Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 10:15 - ಕನ್ನಡ ಸಮಕಾಲಿಕ ಅನುವಾದ

15 ಅರಸನು ಜನರ ಮಾತನ್ನು ಕೇಳದೆಹೋದದ್ದು ದೇವರಿಂದಲೇ. ಹೀಗೆ ಯೆಹೋವ ದೇವರು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ಈಡೇರುವುದಕ್ಕೆ ಕಾರಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅರಸನು ಜನರ ಮಾತನ್ನು ಕೇಳದೆ ಹೋದದ್ದು ದೈವಯೋಗದಿಂದಲೇ. ಈ ಪ್ರಕಾರ ಯೆಹೋವನು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅರಸನು ಜನರ ಮಾತನ್ನು ಕೇಳದೆ ಹೋದದ್ದು ದೈವಯೋಗದಿಂದಲೇ. ಈ ಪ್ರಕಾರ ಸರ್ವೇಶ್ವರ ಶಿಲೋವಿನವನಾದ ಅಹೀಯನ ಮುಖಾಂತರ ನೆಬಾಟನ ಮಗ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅರಸನು ಜನರ ಮಾತನ್ನು ಕೇಳದೆಹೋದದ್ದು ದೈವಯೋಗದಿಂದಲೇ. ಈ ಪ್ರಕಾರ ಯೆಹೋವನು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಹೀಗೆ ರೆಹಬ್ಬಾಮನು ಜನರ ಬೇಡಿಕೆಯನ್ನು ಕೇಳಲಿಲ್ಲ. ಯಾಕೆಂದರೆ ಇದು ದೇವರ ಚಿತ್ತವಾಗಿತ್ತು. ದೇವರು ಅಹೀಯನ ಮುಖಾಂತರ ಯಾರೊಬ್ಬಾಮನಿಗೆ ಹೇಳಿದ ಮಾತು ನೆರವೇರುವಂತೆ ಹೀಗಾಯಿತು. ಅಹೀಯನು ಶೀಲೋವಿನವನಾಗಿದ್ದನು. ಯಾರೊಬ್ಬಾಮನು ನೆಬಾಟನ ಮಗನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 10:15
20 ತಿಳಿವುಗಳ ಹೋಲಿಕೆ  

ಮನುಷ್ಯನಿಗೆ ವಿರೋಧವಾಗಿ ಮನುಷ್ಯನು ಪಾಪಮಾಡಿದರೆ, ದೇವರು ಅಪರಾಧಿಗಾಗಿ ಮಧ್ಯಸ್ಥಿಕೆಯನ್ನು ವಹಿಸುವರು. ಆದರೆ ಒಬ್ಬನು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದರೆ, ಅವನಿಗೋಸ್ಕರ ವಿಜ್ಞಾಪನೆ ಮಾಡತಕ್ಕವರು ಯಾರು?” ಎಂದನು. ಆದರೂ ಅವರು ತಮ್ಮ ತಂದೆಯ ಮಾತನ್ನು ಕೇಳದೆ ಹೋದರು. ಯೆಹೋವ ದೇವರು ಅವರನ್ನು ಮರಣದಂಡನೆಗೆ ಒಪ್ಪಿಸಬೇಕೆಂದಿದ್ದರು.


ಯೆಹೋವ ದೇವರು ಅವರ ಮಧ್ಯದಲ್ಲಿ ತತ್ತರಿಸುವ ಆತ್ಮವನ್ನು ಸುರಿಸಿದ್ದಾರೆ. ಅಮಲೇರಿದವನು ಕಕ್ಕುತ್ತಾ ಓಲಾಡುವ ಪ್ರಕಾರ ಈಜಿಪ್ಟ್ ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾರೆ.


ನಿಮ್ಮ ಶಕ್ತಿಯೂ ಚಿತ್ತವೂ ಮುಂಚಿತವಾಗಿಯೇ ಏನಾಗಬೇಕೆಂದು ನಿರ್ಣಯಿಸಿದ್ದನ್ನೇ ಅವರು ಮಾಡಿದರು.


ದೇವರು ತಾವು ಮುಂಚಿತವಾಗಿ ನಿರ್ಣಯಿಸಿದ ಪ್ರಕಾರವೂ ತಾವು ಮೊದಲೇ ತಿಳಿದಿರುವಂತೆ ದೇವರು ಯೇಸುವನ್ನು ತಾವಾಗಿಯೇ ನಿಮಗೆ ಒಪ್ಪಿಸಿಕೊಟ್ಟರು. ನೀವಾದರೋ ದುಷ್ಟರ ಸಹಾಯದಿಂದ ಯೇಸುವನ್ನು ಶಿಲುಬೆಗೆ ಹಾಕಿ ಕೊಲೆಮಾಡಿದಿರಿ.


ಆಗ ಯೆಹೋವ ದೇವರು, ‘ಅಹಾಬನು ಹೋಗಿ ಗಿಲ್ಯಾದಿನ ರಾಮೋತಿನಲ್ಲಿ ಬೀಳುವ ಹಾಗೆ, ಅವನನ್ನು ಮರುಳುಗೊಳಿಸುವವನು ಯಾರು?’ ಎಂದರು. “ಒಬ್ಬನು ಒಂದು ವಿಧವಾಗಿಯೂ ಮತ್ತೊಬ್ಬನು ಇನ್ನೊಂದು ವಿಧವಾಗಿಯೂ ಹೇಳುತ್ತಿದ್ದರು.


‘ನೀವು ಇಸ್ರಾಯೇಲರಾಗಿರುವ ನಿಮ್ಮ ಸಹೋದರರಿಗೆ ವಿರೋಧವಾಗಿ ಯುದ್ಧಮಾಡಲು ಹೋಗಬೇಡಿರಿ. ಪ್ರತಿ ಮನುಷ್ಯನು ತನ್ನ ಮನೆಗೆ ಹಿಂದಿರುಗಲಿ.’ ಏಕೆಂದರೆ ಈ ಕಾರ್ಯವು ತಮ್ಮಿಂದ ಉಂಟಾಯಿತೆಂದು ಯೆಹೋವ ದೇವರು ಹೇಳುತ್ತಾರೆ,” ಎಂದನು. ಆದ್ದರಿಂದ ಅವರು ಯೆಹೋವ ದೇವರ ವಾಕ್ಯವನ್ನು ಕೇಳಿ, ಯೆಹೋವ ದೇವರ ವಾಕ್ಯದ ಪ್ರಕಾರವೇ ಹಿಂದಿರುಗಿ ಹೋದರು.


ಅರಸನು ಜನರ ಮಾತನ್ನು ಕೇಳದೆಹೋದದ್ದು ಯೆಹೋವ ದೇವರಿಂದಲೇ. ಹೀಗೆ ಯೆಹೋವ ದೇವರು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ಈಡೇರುವುದಕ್ಕೆ ಕಾರಣವಾಯಿತು.


ಇದು ಯೆಹೋವ ದೇವರಿಂದ ಉಂಟಾಯಿತೆಂದು ಅವನ ತಂದೆತಾಯಂದಿರು ಅರಿಯದೆ ಇದ್ದರು. ಏಕೆಂದರೆ ಫಿಲಿಷ್ಟಿಯರಿಗೆ ವಿರೋಧವಾಗಿ ಅವನು ಕಾರಣವನ್ನು ಹುಡುಕಿದನು. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲರನ್ನು ಆಳುತ್ತಿದ್ದರು.


ಆದ್ದರಿಂದ ಅವರು, “ನಾವು ಅದನ್ನು ಹರಿಯುವುದು ಬೇಡ. ಆದರೆ ಅದು ಯಾರಿಗಾಗುವುದೋ ಎಂದು ನೋಡುವುದಕ್ಕಾಗಿ ಚೀಟು ಹಾಕಿಕೊಳ್ಳೋಣ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಹೀಗೆ, “ನನ್ನ ಬಟ್ಟೆಯನ್ನು ಅವರು ತಮ್ಮೊಳಗೆ ಪಾಲುಮಾಡಿಕೊಂಡರು. ನನ್ನ ಒಳ ಅಂಗಿಗಾಗಿ ಚೀಟುಹಾಕಿದರು,” ಎಂಬ ಪವಿತ್ರ ವೇದದ ವಾಕ್ಯವು ನೆರವೇರುವಂತೆ, ಸೈನಿಕರು ಚೀಟುಹಾಕಿ ಪಾಲುಮಾಡಿಕೊಂಡರು.


ಸೊಲೊಮೋನನ ಉಳಿದ ಕ್ರಿಯೆಗಳು, ಮೊದಲನೆಯವುಗಳೂ, ಕಡೆಯವುಗಳೂ ಪ್ರವಾದಿಯಾದ ನಾತಾನನ ಪುಸ್ತಕದಲ್ಲಿಯೂ, ಶೀಲೋವಿನವನಾದ ಅಹೀಯನ ಪ್ರವಾದನೆಯಲ್ಲಿಯೂ, ದರ್ಶಿಯಾದ ಇದ್ದೋವನು ನೆಬಾಟನ ಮಗನಾದ ಯಾರೊಬ್ಬಾಮನಿಗೆ ವಿರೋಧವಾಗಿ ಹೇಳಿದ ದರ್ಶನಗಳಲ್ಲಿಯೂ ಬರೆದಿರುತ್ತವೆ.


ಆದರೆ ಹೆಷ್ಬೋನಿನ ಅರಸನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಸಮ್ಮತಿಸಲಿಲ್ಲ. ಏಕೆಂದರೆ ಅವನನ್ನು ನಿಮ್ಮ ಕೈಯಲ್ಲಿ ಒಪ್ಪಿಸುವ ಹಾಗೆ ನಿಮ್ಮ ದೇವರಾದ ಯೆಹೋವ ದೇವರು ಅವನ ಬುದ್ಧಿಯನ್ನು ಮಂಕುಮಾಡಿ, ಹೃದಯವನ್ನು ಕಠಿಣಪಡಿಸಿದರು. ಈಗಾಗಲೇ ಅದು ನೆರವೇರಿದೆ.


ಯುವಕರ ಆಲೋಚನೆಯ ಪ್ರಕಾರ ಅವರ ಸಂಗಡ ಮಾತನಾಡಿ ಅವರಿಗೆ, “ನನ್ನ ತಂದೆಯು ನಿಮ್ಮ ನೊಗವನ್ನು ಭಾರವಾಗಿ ಮಾಡಿದನು. ನಾನು ಅದನ್ನು ಇನ್ನೂ ಹೆಚ್ಚು ಭಾರ ಮಾಡುತ್ತೇನೆ. ನನ್ನ ತಂದೆಯು ನಿಮ್ಮನ್ನು ಬಾರುಕೋಲುಗಳಿಂದ ಶಿಕ್ಷಿಸಿದನು; ಆದರೆ ನಾನು ಮುಳ್ಳು ಕೊರಡೆಗಳಿಂದ ಶಿಕ್ಷಿಸುವೆನು,” ಎಂದನು.


‘ನೀವು ನಿಮ್ಮ ಸಹೋದರರಿಗೆ ವಿರೋಧವಾಗಿ ಯುದ್ಧಮಾಡಲು ಹೋಗಬೇಡಿರಿ. ಪ್ರತಿ ಮನುಷ್ಯನು ತನ್ನ ಮನೆಗೆ ಹಿಂದಿರುಗಲಿ. ಏಕೆಂದರೆ ಈ ಕಾರ್ಯವು ತಮ್ಮಿಂದ ಉಂಟಾಯಿತೆಂದು ಯೆಹೋವ ದೇವರು ಹೇಳುತ್ತಾರೆ,’ ” ಎಂದನು. ಆದ್ದರಿಂದ ಅವರು ಯೆಹೋವ ದೇವರ ವಾಕ್ಯವನ್ನು ಕೇಳಿ, ಯಾರೊಬ್ಬಾಮನ ಮೇಲೆ ಹೋಗದೆ ಹಿಂದಿರುಗಿ ಹೋದರು.


ಯೋರಾಮನ ಬಳಿಗೆ ಅಹಜ್ಯನು ಬಂದಿದ್ದರಿಂದ ಅವನಿಗೆ ಉಂಟಾದ ನಷ್ಟವು ದೇವರಿಂದ ಆಯಿತು. ಹೇಗೆಂದರೆ, ಅಹಜ್ಯನು ಬಂದ ತರುವಾಯ ಯೆಹೋವ ದೇವರು ಅಹಾಬನ ಮನೆಯನ್ನು ಕಡಿದು ಬಿಡಲು ಅಭಿಷೇಕಿಸಿದ ನಿಂಷಿಯ ಮಗ ಯೇಹುವಿಗೆ ವಿರೋಧವಾಗಿ ಯೆಹೋರಾಮನ ಸಂಗಡ ಹೊರಟರು.


ಆಗ ಅಬ್ಷಾಲೋಮನೂ, ಇಸ್ರಾಯೇಲಿನ ಸಮಸ್ತ ಮನುಷ್ಯರೂ, “ಅಹೀತೋಫೆಲನ ಆಲೋಚನೆಗಿಂತ ಅರ್ಕಿಯನಾದ ಹೂಷೈಯ ಆಲೋಚನೆ ಒಳ್ಳೆಯದು,” ಎಂದರು. ಏಕೆಂದರೆ ತಾನು ಅಬ್ಷಾಲೋಮನ ಮೇಲೆ ಕೇಡನ್ನು ಬರಮಾಡುವ ಹಾಗೆ ಅಹೀತೋಫೆಲನ ಒಳ್ಳೆಯ ಆಲೋಚನೆಯನ್ನು ವ್ಯರ್ಥಮಾಡುವುದಕ್ಕೆ ಯೆಹೋವ ದೇವರು ಹಾಗೆ ನೇಮಿಸಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು