Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 10:10 - ಕನ್ನಡ ಸಮಕಾಲಿಕ ಅನುವಾದ

10 ಆಗ ಅವನ ಸಂಗಡ ಬೆಳೆದ ಯೌವನಸ್ಥರು ಅವನಿಗೆ, “ನಿನ್ನ ತಂದೆಯು ನಮ್ಮ ನೊಗವನ್ನು ಭಾರಮಾಡಿದನು; ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದು ನಿನ್ನ ಸಂಗಡ ಮಾತನಾಡಿದ ಈ ಜನರಿಗೆ, ‘ನನ್ನ ಕಿರುಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರು ಅವನಿಗೆ, “ನಿನ್ನ ತಂದೆಯು ನಮ್ಮ ಮೇಲೆ ಹೇರಿರುವ ಭಾರವಾದ ನೊಗವನ್ನು ಹಗುರ ಮಾಡು ಎಂಬುದಾಗಿ ನಿನ್ನನ್ನು ಬೇಡಿಕೊಂಡಿರುವ ಈ ಜನರಿಗೆ ನೀನು, ‘ನನ್ನ ತಂದೆಯ ನಡುವಿಗಿಂತ ನನ್ನ ಕಿರುಬೆರಳು ದಪ್ಪವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವರು ಅವನಿಗೆ, “ನಿಮ್ಮ ತಂದೆ ನಮ್ಮ ಮೇಲೆ ಹೇರಿರುವ ಭಾರವಾದ ನೊಗವನ್ನು ಹಗುರಮಾಡು ಎಂಬುದಾಗಿ ನಿಮ್ಮನ್ನು ಬೇಡಿಕೊಂಡ ಜನರಿಗೆ ನೀವು, ‘ನನ್ನ ತಂದೆಯ ಸೊಂಟಕ್ಕಿಂತ ನನ್ನ ಕಿರಿಬೆರಳು ದಪ್ಪ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವರು ಅವನಿಗೆ - ನಿನ್ನ ತಂದೆಯು ನಮ್ಮ ಮೇಲೆ ಹೇರಿರುವ ಭಾರವಾದ ನೊಗವನ್ನು ಹಗುರಮಾಡು ಎಂಬದಾಗಿ ನಿನ್ನನ್ನು ಬೇಡಿಕೊಂಡ ಜನರಿಗೆ ನೀನು - ನನ್ನ ತಂದೆಯ ನಡುವಿಗಿಂತ ನನ್ನ ಕಿರಿಬೆರಳು ದಪ್ಪವಾಗಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆ ಯೌವನಸ್ಥರು, “ನೀನು ಅವರಿಗೆ, ‘ನನ್ನ ತಂದೆಯ ಸೊಂಟಕ್ಕಿಂತ ನನ್ನ ಕಿರಿಬೆರಳು ದಪ್ಪವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 10:10
14 ತಿಳಿವುಗಳ ಹೋಲಿಕೆ  

ಗರ್ವವು ಮನುಷ್ಯನನ್ನು ಹೀನಸ್ಥಿತಿಗೆ ತರುವುದು; ಆದರೆ ಆತ್ಮದಲ್ಲಿ ದೀನರು ಮೆಚ್ಚಿಕೆಯನ್ನು ಪಡೆಯುವರು.


ದುರಾಶೆಯುಳ್ಳವನು ಕಲಹವನ್ನೆಬ್ಬಿಸುವನು; ಯೆಹೋವ ದೇವರಲ್ಲಿ ಭರವಸವಿಡುವವನು ಪುಷ್ಟನಾಗುವನು.


ಯೆಹೋವ ದೇವರಿಗೆ ವಿರೋಧವಾಗಿ ಯಾವ ಜ್ಞಾನವೂ, ವಿವೇಕವೂ, ಯೋಜನೆಯೂ ಇಲ್ಲ.


ಜ್ಞಾನಿಯು ಯೆಹೋವ ದೇವರಿಗೆ ಭಯಪಟ್ಟು ಕೆಟ್ಟತನದಿಂದ ದೂರ ಹೋಗುವನು, ಆದರೆ ಬುದ್ಧಿಹೀನನು ಯೋಚಿಸದೆ ಆತ್ಮವಿಶ್ವಾಸದಿಂದ ನಡೆಯುವನು.


ಪ್ರತಿ ಜಾಣನು ತಿಳುವಳಿಕೆಯಿಂದ ವರ್ತಿಸುತ್ತಾನೆ; ಆದರೆ ಮೂರ್ಖನು ತನ್ನ ಮೂರ್ಖತ್ವವನ್ನು ಹೊರಗೆಡವುತ್ತಾನೆ.


ಜ್ಞಾನಿಗಳು ತಿಳುವಳಿಕೆಯನ್ನು ಇಟ್ಟುಕೊಳ್ಳುತ್ತಾರೆ; ಆದರೆ ಮೂರ್ಖನ ಬಾಯಿ ವಿನಾಶವನ್ನು ಆಹ್ವಾನಿಸುತ್ತದೆ.


ಅವನು ಅವರಿಗೆ, “ನಿನ್ನ ತಂದೆಯು ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಉತ್ತರ ಕೊಡಲು ನಿಮ್ಮ ಆಲೋಚನೆ ಏನು?” ಎಂದು ಕೇಳಿದನು.


ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು. ಆದರೆ ನಾನು ನಿಮ್ಮ ನೊಗವನ್ನು ಇನ್ನೂ ಹೆಚ್ಚು ಭಾರವಾಗಿ ಮಾಡುವೆನು. ನನ್ನ ತಂದೆಯು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ, ನಾನಾದರೋ ನಿಮ್ಮನ್ನು ಚೇಳು ಕೊರಡೆಗಳಿಂದ ಶಿಕ್ಷಿಸುವೆನು,’ ಎಂದು ನೀನು ಅವರಿಗೆ ಹೇಳು,” ಎಂದರು.


ರೆಹಬ್ಬಾಮನು ಶೆಕೆಮಿಗೆ ಹೋದನು; ಅವನನ್ನು ಅರಸನಾಗಿ ಮಾಡುವುದಕ್ಕೆ ಸಮಸ್ತ ಇಸ್ರಾಯೇಲರು ಶೆಕೆಮಿಗೆ ಬಂದರು.


ಮಗನೇ, ನೀನು ಬುದ್ಧಿವಾದಕ್ಕೆ ಲಕ್ಷ್ಯಕೊಡದಿದ್ದರೆ, ಪರಿಜ್ಞಾನದ ಮಾತುಗಳಿಂದ ದಾರಿತಪ್ಪುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು