Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 1:7 - ಕನ್ನಡ ಸಮಕಾಲಿಕ ಅನುವಾದ

7 ಸಂಕಟ ಪಡುವವರಾದ ನಿಮಗೆ ನಮ್ಮೊಡನೆ ಉಪಶಮನವನ್ನೂ ಕೊಡುವುದು ದೇವರಿಗೆ ನ್ಯಾಯವಾಗಿದೆ. ನಮಗೆ ಕರ್ತ ಆಗಿರುವ ಯೇಸು ತಮ್ಮ ಶಕ್ತಿಯುತವಾದ ದೂತರೊಂದಿಗೆ ಪರಲೋಕದಿಂದ ಪ್ರಜ್ವಲಿಸುವ ಜ್ವಾಲೆಯಲ್ಲಿ ಪ್ರತ್ಯಕ್ಷರಾಗುವಾಗ ಇದಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೇಸು ಕರ್ತನು ತನ್ನ ಶಕ್ತಿಯುತ ದೇವದೂತರೊಂದಿಗೆ ಅಗ್ನಿ ಜ್ವಾಲೆಗಳ ಮೂಲಕ ಪರಲೋಕದಿಂದ ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7-8 ಪ್ರಭು ಯೇಸು ತಮ್ಮ ಪ್ರಭಾವಯುತ ದೂತರೊಂದಿಗೆ ಸ್ವರ್ಗದಿಂದ ಪ್ರತ್ಯಕ್ಷರಾಗುವಾಗ, ಬೆಂಕಿಯ ಜ್ವಾಲೆಗಳು ಕಂಡುಬರುವುವು; ದೇವರನ್ನು ಅರಿತು ಅಲ್ಲಗಳೆದವರಿಗೂ ನಮ್ಮ ಪ್ರಭು ಯೇಸುವಿನ ಶುಭಸಂದೇಶಕ್ಕೆ ಅವಿಧೇಯರಾಗಿ ವರ್ತಿಸಿದವರಿಗೂ ತಕ್ಕ ಪ್ರತೀಕಾರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯಾವಾಗ ಕೊಡುವನಂದರೆ ಯೇಸು ಕರ್ತನು ತನ್ನ ಶಕ್ತಿಯನ್ನು ತೋರ್ಪಡಿಸುವ ದೇವದೂತರಿಂದ ಕೂಡಿದವನಾಗಿ ಉರಿಯುವ ಬೆಂಕಿಯಲ್ಲಿ ಆಕಾಶದಿಂದ ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ತೊಂದರೆಗೆ ಒಳಗಾಗಿರುವ ನಿಮಗೆ ದೇವರು ಶಾಂತಿಯನ್ನು ನೀಡುತ್ತಾನೆ. ಆತನು ನಮಗೂ ಶಾಂತಿಯನ್ನು ನೀಡುವನು. ಪ್ರಭುವಾದ ಯೇಸು ತನ್ನ ಶಕ್ತಿಶಾಲಿಗಳಾದ ದೂತರೊಂದಿಗೆ ಪರಲೋಕದಿಂದ ಪ್ರತ್ಯಕ್ಷನಾದಾಗ ಈ ಶಾಂತಿಯನ್ನು ದಯಪಾಲಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಅನಿ ಕಸ್ಟ್ ಸೊಸ್ತಲ್ಯಾ ಅಮ್ಕಾ ಅನಿ ತುಮ್ಕಾ ದೆವ್ ಸುಟ್ಕಾ ದಿತಾ. ಹೆ, ತೊ ಧನಿ ಜೆಜು ಕ್ರಿಸ್ತ್ ಸರ್‍ಗಾ ವೈನಾ ಅಪ್ನಾಚ್ಯಾ ಮೆಜುಕ್ ಹೊಯ್ನಾ ತವ್ಡ್ಯಾ ದುತಾಂಚ್ಯಾ ವಾಂಗ್ಡಾ ಯೆಲ್ಲ್ಯಾ ಎಳಾರ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 1:7
51 ತಿಳಿವುಗಳ ಹೋಲಿಕೆ  

ಪರಲೋಕದಿಂದ ಒಂದು ಧ್ವನಿಯು ನನಗೆ, “ಇಂದಿನಿಂದ ಕರ್ತರಲ್ಲಿ ವಿಶ್ವಾಸವುಳ್ಳವರು ಧನ್ಯರು ಎಂಬುದಾಗಿ ಬರೆ!” ಎಂದು ಹೇಳಿತು. ಅದಕ್ಕೆ ಪವಿತ್ರಾತ್ಮ ದೇವರು, “ಹೌದು, ಅವರ ಪ್ರಯಾಸಗಳು ತೀರಿದವು ಅವರಿಗೆ ವಿಶ್ರಾಂತಿಯಾಗುವುದು, ಅವರ ಕೃತ್ಯಗಳು ಅವರನ್ನು ಹಿಂಬಾಲಿಸುತ್ತವೆ!” ಎಂದು ಹೇಳುತ್ತಾರೆ.


ಮನುಷ್ಯಪುತ್ರನಾದ ನಾನು ನನ್ನ ತಂದೆಯ ಮಹಿಮೆಯಲ್ಲಿ ನನ್ನ ದೂತರೊಡನೆ ಬಂದಾಗ, ನಾನು ಪ್ರತಿಯೊಬ್ಬರಿಗೂ ಅವರವರ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವೆನು.


“ಯೇಸುವೆಂಬ ನಾನು ನಮ್ಮ ಸಭೆಗಳಲ್ಲಿ ಈ ಸಂಗತಿಗಳ ವಿಷಯವಾಗಿ ನಿಮಗೆ ಸಾಕ್ಷಿ ನೀಡುವಂತೆ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ವಂಶದ ಕುಡಿ, ಅವನ ಸಂತತಿಯೂ ಉದಯದ ಪ್ರಕಾಶಮಾನ ತಾರೆಯೂ ಆಗಿದ್ದೇನೆ!” ಎಂದರು.


ನಮಗೆ ರಕ್ಷಕರೂ ಮಹಾ ದೇವರೂ ಆಗಿರುವ ಕ್ರಿಸ್ತ ಯೇಸುವಿನ ಭಾಗ್ಯಕರವಾದ ಮಹಿಮೆಯ ಪ್ರತ್ಯಕ್ಷತೆಯ ನಿರೀಕ್ಷೆಯನ್ನೂ ಎದುರು ನೋಡುತ್ತಿರಬೇಕೆಂದು ಕೃಪೆಯು ನಮಗೆ ಬೋಧಿಸುತ್ತದೆ.


ಹಗುರವಾಗಿಯೂ ಕ್ಷಣಿಕವಾಗಿಯೂ ಇರುವ ನಮ್ಮ ಸಂಕಟವು ಅತ್ಯಂತ ಘನತೆಯುಳ್ಳ ನಿತ್ಯ ಮಹಿಮೆಯನ್ನು ನಮಗೆ ದೊರಕಿಸಿಕೊಡುವುದು.


‘ದೇವರು ಅವರ ಕಣ್ಣೀರನ್ನೆಲ್ಲಾ ಒರೆಸಿಬಿಡುವರು. ಇನ್ನು ಮರಣವಿರುವುದಿಲ್ಲ.’ ಇನ್ನು ದುಃಖವಾಗಲಿ, ಗೋಳಾಟವಾಗಲಿ, ನೋವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು!” ಎಂದು ಹೇಳಿತು.


ನಾವು ಈಗ ಮಕ್ಕಳಾಗಿರುವುದಾದರೆ, ಬಾಧ್ಯರಾಗಿರುತ್ತೇವೆ; ದೇವರಿಗೆ ಬಾಧ್ಯರು ಮತ್ತು ಕ್ರಿಸ್ತ ಯೇಸುವಿನೊಂದಿಗೆ ಸಹಬಾಧ್ಯರಾಗಿದ್ದೇವೆ. ನಾವು ಕ್ರಿಸ್ತ ಯೇಸುವಿನ ಶ್ರಮೆಗಳಲ್ಲಿ ನಿಜವಾಗಿಯೂ ಪಾಲುಗಾರರಾಗಿದ್ದರೆ, ಅವರ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.


“ಮನುಷ್ಯಪುತ್ರನಾದ ನನ್ನ ಪ್ರತ್ಯಕ್ಷತೆಯ ದಿನದಲ್ಲಿಯೂ ಹಾಗೆ ಇರುವುದು.


“ಮನುಷ್ಯಪುತ್ರನಾದ ನಾನು ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ, ನನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವೆನು.


ಅವರು ಸಮಾಧಾನಕ್ಕೆ ಪ್ರವೇಶಿಸುತ್ತಾರೆ. ಅವರಲ್ಲಿ ನೆಟ್ಟಗೆ ನಡೆಯುವ ಪ್ರತಿಯೊಬ್ಬರೂ ತಮ್ಮ ಮರಣದ ಹಾಸಿಗೆಗಳಲ್ಲಿ ವಿಶ್ರಮಿಸಿಕೊಳ್ಳುತ್ತಾರೆ.


ಅವನು ನನಗೆ, “ನೋಡು, ನೀನು ಹಾಗೆ ಮಾಡಬೇಡ. ನಾನು ನಿನಗೂ ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಗೊಳ್ಳುವವರಿಗೂ ಜೊತೆಯ ದಾಸನಾಗಿದ್ದೇನೆ. ದೇವರನ್ನೇ ಆರಾಧಿಸು!” ಎಂದು ಹೇಳಿದನು.


ಆಮೇಲೆ ದೇವದೂತನು ನನಗೆ, “ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ!” ಎಂದನು. ಪ್ರವಾದಿಗಳಿಗೆ ಆತ್ಮಪ್ರೇರಣೆಯನ್ನು ನೀಡುವ ಕರ್ತದೇವರು ಬೇಗನೆ ಸಂಭವಿಸತಕ್ಕ ಸಂಗತಿಗಳನ್ನು ತಮ್ಮ ದಾಸರಿಗೆ ತೋರಿಸುವುದಕ್ಕಾಗಿಯೇ ತಮ್ಮ ದೇವದೂತನನ್ನು ಕಳುಹಿಸಿದರು.


ಆಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನು ಕಂಡೆನು. ಅದರ ಮೇಲೆ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ಓಡಿಹೋಗಿ ಸ್ಥಳ ಕಾಣಿಸದಂತಾದವು.


“ಇಗೋ, ಯೇಸು ಮೇಘಗಳೊಂದಿಗೆ ಬರುತ್ತಾರೆ,” ಮತ್ತು “ಎಲ್ಲರ ಕಣ್ಣುಗಳು ಅವರನ್ನು ಕಾಣುವವು, ಅವರನ್ನು ಇರಿದವರು ಸಹ ಕಾಣುವರು.” ಭೂಲೋಕದಲ್ಲಿರುವ ಎಲ್ಲಾ ಜನರು, “ಅವರ ದೆಸೆಯಿಂದ ಗೋಳಾಡುವರು.” ಹೌದು, ಹಾಗೆಯೇ ಆಗುವುದು! ಆಮೆನ್.


ಕ್ರಿಸ್ತ ಯೇಸು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾರೆ, ದೇವದೂತರೂ ಪ್ರಭುತ್ವಗಳೂ ಅಧಿಕಾರಗಳೂ ಅವರಿಗೆ ಅಧೀನವಾಗಿವೆ.


ಅದರಂತೆಯೇ ಕ್ರಿಸ್ತ ಯೇಸು ಬಹುಜನರ ಪಾಪಗಳನ್ನು ಹೊತ್ತುಕೊಳ್ಳುವುದಕ್ಕೋಸ್ಕರ ಒಂದೇ ಸಾರಿ ಸಮರ್ಪಿತರಾದರು. ತಮಗಾಗಿ ಕಾದಿರುವವರಿಗೆ ರಕ್ಷಣೆ ಕೊಡಲು ಕ್ರಿಸ್ತ ಯೇಸು ಎರಡನೆಯ ಸಲ ಕಾಣಿಸಿಕೊಳ್ಳುವರು. ಆಗ ಪಾಪ ಹೊತ್ತುಕೊಳ್ಳುವುದಕ್ಕಾಗಿ ಬರುವುದಿಲ್ಲ.


ಆದ್ದರಿಂದ ಈ ವಿಶ್ರಾಂತಿಯನ್ನು ಪಡೆಯಲು ನಾವು ಪ್ರಯತ್ನಿಸೋಣ. ನಮ್ಮಲ್ಲಿ ಯಾರೂ ಆ ಜನರ ಅವಿಧೇಯತೆಯನ್ನು ಅನುಸರಿಸಿ, ನಾಶರಾಗದೇ ಇರೋಣ.


ಆದ್ದರಿಂದ ದೇವಜನರಿಗೆ ಸಬ್ಬತ್ ಎಂಬ ವಿಶ್ರಾಂತಿಯು ಇನ್ನೂ ಇದೆ.


ಹೀಗಿರಲಾಗಿ ದೇವರ ವಿಶ್ರಾಂತಿಯಲ್ಲಿ ಸೇರುವೆವು ಎಂಬ ವಾಗ್ದಾನವು ಇನ್ನೂ ಉಳಿದಿರಲು ನಿಮ್ಮಲ್ಲಿ ಯಾರಾದರೂ ಅದನ್ನು ಹೊಂದದೆ ಇರಬಾರದು ಎಂದು ಎಚ್ಚರವಹಿಸೋಣ.


ನಾವು ಸಹಿಸಿಕೊಳ್ಳುವವರಾಗಿದ್ದರೆ ಕ್ರಿಸ್ತ ಯೇಸುವಿನ ಜೊತೆಯಲ್ಲಿ ನಾವು ಸಹ ಆಳುವೆವು. ಅವರನ್ನು ನಿರಾಕರಿಸಿದರೆ ಅವರು ಸಹ ನಮ್ಮನ್ನು ನಿರಾಕರಿಸುವರು.


ಏಕೆಂದರೆ ಭೂಪರಲೋಕಗಳಲ್ಲಿರುವ ಕಾಣುವಂತವುಗಳಾಗಲಿ, ಕಾಣದಂತವುಗಳಾಗಲಿ ಸಮಸ್ತವು ಇವರ ಮೂಲಕವೇ ಸೃಷ್ಟಿಸಲಾಯಿತು. ಸಿಂಹಾಸನಗಳಾಗಲಿ, ಪ್ರಭುತ್ವಗಳಾಗಲಿ, ದೊರೆತನಗಳಾಗಲಿ, ಅಧಿಕಾರಗಳಾಗಲಿ ಕ್ರಿಸ್ತನಲ್ಲಿಯೇ ಸೃಷ್ಟಿಗೊಂಡವು. ಸರ್ವವೂ ಕ್ರಿಸ್ತರಿಂದಲೂ ಕ್ರಿಸ್ತರಿಗಾಗಿಯೂ ಸೃಷ್ಟಿಹೊಂದಿತು.


ನಮ್ಮ ತಂದೆಯಾದ ದೇವರಿಂದಲೂ ಕರ್ತ ಆಗಿರುವ ಯೇಸು ಕ್ರಿಸ್ತರಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


“ಗಲಿಲಾಯದವರೇ, ಆಕಾಶವನ್ನೇ ನೋಡುತ್ತಾ ಇಲ್ಲಿ ಏಕೆ ನಿಂತಿರುವಿರಿ? ನಿಮ್ಮ ಬಳಿಯಿಂದ ಪರಲೋಕಕ್ಕೆ ಏರಿಹೋದ ಈ ಯೇಸುವು ಪರಲೋಕಕ್ಕೆ ಹೋಗುವುದನ್ನು ನೀವು ನೋಡಿದ ರೀತಿಯಲ್ಲಿಯೇ ಹಿಂದಿರುಗಿ ಬರುವರು,” ಎಂದು ಹೇಳಿದರು.


ಯೇಸು ಅವನಿಗೆ, “ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ, ನೀವು ಪರಲೋಕವು ತೆರೆದಿರುವುದನ್ನೂ ದೇವದೂತರು ಮನುಷ್ಯಪುತ್ರನಾದ ನನ್ನ ಮುಖಾಂತರ ಇಳಿಯುತ್ತಾ ಏರುತ್ತಾ ಇರುವುದನ್ನೂ ಕಾಣುವಿರಿ,” ಎಂದು ಹೇಳಿದರು.


ಆ ವಾಕ್ಯವೆಂಬುವವರ ಮೂಲಕವಾಗಿಯೇ ಸಮಸ್ತವೂ ಸೃಷ್ಟಿಯಾಯಿತು. ಸೃಷ್ಟಿಯಾದವುಗಳಲ್ಲಿ ಯಾವುದೂ ಅವರಿಲ್ಲದೆ ಸೃಷ್ಟಿಯಾಗಲಿಲ್ಲ.


“ಆದರೆ ಅಬ್ರಹಾಮನು, ‘ಮಗನೇ, ನೀನು ನಿನ್ನ ಜೀವಮಾನದಲ್ಲಿ ಒಳ್ಳೆಯವುಗಳನ್ನು ಹೊಂದಿದೆಯಲ್ಲಾ, ಲಾಜರನು ಕೆಟ್ಟವುಗಳನ್ನು ಅನುಭವಿಸಿದ್ದನ್ನು ನೆನಪಿಗೆ ತಂದುಕೋ, ಈಗ ಅವನು ಆದರಣೆ ಹೊಂದುತ್ತಿದ್ದಾನೆ. ನೀನು ಯಾತನೆಪಡುತ್ತಿದ್ದೀ.


ಅದಕ್ಕೆ ಯೇಸು, “ಹೌದು ನಾನೇ, ಇದಲ್ಲದೆ ಮನುಷ್ಯಪುತ್ರನಾದ ನಾನು ಸರ್ವಶಕ್ತರ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ ಆಕಾಶದ ಮೇಘಗಳಲ್ಲಿ ಬರುವುದನ್ನೂ ನೀವು ಕಾಣುವಿರಿ,” ಎಂದರು.


ಯಾರಾದರೂ ವ್ಯಭಿಚಾರದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯವಾಗಿ ನಾಚಿಕೊಳ್ಳುವರೋ ಅವರ ವಿಷಯದಲ್ಲಿ ಮನುಷ್ಯಪುತ್ರನಾದ ನಾನು ಸಹ ನನ್ನ ತಂದೆಯ ಮಹಿಮೆಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿಕೊಳ್ಳುವೆನು,” ಎಂದು ಹೇಳಿದರು.


ಅದಕ್ಕೆ ಯೇಸು ಅವನಿಗೆ, “ನೀನೇ ಹೇಳಿದ್ದೀ; ಆದರೂ ಇನ್ನು ಮೇಲೆ ಮನುಷ್ಯಪುತ್ರನಾದ ನಾನು ಸರ್ವಶಕ್ತರ ಬಲಗಡೆಯಲ್ಲಿ ಕುಳಿತಿರುವುದನ್ನೂ ಆಕಾಶದ ಮೇಘಗಳ ಮೇಲೆ ಬರುವುದನ್ನೂ ನೀವು ಕಾಣುವಿರಿ ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.


ಆಗ ಯೆಹೋವ ದೇವರ ದೂತನು ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಅವನಿಗೆ ಕಾಣಿಸಿಕೊಂಡನು. ಮೋಶೆಯು ನೋಡಿದಾಗ, ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು ಆದಾಗ್ಯೂ ಪೊದೆಯು ಸುಟ್ಟು ಹೋಗಲಿಲ್ಲ.


ಯೆಹೋವ ದೇವರು ಅಗ್ನಿಯೊಳಗೆ ಬೆಟ್ಟದ ಮೇಲೆ ಇಳಿದಿದ್ದರಿಂದ ಸೀನಾಯಿ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.


ಯೆಹೋವ ದೇವರು ಬೆಂಕಿಯೊಡನೆ ಬರುವರು. ಅವರ ರಥಗಳು ಬಿರುಗಾಳಿಯ ಹಾಗೆ ಇರುವುವು. ಕಠಿಣವಾದ ತಮ್ಮ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತಮ್ಮ ಗದರಿಕೆಯನ್ನೂ ಸಲ್ಲಿಸುವುದಕ್ಕಾಗಿಯೇ ಬರುವರು.


ಆ ಜೀವಿಗಳ ಮಧ್ಯೆ ಅದ್ಭುತ ಕಾಂತಿಯೊಂದು ಉರಿಯುವ ಕೆಂಡಗಳೋ, ಪಂಜುಗಳೋ ಎಂಬಂತೆ ಕಾಣಿಸಿತು. ಅದು ಆ ಜೀವಿಗಳ ನಡುವೆ ಓಲಾಡುತ್ತಿತ್ತು. ಆ ಉರಿ ತೇಜೋಮಯವಾಗಿತ್ತು. ಅದರೊಳಗಿಂದ ಮಿಂಚುಗಳು ಹೊರಡುತ್ತಿದ್ದವು.


“ನಾನು ನೋಡುತ್ತಿದ್ದ ಹಾಗೆಯೇ, “ಸಿಂಹಾಸನಗಳನ್ನು ಜೋಡಿಸಿದರು. ಅದರ ಮೇಲೆ ಪುರಾತನ ಮನುಷ್ಯನು ಕುಳಿತುಕೊಂಡನು. ಆತನ ವಸ್ತ್ರವು ಹಿಮದಂತೆ ಬಿಳುಪಾಗಿಯೂ, ಆತನ ತಲೆಕೂದಲು ಶುದ್ಧ ಉಣ್ಣೆಯಂತೆಯೂ, ಆತನ ಸಿಂಹಾಸನವು ಅಗ್ನಿ ಜ್ವಾಲೆಯಂತೆಯೂ, ಆತನ ಚಕ್ರಗಳು ಉರಿಯುವ ಬೆಂಕಿಯಂತೆಯೂ ಇದ್ದವು.


“ನಿಮಗೆ ನಿಜವಾಗಿ ಹೇಳುತ್ತೇನೆ: ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಪುತ್ರನಾದ ನಾನು ನನ್ನ ರಾಜ್ಯದಲ್ಲಿ ಬರುವುದನ್ನು ಕಾಣುವವರೆಗೆ ಮರಣವನ್ನು ಹೊಂದುವುದೇ ಇಲ್ಲ,” ಎಂದರು.


“ನಾನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ಆದ್ದರಿಂದ ನಿಮ್ಮ ಪಾಪಗಳು ತೊಳೆದುಹೋಗುವಂತೆ ಪಶ್ಚಾತ್ತಾಪಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಿರಿ. ಆಗ ನಿಮ್ಮ ಪಾಪಗಳು ಪರಿಹಾರವಾಗಿ ಕರ್ತ ದೇವರಿಂದ ವಿಶ್ರಾಂತಿಯ ಕಾಲಗಳು ನಿಮಗೆ ಒದಗಿ ಬರುವವು.


ಕ್ರಿಸ್ತ ಯೇಸುವಿನ ದಿನವು ಇದನ್ನು ಬಹಿರಂಗಕ್ಕೆ ತರುವಾಗ, ಅವನವನ ಕೆಲಸವು ಏನಾಗಿರುವುದೆಂಬುದು ವ್ಯಕ್ತವಾಗುವುದು. ಏಕೆಂದರೆ ಅದು ಬೆಂಕಿಯಿಂದ ಪ್ರಕಟವಾಗುವುದು. ಪ್ರತಿಯೊಬ್ಬನ ಕೆಲಸದ ಯೋಗ್ಯತೆಯನ್ನು ಬೆಂಕಿಯೇ ಪರೀಕ್ಷಿಸುವುದು.


ನಮಗೆ ಕರ್ತ ಆಗಿರುವ ಯೇಸುವು ತಮ್ಮ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ, ನೀವು ತಂದೆ ದೇವರ ಮುಂದೆ ಪರಿಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ಬಲಪಡಿಸಲಿ!


ಆದರೆ ಖಂಡಿತವಾಗಿ ಎದುರು ನೋಡತಕ್ಕ ಭಯಂಕರವಾದ ನ್ಯಾಯತೀರ್ಪು ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಇರುವುವು.


ಏಕೆಂದರೆ ನಮ್ಮ, “ದೇವರು ದಹಿಸುವ ಅಗ್ನಿಯಾಗಿದ್ದಾರೆ.”


ಆದರೆ ಈಗಿನ ಆಕಾಶವೂ ಭೂಮಿಯೂ ಅದೇ ವಾಕ್ಯದಿಂದ ಬೆಂಕಿಗಾಗಿ ಕಾದಿರಿಸಲಾಗಿವೆ. ಅವು ನ್ಯಾಯತೀರ್ಪಿಗಾಗಿ ಮತ್ತು ಭಕ್ತಿಹೀನರ ನಾಶನಕ್ಕಾಗಿ ಇಡಲಾಗಿವೆ.


ಸೊದೋಮ ಗೊಮೋರದವರೂ ಹಾಗೆಯೇ ಅವುಗಳ ಸುತ್ತಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಅನೈತಿಕತೆಗೆ ಒಪ್ಪಿಸಿಕೊಟ್ಟರು. ಅವರು ಸ್ವಭಾವಕ್ಕೆ ವಿರುದ್ಧ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲಾಗಿದ್ದಾರೆ.


ಆಗ ಅವರಲ್ಲಿ ಪ್ರತಿಯೊಬ್ಬನಿಗೆ ಬಿಳೀ ನಿಲುವಂಗಿಯು ಕೊಡಲಾಗಿತ್ತು. ಇನ್ನು ಸ್ವಲ್ಪಕಾಲ ಅವರಂತೆಯೇ ವಧಿಸಲಾಗಬೇಕಾಗಿರುವ ಅವರ ಜೊತೆ ಸೇವಕರ ಮತ್ತು ಸಹೋದರರ ಸಂಖ್ಯೆ ಪೂರ್ಣಗೊಳ್ಳುವ ತನಕ ಕಾದಿರಬೇಕೆಂದು ಅವರಿಗೆ ಹೇಳಲಾಯಿತು.


ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರೆಸದೆ ಹಾಕಿದ ಅವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಕುರಿಮರಿಯಾಗಿರುವವರ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು