿಸುವುದರಲ್ಲಿ ನಾನು ಹಿಂಜರಿಯಲಿಲ್ಲ.


ಮಾರ್ಗವನ್ನು ತೊರೆದುಬಿಟ್ಟವನಿಗೆ ಶಿಕ್ಷೆಯು ಕಠಿಣವಾಗಿದೆ. ಗದರಿಕೆಯನ್ನು ಹಗೆಮಾಡುವವನು ಸಾಯುವನು.


ದೇವರ ವಾಕ್ಯವನ್ನು ಪಡೆದವರು ದೇವರುಗಳೇ ಎಂದು ಆತನು ಕರೆದಿರುವುದಾದರೆ, ಪವಿತ್ರ ವೇದವು ಸುಳ್ಳಾಗಲಾರದು.


ಆದರೆ ಪವಿತ್ರ ವೇದದ ಪ್ರವಾದನೆಗಳು ನೆರವೇರುವಂತೆ ಇದೆಲ್ಲಾ ಆಯಿತು,” ಎಂದು ಹೇಳಿದರು. ಆಗ ಶಿಷ್ಯರೆಲ್ಲರೂ ಯೇಸುವನ್ನು ಬಿಟ್ಟು ಓಡಿಹೋದರು.


“ಸಹೋದರ ಸಹೋದರಿಯರೇ, ಬಹಳ ದಿನಗಳ ಹಿಂದೆ ದಾವೀದನ ಮುಖಾಂತರ ಪವಿತ್ರಾತ್ಮರು ಮುಂತಿಳಿಸಿದ ದೇವರ ವಾಕ್ಯ ಯೂದನ ವಿಷಯವಾಗಿ ನೆರವೇರಬೇಕಾಗಿತ್ತು. ಯೂದನು ಯೇಸುವನ್ನು ಬಂಧಿಸಿದವರಿಗೆ ಮಾರ್ಗದರ್ಶಕನಾಗಿದ್ದನು.


ಯೇಸು ಅವರಿಗೆ, “ ‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಇದು ಕರ್ತನಿಂದಲೇ ಆಯಿತು. ಇದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾಗಿ ತೋರುತ್ತದೆ,’ ಎಂಬುದನ್ನು ನೀವು ಪವಿತ್ರ ವೇದದಲ್ಲಿ ಎಂದೂ ಓದಲಿಲ್ಲವೇ?


ಹೀಗೆ, “ಅವನ ಪಾಲಿಗೆ ನೀತಿ ಎಂದು ಎಣಿಸಲಾಯಿತು,” ಎಂದು ಬರೆದ ಮಾತು ಅವನಿಗೋಸ್ಕರ ಮಾತ್ರವೇ ಆಗಿರದೆ,


ನಂಬಿಕೆ ಎಂಬುದು ನಾವು ನಿರೀಕ್ಷಿಸುವವುಗಳ ನಿಶ್ಚಯವೂ ಕಾಣದವುಗಳ ನಿದರ್ಶನವೂ ಆಗಿದೆ.


ಎಲ್ಲಾ ವಿಷಯಗಳಲ್ಲಿಯೂ ಬಹಳ ಪ್ರಯೋಜನವಿದೆ. ಮೊದಲನೆಯದಾಗಿ ದೇವರ ವಾಕ್ಯಗಳು ಯೆಹೂದ್ಯರ ವಶಕ್ಕೆ ಒಪ್ಪಿಸಲಾಗಿವೆ.


ಆದರೆ ಬೇರೆಯವರು ನಂಬಲಿಲ್ಲ. ಅವರು ತಮ್ಮತಮ್ಮಲ್ಲಿಯೇ ಭಿನ್ನಾಭಿಪ್ರಾಯ ಉಳ್ಳವರಾಗಿರಲು ಪೌಲನು ಅವರಿಗೆ, “ಪವಿತ್ರಾತ್ಮ ದೇವರು ನಿಮ್ಮ ಪಿತೃಗಳಿಗೆ ಪ್ರವಾದಿ ಯೆಶಾಯನ ಮುಖಾಂತರ ಈ ಮಾತುಗಳನ್ನು ಸರಿಯಾಗಿಯೇ ಹೇಳಿದ್ದಾರೆ:


ದಾವೀದನು ತಾನೇ ಪವಿತ್ರಾತ್ಮ ಪ್ರೇರಣೆಯಿಂದ ಹೇಳಿದ್ದೇನೆಂದರೆ: “ ‘ಕರ್ತದೇವರು ನನ್ನ ಕರ್ತದೇವರಿಗೆ ಹೇಳಿದ್ದಾರೆ: “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದದಡಿಯಲ್ಲಿ ಹಾಕುವವರೆಗೆ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು.” ’


ಯಾಕೋಬಿನ ಮನೆತನದವರೇ, “ಯೆಹೋವ ದೇವರ ಆತ್ಮವು ಕೋಪಗೊಂಡಿದೆಯೇ? ಅವರು ಇಂಥ ಕಾರ್ಯ ಮಾಡುವರೋ?” “ಯಥಾರ್ಥವಾಗಿ ನಡೆಯುವವನಿಗೆ ನನ್ನ ಮಾತುಗಳು ಒಳ್ಳೆಯದನ್ನು ಮಾಡುವುದಿಲ್ಲವೋ?


ಹಾಗಾದರೆ ಇವುಗಳು ಹೀಗೆಯೇ ಆಗಬೇಕೆಂಬ ಪವಿತ್ರ ವೇದದ ವಾಕ್ಯಗಳು ನೆರವೇರುವುದು ಹೇಗೆ?” ಎಂದರು.


“ಹಾಗಾದರೆ ದಾವೀದನು ಆತ್ಮದಲ್ಲಿ ಆತನಿಗೆ, ‘ಕರ್ತನು’ ಎಂದು ಕರೆದು,


ರಹಸ್ಯಗಳು ನಮ್ಮ ದೇವರಾದ ಯೆಹೋವ ದೇವರಿಗೆ ಸೇರಿದ್ದು, ಆದರೆ ಪ್ರಕಟವಾದ ಈ ನಿಯಮದ ಮಾತುಗಳನ್ನೆಲ್ಲಾ ನಾವು ಕೈಕೊಳ್ಳುವ ಹಾಗೆ ನಮಗೂ, ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.


ಅವಳು ಯಾರಿಗೂ ವಿಧೇಯಳಾಗಲಿಲ್ಲ; ಶಿಕ್ಷೆಯನ್ನು ತೆಗೆದುಕೊಳ್ಳಲಿಲ್ಲ; ಯೆಹೋವ ದೇವರಲ್ಲಿ ಭರವಸೆ ಇಡಲಿಲ್ಲ; ತನ್ನ ದೇವರ ಸಮೀಪಕ್ಕೆ ಬರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು