Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 12:5 - ಕನ್ನಡ ಸಮಕಾಲಿಕ ಅನುವಾದ

5 ಆಗ ಪ್ರವಾದಿಯಾದ ಶೆಮಾಯನು ರೆಹಬ್ಬಾಮನ ಬಳಿಗೂ, ಶೀಶಕನ ನಿಮಿತ್ತ ಯೆರೂಸಲೇಮಿನಲ್ಲಿ ಕೂಡಿಕೊಂಡ ಯೆಹೂದದ ಪ್ರಧಾನರ ಬಳಿಗೂ ಬಂದು ಅವರಿಗೆ, “ನೀವು ನನ್ನನ್ನು ಬಿಟ್ಟುಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಕೊಟ್ಟುಬಿಟ್ಟೆನೆಂದು ಯೆಹೋವ ದೇವರು ನಿಮಗೆ ಹೇಳುತ್ತಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಪ್ರವಾದಿಯಾದ‍ ಶೆಮಾಯನು ರೆಹಬ್ಬಾಮನ ಬಳಿಗೂ, ಶೀಶಕನಿಗೆ ಹೆದರಿ ಯೆರೂಸಲೇಮಿನಲ್ಲಿ ಸೇರಿಬಂದಿದ್ದ ಯೆಹೂದ್ಯ ನಾಯಕರ ಬಳಿಗೂ ಬಂದು ಅವರಿಗೆ, “ಯೆಹೋವನು ಹೀಗೆನ್ನುತ್ತಾನೆ, ‘ನೀವು ನನ್ನನ್ನು ಬಿಟ್ಟು ಹೋದುದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಒಪ್ಪಿಸಿದ್ದೇನೆ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ಪ್ರವಾದಿ ಶೆಮಾಯನು ರೆಹಬ್ಬಾಮನ ಬಳಿಗೆ ಹಾಗೂ ಶೀಶಕನಿಗೆ ಹೆದರಿ ಜೆರುಸಲೇಮಿನಲ್ಲಿ ಕೂಡಿದ್ದ ಯೆಹೂದ್ಯ ಪ್ರಧಾನರ ಬಳಿಗೆ ಬಂದು, “ನೀವು ನನ್ನನ್ನು ಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಗೆ ಬಿಟ್ಟುಬಿಟ್ಟಿದ್ದೇನೆ,” ಎನ್ನುತ್ತಾರೆ ಸರ್ವೇಶ್ವರ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಪ್ರವಾದಿಯಾದ ಶೆಮಾಯನು ರೆಹಬ್ಬಾಮನ ಬಳಿಗೂ ಶೀಶಕನಿಗೆ ಹೆದರಿ ಯೆರೂಸಲೇವಿುನಲ್ಲಿ ಕೂಡಿದ್ದ ಯೆಹೂದ್ಯಪ್ರಧಾನರ ಬಳಿಗೂ ಬಂದು ಅವರಿಗೆ - ನೀವು ನನ್ನನ್ನು ಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಬಿಟ್ಟು ಬಿಟ್ಟಿದ್ದೇನೆಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಪ್ರವಾದಿಯಾದ ಶೆಮಾಯನು, ಶೀಶಕನಿಗೆ ಹೆದರಿಕೊಂಡು ಜೆರುಸಲೇಮಿನಲ್ಲಿ ಒಟ್ಟಾಗಿ ಸೇರಿ ಬಂದಿದ್ದ ರೆಹಬ್ಬಾಮನ ಮತ್ತು ಇಸ್ರೇಲಿನ ಪ್ರಧಾನರ ಬಳಿಗೆ ಬಂದು, “ಯೆಹೋವನು ಹೇಳುವುದೇನೆಂದರೆ, ರೆಹಬ್ಬಾಮನೇ, ನೀನು ಮತ್ತು ಯೆಹೂದದ ಜನರು ನನ್ನನ್ನು ತೊರೆದಿದ್ದೀರಿ. ನನ್ನ ಕಟ್ಟಳೆಗಳನ್ನು ಅನುಸರಿಸಲು ನಿರಾಕರಿಸಿದ್ದೀರಿ. ಈಗ ನಾನು ನಿಮಗೆ ಸಹಾಯ ಮಾಡದೆ ಶೀಶಕನನ್ನು ಎದುರಿಸಲು ನಿಮ್ಮನ್ನು ಬಿಟ್ಟುಬಿಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 12:5
15 ತಿಳಿವುಗಳ ಹೋಲಿಕೆ  

ಅವನು ಆಸನನ್ನು ಎದುರುಗೊಳ್ಳಲು ಹೊರಟುಬಂದು, ಅವನಿಗೆ, “ಆಸನೇ, ಯೆಹೂದ ಮತ್ತು ಬೆನ್ಯಾಮೀನ್ ಗೋತ್ರದವರೇ, ನನ್ನ ಮಾತನ್ನು ಕೇಳಿರಿ. ನೀವು ಯೆಹೋವ ದೇವರ ಸಂಗಡ ಇರುವವರೆಗೂ, ಅವರು ನಿಮ್ಮ ಸಂಗಡ ಇರುವರು. ನೀವು ಅವರನ್ನು ಹುಡುಕಿದರೆ ಅವರು ನಿಮಗೆ ಸಿಕ್ಕುವರು. ಆದರೆ ನೀವು ಅವರನ್ನು ಬಿಟ್ಟುಬಿಟ್ಟರೆ ಅವರು ನಿಮ್ಮನ್ನು ಬಿಟ್ಟುಬಿಡುವರು


ಆದರೆ ಯೆಹೋವ ದೇವರ ವಾಕ್ಯವು ದೇವರ ಮನುಷ್ಯನಾಗಿರುವ ಶೆಮಾಯನಿಗೆ ಉಂಟಾಗಿ,


ಆದರೆ ದೇವರ ವಾಕ್ಯವು ದೇವರ ಮನುಷ್ಯನಾಗಿರುವ ಶೆಮಾಯನಿಗೆ ಉಂಟಾಗಿ,


“ಪ್ರವಾದಿಯಾಗಲಿ, ಯಾಜಕನಾಗಲಿ, ಈ ಜನರಲ್ಲಿ ಯಾರೇ ಆಗಲಿ, ‘ಯೆಹೋವ ದೇವರು ದಯಪಾಲಿಸಿರುವ ಹೊರೆ ಏನು?’ ಎಂದು ನಿನ್ನನ್ನು ಕೇಳಿದರೆ, ನೀನು ಅವರಿಗೆ ಹೀಗೆಂದು ಹೇಳು: ‘ನೀವೇ, ಯೆಹೋವ ದೇವರ ಹೊರೆ. ನಿಮ್ಮನ್ನು ಆತನು ಎಸೆದುಬಿಡುವನು.’


“ ‘ನಮ್ಮ ದೇವರಾದ ಯೆಹೋವ ದೇವರು ನಮಗೆ ಯಾತಕ್ಕೆ ಇವುಗಳನ್ನೆಲ್ಲಾ ಮಾಡುತ್ತಾರೆ,’ ಎಂದು ನೀವು ಕೇಳುವಾಗ, ನೀನು ಅವರಿಗೆ ಹೀಗೆ ಹೇಳಬೇಕು: ‘ನೀವು ನನ್ನನ್ನು ಬಿಟ್ಟು, ನಿಮ್ಮ ದೇಶದಲ್ಲಿ ಬೇರೆ ದೇವರುಗಳನ್ನು ಸೇವಿಸಿದ ಹಾಗೆ, ನಿಮ್ಮದಲ್ಲದ ದೇಶದಲ್ಲಿ ಅನ್ಯರನ್ನು ಸೇವಿಸುವಿರಿ.’


“ನಿನ್ನ ಮಾರ್ಗವೂ, ನಿನ್ನ ಕ್ರಿಯೆಗಳೂ, ಇವುಗಳನ್ನು ನಿನಗೆ ಉಂಟುಮಾಡಿದವು, ಇದೇ ನಿನ್ನ ಶಿಕ್ಷೆ. ಅದು ಕಹಿಯಾದದ್ದಲ್ಲವೋ? ನಿನ್ನ ಹೃದಯಕ್ಕೆ ನಾಟುವುದಿಲ್ಲವೋ?”


ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವುದು. ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವುದು. ಹೀಗಿರುವುದರಿಂದ ನೀನು ನಿನ್ನ ದೇವರಾದ ಯೆಹೋವ ದೇವರನ್ನು ಬಿಟ್ಟದ್ದೂ, ನನ್ನ ಭಯವು ನಿನ್ನಲ್ಲಿ ಇಲ್ಲದಿರುವುದೂ, ಕೆಟ್ಟದ್ದೂ, ಕಹಿಯಾದದ್ದೂ ಎಂದು ತಿಳಿದುಕೊಂಡು ನೋಡು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಆದರೆ ಯೆಹೋವ ದೇವರು ಅವನನ್ನು ದುಷ್ಟನ ಕೈಯಲ್ಲಿ ಬಿಡುವುದಿಲ್ಲ; ನ್ಯಾಯ ವಿಚಾರಣೆಯಲ್ಲಿ ನೀತಿವಂತನನ್ನು ಅಪರಾಧಿಯೆಂದು ತೀರ್ಪು ಕೊಡುವುದಿಲ್ಲ.


“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.


ಆಗ ದಾವೀದನು ಗಾದನಿಗೆ, “ನಾನು ಬಹು ಇಕ್ಕಟ್ಟಿನಲ್ಲಿ ಇದ್ದೇನೆ. ಈಗ ಯೆಹೋವ ದೇವರ ಕೈಯಲ್ಲಿಯೇ ಬೀಳೋಣ, ಏಕೆಂದರೆ ಅವರ ಕರುಣೆಯು ದೊಡ್ಡದು, ಆದರೆ ಮನುಷ್ಯರ ಕೈಯಲ್ಲಿ ಬೀಳಲಾರೆನು,” ಎಂದನು.


ರೆಹಬ್ಬಾಮನು ಅರಸನಾಗಿದ್ದಾಗ ತನ್ನ ಆಳ್ವಿಕೆಯ ಮೊದಲಿನಿಂದ ಕಡೆಯವರೆಗೆ ಮಾಡಿದ ಕಾರ್ಯಗಳು ಪ್ರವಾದಿಯಾದ ಶೆಮಾಯನ ಪುಸ್ತಕದಲ್ಲಿಯೂ, ವಂಶಾವಳಿಗಳನ್ನು ಕುರಿತು ಬರೆದ ದರ್ಶಿಯಾದ ಇದ್ದೋವನ ಪುಸ್ತಕದಲ್ಲಿಯೂ ಬರೆದಿರುತ್ತವೆ. ಇದಲ್ಲದೆ ರೆಹಬ್ಬಾಮನಿಗೂ, ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧಗಳಾಗುತ್ತಿದ್ದವು.


ಆಗ ದೇವರ ಆತ್ಮ ಯಾಜಕ ಯೆಹೋಯಾದಾವನ ಮಗನಾದ ಜೆಕರ್ಯನ ಮೇಲೆ ಬಂದು, ಅವನು ಜನರ ಮುಂದೆ ನಿಂತು ಅವರಿಗೆ, “ನೀವು ವೃದ್ಧಿ ಹೊಂದಕೂಡದ ಹಾಗೆ ಯೆಹೋವ ದೇವರ ಆಜ್ಞೆಗಳನ್ನು ಮೀರುವುದೇನು? ನಿಮಗೆ ಶುಭವಾಗುವುದಿಲ್ಲ. ನೀವು ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ, ದೇವರು ಸಹ ನಿಮ್ಮನ್ನು ಬಿಟ್ಟುಬಿಟ್ಟಿದ್ದಾರೆ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು