Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 11:23 - ಕನ್ನಡ ಸಮಕಾಲಿಕ ಅನುವಾದ

23 ಇದಲ್ಲದೆ ಅವನು ವಿವೇಕವಾಗಿ ನಡೆದು ತನ್ನ ಎಲ್ಲಾ ಮಕ್ಕಳನ್ನು ಯೆಹೂದ ಬೆನ್ಯಾಮೀನಿನ ದೇಶಗಳಲ್ಲಿ ಇರುವ ಎಲ್ಲಾ ಬಲವಾದ ಪಟ್ಟಣಗಳಲ್ಲಿ ಚದರಿಸಿ, ಅವರಿಗೆ ಬಹಳ ದವಸಧಾನ್ಯಗಳನ್ನು ಕೊಟ್ಟನು. ಅವರಿಗೆ ಅನೇಕ ಹೆಂಡತಿಯರನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ತನ್ನ ಉಳಿದ ಎಲ್ಲಾ ಮಕ್ಕಳನ್ನು ಜಾಣತನದಿಂದ ವಿಂಗಡಿಸಿ, ಯೆಹೂದ ಬೆನ್ಯಾಮೀನ್ ಪ್ರದೇಶಗಳಲ್ಲಿದ್ದ ಕೋಟೆಕೊತ್ತಲುಗಳುಳ್ಳ ಆಯಾ ಪಟ್ಟಣಗಳಲ್ಲಿರಿಸಿ, ಅವರಿಗೆ ಬೇಕಾದಷ್ಟು ಆಹಾರವನ್ನು ಏರ್ಪಡಿಸಿ, ಅನೇಕ ಮಂದಿ ಹೆಂಡತಿಯರನ್ನೂ ಗೊತ್ತು ಮಾಡಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ತನ್ನ ಉಳಿದ ಎಲ್ಲ ಮಕ್ಕಳನ್ನು ಜಾಣತನದಿಂದ ವಿಂಗಡಿಸಿ ಯೆಹೂದ-ಬೆನ್ಯಾಮೀನ್ ಕುಲಪ್ರದೇಶಗಳಲ್ಲಿ ಇದ್ದ ಕೋಟೆ ಕೊತ್ತಲುಗಳಿಂದ ಕೂಡಿದ ಆಯಾ ಪಟ್ಟಣಗಳಲ್ಲಿಟ್ಟು, ಅವರಿಗೆ ಬೇಕಾದಷ್ಟು ಜೀವನಾಂಶವನ್ನು ಏರ್ಪಡಿಸಿ, ಹಲವಾರು ಹೆಂಡತಿಯರನ್ನೂ ಗೊತ್ತುಮಾಡಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ತನ್ನ ಉಳಿದ ಎಲ್ಲಾ ಮಕ್ಕಳನ್ನು ಜಾಣತನದಿಂದ ವಿಂಗಡಿಸಿ ಯೆಹೂದ ಬೆನ್ಯಾಮೀನ್ ಪ್ರದೇಶಗಳಲ್ಲಿದ್ದ ಕೋಟೆಕೊತ್ತಲುಗಳುಳ್ಳ ಆಯಾ ಪಟ್ಟಣಗಳಲ್ಲಿಟ್ಟು ಅವರಿಗೆ ಬೇಕಾದಷ್ಟು ಆಹಾರವನ್ನು ಏರ್ಪಡಿಸಿ ಅನೇಕ ಮಂದಿ ಹೆಂಡತಿಯರನ್ನೂ ಗೊತ್ತು ಮಾಡಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ರೆಹಬ್ಬಾಮನು ವಿವೇಕದಿಂದ ತನ್ನ ಗಂಡುಮಕ್ಕಳನ್ನು ಯೆಹೂದ ಮತ್ತು ಬೆನ್ಯಾಮೀನ್ ಪ್ರದೇಶಗಳಲ್ಲಿದ್ದ ಕೋಟೆಗಳುಳ್ಳ ಪಟ್ಟಣಗಳಲ್ಲಿರಿಸಿ ಅವರಿಗೆ ಬೇಕಾದಷ್ಟು ಆಹಾರವನ್ನು ಸರಬರಾಜು ಮಾಡಿಸಿದನು. ಅವರಿಗೆ ಅನೇಕ ಸ್ತ್ರೀಯರನ್ನು ಹೆಂಡತಿಯರನ್ನಾಗಿ ಒದಗಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 11:23
8 ತಿಳಿವುಗಳ ಹೋಲಿಕೆ  

“ಆಗ ಯಜಮಾನನು ಆ ಅಪನಂಬಿಗಸ್ತ ನಿರ್ವಾಹಕನು ಕುಯುಕ್ತಿಯಿಂದ ಮಾಡಿದ್ದನ್ನು ಹೊಗಳಿದನು. ಯೇಸು ಮುಂದುವರಿಸಿ ಹೇಳಿದ್ದು: ಈ ಲೋಕದ ಮಕ್ಕಳು ತಮ್ಮ ಸಂತತಿಯವರಲ್ಲಿ ಬೆಳಕಿನ ಮಕ್ಕಳಿಗಿಂತ ಯುಕ್ತಿಯುಳ್ಳವರಾಗಿದ್ದಾರೆ.


ಅವರ ತಂದೆ ಯೆಹೂದದಲ್ಲಿ ಕೋಟೆಯುಳ್ಳ ಪಟ್ಟಣಗಳ ಸಂಗಡ ಬೆಳ್ಳಿಯನ್ನೂ, ಬಂಗಾರವನ್ನೂ, ಬೆಲೆಯುಳ್ಳ ವಸ್ತುಗಳನ್ನೂ ಅವರಿಗೆ ದಾನಗಳಾಗಿ ಕೊಟ್ಟನು. ಆದರೆ ಯೆಹೋರಾಮನು ಚೊಚ್ಚಲ ಮಗನಾದುದರಿಂದ ಅವನಿಗೆ ರಾಜ್ಯವನ್ನು ಕೊಟ್ಟನು.


ಅಬ್ರಹಾಮನಿಗೆ ಇದ್ದ ಉಪಪತ್ನಿಯರ ಮಕ್ಕಳಿಗೆ ಅಬ್ರಹಾಮನು ದಾನಗಳನ್ನು ಕೊಟ್ಟು, ತಾನು ಜೀವಿಸುತ್ತಿರುವಾಗಲೇ ಅವರನ್ನು ತನ್ನ ಮಗ ಇಸಾಕನ ಬಳಿಯಿಂದ ಪೂರ್ವದಿಕ್ಕಿನ ಕಡೆಗೆ ಕಳುಹಿಸಿದನು.


ರೆಹಬ್ಬಾಮನು ಯೆರೂಸಲೇಮಿನಲ್ಲಿ ವಾಸಮಾಡಿ, ಯೆಹೂದದಲ್ಲಿ ಕೋಟೆಯುಳ್ಳ ಪಟ್ಟಣಗಳನ್ನು ಕಟ್ಟಿಸಿದನು.


ರೆಹಬ್ಬಾಮನು ಮಾಕ ಎಂಬವಳ ಮಗನಾದ ಅಬೀಯನನ್ನು ಅವನ ಸಹೋದರರಲ್ಲಿ ಯುವರಾಜನನ್ನಾಗಿ ಮಾಡಿದನು. ಏಕೆಂದರೆ ಅವನನ್ನು ಅರಸನಾಗಿ ಮಾಡಲು ಮನಸ್ಸುಳ್ಳವನಾಗಿದ್ದನು.


ರೆಹಬ್ಬಾಮನು ರಾಜ್ಯವನ್ನು ಸ್ಥಿರಮಾಡಿ ತನ್ನನ್ನು ಬಲಪಡಿಸಿಕೊಂಡಾಗ, ಅವನೂ, ಅವನ ಸಂಗಡ ಸಮಸ್ತ ಇಸ್ರಾಯೇಲರೂ ಯೆಹೋವ ದೇವರ ನಿಯಮವನ್ನು ಬಿಟ್ಟುಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು