Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 12:12 - ಕನ್ನಡ ಸಮಕಾಲಿಕ ಅನುವಾದ

12 ರೆಹಬ್ಬಾಮನು ತನ್ನನ್ನು ತಗ್ಗಿಸಿಕೊಂಡಾಗ, ಯೆಹೋವ ದೇವರ ಕೋಪವು ಅವನನ್ನು ಬಿಟ್ಟು ತಿರುಗಿತು. ಆತನು ಪೂರ್ಣವಾಗಿ ನಾಶಮಾಡಲಿಲ್ಲ. ಯೆಹೂದದಲ್ಲಿ ಸಹ ಕೆಲವು ಕಾರ್ಯಗಳು ಸುಲಕ್ಷಣಗಳು ಕಂಡುಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ರೆಹಬ್ಬಾಮನು ತನ್ನನ್ನು ತಗ್ಗಿಸಿ ಕೊಂಡದ್ದರಿಂದಲೂ ಯೆಹೂದ್ಯರಲ್ಲಿ ಕೆಲವು ಸುಲಕ್ಷಣಗಳು ತೋರಿ ಬಂದಿದ್ದರಿಂದಲೂ ಯೆಹೋವನು ರೆಹಬ್ಬಾಮನ ಮೇಲಣ ಕೋಪವನ್ನು ಬಿಟ್ಟನು; ಅವನನ್ನು ಪೂರ್ಣವಾಗಿ ಹಾಳುಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ರೆಹಬ್ಬಾಮನು ತನ್ನನ್ನು ತಗ್ಗಿಸಿಕೊಂಡದ್ದರಿಂದ ಹಾಗೂ ಯೆಹೂದ್ಯರಲ್ಲಿ ಕೆಲವು ಸುಲಕ್ಷಣಗಳು ತೋರುತ್ತಿದ್ದುದರಿಂದ ಸರ್ವೇಶ್ವರಸ್ವಾಮಿ ರೆಹಬ್ಬಾಮನ ಮೇಲಿದ್ದ ಕೋಪವನ್ನು ತೊರೆದುಬಿಟ್ಟರು; ಅವನನ್ನು ಪೂರ್ತಿಯಾಗಿ ಹಾಳುಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ರೆಹಬ್ಬಾಮನು ತನ್ನನ್ನು ತಗ್ಗಿಸಿಕೊಂಡದರಿಂದಲೂ ಯೆಹೂದ್ಯರಲ್ಲಿ ಕೆಲವು ಸುಲಕ್ಷಣಗಳು ತೋರುತ್ತಿದ್ದದರಿಂದಲೂ ಯೆಹೋವನು ರೆಹಬ್ಬಾಮನ ಮೇಲಣ ಕೋಪವನ್ನು ಬಿಟ್ಟನು; ಅವನನ್ನು ಪೂರ್ಣವಾಗಿ ಹಾಳುಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ರೆಹಬ್ಬಾಮನು ಯೆಹೋವನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ಅವನ ಮೇಲಿದ್ದ ದೇವರ ಕೋಪವು ಶಾಂತವಾಯಿತು. ಹೀಗೆ ಯೆಹೋವನು ಅವನನ್ನು ಸಂಪೂರ್ಣವಾಗಿ ನಾಶಮಾಡಲಿಲ್ಲ. ಯಾಕೆಂದರೆ ಯೆಹೂದದಲ್ಲಿ ಇನ್ನೂ ಕೆಲವು ನೀತಿವಂತರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 12:12
12 ತಿಳಿವುಗಳ ಹೋಲಿಕೆ  

ಆದರೂ ನೀನು ದೇಶದಿಂದ ಅಶೇರ ಸ್ತಂಭಗಳನ್ನು ತೆಗೆದುಹಾಕಿ, ದೇವರನ್ನು ಹುಡುಕಲು ನಿನ್ನ ಹೃದಯವನ್ನು ಸಿದ್ಧಪಡಿಸಿದ್ದರಿಂದ, ನಿನ್ನಲ್ಲಿ ಉತ್ತಮವಾದ ಕಾರ್ಯಗಳು ತೋರಿಬಂದಿವೆ,” ಎಂದನು.


ಇದಲ್ಲದೆ ಸಮಸ್ತ ಇಸ್ರಾಯೇಲರು ಅವನಿಗೋಸ್ಕರ ಗೋಳಾಡಿ ಅವನನ್ನು ಹೂಳಿಡುವರು. ಏಕೆಂದರೆ, ಯಾರೊಬ್ಬಾಮನವರಲ್ಲಿ ಅವನೊಬ್ಬನೇ ಸಮಾಧಿಗೆ ಸೇರುವನು. ಯಾರೊಬ್ಬಾಮನ ಮನೆಯವರೊಳಗೆ ಅವನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಕಡೆಗಾದ ಒಳ್ಳೆಯ ಕ್ರಿಯೆ ಸಿಕ್ಕಿತು.


ಹೀಗಿರುವುದರಿಂದ ದೇವರ ಪರಾಕ್ರಮವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ, ಆಗ ದೇವರು ಸಕಾಲದಲ್ಲಿ ನಿಮ್ಮನ್ನು ಮೇಲಕ್ಕೆತ್ತುವರು.


ನಾವು ದ್ರೋಹಮಾಡಿದ್ದೇವೆ ಮತ್ತು ಎದುರು ಬಿದ್ದಿದ್ದೇವೆ, ನೀವು ಮನ್ನಿಸಲಿಲ್ಲ.


ಏಕೆಂದರೆ ಆತನು ಬೇಕೆಂದು ಮನುಷ್ಯರ ಮಕ್ಕಳಿಗೆ ಬಾಧೆಯನ್ನೂ, ದುಃಖವನ್ನೂ ಕೊಡುವುದಿಲ್ಲ.


ನಾವು ನಾಶವಾಗದೇ ಉಳಿದಿರುವುದು ಯೆಹೋವ ದೇವರ ಮಹಾ ಪ್ರೀತಿಯಿಂದಲೇ. ಏಕೆಂದರೆ ಅವರ ಅನುಕಂಪಗಳು ಮುಗಿಯುವುದಿಲ್ಲ.


ಏಕೆಂದರೆ ಉನ್ನತನೂ, ಮಹೋನ್ನತನೂ, ನಿತ್ಯವಾಗಿ ವಾಸಿಸುವವನೂ, ಪರಿಶುದ್ಧನು ಎಂಬ ಹೆಸರುಳ್ಳಾತನೂ ಹೇಳುವುದೇನೆಂದರೆ: “ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿಸುವ ನಾನಾದರೂ, ಪಶ್ಚಾತ್ತಾಪ ಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪ ಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ಆದರೆ ದೇಶದಲ್ಲಿ ಹತ್ತನೆಯ ಪಾಲು ಉಳಿದಿದ್ದರೂ, ಅದು ಕೂಡ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ ಉಳಿಯುವುದು ಬುಡ ಮಾತ್ರ. ಅದೇ ರೀತಿಯಾಗಿ ಪವಿತ್ರ ಜನರು ದೇಶದಲ್ಲಿ ಬುಡವಾಗಿ ಉಳಿದಿರುವರು.”


ಒಂದು ವೇಳೆ ಆ ಪಟ್ಟಣದಲ್ಲಿ ಐವತ್ತು ಮಂದಿ ನೀತಿವಂತರಿದ್ದರೆ, ಅದರೊಳಗಿರುವ ಆ ಐವತ್ತು ನೀತಿವಂತರಿಗೋಸ್ಕರ ಆ ಸ್ಥಳವನ್ನು ಉಳಿಸದೆ ನಾಶಮಾಡುವಿರೋ?


ಅರಸನು ಯೆಹೋವ ದೇವರ ಆಲಯಕ್ಕೆ ಹೋಗುವಾಗಲೆಲ್ಲಾ, ಕಾವಲುಗಾರರು ಅವುಗಳನ್ನು ಎತ್ತಿಕೊಂಡು ಬರುತ್ತಿದ್ದರು. ಅಲ್ಲಿಂದ ಹಿಂದಕ್ಕೆ ಬಂದ ನಂತರ ಕಾವಲಿನ ಚಾವಡಿಗೆ ತರುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು