Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 4:14 - ಕನ್ನಡ ಸಮಕಾಲಿಕ ಅನುವಾದ

14 ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡು ಮಾಡಿದ್ದಾನೆ. ಕರ್ತದೇವರು ಅವನ ಕೃತ್ಯಗಳಿಗೆ ಅನುಸಾರವಾಗಿ ಅವನಿಗೆ ಪ್ರತಿಫಲವನ್ನು ಕೊಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು. ಕರ್ತನು ಅವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಅವನಿಗೆ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಕಂಚುಗಾರನಾದ ಅಲೆಗ್ಸಾಂಡರನು ನನಗೆ ಬಹಳ ಕೇಡುಮಾಡಿದ್ದಾನೆ. ಪ್ರಭು ಅವನ ಕೃತ್ಯಗಳಿಗೆ ತಕ್ಕ ಶಿಕ್ಷೆಯನ್ನು ವಿಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು; ಕರ್ತನು ಅವನ ಕೃತ್ಯಗಳಿಗೆ ಸರಿಯಾಗಿ ಅವನಿಗೆ ಪ್ರತಿಫಲವನ್ನು ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಕಂಚುಗಾರನಾದ ಅಲೆಗ್ಸಾಂಡರನು ನನಗೆ ಅನೇಕ ಕೆಡಕುಗಳನ್ನು ಮಾಡಿದನು. ಅವನು ಮಾಡಿದ ಕೃತ್ಯಗಳಿಗಾಗಿ ಪ್ರಭುವು ಅವನನ್ನು ದಂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಪಿತ್ಳಿಚೆ ಕಾಮ್ ಕರ್‍ತಲ್ಯಾ ಅಲೆಗ್ಸಾಂಡರಾನ್ ಮಾಕಾ ವಾಯ್ಟ್ ಕರ್‍ಲ್ಯಾನಾಯ್. ತೆನಿ ಕರಲ್ಲ್ಯಾ ಹ್ಯಾ ಕಾಮಾಂಚ್ಯಾಸಾಟಿ ಧನಿಚ್ ತೆಕಾ ಪಾಜೆ ಹೊಲ್ಲಿ ಮಜುರಿ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 4:14
18 ತಿಳಿವುಗಳ ಹೋಲಿಕೆ  

ಹುಮೆನಾಯನೂ ಅಲೆಕ್ಸಾಂಡರನೂ ಅಂಥವರಾಗಿದ್ದಾರೆ. ಇವರು ದೇವದೂಷಣೆ ಮಾಡಬಾರದೆಂಬುದನ್ನು ಕಲಿತುಕೊಳ್ಳುವಂತೆ ಇವರನ್ನು ನಾನು ಸೈತಾನನಿಗೆ ಒಪ್ಪಿಸಿಬಿಟ್ಟಿದ್ದೇನೆ.


ನಿಮ್ಮನ್ನು ಸಂಕಟ ಪಡಿಸುವವರಿಗೆ ದೇವರು ಪ್ರತಿಯಾಗಿ ಸಂಕಟವನ್ನೂ ಮತ್ತು


ಅವರ ಕೃತ್ಯಗಳ ಪ್ರಕಾರವಾಗಿಯೂ, ಅವರ ಕೆಟ್ಟತನಗಳ ಪ್ರಕಾರವಾಗಿಯೂ ಅವರಿಗೆ ಪ್ರತಿಫಲಕೊಡಿರಿ; ಅವರ ಕೈಕೃತ್ಯಗಳ ಪ್ರಕಾರವಾಗಿ ಅವರಿಗೆ ಕೊಡಿರಿ, ಅರ್ಹತೆಗೆ ತಕ್ಕಂತೆಯೇ ಅವರಿಗೆ ಬರಮಾಡಿರಿ.


ಯೆಹೋವ ದೇವರು ನನ್ನ ನಿನ್ನ ಮಧ್ಯದಲ್ಲಿ ನ್ಯಾಯತೀರಿಸಲಿ. ಹೌದು, ಯೆಹೋವ ದೇವರು ತಾವೇ ನನಗೋಸ್ಕರ ನಿನ್ನ ವಿಷಯವಾಗಿ ಮುಯ್ಯಿಗೆ ಮುಯ್ಯಿ ಮಾಡಲಿ. ಆದರೆ ನಾನು ನಿನ್ನ ಮೇಲೆ ನನ್ನ ಕೈಯೆತ್ತುವುದಿಲ್ಲ.


ಆಕೆಯು ನಿಮಗೆ ಕೊಟ್ಟಿದ್ದಕ್ಕೆ ಸರಿಯಾಗಿ ಹಿಂದಕ್ಕೆ ಕೊಡಿರಿ. ಕೃತ್ಯಗಳಿಗೆ ಸರಿಯಾಗಿ ಎರಡರಷ್ಟು ಅವಳಿಗೆ ಕೊಡಿರಿ. ಆಕೆಯ ಬಟ್ಟಲಿನಿಂದಲೇ ಎರಡರಷ್ಟು ಆಕೆಗೆ ಕಲಸಿ ಕೊಡಿರಿ.


ಪ್ರಿಯರೇ, ಮುಯ್ಯಿಗೆ ಮುಯ್ಯಿ ತೀರಿಸದೆ, ಅದನ್ನು ದೇವರ ಕೋಪಕ್ಕೆ ಬಿಟ್ಟುಬಿಡಿರಿ. ಏಕೆಂದರೆ, “ಮುಯ್ಯಿ ತೀರಿಸುವುದು ನನಗೆ ಸೇರಿದ್ದು. ನಾನು ಅದನ್ನು ತೀರಿಸುವೆನು, ಎಂದು ಕರ್ತನು ಹೇಳುತ್ತಾರೆ,” ಎಂದು ಪವಿತ್ರ ವೇದದಲ್ಲಿ ಬರೆಯಲಾಗಿದೆ.


ಅದಕ್ಕೆ ನಾನು ಯೆಹೋವ ದೇವರೇ, ನೀನೇ ಬಲ್ಲೆ, ನನಗಾಗಿ ನನ್ನ ಹಿಂಸಕರಿಗೆ ಮುಯ್ಯಿ ತೀರಿಸು, ಅವರಿಗೆ ಹೆಚ್ಚು ತಾಳ್ಮೆಯನ್ನು ತೋರಿಸಬೇಡ, ನನ್ನನ್ನು ನಿರ್ಮೂಲ ಮಾಡಬೇಡ ಏಕೆಂದರೆ ನೀವು ಕನಿಕರ ಉಳ್ಳವರು, ನಿನ್ನ ನಿಮಿತ್ತವೇ ನಾನು ನಿಂದೆಗೆ ಗುರಿಯಾದೆನೆಂದು ಚಿತ್ತಕ್ಕೆ ತಂದುಕೋ.


ಯೆಹೋವ ದೇವರೇ, ನಿಮ್ಮಲ್ಲಿ ಒಡಂಬಡಿಕೆಯ ಪ್ರೀತಿ ಇದೆ. ನೀವು ಪ್ರತಿ ಮನುಷ್ಯನಿಗೂ ಅವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುತ್ತೀರಿ.”


ನಾನು ಅರಸನಾಗಿ ಅಭಿಷೇಕ ಹೊಂದಿದ್ದರೂ ಇಂದಿಗೆ ದುರ್ಬಲನಾಗಿದ್ದೇನೆ. ಚೆರೂಯಳ ಪುತ್ರರಾದ ಇವರು ನನ್ನ ಹತೋಟಿಗೆ ಬಾರದವರು. ಕೆಟ್ಟತನ ಮಾಡುವವನಿಗೆ ಯೆಹೋವ ದೇವರು ಅವನ ಕೆಟ್ಟತನಕ್ಕೆ ಸರಿಯಾಗಿ ಪ್ರತಿಫಲ ಕೊಡುವರು,” ಎಂದನು.


“ಪರಲೋಕವೇ ಸಂಭ್ರಮಿಸಿರಿ, ಪರಿಶುದ್ಧರೇ, ಅಪೊಸ್ತಲರೇ ಹಾಗೂ ಪ್ರವಾದಿಗಳೇ ಆಕೆಯ ನಿಮಿತ್ತ ಹರ್ಷಗೊಳ್ಳಿರಿ! ಏಕೆಂದರೆ ಆಕೆ ನಿಮಗೆ ತೀರ್ಪುಮಾಡಿದ್ದಕ್ಕೆ ಸರಿಯಾಗಿ ದೇವರು ಆಕೆಗೆ ತೀರ್ಪುಮಾಡಿದ್ದಾರೆ!”


ಅವರು ಮಹಾಶಬ್ದದಿಂದ, “ಒಡೆಯನೇ, ಪವಿತ್ರನೇ, ಸತ್ಯವಂತನೇ ನಮ್ಮ ರಕ್ತ ಸುರಿಸಿದ ಲೋಕನಿವಾಸಿಗಳಿಗೆ ತೀರ್ಪನ್ನೂ ಪ್ರತಿದಂಡನೆಯನ್ನೂ ಮಾಡಲು ಇನ್ನೆಷ್ಟು ಸಮಯ ಬೇಕು?” ಎಂದು ಕೂಗಿದರು.


ಮರಣಕರವಲ್ಲದ ಪಾಪವನ್ನು ಮಾಡುವ ಸಹೋದರ ಅಥವಾ ಸಹೋದರಿಯನ್ನು ಯಾರಾದರೂ ಕಂಡರೆ, ಆ ಸಹೋದರ ಅಥವಾ ಸಹೋದರಿಯರಿಗಾಗಿ ದೇವರಲ್ಲಿ ಬೇಡಿಕೊಳ್ಳಿರಿ. ದೇವರು ಅವರಿಗೆ ಜೀವವನ್ನು ದಯಪಾಲಿಸುವರು. ಮರಣಕರವಲ್ಲದ ಪಾಪವನ್ನು ಕುರಿತೇ ಈ ಮಾತನ್ನು ಹೇಳುತ್ತಿದ್ದೇನೆ. ಆದರೆ ಮರಣಕರವಾದ ಪಾಪವೂ ಉಂಟು. ಈ ಮರಣಕರವಾದ ಪಾಪದ ವಿಷಯವಾಗಿ ಬೇಡಿಕೊಳ್ಳಬೇಕೆಂದು ನಾನು ಹೇಳುತ್ತಿಲ್ಲ.


ದೇವರು, “ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲ ಕೊಡುವರು.”


ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಿಂದಿರು. ಏಕೆಂದರೆ ಅವನು ನಮ್ಮ ಸಂದೇಶವನ್ನು ಬಹಳವಾಗಿ ವಿರೋಧಿಸಿದನು.


ಯೆಹೋವ ದೇವರೇ, ಅವರ ಕೈಕೆಲಸಗಳ ಪ್ರಕಾರ ಅವರಿಗೆ ಪ್ರತಿಫಲವನ್ನು ಕೊಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು