Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 4:18 - ಕನ್ನಡ ಸಮಕಾಲಿಕ ಅನುವಾದ

18 ನನ್ನನ್ನು ಪ್ರತಿಯೊಂದು ದುಷ್ಟದಾಳಿಯಿಂದ ಕರ್ತ ಯೇಸು ತಪ್ಪಿಸಿ, ತಮ್ಮ ಪರಲೋಕ ರಾಜ್ಯಕ್ಕೆ ನನ್ನನ್ನು ಸುರಕ್ಷಿತವಾಗಿ ತರುವರು. ಯುಗಯುಗಾಂತರಗಳಲ್ಲಿಯೂ ಅವರಿಗೆ ಮಹಿಮೆ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ನನ್ನನ್ನು ಕಾಪಾಡಿ ತನ್ನೊಂದಿಗೆ ಪರಲೋಕ ರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಪ್ರಭು ನನ್ನನ್ನು ಸಕಲ ಕೇಡುಗಳಿಂದ ರಕ್ಷಿಸಿ, ತಮ್ಮ ಸ್ವರ್ಗಸಾಮ್ರಾಜ್ಯಕ್ಕೆ ನನ್ನನ್ನು ಸುರಕ್ಷಿತವಾಗಿ ಸೇರಿಸುವರು. ಯುಗಯುಗಾಂತರಕ್ಕೂ ಅವರಿಗೆ ಮಹಿಮೆ ಸಲ್ಲಲಿ, ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಾನು ಯಾವ ದುಷ್ಕೃತ್ಯವನ್ನೂ ಮಾಡದಂತೆ ಕರ್ತನು ನನ್ನನ್ನು ಕಾಪಾಡಿ ತನ್ನ ಬಳಿಗೆ ಪರಲೋಕರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯಾರಾದರೂ ನನಗೆ ತೊಂದರೆ ಮಾಡಲು ಪ್ರಯತ್ನಿಸಿದರೆ, ಪ್ರಭುವು ನನ್ನನ್ನು ರಕ್ಷಿಸುವನು. ಪ್ರಭುವು ನನ್ನನ್ನು ಸುರಕ್ಷಿತವಾಗಿ ತನ್ನ ಪರಲೋಕರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಪ್ರಭುವಿಗೆ ಮಹಿಮೆಯಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಅನಿಬಿ ಸಗ್ಳ್ಯಾ ವಾಯ್ಟಾನಿತ್ನಾ ಧನಿ ಮಾಕಾ ಹುರ್‍ವುತಾ ಅನಿ ಅಪ್ನಾಚ್ಯಾ ಸರ್ಗಾಚ್ಯಾ ರಾಜಾತ್ ಶಾಬಿತ್ ನ್ಹೆವ್ನ್ ಪಾವ್ಸುತಾ. ತೆಕಾ ಸದಾ ಸರ್ವತಾಕ್ ಮಹಿಮಾ ಹೊಂವ್ದಿತ್. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 4:18
40 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಎಲ್ಲಾ ಕೇಡಿನಿಂದ ನಿಮ್ಮನ್ನು ಕಾಪಾಡುವರು, ನಿಮ್ಮ ಪ್ರಾಣವನ್ನೂ ಕಾಪಾಡುವರು.


ಆದರೆ ಕರ್ತ ಯೇಸು ನಂಬಿಗಸ್ತರು, ಅವರು ನಿಮ್ಮನ್ನು ದೃಢಪಡಿಸಿ ನಿಮ್ಮನ್ನು ಕೆಡುಕನಿಂದ ತಪ್ಪಿಸುವರು.


ನಮ್ಮನ್ನು ಶೋಧನೆಗೆ ಸೇರಿಸದೆ, ಕೇಡಿನಿಂದ ತಪ್ಪಿಸಿರಿ. ಏಕೆಂದರೆ ರಾಜ್ಯವೂ ಬಲವೂ ಮಹಿಮೆಯೂ ಸದಾಕಾಲ ನಿಮ್ಮದೇ. ಆಮೆನ್.’


ಅಂತ್ಯಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ದೇವರು ನಿಮ್ಮ ನಂಬಿಕೆಯ ಮುಖಾಂತರ ನಿಮ್ಮನ್ನು ತಮ್ಮ ಶಕ್ತಿಯಿಂದ ಕಾಯುತ್ತಾರೆ.


ಸಮಾಧಾನದ ದೇವರು ತಾವಾಗಿಯೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ. ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಪುನರಾಗಮನದಲ್ಲಿ ನಿಮ್ಮ ಆತ್ಮ, ಪ್ರಾಣ, ಶರೀರಗಳು ದೋಷವಿಲ್ಲದೆ ಸಂಪೂರ್ಣವಾಗಿ ಸುರಕ್ಷಿತವಾಗಿರಲಿ.


ನಿಮ್ಮ ಆಲೋಚನೆಯಂತೆ ನನ್ನನ್ನು ನಡೆಸಿ, ತರುವಾಯ ಮಹಿಮೆಗೆ ನನ್ನನ್ನು ಸೇರಿಸುವಿರಿ.


ನೀವು ದೇವರ ಚಿತ್ತಾನುಸಾರವಾಗಿ ಎಲ್ಲವನ್ನೂ ಮಾಡುವಂತೆ ನಿಮ್ಮನ್ನು ಸನ್ನದ್ಧರಾಗಿ ಮಾಡಲಿ. ಕ್ರಿಸ್ತ ಯೇಸುವಿನ ಶಕ್ತಿಯ ಮೂಲಕವಾಗಿ ಪ್ರತಿಯೊಂದು ಸತ್ಕಾರ್ಯಗಳನ್ನು ತಮಗೆ ಮೆಚ್ಚಿಕೆಯಾಗುವಂತೆ ನಿಮ್ಮ ಮೂಲಕವಾಗಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಯೇಸುವಿಗೆ ಮಹಿಮೆ ಉಂಟಾಗಲಿ. ಆಮೆನ್.


ಇದಕ್ಕಾಗಿಯೇ ನಾನು ಈ ಶ್ರಮೆಗಳನ್ನು ಅನುಭವಿಸುತ್ತಿದ್ದೇನೆ. ಆದರೆ ನಾನು ನಾಚಿಕೆಪಡುವುದಿಲ್ಲ. ಏಕೆಂದರೆ ನಾನು ನಂಬಿರುವ ಕ್ರಿಸ್ತ ಯೇಸುವನ್ನು ಬಲ್ಲೆನು. ನಾನು ಕ್ರಿಸ್ತ ಯೇಸುವಿಗೆ ಒಪ್ಪಿಸಿದ್ದನ್ನು ಅವರು ಆ ದಿನಕ್ಕಾಗಿ ಕಾಪಾಡುವುದಕ್ಕೆ ಶಕ್ತರಾಗಿದ್ದಾರೆಂಬ ದೃಢವಿಶ್ವಾಸ ನನಗಿದೆ.


ನಾವು ಭರವಸೆಯಿಟ್ಟ ದೇವರು ಅಂಥಾ ಮರಣಕರ ಅಪಾಯದಿಂದ ನಮ್ಮನ್ನು ತಪ್ಪಿಸಿದ್ದಾರೆ ಮತ್ತು ಮುಂದೆಯೂ ಅಪಾಯಗಳಿಂದ ನಮ್ಮನ್ನು ಪಾರುಮಾಡುವರು.


ಏಕೆಂದರೆ ಸಮಸ್ತವೂ ದೇವರಿಂದ ಉಂಟಾಗಿ ದೇವರ ಮೂಲಕವಾಗಿಯೂ ದೇವರಿಗಾಗಿಯೂ ಇರುತ್ತವೆ. ಮಹಿಮೆಯು ಸದಾಕಾಲವೂ ದೇವರಿಗೇ ಸಲ್ಲುವುದಾಗಿರಲಿ. ಆಮೆನ್.


ಆದರೆ ನೀವು ನನ್ನ ಬಲವನ್ನು ಕಾಡುಕೋಣದ ಕೊಂಬಿನ ಹಾಗೆ ಬಲಪಡಿಸುವಿರಿ. ನಾನು ನೂತನ ತೈಲದಿಂದ ಅಭಿಷಿಕ್ತನಾಗುವೆನು.


ಏಕೆಂದರೆ ಯೆಹೋವ ದೇವರು ನ್ಯಾಯವನ್ನು ಪ್ರೀತಿಸುತ್ತಾರೆ; ತಮ್ಮ ನಂಬಿಗಸ್ತ ಜನರನ್ನು ತೊರೆದುಬಿಡರು. ನೀತಿವಂತರು ಸದಾಕಾಲಕವೂ ಸುರಕ್ಷಿತರಾಗಿರುವರು; ಆದರೆ ದುಷ್ಟರ ಸಂತತಿಯು ಅಳಿದುಹೋಗುವುದು.


ಆಗ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವುದಕ್ಕೆ ಕಿವಿಯುಳ್ಳವರು ಕೇಳಲಿ.


ಆದರೆ ಯಾಬೇಚನು ಇಸ್ರಾಯೇಲಿನ ದೇವರಿಗೆ, “ನೀವು ನನ್ನನ್ನು ನಿಜವಾಗಿ ಆಶೀರ್ವದಿಸಬೇಕು; ನನ್ನ ಮೇರೆಯನ್ನು ವಿಸ್ತರಿಸಬೇಕು; ನಿಮ್ಮ ಹಸ್ತವು ನನ್ನ ಸಂಗಡ ಇರಲಿ; ನನ್ನನ್ನು ವ್ಯಥೆಪಡಿಸದ ಹಾಗೆ ನನ್ನನ್ನು ಕೇಡಿನಿಂದ ತಪ್ಪಿಸಿರಿ,” ಎಂದು ಮೊರೆಯಿಟ್ಟನು. ದೇವರು ಅವನು ಬೇಡಿಕೊಂಡದ್ದನ್ನು ಅನುಗ್ರಹಿಸಿದರು.


ನೀವು ಇವರನ್ನು ಲೋಕದಿಂದ ತೆಗೆಯಬೇಕೆಂದು ಬೇಡಿಕೊಳ್ಳದೆ ಇವರನ್ನು ಕೆಡುಕನಿಂದ ಕಾಪಾಡಬೇಕೆಂದು ನಾನು ಬೇಡಿಕೊಳ್ಳುತ್ತೇನೆ.


“ಚಿಕ್ಕ ಹಿಂಡೇ, ಭಯಪಡಬೇಡ, ಏಕೆಂದರೆ ನಿಮ್ಮ ತಂದೆಯು ತಮ್ಮ ರಾಜ್ಯವನ್ನು ನಿಮಗೆ ಕೊಡುವುದಕ್ಕೆ ಮೆಚ್ಚಿದ್ದಾರೆ.


ದೇವರೊಬ್ಬರೇ ಅಮರತ್ವವುಳ್ಳವರೂ ಯಾರೂ ಸಮೀಪಿಸಲಾರದ ಬೆಳಕಿನಲ್ಲಿ ವಾಸಿಸುವವರೂ ಆಗಿದ್ದಾರೆ. ಯಾವ ಮನುಷ್ಯನೂ ದೇವರನ್ನು ಕಾಣಲಿಲ್ಲ. ಯಾರೂ ಕಾಣಲಾರರು. ದೇವರಿಗೆ ಮಾನವೂ ಬಲವೂ ಸದಾಕಾಲಕ್ಕೂ ಇರಲಿ. ಆಮೆನ್.


ಮನುಷ್ಯರಿಗಾಗುವ ಶೋಧನೆಯೇ ಹೊರತು, ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲ. ಆದರೆ ದೇವರು ನಂಬಿಗಸ್ತರು. ನಿಮ್ಮ ಶಕ್ತಿಗೆ ಮೀರಿದ ಶೋಧನೆಗಳನ್ನು ಅವರು ನಿಮ್ಮ ಮೇಲೆ ಬರುವಂತೆ ಮಾಡುವುದಿಲ್ಲ. ಆದರೆ ನಿಮಗೆ ಶೋಧನೆಗಳು ಬಂದಾಗ, ಅವುಗಳನ್ನು ಜಯಿಸುವುದಕ್ಕೆ ಶಕ್ತರಾಗುವಂತೆ, ಅವುಗಳಿಂದ ತಪ್ಪಿಸಿಕೊಳ್ಳುವ ಮಾರ್ಗವನ್ನು ಮಾಡುವರು.


ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ಆ ದೇವರ ದೂತ, ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದಲೂ, ನನ್ನ ಪಿತೃಗಳಾದ ಅಬ್ರಹಾಮ, ಇಸಾಕರ ಹೆಸರಿನಿಂದಲೂ ಅವರು ಮುಂದುವರೆಯಲಿ. ಭೂಮಿಯ ಮೇಲೆ ಸಮೂಹವಾಗಿ ಹೆಚ್ಚಲಿ.”


ಅವರಿಗೆ ಸರ್ವಾಧಿಪತ್ಯವೂ ಯುಗಯುಗಾಂತರಗಳಲ್ಲಿ ಇರಲಿ. ಆಮೆನ್.


ನಿತ್ಯವಾದ ಅರಸರೂ ಅಮರರೂ ಅದೃಶ್ಯರೂ ಆಗಿರುವ ಜ್ಞಾನಿಯಾದ ಒಬ್ಬರೇ ದೇವರಿಗೆ ಯುಗಯುಗಾಂತರಗಳಲ್ಲಿಯೂ ಘನವೂ ಮಹಿಮೆಯೂ ಉಂಟಾಗಲಿ. ಆಮೆನ್.


“ಆಗ ನಾನು ನನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ಬನ್ನಿರಿ, ಭೂಲೋಕಕ್ಕೆ ಅಸ್ತಿವಾರ ಹಾಕಿದ ದಿನದಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಆಸ್ತಿಯನ್ನಾಗಿ ಹೊಂದಿರಿ.


ಕ್ರಿಸ್ತ ಯೇಸುವಿನ ದಾಸನೂ ಯಾಕೋಬನ ಸಹೋದರನೂ ಆಗಿರುವ ಯೂದನು, ತಂದೆಯಾದ ದೇವರಿಗೆ ಪ್ರಿಯರಾದವವರಿಗೂ ಕ್ರಿಸ್ತ ಯೇಸು ಸುರಕ್ಷತೆಯನ್ನೂ ಅವರ ಕರೆಯುವಿಕೆಯನ್ನೂ ಹೊಂದಿದವರಿಗೆ ಬರೆಯುವ ಪತ್ರ:


ದೇವರಿಗೆ ಯುಗಯುಗಾಂತರಗಳಿಗೂ ಮಹಿಮೆಯಾಗಲಿ. ಆಮೆನ್.


ಶಕ್ತರಾಗಿರುವ ಒಬ್ಬರೇ ಜ್ಞಾನವಂತರಾಗಿರುವ ದೇವರಿಗೆ ಕ್ರಿಸ್ತ ಯೇಸುವಿನ ಮೂಲಕ ಎಂದೆಂದಿಗೂ ಮಹಿಮೆಯಾಗಲಿ! ಆಮೆನ್.


ನನ್ನ ತಂದೆ ನನಗೆ ರಾಜ್ಯವನ್ನು ನೇಮಕ ಮಾಡಿದ ಹಾಗೆಯೇ, ನಾನೂ ನಿಮಗೆ ರಾಜ್ಯವನ್ನು ನೇಮಕ ಮಾಡುತ್ತೇನೆ.


ನಮಗೆ ಪಾಪಮಾಡಿದವರನ್ನು, ನಾವು ಕ್ಷಮಿಸಿದಂತೆಯೇ ನಮ್ಮ ಪಾಪಗಳನ್ನು ಕ್ಷಮಿಸಿರಿ. ನಮ್ಮನ್ನು ಶೋಧನೆಯೊಳಗೆ ಸೇರಿಸದೆ, ಕೇಡಿನಿಂದ ನಮ್ಮನ್ನು ತಪ್ಪಿಸಿ.”


ನಾಬಾಲನು ಸತ್ತನೆಂದು ದಾವೀದನು ಕೇಳಿದಾಗ, “ನನ್ನ ನಿಂದೆಯ ವ್ಯಾಜ್ಯವನ್ನು ನಾಬಾಲನಿಂದ ವಿಚಾರಿಸಿ, ತನ್ನ ಸೇವಕನನ್ನು ಕೇಡು ಮಾಡಗೊಡದ ಹಾಗೆ ತಡೆದ ಯೆಹೋವ ದೇವರು ಸ್ತುತಿಹೊಂದಲಿ. ಏಕೆಂದರೆ ಯೆಹೋವ ದೇವರು ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆ ಬರಮಾಡಿದರು,” ಎಂದನು. ದಾವೀದನು ಅಬೀಗೈಲಳನ್ನು ತನಗೆ ಹೆಂಡತಿಯಾಗಿ ತೆಗೆದುಕೊಳ್ಳುವುದಕ್ಕಾಗಿ ಅವಳ ಸಂಗಡ ಮಾತನಾಡಲು ಸೇವಕರನ್ನು ಕಳುಹಿಸಿದನು.


ನನ್ನ ಪ್ರಿಯರೇ, ಕೇಳಿರಿ, ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ ತಮ್ಮನ್ನು ಪ್ರೀತಿಸುವವರಿಗೆ ತಾವು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರನ್ನಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?


ಇದಲ್ಲದೆ ದಾವೀದನು, “ನನ್ನನ್ನು ಸಿಂಹದ ಕೈಗೂ, ಕರಡಿಯ ಕೈಗೂ ತಪ್ಪಿಸಿಬಿಟ್ಟ ಯೆಹೋವ ದೇವರು, ಈ ಫಿಲಿಷ್ಟಿಯನ ಕೈಗೂ ನನ್ನನ್ನು ತಪ್ಪಿಸಿಬಿಡುವರು,” ಎಂದನು. ಆಗ ಸೌಲನು ದಾವೀದನಿಗೆ, “ನೀನು ಹೋಗು, ಯೆಹೋವ ದೇವರು ನಿನ್ನ ಸಂಗಡ ಇರಲಿ,” ಎಂದನು.


ದುಷ್ಟನು ತನ್ನ ಆಪತ್ಕಾಲದಲ್ಲಿ ಹಾಳಾಗುತ್ತಾನೆ, ಆದರೆ ನೀತಿವಂತನಿಗೆ ಮರಣದಲ್ಲಿಯೂ ಆಶ್ರಯ ಇದೆ.


ಈ ಪ್ರಪಂಚವು ತನ್ನ ಜ್ಞಾನದ ಮೂಲಕ ದೇವರನ್ನು ಅರಿತುಕೊಳ್ಳಲಿಲ್ಲ; ಆದ್ದರಿಂದ ದೇವರ ಜ್ಞಾನದಿಂದ, ನಂಬಿದವರನ್ನು ಪ್ರಸಂಗದ ಬುದ್ದಿಹೀನತೆಯಿಂದ ರಕ್ಷಿಸುವುದು ದೇವರಿಗೆ ಮೆಚ್ಚುಗೆಯಾಯಿತು.


ಪ್ರಿಯರೇ, ನಾನು ಹೇಳುವುದೇನೆಂದರೆ, ರಕ್ತಮಾಂಸವು ದೇವರ ರಾಜ್ಯಕ್ಕೆ ಬಾಧ್ಯವಾಗಲಾರವು. ಅಳಿಯುವಂಥದ್ದು ಅಮರತ್ವಕ್ಕೆ ಬಾಧ್ಯವಾಗಲಾರದು.


ದೇವರ ಮುಂದೆಯೂ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸಲು ಕರ್ತ ಆಗಿರುವ ಕ್ರಿಸ್ತ ಯೇಸುವಿನ ಮುಂದೆಯೂ ಅವರ ಪ್ರತ್ಯಕ್ಷತೆ ಹಾಗೂ ಅವರ ರಾಜ್ಯದ ಮುಂದೆಯೂ ನಾನು ನಿನಗೆ ಆಜ್ಞಾಪಿಸಿ ಹೇಳುವುದೇನೆಂದರೆ:


ಅದರ ಬದಲು ಅವರು ಅದಕ್ಕಿಂತ ಉತ್ತಮವಾದ ಪರಲೋಕದ ದೇಶವನ್ನು ನಿರೀಕ್ಷಿಸಿದರು. ಆದ್ದರಿಂದ ದೇವರು ಅವರ ದೇವರೆನಿಸಿಕೊಳ್ಳುವುದಕ್ಕೆ ನಾಚಿಕೊಳ್ಳದೆ ಅವರಿಗಾಗಿ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾರೆ.


ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವವುಳ್ಳ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಆನಂದಭರಿತ ಅಸಂಖ್ಯಾತ ದೇವದೂತಗಣಗಳ ಬಳಿಗೂ


ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವು ತಮ್ಮ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಭಾಗ್ಯವನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವರು.


ನೀವು ಕೃಪೆಯಲ್ಲಿ ಬೆಳೆಯಿರಿ ಮತ್ತು ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಅವರಿಗೆ ಈಗಲೂ ಸರ್ವಕಾಲವೂ ಮಹಿಮೆ ಇರಲಿ! ಆಮೆನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು